DAKSHINA KANNADA
ಕಾಮಿಡಿ ಕಿಲಾಡಿಗಳು ಸೀಸಲ್-7ರಲ್ಲಿ ಮಿಂಚಲಿದ್ದಾರೆ ಪುತ್ತೂರಿನ ಪ್ರತಿಭೆಗಳು .!!
ಮಂಗಳೂರು: ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್ ಆರಂಭಗೊಂಡಿದ್ದು ಈ ಬಾರಿ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಶೋನಲ್ಲಿ ನಟ ಜಗ್ಗೇಶ್ ಮಹಾ ತೀರ್ಪುಗಾರರಾಗಿದ್ದರೆ, ಐದು ಸ್ಟಾರ್ ನಿರೂಪಕರುಗಳಾದ ಅನುಶ್ರೀ, ಮಾಸ್ಟರ್ ಆನಂದ್, ಅಕುಲ್ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್ ರವರು ಜಡ್ಜಸ್ಗಳಾಗಿದ್ದಾರೆ. ರಾಜ್ಯದ 20 ಪ್ರತಿಭೆಗಳಿಂದ ಪ್ರೇಕ್ಷಕರಿಗೆ ಕಾಮಿಡಿಯ ರಸದೌಣ ನೀಡಲು ತಯಾರುಗುತ್ತಿದೆ. ಇನ್ನು ಕಿಲಾಡಿ ಪ್ಲೇಯರ್ಗಳಲ್ಲಿ ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.
ಮಂಗಳೂರಿನ 150 ಸ್ಪರ್ಧಿಗಳ ಪೈಕಿ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಕರ್ನಾಟಕದ 2,500ಕ್ಕು ಮಿಕ್ಕಿ ಸ್ಪರ್ಧಿಗಳ ಮೂರು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ 10 ನಟರಲ್ಲಿ ಇವರಿಬ್ಬರು ಆಯ್ಕೆಯಾಗಿದ್ದಾರೆ.
ಮುಂದೆ ಓದಿ..; ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?
ಪುತ್ತೂರಿನ ಪವಿತ್ರ ಹೆಗ್ಡೆ ಆಯ್ಕೆ:
ಪವಿತ್ರ ಹೆಗ್ಡೆ ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಿಶೋರ್ ಡಿ ಶೆಟ್ಟಿ ನಿರ್ದೇಶನದ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ತಂಡದಲ್ಲಿ ಹಾಸ್ಯ ಕಲಾವಿದೆಯಾಗಿ ಅಭಿನಯಿಸುತ್ತಿದ್ದಾರೆ. ಹಲವಾರು ನಾಟಕ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲೇ ಕಲಾ ಕ್ಷೇತ್ರಕ್ಕೆ ಧುಮುಕಿದ ಇವರು 6ನೇ ತರಗತಿಯಿಂದ ನಾಟಕ ಅಭಿನಯ, 2012ರಿಂದ ಮಂಗಳೂರಿನ ತಂಡವಾದ ಮಾನಸ ಕಲಾವಿದರು ತಂಡದಲ್ಲಿ 3 ವರ್ಷ ಅಭಿನಯ, ಹೀಗೆ ಹಲವಾರು ತಂಡಳದಲ್ಲಿ ತಮ್ಮ ಅಭಿನಯ ಪಾತ್ರ ಮಾಡಿದ್ದಾರೆ. ತುಳು ಸಿನೆಮಾ ಮತ್ತು ತುಳು ಮತ್ತು ಕನ್ನಡ ಧಾರಾವಾಹಿಯಲ್ಲಿಯೂ ಅಭಿನಯಿಸಿದ್ದಾರೆ. ನಮ್ಮ ಟಿವಿಯಲ್ಲಿ ಪ್ರಸಾರವಾಗುತ್ತಿರುವ ‘ಬಲೆತಲಿಪಾಲೆ’ ಸೀಸನ್ 7ರಲ್ಲಿ ರನ್ನರ್ ಅಪ್ ಆಗಿದ್ದಾರೆ. ವಿ4 ನ್ಯೂಸ್ನಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 2ನಲ್ಲಿ ಮತ್ತು ಸೀಸನ್ 3ಯಲ್ಲಿ ಅಭಿನಯಿಸಿ ಬೆಸ್ಟ್ ಫರ್ಫಾಮೆನ್ಸ್ ಅವಾರ್ಡ್ ಪಡೆದಿದ್ದಾರೆ. ವಿದೇಶದಲ್ಲೂ ನಾಟಕ ಪ್ರದರ್ಶನ ನೀಡಿದ್ದಾರೆ. ಕನ್ನಡ ಕಸ್ತೂರಿ ಚಾನಲ್ನಲ್ಲಿ ಪ್ರಸಾರವಾಗುತ್ತಿದ್ದ ಕಂಜೂಸ್ ಕಮಂಗಿರಾಯ, ಪುತ್ತೂರು ಚಾನೆಲ್ ದ ಚಾನಲ್ 9ನಲ್ಲಿ ಪುಸಾರವಾಗುತ್ತಿದ್ದ ಕುಡ ತೆಲಿಪುಗ, ಡಾಯಿಜಿ ವರ್ಲ್ಡ್ನಲ್ಲಿ ಪ್ರಸಾರವಾಗುತ್ತಿದ್ದ ಬಾಬಣ್ಣ ಬೂಬಣ್ಣ, ಕಿರುಚಿತ್ರವಾದ ಕಲ್ಕುಡ ಕಲ್ಲುರ್ಟಿ, ವಾತ್ಸಲ್ಯ, ನೋ ಬಾಲ್, ಕೊಕೊನಾಟ್ ಸಹಿತ ಹಲವು ಚಲನಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಇವರಿಗೆ ಹಲವಾರು ಸನ್ಮಾನ ಪತ್ರಗಳು ಲಭಿಸಿದೆ. ಇವರು ಪುತ್ತೂರು ಚಂದ್ರಶೇಖರ್ ಹೆಗ್ಡೆ ಮತ್ತು ಮಯಾದೇವಿ ಅವರ ಪುತ್ರಿಯಾಗಿದ್ದು ಪುಜ್ವಲ್ ಹೆಗ್ಡೆಯವರ ಪತ್ನಿಯಾಗಿದ್ದಾರೆ.
ವೈರಲ್ ಸ್ಟಾರ್ ಗಣರಾಜ್ ಭಂಡಾರಿ:
ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಮಾರ್ ಖ್ಯಾತಿಯ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಶೋಗೆ ಆಯ್ಕೆಯಾಗಿದ್ದಾರೆ. ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ ಇಲ್ಲೊಕ್ಕೆಲ್” ಮೂಲಕ ರಂಗಪ್ರವೇಶ ಮಾಡಿದ ಇವರು ಬದ್ರೆ ಕಲ್ಪಿ, ಊರುಗೊರಿ ವಿಶ್ವನಾಥ, ಮಗೆ ಮಲ್ಲಯೆ, ಒವುಲಾ ಒರಿಯುಜಿ, ಸತ್ಯನಾ ಭಕ್ತಿ, ತಪ್ಪು ಎನ್ನೊಡ್ಡಿ, ಭಾಗ್ಯ ಬೋಡು ಅಲ್ಲದೆ ಈ ವರ್ಷದ ಸೂಪರ್ ಹಿಟ್ ಯಶಸ್ವಿ ನಾಟಕ ನಂಬಿಕೆದಾಯೆ ನಾಟಕಗಳಲ್ಲಿ ಪ್ರಮುಖ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಪುತ್ತೂರಿನ ಕೋರ್ಟ್ ರಸ್ತೆಯ ಶ್ರೀನಿಧಿ ಸೆಲೂನ್’ನಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದಾರೆ. ಇವರು ತನ್ನ ಸ್ವಂತ ರೀಲ್ಸ್ ಪೇಜ್’ನಲ್ಲಿ 25 ಸಾವಿರ ಕ್ಕು ಅಧಿಕ ಫಾಲೋವರ್ಸ್ ಹೊಂದಿದ್ದಾರೆ.
