Connect with us

ಕೊಂಚಾಡಿಯಲ್ಲಿ ಕಾಶೀಮಠಾಧೀಶರ ಚಾತುರ್ಮಾಸ್ಯ ವ್ರತ ಸ್ವೀಕಾರ

Published

on

ಕೊಂಚಾಡಿಯಲ್ಲಿ ಕಾಶೀಮಠಾಧೀಶರ ಚಾತುರ್ಮಾಸ್ಯ ವ್ರತ ಸ್ವೀಕಾರ

ಮಂಗಳೂರು : ಕಾಶೀಮಠಾಧೀಶ ಸಂಯಮೀಂದ್ರ ತೀರ್ಥರ ಚಾತುರ್ಮಾಸ್ಯ ವ್ರತ ಮಂಗಳೂರಿನ ಕೊಂಚಾಡಿ ಕ್ಷೇತ್ರದ   ಶ್ರೀ ಕಾಶೀಮಠದ ಶಾಖಾಮಠದಲ್ಲಿ ಇಂದು ಪ್ರಾರಂಭ .ಗೌಡ ಸಾರಸ್ವತ ಸಮಾಜದ ಶ್ರೀ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತವು ಮಂಗಳೂರಿನ ಕೊಂಚಾಡಿ ಕ್ಷೇತ್ರದ   ಶ್ರೀ ಕಾಶೀಮಠದ ಶಾಖಾಮಠದಲ್ಲಿ ಶುಕ್ರ ವಾರದಂದು (ಜೂ  ೧೦) ಮೃತಿಕಾ ಪೂಜನೆಯೊಂದಿಗೆ ಪ್ರಾರಂಭವಾ ವಾಯಿತು .

(ಚಿತ್ರ : ಮಂಜು ನೀರೇಶ್ವಾಲ್ಯ)

