ಪೆರ್ನೆಯ ಗಂಡಾಂತರಗಳಿಗೆ ಕಾರಣವಾದ 3 ಶತಮಾನಗಳಿಂದ ಪಾಳು ಬಿದ್ದ ಆ ದೈವಸ್ಥಾನ ಮರು ನಿರ್ಮಾಣ..
ಪೆರ್ನೆಯ ಗಂಡಾಂತರಗಳಿಗೆ ಕಾರಣವಾದ 3ಶತಮಾನಗಳಿಂದ ಪಾಳು ಬಿದ್ದ ಆ ದೈವಸ್ಥಾನ ಮರು ನಿರ್ಮಾಣ..
ಪುತ್ತೂರು : ಪರಶುರಾಮ ಸೃಷ್ಟಿ ತುಳುನಾಡಿನಲ್ಲಿ ದೈವಗಳಿಗೆ ಹಾಗೂ ನಾಗನಿಗೆ ವಿಶೇಷ ಆರಾಧನೆ . ದೇವರು ತನ್ನ ಅಸ್ತಿತ್ವವನ್ನು ದೈವ ಹಾಗೂ ನಾಗನ ಮೂಲಕ ಪ್ರಕಟಿಸುತ್ತಾರೆ ಎನ್ನುವುದು ಸರ್ವವಿದಿತ.
ಇಂತಹುದೇ ಒಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದಲ್ಲಿ ಒಂದು ವರ್ಷದ ಹಿಂದೆ ನಡೆದಿದ್ದು, ಗ್ರಾಮದಲ್ಲಿ ಸಾವು-ನೋವು, ರೋಗ-ರುಜಿನಗಳು ಸೇರಿದಂತೆ 13 ಮೃತ ನಾಗರಹಾವಿನ ದೇಹಗಳು ಪೆರ್ನೆ ಗ್ರಾಮದಲ್ಲಿ ಪತ್ತೆಯಾಗಿತ್ತು.ಆ ಊರಿನ ಜನರಲ್ಲಿ ನೆಮ್ಮದಿ ಬದುಕೆಂಬುದೇ ನಷ್ಟವಾಗಿ ಹೋಗಿತ್ತು. ಅಲ್ಲಲ್ಲಿ ಅಪಮೃತ್ಯುಗಳು, ಅತ್ಯಂತ ನಂಬಿಕೆಯ ನಾಗಗಳ ಸಾವುಗಳು ಅಲ್ಲಿನ ಜನರನ್ನು ನಿದ್ದೆಗೆಡಿಸಿತ್ತು.
ನಾಗಗಳ ಸಾವನ್ನು ಬೆನ್ನತ್ತಿ ಹೋದ ಆ ಊರಿನ ಜನರಿಗೆ ವಿಸ್ಮಯವೇ ಕಾದಿತ್ತು. ಊರಿನಲ್ಲಿ ನಡೆಯುತ್ತಿರುವ ಇಂಥಹ ಗಂಡಾಂತರಗಳಿಗೆ 300 ವರ್ಷಗಳಿಂದ ಪಾಳು ಬಿದ್ದ ಆ ದೈವಸ್ಥಾನವೇ ಕಾರಣ ಎಂದು ತಿಳಿದಾಗಿ ಊರಿನ ಜನರಿಗೆ ಬರ ಸಿಡಿಲೇ ಬಡಿದಿತ್ತು. ಕೊರತಿಕಟ್ಟೆ ಮಾಡತ್ತಾರುವಿನಲ್ಲಿ ನಡೆದ ಈ ಘಟನೆ ಧಾರ್ಮಿಕ ಮಾತ್ರವಲ್ಲದೆ ವೈಜ್ಞಾನಿಕ ಲೋಕಕ್ಕೂ ಅಚ್ಚರಿ ಮೂಡಿಸಿತ್ತು. ದುರ್ಘಟನೆಗೆ ಕಾರಣ ಏನೆಂಬುದು ಹುಡುಕಾಟ ನಡೆಸಿದಾಗ ಗ್ರಾಮಸ್ಥರು ಮೊರೆ ಹೋಗಿದ್ದು ಅಷ್ಟ ಮಂಗಲ ಪ್ರಶ್ನೆಗೆ.
ಅದರಲ್ಲಿ ಕಂಡು ಬಂದಂತೆ ಶೋಧ ಕಾರ್ಯ ನಡೆಸಿದಾಗ ಪಾಳು ಬಿದ್ದ ದೈವಸ್ಥಾನ ಹಾಗೂ ದೈವದ ಭಂಡಾರದ ಮನೆ ಗೋಚರವಾಗಿತ್ತು. ಇದೀಗ ಮಣ್ಣಿನ ಅಡಿಯಲ್ಲಿ ಸಿಕ್ಕಿದ್ದ 500 ವರ್ಷಗಳ ಇತಿಹಾಸವುಳ್ಳ ದೈವಸ್ಥಾನಕ್ಕೆ ಜೀರ್ಣೋದ್ದಾರ ಕೆಲಸಗಳು ನಡೀತಾ ಇವೆ.
ಶಿವಶಕ್ತಿ ಅರಸು ದೈವ ಉಳ್ಳಾಕ್ಲು, ಸತ್ಯ ರಾಜನ್ ದೈವ ವ್ಯಾಘ್ರಚಾಮುಂಡಿ, ಮತ್ತು ಶಕ್ತಿ ಸ್ವರೂಪಿಣಿಯಾದ ಕೊರತಿ ದೈವಗಳ ಮೊಗ ಮೂರ್ತಿಗಳು, ದೀಪ, ಖಡ್ಸಲೆ, ಹಾಗೂ ದೈವಾರಾಧನೆಯ ಪರಿಕರಗಳು ಸೇರಿದಂತೆ ದೈವಗಳಿಗೆ ನೂತನ ಗುಡಿ ಮಾಡಗಳಿಗೆ ಪಾದುಕಾನ್ಯಾಸ ಕಾರ್ಯಕ್ರಮ ಗುರುವಾರ ನಡೆಯಿತು.
ವಾಸ್ತು ಶಿಲ್ಪಿಗಳಾದ ಮಹೇಶ್ ಮುನಿಯಂಗಳ ಇವರ ನೇತೃತ್ವದಲ್ಲಿ ಸುಮಾರು 1.25 ಕೋಟಿ ವೆಚ್ಚದಲ್ಲಿ ಕೇರಳೀಯ ಶೈಲಿಯಲ್ಲಿ ಕೆಂಪುಕಲ್ಲಿನ ನೂತನ ಗುಡಿ ಮಾಡಗಳು ನಿರ್ಮಾಣವಾಗಲಿದ್ದು, ಜೀರ್ಣೋದ್ಧಾರದ ಕೆಲಸಗಳು ಭರದಿಂದ ಸಾಗುತ್ತಿದೆ.
ವಿಡಿಯೋಗಾಗಿ..
DAKSHINA KANNADA
ಹರೇಕಳ ಹಾಜಬ್ಬ ಶಾಲೆಯ ಕಂಪೌಂಡ್ ಕುಸಿತ..! ವಿದ್ಯಾರ್ಥಿನಿ ಸಾ*ವು..!
ಮಂಗಳೂರು : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್ ವಾಲ್ ಕುಸಿತಗೊಂಡಿದೆ. ಕುಸಿತಗೊಂಡ ವಾಲ್ ಅಡಿಗೆ ಸಿಲುಕಿದ 3 ನೇ ತರಗತಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಮೇ 20ರ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಧಾರಕಾರ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ.
ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ಬಾಲಕಿ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು.
ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಿಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ. ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
LATEST NEWS
ಗುಜರಾತ್ ಎಟಿಎಸ್ನಿಂದ ನಾಲ್ವರು ಐಸಿಸ್ ಉಗ್ರರ ಸೆರೆ..!
ಮಂಗಳೂರು ( ಗುಜರಾತ್) : ಗುಜಾರಾತ್ನಲ್ಲಿ ನಾಲ್ವರು ಐಸಿಸ್ ಉಗ್ರರನ್ನು ಗುಜರಾತ್ ಎಟಿಸಿ ಅಧಿಕಾರಿಗಳು ಬಂಧಿಸಿದ್ದಾರೆ. ಅಹಮ್ಮದಾ ಬಾದ್ ವಿಮಾನ ನಿಲ್ದಾಣದಲ್ಲಿ ಈ ನಾಲ್ವರು ಉಗ್ರರನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಚೆನೈ ಮೂಲಕ ಅಹಮ್ಮದಾಬಾದ್ ತಲುಪಿದ್ದ ಈ ನಾಲ್ವರೂ ಮೂಲತಃ ಶ್ರೀಲಂಕದವರು ಎಂದು ಮಾಹಿತಿ ಲಭ್ಯವಾಗಿದೆ.
ಎರಡು ವಾರಗಳ ಹಿಂದೆ ಅಹ್ಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಸ್ಫೋಟದ ಈ ಮೇಲ್ ಸಂದೇಶ ಬಂದಿತ್ತು. ಈ ವಿಚಾರವಾಗಿ ಎಟಿಎಸ್ ಅದಿಕಾರಿಗಳು ಹಲವು ಆಯಾಮಗಳಲ್ಲಿ ತನಿಕೆಯನ್ನು ನಡೆಸಿದ್ದರು. ಈ ತನಿಕೆಯ ಮುಂದುವರೆದ ಭಾಗವಾಗಿ ಈ ನಾಲ್ವರು ಐಸಿಸ್ ಉಗ್ರರರನ್ನು ಬಂಧಿಸಲಾಗಿದೆ. ಬಂದಿತರು ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಎಟಿಎಸ್ಗೆ ಲಭ್ಯವಾಗಿದೆ. ಅಲ್ಲದೆ ಇವರಿಗೆ ಪಾಕಿಸ್ತಾನದ ಉಗ್ರ ಸಂಘಟನೆಗಳ ಜೊತೆ ನಂಟು ಇದೆ ಅನ್ನೋ ಅಂಶ ಕೂಡಾ ಬೆಳಕಿಗೆ ಬಂದಿದೆ. ಆರೋಪಿಗಳ ಮೊಬೈಲ್ ಪರಿಶೀಲನೆ ನಡೆಸಿದ ವೇಳೆ ಈ ವಿಚಾರ ಗೊತ್ತಾಗಿದೆ ಎಂದು ಎಟಿಎಸ್ ಮೂಲಗಳು ಬಹಿರಂಗಪಡಿಸಿದೆ.
FILM
ಐಶ್ವರ್ಯಾ ರೈ ಜೊತೆಗೂಡಿ ಬಿಗ್ ಬಿ ಫ್ಯಾಮಿಲಿ ಮತದಾನ…!
ಮಂಗಳೂರು ( ಮಹಾರಾಷ್ಟ್ರ ) : ಚುನಾವಣೆಯಲ್ಲಿ ಮತ ಚಲಾಯಿಸಿರುವ ಐಶ್ವರ್ಯಾ ರೈ ಬಚ್ಚನ್ ಕುಟುಂಬದ ಜೊತೆ ಮತಕೇಂದ್ರಕ್ಕೆ ಆಗಮಿಸಿದ್ದಾರೆ. ಅಮಿತಾಬಚ್ಚನ್, ಜಯಾಬಚ್ಚನ್ ಜೊತೆಯಲ್ಲಿ ಒಂದೇ ಕಾರಿನಲ್ಲಿ ಮತಗಟ್ಟೆಗೆ ಆಗಮಿಸಿದ್ದಾರೆ. ಈ ಮೂಲಕ ಹಲವು ಸಮಯದಿಂದ ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಶೇಕ್ ಬಚ್ಚನ್ ದಾಂಪತ್ಯ ವಿಚಾರವಾಗಿ ಇದ್ದ ಗಾಸಿಪ್ಗೆ ತೆರೆ ಎಳೆದಿದ್ದಾರೆ.
ಐದನೇ ಹಂತದ ಮತದಾನದಲ್ಲಿ ಅನೇಖ ಸೆಲಬ್ರಿಟಿಗಳು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಮತದಾನವಾಗಿದ್ದು, ಬಾಲಿವುಡ್ ನಟ ನಟಿಯರು ಮತದನಾ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದ್ದಾರೆ. ನಟ ಅಕ್ಷಯ್ ಕುಮಾರ್ ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಹಾಜರಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಪಿಂಕ್ ಡ್ರೆಸ್ನಲ್ಲಿ ಆಗಮಿಸಿದ ಜಾನ್ವಿ ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ತೆರಳಿ ಮತಯಾಚನೆ ಮಾಡಿದರು. ಮತದಾನ ಕೇಂದ್ರದಲ್ಲಿ ಜಾನ್ವಿ ಕಪೂರ್ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ವಿಶೇಷ ಮಹಿಳಾ ಪೊಲೀಸರು ನಟಿ ಜಾನ್ವಿಗೆ ಭದ್ರತೆ ಒದಗಿಸಿದರು.
ಅದೇ ರೀತಿ ಶಾರುಖ್ ಖಾನ್ ಅವರು ತಮ್ಮ ಕುಟುಂಬದೊಂದಿಗೆ ಮತದಾನ ಮಾಡುತ್ತಿರುವುದು ಕಂಡುಬಂದಿದೆ. ಹೀಗೆ ಹೃತಿಕ್ ರೋಷನ್, ರಾಕೇಶ್ ರೋಷನ್, ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮತದಾನ ಮಾಡಿದರು. ಇನ್ನು ವರುಣ್ ಧವನ್ ಜೊತೆಗೆ ತಂದೆ ಡೇವಿಡ್ ಧವನ್, ಧರ್ಮೇಂದ್ರ, ಆಶಾ ಭೋಂಸ್ಲೆ ಮತ್ತು ಇತರರು ಬೂತ್ನಲ್ಲಿ ಮತದಾನ ಮಾಡಿದರು.
- DAKSHINA KANNADA2 days ago
ವೈರಲ್ ಆಯ್ತು ಮೆಟರ್ನಿಟಿ ಶೂಟ್..! ಮೆಚ್ಚುಗೆ ಪಡೆದ ಫೋಟೋಗ್ರಾಫರ್..!
- LATEST NEWS3 days ago
ಕೊನೆಗೂ ಮೌನ ಮುರಿದ ಎಚ್ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?
- LATEST NEWS16 hours ago
ಮಲತಾಯಿಯ ಕ್ರೌರ್ಯಕ್ಕೆ ಮೂರು ವರ್ಷದ ಮಗು ಬ*ಲಿ
- LATEST NEWS6 days ago
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