Connect with us

FILM

ಅರೆಬೆತ್ತಲೆ ಫೊಟೊ ಪೋಸ್ಟ್ ಮಾಡಿದ ಸಮಂತಾ..! ಅಸಲಿಯತ್ತೇನು?

Published

on

ಜನಪ್ರಿಯ ನಟಿ ಸಮಂತಾರುತು ಪ್ರಭು  ತಮ್ಮ ಸಿನೆಮಾ ನಟನೆ ಮೂಲಕ ಎಲ್ಲರ ಫೇವರೆಟ್ ಆಗಿದ್ದವರು. ಮುದ್ದು ಮುಖದ ಚೆಲುವೆಯ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ಈಕೆ ಅನಾರೋಗ್ಯಕ್ಕೂ ತುತ್ತಾಗಿದ್ದರು. ಇತ್ತೀಚೆಗೆ ತನ್ನ ಮಾಜಿ ಪತಿಯ ವಿಚಾರಕ್ಕೆ ಸಂಬಂಧಿಸಿ ಹಲವಾರು ವಿಚಾರಗಳಲ್ಲಿ ಸುದ್ದಿಯಲ್ಲಿರುತ್ತಾರೆ.

ಇದೀಗ ಸಮಂತಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತನ್ನ ಖಾತೆಯಿಂದ ಸೋಶಿಯಲ್ ಮೀಡಿಯಾದಲ್ಲಿ ಅರೆನಗ್ನ ಫೊಟೋವನ್ನು ಪೋಸ್ಟ್‌ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅದು ಸುಳ್ಳಾಗಿತ್ತು. ಯಾರೋ ಕಿಡಿಗೇಡಿಗಳು ಸಮಂತಾ ಫೊಟೋವನ್ನು ತಿರುಚಿ ಪೋಸ್ಟ್ ಮಾಡಿದ್ದಾರೆ.

ಮುಂದೆ ಓದಿ..; “ಮದುವೆ ಗೌನ್‌”ಗೆ ಮತ್ತೊಂದು ಟಚ್ ಕೊಟ್ಟ ‘ಸಮಂತಾ’..!! ಶಾಕ್‌ನಲ್ಲಿಅಭಿಮಾನಿಗಳು!

ಇನ್ನು ಮಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿರುವ ಸಮಂತಾ ದಿನಕ್ಕೊಂದು ಆರೋಗ್ಯ ಮಾಹಿತಿಯನ್ನು ಪೋಸ್ಟ್ ಮಾಡುತ್ತಾರೆ. ಇತ್ತೀಚೆಗಷ್ಟೇ ಸಮಂತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ‘ಫಾರ್ ಇನ್‌ಫ್ರಾರೆಡ್ ಸೌನಾ’ ಉಪಯೋಗಗಳು ಎಂದು ಬರೆದು ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.  ಪೋಸ್ಟ್‌ನಲ್ಲಿ ದೀರ್ಘಕಾಲದ ಕಾಯಿಲೆಗಳು, ಚರ್ಮದ ಸೌಂದರ್ಯ, ದೇಹದ ಕೊಬ್ಬನ್ನು ಕಡಿಮೆ ಮಾಡುವುದು ಮುಂತಾದ ವಿವಿಧ ಉದ್ದೇಶಗಳಿಗಾಗಿ ಜನರು ಬಾತ್‌ ಟಬ್‌ನಲ್ಲಿ ಸ್ವಲ್ಪ ಸಮಯ ಇರುತ್ತಾರೆ ಎಂದು ಬರೆದುಕೊಂಡಿದ್ದರು.

