Connect with us

    LATEST NEWS

    ಟೀ ಕುಡಿದ್ರೆ ತಲೆನೋವು ನಿಜವಾಗ್ಲೂ ಕಮ್ಮಿ ಆಗುತ್ತಾ? ಚಹಾ ಪ್ರಿಯರೇ ನೀವು ಓದಲೇಬೇಕಾದ ಸ್ಟೋರಿ!

    Published

    on

    ಬೆಳಗ್ಗೆ ನಿದ್ರೆಯಿಂದ ಎದ್ದ ಕೂಡಲೇ ಹಲವರಿಗೆ ಟೀ ಬೇಕೆ ಬೇಕು. ಟೀ ಸೇವಿಸಿದ ಮೇಲೆಯೇ ಅವರ ದಿನಚರಿ ಮುಂದುವರೆಯುತ್ತದೆ. ಟೀ ಎಷ್ಟರ ಮಟ್ಟಿಗೆ ಹೆಸರು ಮಾಡಿದೆ ಎಂದರೆ ಪಾಶ್ಷಿಮಾತ್ಯ ದೇಶಗಳಲ್ಲೂ ಇದನ್ನು ತುಂಬಾ ಇಷ್ಟಪಡುವವರಿದ್ದಾರೆ. ಟೀ ಕುಡಿಯದೇ ಇದ್ದರೆ ತುಂಬಾ ತಲೆಕೆಡಿಸಿಕೊಳ್ಳುವ ಜನರೂ ಇದ್ದಾರೆ. ಅದು ಏಕೆ ಗೊತ್ತಾ? ಇದಕ್ಕೆ ಏನಿರಬಹುದು ಕಾರಣ?

    ಯಾವಾಗ ಟೀ ಕುಡಿದರೆ ಉತ್ತಮ ಗೊತ್ತಾ? ಮನೆಯಲ್ಲಿ ಟೀ ಕುಡಿಯಲು ಸಾಧ್ಯವಾಗದಿದ್ದರೆ ಕೊನೆಗೆ ರಸ್ತೆ ಅಂಚಿನಲ್ಲಿರುವ ಚಿಕ್ಕ ಗೂಡಂಗಡಿಯಲ್ಲಿ ಟೀ ಕುಡಿದು ಹೋಗುವವರೂ ಇದ್ದಾರೆ. ಒಟ್ಟಿನಲ್ಲಿ ನಮಗೆ ಟೀ ಬೇಕು ಅಷ್ಟೆ. ಹಲವರು ದೈನಂದಿನ ಟೀ ಕಳೆದುಕೊಳ್ಳುವುದರಿಂದ ಮನಸ್ಸಿಗೆ ತುಂಬಾ ತೊಂದರೆಯಾಗುತ್ತೆ. ಮುಖ್ಯವಾದುದನ್ನು ಏನೂ ಬಿಟ್ಟಂತೆ ಅನುಭವವಾಗುತ್ತೆ ಎಂದು ಹೇಳುತ್ತಾರೆ. ಅಷ್ಟರಮಟ್ಟಿಗೆ ಟೀಗೆ ಜನ ಎಡಿಕ್ಟ್ ಆಗಿದ್ದಾರೆ.

    ಟೀ ಸೇವನೆಯಿಂದ ನಮ್ಮ ದೇಹಕ್ಕೆ ವಿವಿಧ ಪ್ರಯೋಜನಗಳು ಇದೆ ಹಾಗೆಯೇ ಕೆಲ ಸಮಸ್ಯೆಗಳು ಇದೆ. ಒಂದು ನಿಗದಿತ ಸಮಯದಲ್ಲಿ ಟೀ ಕುಡಿಯುವುದು ಉತ್ತಮ. ಫ್ರೀ ಇದ್ದಾಗಲೆಲ್ಲ ಟೀ ಕುಡಿದರೆ ನಿಮ್ಮ ಆರೋಗ್ಯ ಕೆಡುವುದು ಪಕ್ಕಾ.

