ಕಂಬಳ ಓಟಗಾರನಿಗೆ ಕ್ರೀಡಾ ಸಚಿವ ಹಾಗೂ ಮಹೀಂದ್ರಾ ಗ್ರೂಪ್ ಅಧ್ಯಕ್ಷರಿಂದ ಮೆಚ್ಚುಗೆಯ ಮಹಾಪೂರ.
ಕಂಬಳ ಓಟಗಾರನಿಗೆ ಕ್ರೀಡಾ ಸಚಿವ ಹಾಗೂ ಮಹೀಂದ್ರಾ ಗ್ರೂಪ್ ಅಧ್ಯಕ್ಷರಿಂದ ಮೆಚ್ಚುಗೆಯ ಮಹಾಪೂರ.
ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸಗೌಡ ಅವರಿಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.
ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ತುಳುನಾಡಿನ ಸಾಂಪ್ರದಾಯಿಕ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ಕರೆ ಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ್ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗುತ್ತಿದೆ.
ಈ ಕುರಿತು ಟ್ವೀಟ್ಟರ್ ನಲ್ಲಿ ಮೆಚ್ಚುಗೆ ಹಂಚಿಕೊಂಡ ಆನಂದ್ ಮಹೀಂದ್ರಾ , ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ, ಈತ ಅಸಾಧರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ . ಈತನಿಗೆ ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅನುಕೂಲ ಕಲ್ಪಿಸಬೇಕು ಅಥವಾ ಓಲಂಪಿಕ್ ನಲ್ಲಿ ಕಂಬಳವನ್ನು ಸೇರಿಸಬೇಕು. ಏನೇ ಆಗಲಿ ಶ್ರೀನಿವಾಸ ಗೌಡ ಅವರಿಗೆ ಚಿನ್ನದ ಪದಕ ಧಕ್ಕಬೇಕು ಎಂದು ತಿಳಿಸಿದ್ದಾರೆ. ಶ್ರೀನಿವಾಸ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಮದಿಗೆ ತಾಳೆ ಹಾಕಿ ನೋಡಿದರೆ ಅದು 9.55 ಸೆಕೆಂಡ್ ಆಗುತ್ತದೆ.
ಬೋಲ್ಟ್ ವಿಶ್ವದಾಖಲೆ ಗಣನೆಗೆ ತೆಗೆದುಕೊಂಡರೆ ಅವರಿಗೆ 142.50 ಮೀ ಕ್ರಮಿಸಲು 13.65 ಸೆಕೆಂಡ್ ಬೇಕಾಗುತ್ತದೆ. ತಾಳೆ ಹಾಕಿದಾಗ ಶ್ರೀನಿವಾಸ ಗೌಡ ಅವರು ಉಸೇನ್ ಬೋಲ್ಟ್ ಗಿಂತ 0.03 ಸೆಕೆಂಡ್ ಮುಂದಿದ್ದಾರೆ. ಈ ಮೂಲಕ ಆನಂದ್ ಮಹೀಂದ್ರಾ ತಮ್ಮ ಟ್ವೀಟ್ ನಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಬೆಂಬಲ ನೀಡಿದರು. ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸಿದ್ದಕ್ಕಾಗಿ ಮತ್ತು ಕಂಬಳವನ್ನು ಬೆಂಬಲಿಸಿದ್ದಕ್ಕಾಗಿ ಆನಂದ್ ಮಹೀಂದ್ರಾ ಅವರಿಗೆ ಟ್ವೀಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಕ್ರೀಡಾ ಸಚಿವ, ಶ್ರೀನಿವಾಸ ಗೌಡ ರನ್ನು ಕರೆಯಿಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು ಎಂದಿದ್ದಾರೆ
ವಿಡಿಯೋಗಾಗಿ
DAKSHINA KANNADA
ಮುಲ್ಕಿ : ಪ್ರೀತಿಸಿದ ಹುಡುಗಿ ಆತ್ಮಹ*ತ್ಯೆ ಬೆನ್ನಲ್ಲೇ ರೈಲಿಗೆ ತಲೆಕೊಟ್ಟು ಇಹಲೋಕ ತ್ಯಜಿಸಿದ ಯುವಕ!
ಮುಲ್ಕಿ : ಅತಿಕಾರಿಬೆಟ್ಟು ಮೈಲೊಟ್ಟು ರೈಲ್ವೇ ಗೇಟ್ ಬಳಿ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ (೨೦) ಅತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.
ಪ್ರೀತಿ…ಮದುವೆಗೆ ನಿರಾಕರಣೆ :
ಮೃತ ಕಾರ್ತಿಕ್ ಪೂಜಾರಿ ತನ್ನ ತಾಯಿ ಅಜ್ಜಿ ಜೊತೆ ಮೈಲೊಟ್ಟಿನಲ್ಲಿ ನೆಲೆಸಿದ್ದು, ಕಳೆದ ಕೆಲವು ತಿಂಗಳ ಹಿಂದೆ ಚಿತ್ರದುರ್ಗದಲ್ಲಿ ಸಂಬಂಧಿಕರ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸಕ್ಕೆ ಸೇರಿದ್ದನು. ಈ ನಡುವೆ ಕಾಲೇಜಿನಲ್ಲಿರುವಾಗ ಕಾರ್ತಿಕ್ ಪೂಜಾರಿ ಸಹಪಾಠಿ ಶರಣ್ಯ ಎಂಬಳನ್ನು ಪ್ರೀತಿಸುತ್ತಿದ್ದ. ಇಬ್ಬರು ಅಪ್ರಾಪ್ತರಾದ ಕಾರಣ ಮದುವೆಗೆ ಅನುಮತಿ ಸಿಕ್ಕಿಲ್ಲ. ಪ್ರಾಪ್ತರಾದ ಬಳಿಕ ಮದುವೆ ಮಾಡುವ ಬಾಂಡ್ ಪೇಪರ್ ಮೂಲಕ ಸಮ್ಮತಿ ದೊರೆತಿತ್ತು ಎನ್ನಲಾಗಿದೆ.
ಈ ನಡುವೆ ಶರಣ್ಯ ಮಾನಸಿಕ ಖಿನ್ನತೆಗೆ ಒಳಗಾಗಿ ಮೂಡುಬಿದ್ರೆಯ ತನ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಳು. ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ : ಠಾಣೆಗೆ ನುಗ್ಗಿ ಉದ್ಧಟತನದ ವರ್ತನೆ..! ಹರೀಶ್ ಪೂಂಜಾ ಮೇಲೆ ಕೇಸ್..!
ನೊಂದು ರೈಲಿಗೆ ತಲೆಕೊಟ್ಟ ಯುವಕ :
ಪ್ರೀತಿಸಿದ ಹುಡುಗಿ ಆತ್ಮಹ*ತ್ಯೆ ಮಾಡಿಕೊಂಡಿದ್ದೇ ತಡ, ಚಿತ್ರದುರ್ಗದಲ್ಲಿದ್ದ ಕಾರ್ತಿಕ್ ಪೂಜಾರಿ ಏಕಾಏಕಿ ಶನಿವಾರ ಸಂಜೆ ಮನೆಗೆ ಬಂದಿದ್ದಾನೆ. ತಾಯಿ ಕೇರಳಕ್ಕೆ ಹೋಗಿ ಭಾನುವಾರ ಬೆಳಗ್ಗೆ ಬರುವಷ್ಟರಲ್ಲಿ ಕಾರ್ತಿಕ್ ತನ್ನ ಮನೆಯ ಅಣತಿ ದೂರದಲ್ಲಿರುವ ರೈಲ್ವೇ ಹಳಿಯಲ್ಲಿ ಮಂಗಳೂರಿನಿಂದ ಮುರ್ಡೇಶ್ವರ ರೈಲಿನಡಿಗೆ ಬಿದ್ದು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾಧರ್ ಭೇಟಿ ನೀಡಿ ಪರಿಶೀಲಿಸಿದ್ದು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು
ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ ಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಶಿರೂರಿನಲ್ಲಿ ಈ ಘಟನೆ ನಡೆದಿದ್ದು, ಇರ್ಷಾದ್(56ವ) ಮೃ*ತಪಟ್ಟವರು. ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ.