BELTHANGADY
ಠಾಣೆಗೆ ನುಗ್ಗಿ ಉದ್ಧಟತನದ ವರ್ತನೆ..! ಹರೀಶ್ ಪೂಂಜಾ ಮೇಲೆ ಕೇಸ್..!
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಜೊತೆಯಲ್ಲಿ ಉದ್ಧಟತನದಿಂದ ವರ್ತಿಸಿದ್ದ ಶಾಸಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಳ್ತಂಗಡಿಯ ಮೇಲಂತಬೆಟ್ಟು ಎಂಬಲ್ಲಿ ಅಕ್ರಮ ಗಣಿಗಾರಿಕೆಗೆ ಪೊಲೀಸರ ಸಹಕಾರ ಪಡೆದು ತಹಶೀಲ್ದಾರ್ ದಾಳಿ ನಡೆಸಿದ್ದರು. ಈ ವೇಳೆ ಅದು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಗೌಡ ಎಂಬವರಿಗೆ ಸೇರಿದ್ದಾಗಿ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದು ತಂದಿದ್ದರು. ಈ ವಿಚಾರ ತಿಳಿದು ಠಾಣೆಗೆ ಆಗಮಿಸಿದ್ದ ಶಾಸಕ ಹರೀಶ್ ಪೂಂಜಾ ಠಾಣೆಯಲ್ಲಿ ಪೊಲೀಸರ ಜೊತೆಯಲ್ಲಿ ಅನುಚಿತವಾಗಿ ವರ್ತಿಸಿ ಬೆದರಿಕೆ ಕೂಡಾ ಹಾಕಿದ್ದರು.
ಶಾಸಕ ಹರೀಶ್ ಪೂಂಜಾ ನಡವಳಿಕೆಯ ಬಗ್ಗೆ ವ್ಯಾಪಕ ಟೀಕೆ ಕೂಡಾ ವ್ಯಕ್ತವಾಗಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಲಾಗಿತ್ತು. ಇದೀಗ ಹಿರಿಯ ಅಧಿಕಾರಿಗಳ ಸೂಚನೆಯಂತೆ ಶಾಸಕ ಹರೀಶ್ ಪೂಂಜಾ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. IPC 353 ,504 ಅಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ.
DAKSHINA KANNADA
ವೈರಲ್ ಆಯ್ತು ಮೆಟರ್ನಿಟಿ ಶೂಟ್..! ಮೆಚ್ಚುಗೆ ಪಡೆದ ಫೋಟೋಗ್ರಾಫರ್..!
ಮಂಗಳೂರು : ಕೇರಳದ ಫೇಮಸ್ ಫೋಟೋಗ್ರಾಫರ್ ಅಥಿರಾ ಜಾಯ್ ಅವರು ಮಾಡಿರೋ ಫೋಟೋ ಶೂಟ್ ಒಂದು ಈಗ ಸಾಕಷ್ಟು ವೈರಲ್ ಆಗಿದ್ದು, ಜನರ ಮೆಚ್ಚುಗೆ ಪಡೆದುಕೊಂಡಿದೆ. ಈಗಾಗಲೇ ಹಲವಾರು ಮೆಟರ್ನಿಟಿ ಶೂಟ್ ಮಾಡಿರೋ ಅಥಿರಾ ಜಾಯ್ ಅವರ ಈ ಫೋಟೋಗ್ರಾಫಿಗೆ ಎಲ್ಲಿಲ್ಲದ ಮೆಚ್ಚುಗೆ ವ್ಯಕ್ತವಾಗಿದೆ. ಅದರಲ್ಲೂ ಈ ಫೋಟೋಗ್ರಾಫಿಯ ಹಿಂದೆ ಇರುವ ಕಥೆಯ ಬಗ್ಗೆಯೂ ಅಥಿರಾ ಹೇಳಿಕೊಂಡಿದ್ದಾರೆ.