ಪ್ರಾತಃ ಕಾಲ ಶ್ರೀ ಸಂಸ್ಥಾನದ ಶ್ರೀದೇವರುಗಳಿಗೆ ಪಂಚಾಮೃತ, ಗಂಗಾಭಿಷೇಕ , ಲಘು ವಿಷ್ಣು ಅಭಿಷೇಕ , ಶತಕಲಶಾಭಿಷೇಕ ಬಳಿಕ ಪವಮಾನ ಅಭಿಷೇಕಗಳು ಶ್ರೀಗಳವರ ದಿವ್ಯ ಹಸ್ತಗಳಿಂದ ನೆರವೇರಿತು , ಸಾಯಂಕಾಲ ಮೃತಿಕಾ ಪೂಜನೆ ಬಳಿಕ ಸಭಾ ಕಾರ್ಯಕ್ರಮ ಜರ ಗಿತ . ಸಮಾಜ ಭಾಂದವರಿಗೆ ಪಾಲ್ಗೊಳ್ಳುವ ಅಥವಾ ಭಾಗವಹಿಸುವ ಅವಕಾಶ ವಿರುವುದಿಲ್ಲ . ಚಾತುರ್ಮಾಸ್ಯ ವೃತದ ಪ್ರಯುಕ್ತ ಸಂಯಮೀಂದ್ರ ತೀರ್ಥರು ಜೂನ್  ೩೦ ರಂದು ಕೊಂಚಾಡಿ ಶಾಖಾಮಠ   ತಲಪಿದ್ದರು. ಆ ಸಂದರ್ಭದಲ್ಲಿ ಶಾಖಾಮಠದ ವ್ಯವಸ್ಥಾಪಕ ಸಮಿತಿ , ವೈದಿಕರಿಂದ ಪೂರ್ಣ ಕುಂಭ ಸ್ವಾಗತ ನೀಡಲಾಗಿತ್ತು. ಸೆಪ್ಟಂಬರ್ ೨ ರ ಬುಧವಾರ  ಮೃತಿಕಾ ವಿಸರ್ಜನೆ, ಸೀಮೋಲ್ಲಂಘನೆ ಮೂಲಕ ಕಾಶೀಮಠಾಧೀಶರ ಚಾತುರ್ಮಾಸ ಕೊನೆಗೊಳ್ಲಲಿದೆ. ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ,  ಪಾರಾಯಣಗಳು ನಡೆಯಲಿವೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಗಳು ನಡೆಯುವ ಸಂದರ್ಭದಲ್ಲಿ ಸಮಾಜ ಭಾಂದವರಿಗೆ ಪಾಲ್ಗೊಳ್ಳುವ ಅಥವಾ ಭಾಗವಹಿಸುವ ಅವಕಾಶ ವಿರುವುದಿಲ್ಲ . ಅತೀ ಸರಳ ರೀತಿಯಲ್ಲಿ ಈ ಬಾರಿ ಚಾತುರ್ಮಾಸದ ಕಾರ್ಯಕ್ರಮಗಳು ನಡೆಯಲಿರುವುದು . ಜುಲೈ  ೨೫ ರಂದು ನಾಗಪಂಚಮಿ, ಮಾಧವೇಂದ್ರ ಸ್ವಾಮಿ ಪುಣ್ಯತಿಥಿ, ಆಗಸ್ಟ್ 4 ಖುಗೋಪಕರ್ಮ,ಆಗಸ್ಟ್ ೧೧ ರಂದು ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಚಾತುರ್ಮಾಸ ಸಮಿತಿ, ಕಾಶಿಮಠದ ಶಾಖಾಮಠದಲ್ಲಿ ಆಯೋಜಿಸಿದೆ.ಇದಲ್ಲದೇ ಆಗಸ್ಟ್ ೨೨ -೨೬ರ ವರೆಗೆ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು, ಸೆಪ್ಟಂಬರ್ ೧ರಂದು ಅನಂತ ಚತುರ್ದಶಿ ವ್ರತಾಚಾರಣೆ ನಡೆಯಲಿದೆ. ಸೆಪ್ಟಂಬರ್ ೧೮ ರಿಂದ ಅಧಿಕಮಾಸ ಪ್ರಾರಂಭ , ಅಕ್ಟೋಬರ್ ೧೭ ರಿಂದ ನವರಾತ್ರಿ ಆಚರಣೆ ಪ್ರಾರಂಭವಾಗಲಿದ್ದು ಅಕ್ಟೋಬರ್ ೨೮ ರ ವರೆಗೆ ವಿವಿಧ ವಾಹನ ಪೂಜಾ ಸೇವೆಗಳು ನಡೆಯಲಿರುವುದು . ಈ ಬಾರಿ ಕೊರೊನ ಸೋಂಕು ದಿನೇ ದಿನೇ ಹೆಚ್ಚು ಹರಡುತಿದ್ದು ಕೋವಿಡ್-19 (ಕೊರೋನ ವೈರಾಣು) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತಾದಿಗಳಿಂದ ಸಾಮಾಜಿಕ ಅಂತರವನ್ನು ಕಾಪಾಡುವುದು ಕಷ್ಟವಾಗುವುದರಿಂದ ಭಕ್ತಾದಿಗಳಿಗೆ ಶ್ರೀ ಕ್ಷೇತ್ರಕ್ಕೆ ಭೇಟಿಯನ್ನು ನಿರ್ಭಂದಿಸಲಾಗಿದೆ.  ಸರ್ಕಾರದ ಅನ್ವಯದಂತೆ ಶ್ರೀ ದೇವಳದಲ್ಲಿ ಸುರಕ್ಷತಾ ದೃಷ್ಠಿಯನುಸಾರ ಕೈಗೊಳ್ಳ ಬೇಕಾದ ಅಗತ್ಯ ಸುರಕ್ಷತಾ ಕ್ರಮಗಳು ಈ ಕೆಳಗಿನಂತಿದ್ದು ಕಡ್ಡಾಯವಾಗಿ ಪಾಲಿಸ ಬೇಕಾಗಿ ವಿನಂತಿ. ಮುಂದಿನ ದಿನಗಳಲ್ಲಿ ಅನುಕೂಲಕರ ಪರಿಸ್ಥಿತಿ ಉಂಟಾದಾಗ ಭಕ್ತಾದಿಗಳಿಗೆ ಸೇವೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು. ನಮ್ಮೆಲ್ಲರ ಹಿತದೃಷ್ಟಿಯಿಂದ ಈ ಎಲ್ಲಾ ಬದಲಾವಣೆಯ ವ್ಯವಸ್ಥೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ ಸಹೃದಯಿ ಭಕ್ತಾದಿ ಬಂಧುಗಳು ಸಹಕರಿಸ ಬೇಕಾಗಿ ಈ ಮೂಲಕ ಚಾತುರ್ಮಾಸ ಸಮಿತಿಯ ಡಿ ವಾಸುದೇವ್ ಕಾಮತ್ ಮತ್ತು ಕಸ್ತುರಿ ಸದಾಶಿವ ಪೈ  ವಿನಂತಿಸಿಕೊಂಡಿದ್ದಾರೆ .

Click to comment

Leave a Reply

Your email address will not be published. Required fields are marked *

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

DAKSHINA KANNADA

ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ

Published

on

ಮಂಗಳೂರು  : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್‌ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್‌ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್‌ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್‌ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್‌ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್‌ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್‌ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್‌ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.

Continue Reading

LATEST NEWS

Trending