ಶನಿವಾರ(ಮೇ.18) ರಾತ್ರಿ ಸುರಿದ ಬಿರುಗಾಳಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ನೆಲದ ಮೇಲೆ ಬಿದ್ದಿತ್ತು. ಇದನ್ನು ಗಮನಿಸದ ಇರ್ಷಾದ್ ಅವರು ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಕಾರಣ ತಕ್ಷಣ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿ ತುಂಡಾದ ತಂತಿಯನ್ನು ಸರಿ ಪಡಿಸಿದ್ದಾರೆ. ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.
Read More..; ಠಾಣೆಗೆ ನುಗ್ಗಿ ಉದ್ಧಟತನದ ವರ್ತನೆ..! ಹರೀಶ್ ಪೂಂಜಾ ಮೇಲೆ ಕೇಸ್..!
BELTHANGADY
ಠಾಣೆಗೆ ನುಗ್ಗಿ ಉದ್ಧಟತನದ ವರ್ತನೆ..! ಹರೀಶ್ ಪೂಂಜಾ ಮೇಲೆ ಕೇಸ್..!
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಜೊತೆಯಲ್ಲಿ ಉದ್ಧಟತನದಿಂದ ವರ್ತಿಸಿದ್ದ ಶಾಸಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಳ್ತಂಗಡಿಯ ಮೇಲಂತಬೆಟ್ಟು ಎಂಬಲ್ಲಿ ಅಕ್ರಮ ಗಣಿಗಾರಿಕೆಗೆ ಪೊಲೀಸರ ಸಹಕಾರ ಪಡೆದು ತಹಶೀಲ್ದಾರ್ ದಾಳಿ ನಡೆಸಿದ್ದರು. ಈ ವೇಳೆ ಅದು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಗೌಡ ಎಂಬವರಿಗೆ ಸೇರಿದ್ದಾಗಿ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದು ತಂದಿದ್ದರು. ಈ ವಿಚಾರ ತಿಳಿದು ಠಾಣೆಗೆ ಆಗಮಿಸಿದ್ದ ಶಾಸಕ ಹರೀಶ್ ಪೂಂಜಾ ಠಾಣೆಯಲ್ಲಿ ಪೊಲೀಸರ ಜೊತೆಯಲ್ಲಿ ಅನುಚಿತವಾಗಿ ವರ್ತಿಸಿ ಬೆದರಿಕೆ ಕೂಡಾ ಹಾಕಿದ್ದರು.
ಶಾಸಕ ಹರೀಶ್ ಪೂಂಜಾ ನಡವಳಿಕೆಯ ಬಗ್ಗೆ ವ್ಯಾಪಕ ಟೀಕೆ ಕೂಡಾ ವ್ಯಕ್ತವಾಗಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಲಾಗಿತ್ತು. ಇದೀಗ ಹಿರಿಯ ಅಧಿಕಾರಿಗಳ ಸೂಚನೆಯಂತೆ ಶಾಸಕ ಹರೀಶ್ ಪೂಂಜಾ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. IPC 353 ,504 ಅಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ.
- DAKSHINA KANNADA19 hours ago
ವೈರಲ್ ಆಯ್ತು ಮೆಟರ್ನಿಟಿ ಶೂಟ್..! ಮೆಚ್ಚುಗೆ ಪಡೆದ ಫೋಟೋಗ್ರಾಫರ್..!
- FILM6 days ago
ರಾಷ್ಟ್ರಪ್ರಶಸ್ತಿ ವಿಜೇತ, ಖ್ಯಾತ ಸಂಗೀತ ನಿರ್ದೇಶಕನ ದಾಂಪತ್ಯ ಜೀವನದಲ್ಲಿ ಬಿರುಕು!
- FILM7 days ago
ಬಿಗ್ಬಾಸ್ ಸಂಗೀತಾ ಶೃಂಗೇರಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಕುಟುಂಬಸ್ಥರು; ಫೋಟೋ ವೈರಲ್!
- LATEST NEWS5 days ago
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