ಶರಣ್ಯ ಈಕೆ ವಯನಾಡಿನ ಬುಡಕಟ್ಟು ಸಮುದಾಯವಾದ ‘ಪನಿಯಾ’ ಸಮುದಾಯದ ಬಡ ಹೆಣ್ಣು ಮಗಳು. ಬುಡಕಟ್ಟು ಸಮುದಾಯದ ಆ ಹೆಣ್ಣು ಮಗಳ ಆಸೆಯನ್ನು ಅರಿಯವ ಸಲುವಾಗಿ ಅಥಿರಾ ಜಾಯ್ ಆಕೆಯನ್ನು ಭೇಟಿಯಾಗಿದ್ದಾರೆ. ಈ ವೇಳೆ ಆಕೆಗೆ ಏನು ಬೇಕು ಎಂದು ಕೇಳಿದಾಗ ಆಕೆಯ ಬೇಡಿಕೆ ಕೇಳಿ ಕಣ್ಣೀರು ಬಂತು ಅಂತ ಫೋಟೋಗ್ರಾಫರ್ ಅಥಿರಾ ಜಾಯ್ ಹೇಳಿದ್ದಾರೆ.
ಬುಡಕಟ್ಟು ಸಮುದಾಯದ ಶರಣ್ಯ ಪತಿ ಅನೀಶ್ ಕೂಲಿ ಕಾರ್ಮಿಕನಾಗಿದ್ದು, ದಂಪತಿಗೆ ಈಗಾಗಲೇ ಒಂದು ವರ್ಷದ ಮಗುವಿದೆ. ಎರಡನೇ ಪ್ರಸವದ ವೇಳೆಯಲ್ಲಿ ಅಥಿರಾ ಜಾಯ್ ಆಕೆಯ ಫೋಟೋ ಶೂಟ್ ಮಾಡಲು ಹೋಗಿದ್ದಾರೆ. ಈ ವೇಳೆ ಆಕೆಯಲ್ಲಿ ನಿನಗೇನು ಬೇಕು ಎಂದು ಕೇಳಿದಾಗ ಶರಣ್ಯ ಅನ್ನ ತಿನ್ನಬೇಕು, ಚಿಕನ್ ಸಾಂಬಾರ್ ಜೊತೆಗೆ ಚಿಕನ್ ಇರಬೇಕು ಎಂದು ಕೇಳಿದ್ದಾಳೆ. ಶ್ರೀಮಂತರ ಮನೆಯ ಮಕ್ಕಳು ಫಾಸ್ಟ್ ಫುಡ್, ಕೆಎಫ್ಸಿ ಹಾಗೂ ಪೌಷ್ಠಿಕ ಆಹಾರ ಬೇಕು ಅನ್ನುವಾಗ ಶರಣ್ಯ ಹಸಿವು ನೀಗಿಸಲು ಅನ್ನ ಬೇಕು ಅಂದಿರುವುದು ಕಣ್ಣೀರು ತರಿಸಿದೆ ಎಂದು ಹೇಳಿದ್ದಾರೆ.
ತಾನು ಮಾಡಿರುವ ಫೋಟೋ ಶೂಟ್ ಶರಣ್ಯ ಬದುಕಿನ ಅತೀ ಸುಂದರ ಕ್ಷಣವಾಗಿದ್ದು, ಅದನ್ನು ನನ್ನ ಕ್ಯಾಮೆರಾಗಳು ಸೆರೆ ಹಿಡಿದಿದೆ. ಈ ಫೋಟೋ ಶೂಟ್ಗಾಗಿ ಸಂಬಂಧಪಟ್ಟ ಅಧಿಕಾರಿಗಳ ಒಪ್ಪಿಗೆಯನ್ನು ಪಡೆದು ಸುಂದರ ಕ್ಷಣವನ್ನು ಸೆರೆ ಹಿಡಿಯಲಾಗಿದೆ ಎಂದು ಅಥಿರಾ ಜಾನ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಸಾಕಷ್ಟು ವೈರಲ್ ಆಗಿದ್ದು, ಅಥಿರಾ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
DAKSHINA KANNADA
ಶಬರಿಮಲೆ ಯಾತ್ರಾರ್ಥಿ ಹೃದಯಾಘಾ*ತದಿಂದ ಸಾ*ವು
ಸುರತ್ಕಲ್: ಕಾಣಿಪಳ್ಳ ಗಣೇಶಪುರ ಬಳಿಯ ನಿವಾಸಿ ಸಂದೀಪ್ ಕಾಟಿಪಳ್ಳ(35) ಶಬರಿಮಲೆ ಯಾತ್ರೆ ಕೈಗೊಂಡಿದ್ದ ಸಂದರ್ಭ ಕೇರಳದಲ್ಲಿ ಹೃದಯಾಘಾತದಿಂದ ಮೃ*ತಪಟ್ಟಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಅ*ಗಲಿದ್ದಾರೆ. ಶಬರಿಮಲೆಗೆ ಮಗನ ಹೆಸರಿನಲ್ಲಿ ಹೇಳಿಕೊಂಡಿದ್ದ ಹರಕೆ ಒಪ್ಪಿಸಲು ಶುಕ್ರವಾರ ತೆರಳಿದ್ದರು. ಶನಿವಾರ ಅಯ್ಯಪ್ಪ ಸನ್ನಿಧಿಯಲ್ಲಿ ಹದಿನೆಂಟು ಮೆಟ್ಟಿಲು ಹತ್ತುವ ಹೊತ್ತಿನಲ್ಲಿ ಹೃದಯಾಘಾತಕ್ಕೆ ಒಳಗಾದರು.
ಸಂದೀಪ್ ಅವರು ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸೇವಾ ಟ್ರಸ್ಟ್, ಕೇಸರಿ ಫ್ರೆಂಡ್ಸ್ ಸಹಿತ ಸಾಮಾಜಿಕ ಜಾಲತಾಣದಲ್ಲಿ ಕ್ರೀಯಾಶೀಲರಾಗಿದ್ದರು. ಎಂಆರ್ಪಿಎಲ್ ನಲ್ಲಿ ಗುತ್ತಿಗೆ ಸೇವೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದರು.
- DAKSHINA KANNADA6 days ago
ಮುಲ್ಕಿ: ಚಿಪ್ಪು ಹೆಕ್ಕಲು ಹೋಗಿ ನೀರಲ್ಲಿ ಕಣ್ಮರೆಯಾದ ಯುವಕ.! ಪತ್ತೆಗೆ ಶೋಧ
- FILM5 days ago
ರಾಷ್ಟ್ರಪ್ರಶಸ್ತಿ ವಿಜೇತ, ಖ್ಯಾತ ಸಂಗೀತ ನಿರ್ದೇಶಕನ ದಾಂಪತ್ಯ ಜೀವನದಲ್ಲಿ ಬಿರುಕು!
- FILM6 days ago
ಬಿಗ್ಬಾಸ್ ಸಂಗೀತಾ ಶೃಂಗೇರಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಕುಟುಂಬಸ್ಥರು; ಫೋಟೋ ವೈರಲ್!
- LATEST NEWS6 days ago
ಈ ನಾಲ್ಕು ತಿಂಗಳ ಮಗುವಿನ ಸಾಧನೆ ಕೇಳಿದ್ರೆ ಶಾಕ್ ಆಗ್ತೀರಾ..!