ಕೃಷ್ಣಾ ಶೆಟ್ಟಿ ಮಾಲಿಕತ್ವದ ಗೋಲಿಸೋಡಾಕ್ಕೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಕೃಷ್ಣಾ ಶೆಟ್ಟಿ ಮಾಲಿಕತ್ವದ ಗೋಲಿಸೋಡಾಕ್ಕೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಮಂಗಳೂರು: ಬಿಸಿಲಿನ ಧಗೆಗೆ ಚಿಲ್ಡ್ ಆಗಿರೋ ಗೋಲಿಸೋಡ ಕುಡಿಯೋದೆ ಒಂದು ಮಜಾ. ಒಂದ್ಕಾಲದಲ್ಲಿ ಪಾನೀಯಗಳ ರಾಜನಾಗಿದ್ದ ಗೋಲಿಸೋಡ, ಬರಬರುತ್ತಾ ಕಲರ್ ಫುಲ್ ಪಾನೀಯಗಳ ಅಬ್ಬರದ ನಡುವೆ ಸೈಡ್ಲೈನ್ ಆಗಿತ್ತು. ಆದ್ರೆ ಇದೀಗ ಗೋಲಿಸೋಡವು ಭಿನ್ನ-ವಿಭಿನ್ನವಾಗಿ ಅಪ್ಡೇಟ್ ಆಗಿದೆ ಅನ್ನೋದು ಹಳೇ ವಿಷ್ಯ. ಆದ್ರೆ ಇದೆಲ್ಲದ್ರ ಮಧ್ಯೆ ಒಂದಾನೊಂದು ಕಾಲದಿಂದಲ್ಲೂ ಕುಡ್ಲದ ಜನರಿಗೆ ನ್ಯಾಚುರಲ್ ಫ್ಲೇವರ್ ಬೆರೆಸಿ ಗೋಲಿಸೋಡ ನೀಡ್ತಾ, ಗ್ರಾಹಕರ ಹಾಟ್ ಫೇವರೇಟ್ ಎನಿಸಿಕೊಂಡಿರೋ ಇವರ ಬಗ್ಗೆ ಕೇಳಿದ್ದೀರಾ.? ಹೌದು ಓಲ್ಡ್ ಈಸ್ ಗೋಲ್ಡ್ ಅನ್ನೋ ಗೋಲಿಸೋಡ ಮಾರೋ ಹಿರಿ ಜೀವದ ಕಥೆ.
ಗೋಲಿಸೋಡ.. ಇಂದಿಗೂ ಅದೆಷ್ಟ್ಟೋ ಜನರ ಫೇವರೆಟ್ ಪಾನೀಯ. ಶ್ರೀಮಂತರು ಬಡವರು ಅನ್ನೋ ಹಂಗಿಲ್ಲದೆ ಆರೋಗ್ಯ ದೃಷ್ಟಿಯಲ್ಲಿ ಎಲ್ಲರೂ ಈ ಪಾನೀಯಾಕ್ಕೆ ಫಿದಾ ಅಂದ್ರೂ ತಪ್ಪಾಗಲ್ಲ. ಒಂದ್ಕಾಲದಲ್ಲಿ ಬಹು ಬೇಡಿಕೆಯಾಗಿದ್ದ ಗೋಲಿಸೋಡ..ಇಂದು ಅಪರೂಪಕ್ಕೆ ಸಿಗೋ ಪಾನೀಯವಾದ್ರೂ ಡಿಮ್ಯಾಂಡ್ ಮಾತ್ರ ಕಮ್ಮಿಯಾಗಿಲ್ಲ ಅನ್ನೋದು ನಿಜ.
ಹೌದು ಇದು ಎಷ್ಟರ ಮಟ್ಟಿಗೆ ಸತ್ಯ ಅನ್ನೋದಕ್ಕೆ ಈ ಗೋಲಿಸೋಡ ಶಾಪ್ ಮುಂದೆ ನಿಂತಿರೋ ವಾಹನಗಳನ್ನ ಹಾಗೇ ಬರೋ ಗ್ರಾಹಕರನ್ನ ನೋಡಿ… ಇದು ಮಂಗಳೂರಿನ ಮಣ್ಣಗುಡ್ಡೆ ಬಳಿ ಇರೋ 85 ವರ್ಷ ಪ್ರಾಯದ ಹಿರಿ ಜೀವ ಎಂ.ಕ್ರಷ್ಣ ಶೆಟ್ಟಿಯವರ ಗೋಲಿಸೋಡ ಅಂಗಡಿ. ಅಂದ್ಹಾಗೆ ಈ ಎಂ.ಕ್ರಷ್ಣ ಶೆಟ್ಟಿ ಮಾಲಿಕತ್ವದ ಗೋಲಿಸೋಡ ಅಂಗಡಿಗೆ ಭರ್ತಿ 50 ವರುಷಕ್ಕೂ ಹೆಚ್ಚಿನ ಇತಿಹಾಸವಿದೆ. 1957 ರಲ್ಲಿ ಎಂ.ಕ್ರಷ್ಣ ಶೆಟ್ಟಿಯವರ ಅಣ್ಣ ಈಶ್ವರ್ ಶೆಟ್ಟಿ ಗೋಲಿಸೋಡ ತಯಾರಿಸಿ ಅಂಗಡಿ ಅಂಗಡಿಗಳಿಗೆ ಕೊಡುವ ಕಾಯಕ ನಡೆಸುತ್ತಿದ್ದರು. ಅವರ ಜೊತೆ ಸಹೋದರ ಎಂ.ಕ್ರಷ್ಣ ಶೆಟ್ಟಿ ಸಹಾಯಕರಾಗಿದ್ರು… ಅಣ್ಣನ ನಿಧನಾನಂತರ ಅಂದರೆ 1988 ರಿಂದ ಸ್ವತಃ ತಾನೇ ಈ ಸೋಡ ತಯಾರಿಕೆ ಮಾಡಲು ನಿಶ್ಚಯಿಸಿ ಇಂದಿಗೂ ಅದೇ ವ್ರತ್ತಿಯನ್ನು ಮುಂದುವರಿಸುತ್ತ ಬಂದಿದ್ದಾರೆ.
ಇನ್ನು ಇವರು ತಯಾರಿಸೋ ಗೋಲಿಸೋಡದ ಸ್ಪೆಷಾಲಿಟಿ ಏನಪ್ಪ ಅಂದ್ರೆ ತರೇಹವಾರಿ ನ್ಯಾಚುರಲ್ ಫ್ಲೇವರ್ ನ ತಂಪಾದ ಪಾನಿಯ ಇಲ್ಲಿ ಸಿಗುತ್ತದೆ.. ಪುನರ್ ಪುಳಿ, ಲೆಮೆನ್, ಆರೆಂಜ್ ಹೀಗೆ ಇನ್ನಿತರ ಫ್ಲೇವರ್ ಗಳ ರುಚಿ ಸವಿಯಬಹುದು.. ಅಷ್ಟೇಅಲ್ಲ ಹಿಂದಿನ ಕಾಲದಲ್ಲಿ ಇಂಗ್ಲೆಂಡ್, ಜರ್ಮನಿಯ ಬಾಟಲಿಯಲ್ಲಿ ಸೋಡ ತಯಾರಿಸಿ ಮಾರಾಟಮಾಡುತ್ತಿದ್ದು, ಈಗಲೂ ಅದರಲ್ಲೇ ಸೋಡ ತಯಾರಿಸ್ತಾರೆ. ಜೊತೆಗೆ ಇವರು ಬಳಸುವ ಮೆಷಿನ್ ಕೂಡ ಜರ್ಮನಿಯದ್ದಾಗಿದೆ. ಇತ್ತಿಚಿನ ದಿನದಲ್ಲಿ ಇಂತಹ ಬಾಟಲಿಗಳು ಮನೆಯ ಶೋಕೆಸ್ ನಲ್ಲಿ ರಾರಾಜಿಸೋ ಕಾರಣ ದುಬಾರಿ ಬೆಲೆ ಕೊಟ್ಟು ಆಸಕ್ತಿ ಉಳ್ಳವರು ಇವರಿಂದ ಖರೀದಿಸ್ತಾರಂತೆ.
ಪಾನೀಯಗಳ ರಾಜ ಗೋಲಿಸೋಡಗೆ ಈಗಲೂ ತುಂಬಾನೇ ಬೇಡಿಕೆ ಇದ್ದು, ಊರ ಪರವೂರ ಜನರು ಬಾಯಾರಿಕೆ ತೀರಿಸಿಕೊಳ್ಳಲು ಇಲ್ಲಿಗೆ ಬರುತ್ತಾರೆ. ಒಟ್ನಲ್ಲಿ ಇಂದಿನ ಕಲರ್ ಕಲರ್.. ಕೂಲ್ ಡ್ರಿಂಕ್ನ ಸ್ಪರ್ದೆಯ ಕಾಲ ಘಟ್ಟದಲ್ಲಿ 85 ರ ಹರೆಯದ ಎಂ.ಕೃಷ್ಣ ಶೆಟ್ಟಿ ತಾವೇ ಸ್ವತಃ ತಯಾರಿಸಿ ಮಾರಾಟ ಮಾಡ್ತಾ ಇರೋದು ನಿಜವಾಗಲೂ ಮೆಚ್ಚವಂತದ್ದೆ..
ವಿಡಿಯೋ
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
LATEST NEWS
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ ಮುರಿದು ಬೀಳುತ್ತಿದೆ.
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನೋ ಗಾದೆ ಮಾತಿದೆ. ಅಂತೆಯೇ ಇಲ್ಲಿ ವರ ಸುಳ್ಳು ಹೇಳಿದ್ದಾನೆ. ಹಾಗಂತ ಮದುವೆ ಆಗಿಲ್ಲ. ಬದಲಿಗೆ ಸಿಕ್ಕಿ ಬಿದ್ದಿದ್ದಾನೆ. ವಧು ಕೇಳಿದ ಆ ಒಂದು ಪ್ರಶ್ನೆಯಿಂದ ಮದುವೆ ಮುರಿದು ಬಿದ್ದಿದೆ.
ಸುಳ್ಳು ಹೇಳಿ ತಗ್ಲಾಕ್ಕೊಂಡ!
ಸುಳ್ಳು ಹೇಳಿ ಮದುವೆಯಾಗಲು ಹೊರಟಿದ್ದ ವರನ ಅಸಲಿ ವಿಚಾರ ಗೊತ್ತಾಗಿದೆ. ಹೀಗಾಗಿ ಯುವತಿ ಮದುವೆ ನಿರಾಕರಿಸಿದ್ದಾಳೆ. ಅಂದಹಾಗೆ ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಪನ್ವಾರಿನಲ್ಲಿ. ಓದು, ಬರಹ ಏನೊಂದು ಬರದ ಅನಕ್ಷರಸ್ಥನೊಬ್ಬ ತಾನು ದೊಡ್ಡ ಸರ್ಕಾರಿ ಅಧಿಕಾರಿ ಎಂದು ಮದುವೆಯಾಗಲು ಹೊರಟಿದ್ದ.
ಆದರೆ, ಈ ಸತ್ಯ ಮದುವೆ ಮನೆಯಲ್ಲೇ ಬಯಲಾಗಿದೆ. ಸಂಶಯಗೊಂಡ ವಧು ವರನ ಬಳಿ, ಎರಡರ ಮಗ್ಗಿ ಹೇಳಲು ತಿಳಿಸಿದ್ದಾಳೆ. ಆಗ ಆತ ತಡವರಿಸಿದ್ದಾರೆ. ಹಾಗಾಗಿ, ಯುವತಿಗೆ ಸತ್ಯಾಂಶ ಗೊತ್ತಾಗಿದೆ. ಎರಡರ ಮಗ್ಗಿ ಬೇಸಿಕ್ ಗಣಿತವೂ ಗೊತ್ತಿಲ್ಲ, ನೀನು ಅಧಿಕಾರಿಯಾಗಲು ಹೇಗೆ ಸಾಧ್ಯ? ಎಂದು ಮದುವೆ ಮುರಿದುಕೊಂಡಿದ್ದಾಳೆ.
ಇದನ್ನೂ ಓದಿ : ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!
ಇಷ್ಟಾದರೂ ಬಿಡದ ಕುಟುಂಬದವರು ವಧುವಿನ ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೆ, ವಧು ಮಾತ್ರ ಇದಕ್ಕೆ ಒಪ್ಪಿಲ್ಲ. ಹೀಗಾಗಿ ವರದಕ್ಷಿಣೆಯನ್ನು ಹಿಂದಿರುಗಿಸಿದ್ದಾರೆ. ಪರಸ್ಪರ ನೀಡಿದ ಉಡುಗೊರೆ, ಆಭರಣಗಳನ್ನು ಹಿಂದಿರುಗಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಮತಗಟ್ಟೆಯನ್ನೇ ಧ್ವಂಸ ಮಾಡಿದ ಗ್ರಾಮಸ್ಥರು!
ಚಾಮರಾಜನಗರ : ಲೋಕಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನ ರಾಜ್ಯದೆಲ್ಲಡೆ ಸುಸೂತ್ರವಾಗಿಯೇ ನಡೆದಿದೆ. ಆದರೆ ಚಾಮರಾಜನಗರದಲ್ಲಿ ಮಾತ್ರ ಜನರು ಮತಗಟ್ಟೆಯನ್ನೇ ಪುಡಿ ಮಾಡಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ವೇಳೆ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತಗಟ್ಟೆಯನ್ನು ಗ್ರಾಮಸ್ಥರು ಧ್ವಂಸ ಮಾಡಿದ್ದಾರೆ.
ಚುನಾವಣೆ ಬಹಿಷ್ಕಾರಿಸಿದ್ದ 5 ಗ್ರಾಮ :
ಮೂಲ ಸೌಕರ್ಯದಿಂದ ವಂಚಿತರಾಗಿದ್ದ ಈ ಗ್ರಾಮದ ಜನರು ತಮ್ಮ ಹಕ್ಕಿಗಾಗಿ ಹಲವು ಹೋರಾಟ ನಡೆಸಿದ್ದರು. ಆದರೆ, ಚುನಾವಣೆಯಲ್ಲಿ ಆಶ್ವಾಸನೆ ನೀಡಿ ಹೋಗುವ ಜನ ಪ್ರತಿನಿಧಿಗಳು ಬಳಿಕ ಇತ್ತ ಸುಳಿಯುತ್ತಿರಲಿಲ್ಲ. ಹೀಗಾಗಿ ಐದು ಗ್ರಾಮಗಳ ಜನರು ಈ ಬಾರಿ ಮತ ಕೇಳಲು ಬರಬೇಡಿ, ನಾವು ಮತದಾನ ಮಾಡೋದಿಲ್ಲ ಎಂದಿದ್ದರು.
ಚುನಾವಣೆ ಬಹಿಷ್ಕಾರ ಮಾಡಿದ್ದರೂ ಕಾನೂನು ರೀತಿಯಲ್ಲಿ ಗ್ರಾಮದಲ್ಲಿ ಮತಗಟ್ಟೆಯನ್ನು ತೆರೆಯಲಾಗಿತ್ತು. ಇಂಡಿಗನತ್ತ, ತೇಕಣೆ, ಮೆಂದಾರೆ ಈ ಗ್ರಾಮದಲ್ಲಿ ಯಾವೊಬ್ಬ ಗ್ರಾಮಸ್ಥರೂ ಮತದಾನ ಮಾಡಿಲ್ಲ. ಇನ್ನು ಪಡಸಲನತ್ತ ಗ್ರಾಮದಲ್ಲಿ 85 ಮತದಾರು ಇದ್ದು ಇಬ್ಬರು ಮತದಾನ ಮಾಡಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ತೆರೆಯುವುದಕ್ಕೆ ಗ್ರಾಮಸ್ಥರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ಚುನಾವಣಾ ಆಯೋಗ ಇಲ್ಲಿ ಮತಗಟ್ಟೆ ತೆರೆದು ‘ಮತದಾನ ಮಾಡಲು ಬನ್ನಿ’ ಎಂದು ಜನರನ್ನು ಕರೆದಿದ್ದರು. ಆದ್ರೆ ರೊಚ್ಚಿಗೆದ್ದ ಜನರು ಮತದಾನ ಕೇಂದ್ರದ ಒಳಗೆ ನುಗ್ಗಿ ಇವಿಎಂ ಮೆಷಿನ್ ಸಹಿತ ಮೇಜು ಕುರ್ಚಿ ಎಲ್ಲವನ್ನೂ ಧ್ವಂಸ ಮಾಡಿದ್ದಾರೆ.
ಕನಿಷ್ಠ ಮೂಲಭೂತ ಸೌಕರ್ಯವಾದ ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಯಾವುದೂ ಇಲ್ಲದ ನಮ್ಮ ಗ್ರಾಮದ ಮತ ಯಾಕೆ ಬೇಕು? ಎಂದು ಜನ ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ : ಸುಡುಬಿಸಿಲಿನಲ್ಲೂ ಮತದಾನ; ಇಹಲೋಕ ತ್ಯಜಿಸಿದ 6 ಮಂದಿ
ಪೊಲೀಸ್ ಲಾಠಿ ಚಾರ್ಜ್…ಕೆರಳಿದ ಗ್ರಾಮಸ್ಥರು!
ಜನರು ಮತಗಟ್ಟೆ ಧ್ವಂಸಕ್ಕೆ ಮುಂದಾಗುತ್ತಿದ್ದಂತೆ ಭದ್ರತೆಯಲ್ಲಿದ್ದ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಹಲ್ಲೆ ಮಾಡಿದ ಜನರು ಬಳಿಕ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಗಾಯಗಳಾಗಿದೆ.
ಪೊಲೀಸರು ಮಹಿಳೆಯರು ಪುರುಷರು ಎಂದು ನೋಡದೆ ಎಲ್ಲರ ಮೇಲೂ ಲಾಠಿ ಚಾರ್ಚ್ ಮಾಡಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ಸದ್ಯಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಮತದಾನ ಕೇಂದ್ರವನ್ನು ಬಂದ್ ಮಾಡಲಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!