    ಚಹಾ ಬಗ್ಗೆ ವೈದ್ಯರು ಹೇಳುವುದೇನು? ಇನ್ನು ಕೆಲ ನುರಿತ ವೈದ್ಯರು ಟೀ ಸೇವನೆಯಿಂದ ತಲೆ ನೋವು ಕಡಿಮೆ ಆಗಲ್ಲ ಎಂದು ವರದಿ ಮಾಡಿದ್ದಾರೆ. ಅತೀಯಾದ ಟೀ ಸೇವನೆ ಹಾನಿಕಾರಕ. ಟೀ ಸೇವಿಸುವುದರಿಂದ ತಲೆ ನೋವಿಗೆ ಸಂಬಂಧಿಸಿ ಯಾವ ಪರಿಣಾಮವೂ ಬೀರಲ್ಲ ಎಂದು ವೈದ್ಯರು ಹೇಳುತ್ತಾರೆ. ಟೀನಲ್ಲಿ ಹಲವು ವಿಧವಿದೆ. ಬ್ಲ್ಯಾಕ್ ಮತ್ತು ಗ್ರೀನ್ ಟೀ ಕುಡಿದರೆ ಹಲವು ಪ್ರಯೋಜನಗಳಿವೆ.

    ಬ್ಲ್ಯಾಕ್ ಟೀ ಹೆಚ್ಚು ಕೆಫೀನ್ ಅನ್ನು ಹೊಂದಿರುತ್ತದೆ, ಇದು ನಿಮಗೆ ತಲೆನೋವುಗೆ ಸಹಾಯ ಮಾಡುತ್ತದೆ. ಹಾಗೂ ಕೆಫೀನ್ ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ, ವಿಶೇಷವಾಗಿ ಕೆಫೀನ್ ಅನ್ನು ತಲೆನೋವು ಅನುಭವಿಸುವವರು ಸ್ವೀಕರಿಸುತ್ತಾರೆ.

    ಹಲವರ ಫೇವರೇಟ್ ಈ ಮಸಾಲೆ ಟೀ :

    ಸಾಮಾನ್ಯವಾಗಿ ಮಸಾಲಾ ಟೀ ನಲ್ಲಿ ಬಳಸುವ ಶುಂಠಿ, ಏಲಕ್ಕಿ ಮತ್ತು ದಾಲ್ಚಿನ್ನಿಗಳಂತಹ ಮಸಾಲೆಗಳು ಹಲವು ಬಗೆಯ ಉತ್ತಮ ಗುಣಲಕ್ಷಣಗಳನ್ನು ಹೊಂದಿದ್ದು ಇದು ತಲೆ ನೋವು ಮತ್ತು ಅಸ್ವಸ್ಥತೆಯನ್ನು ಕಡಿಮೆ ಮಾಡುತ್ತದೆ. ಉದಾಹರಣೆಗೆ ಮೈಗ್ರೇನ್ ರೋಗಿಗಳಿಗೆ ಚಿಕಿತ್ಸೆ ನೀಡಲು ಶುಂಠಿ ಪರಿಣಾಮಕಾರಿ ಎಂದು ವೈದ್ಯರು ದೃಢಪಡಿಸಿದ್ದಾರೆ. ಮಸಾಲೆ ಟೀ ತಲೆನೋವನ್ನು ಗುಣಪಡಿಸುತ್ತದೆ ಎಂದು ಸಾಬೀತುಪಡಿಸಲು ಸಾಕಷ್ಟು ವೈಜ್ಞಾನಿಕ ಪುರಾವೆಗಳಿಲ್ಲದಿದ್ದರೂ ಕೆಲವು ತಜ್ಞರು ಟೀನಲ್ಲಿರುವ ಮಸಾಲೆಗಳು ಹಿತವಾದ ಪರಿಣಾಮವನ್ನು ಬೀರಬಹುದು ಮತ್ತು ಮಾನಸಿಕ ಒತ್ತಡ ಸಂಬಂಧಿತ ತಲೆನೋವುಗಳನ್ನು ಕಡಿಮೆ ಮಾಡುತ್ತದೆ ಎಂದು ಹೇಳುತ್ತಾರೆ.