ಅರೆಬೆತ್ತಲೆ ಫೊಟೊ ವೈರಲ್:

ಇನ್ನು ಬಾತ್ ಟಬ್‌ನಲ್ಲಿ ಟವಲ್ ಸುತ್ತಿಕೊಂಡು ಇರುವ ಸಮಂತಾ ಅವರ ಫೊಟೋದ ಜೊತೆಗೆ ಕೆಲವೊಂದು ಹೆಲ್ತ್‌ ಟಿಪ್ಸ್‌ಗಳನ್ನು ಬರೆದು ಪೋಸ್ಟ್ ಮಾಡಿದ್ದರು. ಇದರ ಬೆನ್ನಲೇ ಇನ್ನೊಂದು ಸಮಂತಾ ಅರೆಬೆತ್ತಲೆ ಫೊಟೋ ಪೋಸ್ಟ್ ಮಾಡಿ ಡಿಲೀಟ್ ಮಾಡಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಆದರೆ ಅದರಲ್ಲಿ ಆಕೆಯ ಮುಖ ಕಾಣುತ್ತಿಲ್ಲ. ಅಸಲಿಗೆ ಅದು ನಕಲಿ ಎಂದು ಗೊತ್ತಾಗಿದೆ.  ಸೋಶಿಯಲ್ ಮೀಡಿಯಾದಲ್ಲಿ ಫೇಕ್‌ ಸುದ್ದಿ ಹಬ್ಬಿಸುವವರ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ಖುದ್ದು ಸಮಂತಾ ಈ ಫೋಟೊ ಹಾಕಿ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ವೈರಲ್ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಸುಳ್ಳು. ಆಕೆಯ ಅಂತಹ ಯಾವುದೇ ಫೋಟೊ ಪೋಸ್ಟ್ ಮಾಡಿಲ್ಲ. ಕಿಡಿಗೇಡಿಗಳು ಈ ರೀತಿ ಫೋಟೊ ವೈರಲ್ ಮಾಡುತ್ತಿದ್ದಾರೆ ಎನ್ನುವ ಚರ್ಚೆಯೂ ನಡೀತಿದೆ. ಒಟ್ಟಾರೆ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಕಾಮೆಂಟ್ಸ್ ಬರುತ್ತಿವೆ.

FILM

ದಾಂಪತ್ಯಕ್ಕೆ ಕಾಲಿಡಲಿದ್ದಾರಾ ‘ಪ್ರಭಾಸ್‌’..! ಈ ಪೋಸ್ಟ್‌ ಹಿಂದಿನ ಅಸಲಿಯತ್ತೇನು!?

Published

on

ಟಾಲಿವುಡ್‌ ನ ಮೋಸ್ಟ್ ಬ್ಯಾಚುಲರ್‌ ಎಂದೇ ಹೆಸರಾಗಿರುವ ಪ್ರಭಾಸ್ ಸದಾ ತಮ್ಮ ಮದುವೆಯ ವಿಚಾರವಾಗಿಯೇ ಸುದ್ದಿಯಲ್ಲಿರುತ್ತಾರೆ. ಸೂಪರ್ ಸ್ಟಾರ್ ಪ್ರಭಾಸ್‌ರವರ ಹೆಸರಿನ ಜೊತೆ ಹಲವು ಸ್ಟಾರ್ ನಟಿಯರ ಹೆಸರುಗಳು ತುಣುಕು ಹಾಕುತ್ತಿತ್ತು. ಅದರಲ್ಲೂ ಪುತ್ತೂರಿನ ಬೆಡಗಿ ಅನುಷ್ಕಾ ಶೆಟ್ಟಿ ಯವರ ಹೆಸರು ಆಗಾಗ ಕೇಳಿಬರುತ್ತಿತ್ತು. ಇನ್ನು ಬಾಹುಬಲಿ ಸಿನೆಮಾದ ಬಳಿಕ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಇನ್ನೇನು ದಾಂಪತ್ಯ ಜೀವನಕ್ಕೂ ಕಾಲಿಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಮಧ್ಯೆ ಪ್ರಭಾಸ್ ಹಾಗೂ ಅನುಷ್ಕಾ ಅದೆಲ್ಲವನ್ನು ಅಲ್ಲಗಳೆದಿದ್ದಾರೆ.

ಇದೀಗ ಪ್ರಭಾಸ್ ಅವರ ಒಂದು ಪೋಸ್ಟ್‌ ಅಭಿಮಾನಿಗಳಲ್ಲಿ ಖುಷಿ ನೀಡಿದೆ. ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ‘ಡಾರ್ಲಿಂಗ್ಸ್‌!!.. ಕೊನೆಗೂ ನನ್ನ ಜೀವನದಲ್ಲಿ ಒಬ್ಬ ವಿಶೇಷ ವ್ಯಕ್ತಿ ಬರಲಿದ್ದಾರೆ.. ಸ್ವಲ್ಪ ಕಾಯಿರಿ” ಎಂದು ಬರೆದುಕೊಂಡು ಪೋಸ್ಟ್‌ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಖುಷಿ ಜೊತೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಇನ್ನೂ ಈ ಪೋಸ್ಟ್‌ ನೋಡಿದ ಬಳಿಕ ಪ್ರಭಾಸ್ ಮದುವೆಗೆ ಸಜ್ಜಾಗಿದ್ದಾರಾ..!? ಎಂಬುದಾಗಿಯೂ ಕುತೂಹಲ ಮೂಡಿದೆ. ಇನ್ನೂ ಕೆಲವರು ಸಿನೆಮಾ ಪ್ರಚಾರಕ್ಕಾಗಿ ಈ ತಂತ್ರವನ್ನು ಬಳಸಿದ್ದಾರಾ ಎನ್ನುವುದು ಅನುಮಾನ ಮೂಡಿದೆ.

ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!

ಸಿನೆಮಾ ಪ್ರಚಾರಕ್ಕಾಗಿ ಪೋಸ್ಟ್‌ ಹಾಕಿದ್ರಾ ಪ್ರಬಾಸ್..?

kalki

ಸಲಾರ್ ಸಿನೆಮಾ ಹಿಟ್ ಬಳಿಕ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ ‘ ಸಿನೆಮಾ ತೆರೆಗೆ ಬರಲು ಸಿದ್ಧವಾಗಿದೆ. ಇನ್ನೂ ಈ ಸಿನೆಮಾದಲ್ಲಿ ಘಟಾನುಘಟಿಗಳು ಬಣ್ಣ ಹಚ್ಚಿದ್ದಾರೆ. ಅಮಿತಾಬಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಟಾನಿ ಮುಂತಾದವರು ನಟಿಸಿದ್ದಾರೆ. ಇದೇ ಸಿನೆಮಾದ ಪ್ರಚಾರಕ್ಕಾಗಿ ಮಾಡಿರುವ ತಂತ್ರ ಎಂದು ಹೇಳಲಾಗಿದೆ. ಇನ್ನು ಈ ಸಿನೆಮಾ ಪ್ರಚಾರಕ್ಕಾಗಿಯೇ ಹೊಸ ವಿನ್ಯಾಸದ ಕಾರೊಂದನ್ನು ತಯಾರು ಮಾಡಲಾಗಿದೆಯಂತೆ. ಹೀಗಾಗಿ ಪ್ರಭಾಸ್ ‘ ನನ್ನ ಜೀವನದಲ್ಲಿ ಹೊಸ ವ್ಯಕ್ತಿ ಆಗಮನ’ ಎಂದು ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

ಅದೇನೆ ಇರಲಿ ಪ್ರಭಾಸ್ ಮದುವೆ ಆಗಲು ನಿರ್ಧಿರಿಸಿದ್ದಾರಾ..? ಅಥವಾ ಸಿನೆಮಾ ಪ್ರಚಾರಕ್ಕಾಗಿ ಹೀಗೆ ಬರೆದುಕೊಂಡಿದ್ದಾರಾ..? ಅನ್ನೋದರ  ಅಸಲಿಯತ್ತು  ಇನ್ನೆರೆಡು ದಿನಗಳಲ್ಲಿ ಕಾದು ನೋಡಬೇಕಿದೆ.

 

 

Continue Reading

FILM

ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!

Published

on

ಬೆಂಗಳೂರು : ಚಾಲೆಂಜಿಂಗ್ ದರ್ಶನ್ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರದ ಪ್ರತೀ ಅಪ್ಡೇಟ್ ಗಾಗಿ ತುದಿಗಾಲಲ್ಲಿ ನಿಂತಿರುತ್ತಾರೆ. ಹೊಸ ಚಿತ್ರ ಅನೌನ್ಸ್ ಆದಾಗಿನಿಂದ ಪ್ರತಿ ಸುದ್ದಿಗಾಗಿಯೂ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷೆಯಲ್ಲಿರುತ್ತಾರೆ.
‘ಕಾಟೇರ’ ಚಿತ್ರದ ಯಶಸ್ಸಿನ ನಂತರ ದರ್ಶನ್ ‘ಡೆವಿಲ್’ ಚಿತ್ರವನ್ನು ಅನೌನ್ಸ್ ಮಾಡಿದ್ದರು. ಈಗಾಗಲೇ ಪೋಸ್ಟರ್, ಮೇಕಿಂಗ್ ವೀಡಿಯೋಗಳು ಸದ್ದು ಮಾಡುತ್ತಿವೆ. ಡಿ ಬಾಸ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಕರಾವಳಿ ಬೆಡಗಿ ನಾಯಕಿ :

ದರ್ಶನ್ ಜೊತೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲಕ್ಕೂ ಈಗ ತೆರೆ ಬಿದ್ದಿದೆ, ಕರಾವಳಿಯ ಬೆಡಗಿ ದರ್ಶನ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹೌದು, ಕರಾವಳಿ ಮೂಲದ ರಜನಾ ರೈ ‘ಡೆವಿಲ್’ ಚಿತ್ರದ ನಾಯಕಿ. ಈ ಹಿಂದೆಯೂ ರಚನಾ ಡೆವಿಲ್ ಗೆ ನಾಯಕಿ ಆಗಲಿದ್ದಾರೆ ಎಂಬ ಗಾಳಿ ಸುದ್ದಿಯೊಂದು ಹರಿದಾಡುತ್ತಿತ್ತು. ಇದೀಗ ಅದು ದೃಢವಾಗಿದೆ. ಪೋಸ್ಟರ್ ಕೂಡ ಬಿಡುಗಡೆಯಾಗಿದೆ.

ಸಿನಿಮಾದ ನಿರ್ಮಾಣ ಸಂಸ್ಥೆಯಾದ ಜೈ ಮಾತಾ ಕಂಬೈನ್ಸ್‌ ತನ್ನ ಸೋಶಿಯಲ್‌ ಮೀಡಿಯಾ ಪುಟದಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, ‘ವೆಲ್‌ಕಮ್‌ ಆನ್‌ ಬೋರ್ಡ್‌, ಶುದ್ಧ ಕೌಶಲ್ಯಕ್ಕಾಗಿ ಗುರುತಿಸಲಾಗಿದೆ. ರಚನಾ ರೈ ಸ್ವಾಗತ’ ಎಂದುಬರೆದುಕೊಂಡಿದೆ. ಪೋಸ್ಟರ್ ನಲ್ಲಿ ನೆಲದ ಪ್ರತಿಭೆಗೆ ಮನ್ನಣೆ ಎಂದು ಬರೆಯಲಾಗಿದೆ.


ಪುತ್ತೂರು ಮೂಲದ ರಚನಾ ಈಗಾಗಲೇ ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ತುಳು ಚಿತ್ರ ‘ಸರ್ಕಸ್’ನಲ್ಲಿ ನಾಯಕಿಯಾಗಿ ಮಿಂಚಿದ್ದಾರೆ. ಕನ್ನಡದಲ್ಲಿ ಧನ್ವೀರ್ ಗೌಡ ಜೊತೆ ‘ವಾಮನ’ದಲ್ಲೂ ನಟಿಸಿದ್ದಾರೆ. ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ರಚನಾ ಮಾಡೆಲ್ ಕ್ಷೇತ್ರದಲ್ಲೂ ಮಿಂಚಿದ್ದಾರೆ. ಡ್ಯಾನ್ಸರ್ ಕೂಡಾ ಹೌದು. ‘ಓ ಮೈ ಡಾಗ್’ ಎಂಬ ಪುಸ್ತಕವನ್ನೂ ಅವರು ಬರೆದಿದ್ದಾರೆ.

ಇದನ್ನೂ ಓದಿ : ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!

‘ತಾರಕ್’ ಬಳಿಕ ‘ಡೆವಿಲ್’ ಚಿತ್ರದ ಮೂಲಕ ಮತ್ತೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ದರ್ಶನ್ ಕೈಗೆ ಪೆಟ್ಟಾದ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಸದ್ಯ ದರ್ಶನ್ ಗುಣಮುಖರಾಗಿದ್ದು, ಸದ್ಯದಲ್ಲೇ ಡೆವಿಲ್ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

FILM

ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!

Published

on

ಕಿರುತೆರೆಯ ಖ್ಯಾತ ನಟಿ ಪವಿತ್ರಾ ಜಯರಾಮ್ ಇತ್ತೀಚೆಗೆ ಹೈದರಾಬಾದ್ ಸಮೀಪ ಕಾರು ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದರು. ಈ ವೇಳೆ ಅವರ ಗೆಳೆಯ ಹಾಗೂ ತೆಲುಗು ನಟ ಚಂದು ಅವರಿಗೂ ಪೆಟ್ಟಾಗಿದೆ. ಗೆಳತಿಯನ್ನು ಕಳೆದುಕೊಂಡ ನೋವಿನಲ್ಲಿದ್ದ ಚಂದು ಆತ್ಮಹ*ತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಚಂದು ಹಾಗೂ ಪವಿತ್ರಾ ಜಯರಾಂ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಪವಿತ್ರಾ ಹಾಗೂ ಚಂದು ಇಬ್ಬರೂ ಸೋಶಿಯಲ್ ಮೀಡಿಯಾಗಳಲ್ಲಿ ಆ್ಯಕ್ಟಿವ್ ಆಗಿದ್ದರು. ಇಬ್ಬರು ಜೊತೆಯಾಗಿ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದರು. ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು. ದರ್ಶನ್ ಸಿನಿಮಾಗೆ ಪವಿತ್ರಾ ಅವರಿಗೆ ಆಫರ್ ಬಂದಿತ್ತು. ಹೀಗಾಗಿ ಇವರಿಬ್ಬರು ಜೊತೆಯಾಗಿ ಬೆಂಗಳೂರಿಗೆ ಬಂದಿದ್ದರು. ಹಿಂತಿರುಗುವಾಗ ಪ್ರಯಾಣಿಸುತ್ತಿರುವ ಕಾರು ಅಪಘಾತವಾಗಿತ್ತು. ಈ ವೇಳೆ ನಟಿ ಪವಿತ್ರಾ ಜಯರಾಂ ಸಾ*ವನ್ನಪ್ಪಿದ್ದರು. ಚಂದು ಗಾಯಗೊಂಡಿದ್ದರು.

ಇದನ್ನೂ ಓದಿ : ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ ಐಶ್ವರ್ಯ ರೈ

ಪವಿತ್ರಾ ಸಾವಿಗೆ ತೀವ್ರ ನೊಂದಿದ್ದ ಚಂದು ಸೋಶಿಯಲ್ ಮೀಡಿಯಾದಲ್ಲಿ ಮಿಸ್ ಯೂ ಎಂದು ಪವಿತ್ರಾ ಜೊತೆಗಿನ ವೀಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ.

 

Continue Reading

LATEST NEWS

Trending