    ಚಹಾವನ್ನು ಸೇವಿಸಲು ಇದು ಸರಿಯಾದ ಸಮಯವಲ್ಲ:

    ಊಟಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಮತ್ತು ನಂತರ ಚಹಾ ಸೇವಿಸುವುದನ್ನು ತಡೆಯಲು ಸಂಶೋಧನಾ ಸಂಸ್ಥೆ ಸಲಹೆ ನೀಡಿದೆ. ಏಕೆಂದರೆ ಇದರಲ್ಲಿ ಟ್ಯಾನಿನ್ ಎಂಬ ಅಂಶವು ಕೆಫೀನ್‌ನಂತೆ ಇರುತ್ತದೆ. ಈ ಟ್ಯಾನಿನ್‌ಗಳು ದೇಹದಲ್ಲಿ ಕಬ್ಬಿಣದ ಹೀರಿಕೊಳ್ಳುವಿಕೆಯ ಮೇಲೆ ಅಡ್ಡಿ ಪರಿಣಾಮಪಡಿಸಬಹುದು. ದೇಹದಲ್ಲಿ ಕಬ್ಬಿಣದ ಕೊರತೆ ಮತ್ತು ರಕ್ತಹೀನತೆಯಂತಹ ಪರಿಸ್ಥಿತಿಗಳಿಗೆ ಕಾರಣವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

    LATEST NEWS

    VIRAL VIDEO: ತಾಯಿಯೊಂದಿಗೆ ಎಂಟು ತಿಂಗಳ ಕಂದಮ್ಮನ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ

    Published

    on

    ಮಂಗಳೂರು: ಪುಟ್ಟ ಕಂದಮ್ಮಗಳ ಜೊತೆ ತುಸು ಘಳಿಗೆ ಇದ್ದರೂ ಸಿಗುವ ಖುಷಿಯೇ ಬೇರೆ. ಮುಗ್ಧ ಮನಸ್ಸುಗಳು ನಿಸ್ವಾರ್ಥದಿಂದ ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ತಾಯಿಯೊಂದಿಗೆ ಎಂಟು ತಿಂಗಳ ಮಗುವೊಂದು ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಿಸಿದ್ದು, ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.

    ಅರ್ಜುನನ ಪುತ್ರ ಅಭಿಮನ್ಯು ತಾಯಿಯ ಗರ್ಭದಲ್ಲಿರುವಾಗಲೇ ಚಕ್ರವ್ಯೂಹವನ್ನು ಭೇದಿಸುವ ಕಲೆಯನ್ನು ತಂದೆಯಿಂದ ಕಲಿತಿರುತ್ತಾನೆ. ಅಂತೆಯೇ ಈ ಮಗು ತಾಯಿಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಅನ್ನು ಕಲಿತಿದೆ ಎನ್ನುವ ಸಾಲುಗಳೊಂದಿಗೆ ಈ ವಿಡಿಯೋವನ್ನು Vaidik Gyaan ಹೆಸರಿನ ಖಾತೆಯಲ್ಲಿ  ಹಂಚಿಕೊಳ್ಳಲಾಗಿದೆ. ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಪಠಿಸುತ್ತಿರುವಾಗ ಅದರ ಕೊನೆಯ ಪದವನ್ನು ಮಗುವು ಮುದ್ದಾಗಿ ಉಚ್ಚರಿಸುತ್ತಿದೆ.
    ಸಮಾಜಿಕ ಜಾಲತಾಣದಲ್ಲಿ ಅಧಿಕ ವೀಕ್ಷಣೆ ಕಂಡಿದ್ದು. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಮಗುವಿನ ಈ ಆಧ್ಯಾತ್ಮಕ ಸಾಧನೆಯನ್ನು ಒಬ್ಬರು ಹೊಗಳಿದ್ದಾರೆ. ಮತ್ತೊಬ್ಬರು, ಜೈ ಸನಾತನ ಧರ್ಮ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಮಗುವಿನ ಬಾಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ ಕೇಳುವುದೇ ಕಿವಿಗೆ ಇಂಪು’ ಎಂದಿದ್ದಾರೆ.

     

    watch this video : 

    Continue Reading

    LATEST NEWS

    ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ

    Published

    on

    ಆಂಧ್ರಪ್ರದೇಶ: ಯುವಕನೊಬ್ಬ ಮಂಗಳಮುಖಿಯನ್ನು ಮೂರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿರುವ ಘಟನೆ ಆಂಧ್ರಪ್ರದೇಶದ ಎನ್.ಟಿಆರ್ ಜಿಲ್ಲೆಯಲ್ಲಿ ನಡೆದಿದೆ.

    ವಿಸ್ಸನ್ನಪೇಟೆ ನಿವಾಸಿ ನಂದು ಮತ್ತು ಎಂಕೂರಿನ ತೃತೀಯಲಿಂಗಿ ನಕ್ಷತ್ರಾ ಮದುವೆಯಾದ ನವ ಜೋಡಿ. ಸದ್ಯ ಇವರಿಬ್ಬರ ಮದುವೆಯ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

    ತೃತೀಯಲಿಂಗಿ ಸಮುದಾಯದ ಪ್ರತಿನಿಧಿಗಳ ಸಮ್ಮುಖದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇತ್ತೀಚಿಗಷ್ಟೇ ಮದುವೆ ನಡೆದಿದೆ.  ನಾನು ಮಂಗಳಮುಖಿಯನ್ನು ಮದುವೆಯಾಗುವುದು ನನ್ನ ಕುಟುಂಬದವರಿಗೆ ಇಷ್ಟವಿಲ್ಲ. ಆದರೆ ನಾವಿಬ್ಬರು ಸುದೀರ್ಘ ಚರ್ಚೆ ನಡೆಸಿ ಮದುವೆಯಾಗಲು ನಿರ್ಧರಿಸಿದೆವು.

    Continue Reading

    LATEST NEWS

    ನೇ*ಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶ*ವ ಪತ್ತೆ; ಇದು ಆ*ತ್ಮಹತ್ಯೆನಾ ? ಕೊ*ಲೆನಾ ?

    Published

    on

    ಮಂಗಳೂರು/ಬೆಂಗಳೂರು: ನೇ*ಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮಹಿಳೆ ಶ*ವ ಬೆಂಗಳೂರಿನ ವಿವೇಕನಗರದಲ್ಲಿ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ಮೇಘನಾ ಶೆಟ್ಟಿ(27) ಮೃ*ತ ಮಹಿಳೆ.


    ಮೇಘನಾ ಅವರು ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ವರ್ಷದ ಹಿಂದೆ ತೀರ್ಥಹಳ್ಳಿಯ ಮೂಲದ ಇಂಜಿನಿಯರ್ ಸುದೀಪ್ ಶೆಟ್ಟಿ ಜೊತೆ ವಿವಾಹವಾಗಿತ್ತು. ಜೊತೆಗೆ ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಸಹ ಇದೆ.
    ಮೃ*ತ ದೇಹ ಹೇಗೆ ಪತ್ತೆಯಾಗಿದೆ ಗೊತ್ತಾ ?
    ಎಲ್ಲವೂ ಚೆನ್ನಾಗಿದ್ದ ಕುಟುಂಬದಲ್ಲಿ ಇತ್ತೀಚೆಗೆ ಪದೇಪದೆ ಹಣಕ್ಕಾಗಿ ಪತಿ ಕುಟುಂಬದಿಂದ ಕಿರು*ಕುಳ ನೀಡುತ್ತಿದ್ದು, ನಿನ್ನೆ(ಅ.04) ರಾತ್ರಿ ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದೆ ಎನ್ನಲಾಗಿದೆ. ಇಂದು(ಅ.5) ಬೆಳಗ್ಗೆ ಕಿಟಕಿಗೆ ನೇ*ಣು ಬಿಗಿದುಕೊಂಡ ಸ್ಥಿತಿಯಲ್ಲಿ ಶ*ವ ಪತ್ತೆಯಾಗಿದೆ.
    ಪತ್ನಿಯನ್ನು ಪತಿಯೇ ಕೊ*ಲೆ ಮಾಡಿದ್ದಾ ?
    ಘಟನಾ ಸ್ಥಳಕ್ಕೆ ವಿವೇಕನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃ*ತ ಮೇಘನಾ ಪೋಷಕರು, ಅಳಿಯ ಸುದೀಪ್ ಮೇಲೆ ಕೊ*ಲೆ ಆರೋಪ ಹೇರಿದ್ದು, ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಮೇಘನಾ ಪತಿ ಸುದೀಪ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending