FILM
“ನಿವೇದಿತಾಜೈನ್”ಗೆ ಸಾ*ವಿನ ಸುಳಿವು ಮೊದಲೇ ಇತ್ತಾ.!? ಈಬಗ್ಗೆ ನಿವೇದಿತಾ ತಾಯಿ ಹೇಳಿದ್ದೇನು ಗೊತ್ತಾ?
ಮಂಗಳೂರು: ಕನ್ನಡ ಚಿತ್ರರಂಗದಲ್ಲಿ ಅದೆಷ್ಟೋ ನಾಯಕಿಯರು ದುರಂತ ಎಂಬಂತೆ ಸಾವಿನ ಕದ ತಟ್ಟಿದ್ದಾರೆ. ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ಮಿಂಚುತ್ತಿದ್ದ ಮೋಹಕ ನಟಿಯರು ದುರಂತವಾಗಿ ಸಾವಿಗೀಡಾಗಿದ್ದಾರೆ. ಅದರಲ್ಲಿ ಒಬ್ಬರು ಮುದ್ದು ಮುಖದ ಚೆಲುವೆ ನೀಳಕಾಯದ ಸುಂದರಿ ನಿವೇದಿತಾ ಜೈನ್. ಹೌದು, ಅಲ್ಪ ಕಾಲ ಬದುಕಿದ್ದರೂ ಇವರು ನಟಿಸಿರುವ ಸಿನೆಮಾಗಳು ಹಿಟ್ ಲಿಸ್ಟ್ನಲ್ಲಿ ಸೇರಿಕೊಂಡಿದೆ. ಆದರೆ ಸಣ್ಣ ವಯಸ್ಸಿಲ್ಲಿಯೇ ಇಹಲೋಕ ಸೇರಿರುವುದು ಮಾತ್ರ ದುರಂತವೇ ಸರಿ.
ಇನ್ನು ಸಣ್ಣ ವಯಸ್ಸಿನಲ್ಲಿಯೇ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಿವೇದಿತಾ ತನ್ನ 14 ನೇ ವರ್ಷಕ್ಕೆ ಮಿಸ್ ಬೆಂಗಳೂರು ಪಟ್ಟ ಮುಡಿಗೇರಿಸಿಕೊಂಡಿದ್ದರು. ಒಂಭತ್ತನೇ ತರಗತಿಯಲ್ಲಿರುವಾಗಲೇ ಮಿಸ್ ಬೆಂಗಳೂರು ಆಗಿದ್ದರು. ಇಲ್ಲಿಂದ ಇವರ ಬದುಕೇ ಬದಲಾಯಿತಂತೆ. ಇನ್ನು ಇವರ ಫೊಟೊಗಳು ಪೇಪರ್ , ಮೆಗಾಝಿನ್ಗಳಲ್ಲಿ ಪ್ರಕಟಗೊಂಡಿತ್ತು. ಈ ಸಮಯದಲ್ಲಿ ರಾಘವೇಂದ್ರ ರಾಜಕುಮಾರ್ ನಟಿಸಲಿದ್ದ “ಶಿವರಂಜಿನಿ” ಚಿತ್ರಕ್ಕೆ ನಾಯಕಿಯಾಗಿ ಅಪ್ರೋಚ್ ಮಾಡಲಾಗಿತ್ತು. ಇದಕ್ಕಿಂತ ಮೊದಲು ನಿವೇದಿತಾಳಿಗೆ ಅನೇಕ ಸಿನೆಮಾ ಆಫರ್ಗಳು ಬಂದರೂ ಕೂಡಾ ಇವರು ಇಂಟ್ರಸ್ಟ್ ತೋರಿಸಿರಲಿಲ್ಲ. ಆದರೆ ಡಾ. ರಾಜ್ಕುಮಾರ್ ಅವರ ಕಡೆಯಿಂದ ರಾಘಣ್ಣನ ಸಿನೆಮಾಗೆ ನಾಯಕಿಯಾಗಿ ನಟಿಸುವಂತೆ ಆಫರ್ ಬಂದಿತ್ತು. ಇನ್ನು ತುಂಬಾನೆ ಚಿಕ್ಕವಳಾಗಿದ್ದ ಇವರಿಗೆ ಸಿನೆಮಾಗಳಲ್ಲಿ ನಟಿಸುವ ಆಸಕ್ತಿ ಇಲ್ಲವಾಗಿತ್ತು. ಆದರೆ ನಿವೇದಿತಾಳಿಗೆ ರಾಜ್ಕುಮಾರ್ರವರ ಜೊತೆ ನಟಿಸಲು ಬಹಳ ಆಸಕ್ತಿ ಇತ್ತಂತೆ. ಹಾಗಾಗಿ ಅವರ ಬ್ಯಾನರ್ನಲ್ಲಿ ಮೂಡಿಬರುವ “ಶಿವರಂಜಿನಿ” ಸಿನೆಮಾಗೆ ನಟನೆ ಮಾಡಲು ಒಪ್ಪಿದ್ದರಂತೆ ನಿವೇದಿತಾ.
ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ; ಯಾವ ಸಿನಿಮಾ? ಇಲ್ಲಿದೆ ಡಿಟೇಲ್ಸ್
ನಟಿಯ ಸಾವಿನ ಸುಳಿವು ಮೊದಲೇ ಇತ್ತಾ..?
ನಿವೇದಿತಾ ಜೈನ್ ಇವರ ಸಾವಿನ ಬಗ್ಗೆ ನೂರಾರು ಮಾತುಗಳು ಕೇಳಿ ಬರುತ್ತಿತ್ತು. ವದಂತಿಗಳು ಹಬ್ಬಿತ್ತು. ಇನ್ನು ನಿವೇದಿತಾ ಬದುಕಿ ಬಾಳಿದ್ದು ಮಾತ್ರ ಕೇವಲ 19 ವರ್ಷ. ಆದರೆ ಅಷ್ಟರಲ್ಲೇ 12ಕ್ಕೂ ಹೆಚ್ಚು ಸಿನೆಮಾಗಳಲ್ಲಿ ಅಭಿನಯಿಸಿದ್ರು. ಬದುಕಿ ಉಳಿದಿದ್ರೆ ಈಗ ಬಾಲಿವುಡ್ ನಲ್ಲೂ ಸ್ಟಾರ್ ಆಗ್ತಿದ್ರು ಈಕೆ. ಮಗಳ ಸಾವಿನ ಬಗ್ಗೆ ಸ್ವತಃ ಅವರ ತಾಯಿ ಪ್ರಿಯಾ ಜೈನ್ ಖಾಸಗಿ ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.
ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!
ಕೇರಳದ ವ್ಯಕ್ತಿಯಿಂದ ಸಿಕ್ಕಿತ್ತು ಸಾವಿನ ಮುನ್ಸೂಚನೆ:
ಕೊಲ್ಲೂರು ದೇವಸ್ಥಾನಕ್ಕೆ ನಿವೇದಿತಾ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದರು. ಈ ವೇಳೆ ಕೇರಳದಿಂದ ಬಂದವರು 45 ದಿನಗಳ ಉಪವಾಸದಲ್ಲಿದ್ದು ಪೂಜೆ ಮಾಡುತ್ತಿದ್ದರು. ಅವರು ಏಕಾಏಕಿ ನಮ್ಮನ್ನು ಅವರ ಬಳಿ ಕರೆಸಿಕೊಂಡರು. ನಮ್ಮ ಮನೆಯ ಎಲ್ಲಾ ವಿಚಾರವನ್ನು ಸ್ಪಷ್ಟವಾಗಿ ವಿವರಿಸಿದರು. ಮನೆಯ ಅಡುಗೆ ಕೋಣೆ ಯಾವ ಭಾಗದಲ್ಲಿದೆ. ಯಾವ ಭಾಗದಲ್ಲಿ ದೇವರ ಕೋಣೆ ಇದೆ ಹೀಗೆ..ಎಲ್ಲಾ ಇರೋದನ್ನು ಕಂಡ ಹಾಗೆ ಹೇಳಿದ್ದರು. ಇನ್ನು ಮಗಳು ನಿವೇದಿತಾಳನ್ನು ನೋಡಿ ಇವಳು ಅಲ್ಪಾಯುಷಿ ಎಂದು ಹೇಳಿದ್ರು. ಇವಳ ಹಣೆಗೆ ಬಲವಾದ ಪೆಟ್ಟು ಬೀಳಲಿದೆ. ನೀವು ಕೂಡಲೇ ಮನೆಯನ್ನು ಬದಲಾಯಿಸಿ ಎಂದು ಹೇಳಿದ್ದರು. ನಾವು ಕೂಡಾ ಬೇರೆ ಮನೆಯನ್ನು ಹುಡುಕಾಡಲು ಆರಂಭಿಸಿದೆವು. ಆದರೆ ದುರಾದೃಷ್ಟವಶಾತ್ ನಮಗೆ ಮನೆ ಸಿಗಲಿಲ್ಲ. ನಮ್ಮ ಮಗಳು ಕೂಡಾ ನಮ್ಮ ಪಾಳಿಗೆ ಉಳಿಲಿಲ್ಲಾ. ಅವರು ಏನು ಹೇಳಿದ್ದರೋ ಹಾಗೆ ನಡೆದು ಹೋಯಿತು ಎಂದು ನಿವೇದಿತಾ ತಾಯಿ ಪ್ರಿಯಾ ಜೈನ್ ಹೇಳಿದ್ರು.
ಇನ್ನು ಈ ಬಗ್ಗೆ ಕೆಲವು ವರದಿಗಳಲ್ಲಿ ನಿವೇದಿತಾ ಈ ವಿಷಯ ತಿಳಿದ ಕೂಡಲೇ ದಿಗ್ಭ್ರಾಂತಳಾಗಿದ್ದಾಳೆ ಎಂದೆಲ್ಲ ಸುದ್ದಿಯಾಗಿತ್ತು. ಆದರೆ ನಿವೇದಿತಾ ಜೈನ್ ‘ನಮ್ಮದೇ ಆದ ಕರ್ಮ ಇರುತ್ತೆ ನಂಗೆ ಅಷ್ಟು ಬೇಗ ಏನೂ ಆಗವುದಿಲ್ಲ’ ಅಂತ ಹೇಳುತ್ತಿದ್ದರು. ಇನ್ನು ಜೀವನದಲ್ಲಿ ತುಂಬಾನೇ ಪಾಸಿಟಿವ್ ಆಗಿದ್ರಂತೆ ನಿವೇದಿತಾ.
FILM
ಐಶ್ವರ್ಯಾ ರೈ ಜೊತೆಗೂಡಿ ಬಿಗ್ ಬಿ ಫ್ಯಾಮಿಲಿ ಮತದಾನ…!
ಮಂಗಳೂರು ( ಮಹಾರಾಷ್ಟ್ರ ) : ಚುನಾವಣೆಯಲ್ಲಿ ಮತ ಚಲಾಯಿಸಿರುವ ಐಶ್ವರ್ಯಾ ರೈ ಬಚ್ಚನ್ ಕುಟುಂಬದ ಜೊತೆ ಮತಕೇಂದ್ರಕ್ಕೆ ಆಗಮಿಸಿದ್ದಾರೆ. ಅಮಿತಾಬಚ್ಚನ್, ಜಯಾಬಚ್ಚನ್ ಜೊತೆಯಲ್ಲಿ ಒಂದೇ ಕಾರಿನಲ್ಲಿ ಮತಗಟ್ಟೆಗೆ ಆಗಮಿಸಿದ್ದಾರೆ. ಈ ಮೂಲಕ ಹಲವು ಸಮಯದಿಂದ ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಶೇಕ್ ಬಚ್ಚನ್ ದಾಂಪತ್ಯ ವಿಚಾರವಾಗಿ ಇದ್ದ ಗಾಸಿಪ್ಗೆ ತೆರೆ ಎಳೆದಿದ್ದಾರೆ.
ಐದನೇ ಹಂತದ ಮತದಾನದಲ್ಲಿ ಅನೇಖ ಸೆಲಬ್ರಿಟಿಗಳು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಮತದಾನವಾಗಿದ್ದು, ಬಾಲಿವುಡ್ ನಟ ನಟಿಯರು ಮತದನಾ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದ್ದಾರೆ. ನಟ ಅಕ್ಷಯ್ ಕುಮಾರ್ ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಹಾಜರಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಪಿಂಕ್ ಡ್ರೆಸ್ನಲ್ಲಿ ಆಗಮಿಸಿದ ಜಾನ್ವಿ ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ತೆರಳಿ ಮತಯಾಚನೆ ಮಾಡಿದರು. ಮತದಾನ ಕೇಂದ್ರದಲ್ಲಿ ಜಾನ್ವಿ ಕಪೂರ್ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ವಿಶೇಷ ಮಹಿಳಾ ಪೊಲೀಸರು ನಟಿ ಜಾನ್ವಿಗೆ ಭದ್ರತೆ ಒದಗಿಸಿದರು.
ಅದೇ ರೀತಿ ಶಾರುಖ್ ಖಾನ್ ಅವರು ತಮ್ಮ ಕುಟುಂಬದೊಂದಿಗೆ ಮತದಾನ ಮಾಡುತ್ತಿರುವುದು ಕಂಡುಬಂದಿದೆ. ಹೀಗೆ ಹೃತಿಕ್ ರೋಷನ್, ರಾಕೇಶ್ ರೋಷನ್, ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮತದಾನ ಮಾಡಿದರು. ಇನ್ನು ವರುಣ್ ಧವನ್ ಜೊತೆಗೆ ತಂದೆ ಡೇವಿಡ್ ಧವನ್, ಧರ್ಮೇಂದ್ರ, ಆಶಾ ಭೋಂಸ್ಲೆ ಮತ್ತು ಇತರರು ಬೂತ್ನಲ್ಲಿ ಮತದಾನ ಮಾಡಿದರು.
FILM
‘ಅಣ್ಣಾವ್ರ’ ಹಾಡು ಹಾಡಿದ ‘ಮೋಹನ್ ಲಾಲ್’; ವೀಡಿಯೋ ವೈರಲ್
ಬೆಂಗಳೂರು: ಮಲಯಾಳಂ ಸೂಪರ್ ಸ್ಟಾರ್ ನಟ ಮೋಹನ್ ಲಾಲ್ ರವರು ಡಾ. ರಾಜ್ಕುಮಾರ್ ಜೊತೆ ಅವಿನಾಭಾವ ಸಂಬಂಧವಿತ್ತು. ಇಬ್ಬರ ನಡುವೆ ಒಂದೊಳ್ಳೆ ಬಾಂಧವ್ಯವಿತ್ತು. ಇದಕ್ಕೆ ಸಾಕ್ಷಿ ಅನ್ನುವಂತೆ ಹೊಸ ವೀಡಿಯೋ ಒಂದು ವೈರಲ್ ಆಗಿದೆ. ಈ ವೀಡಿಯೋದಲ್ಲಿ ರಾಜ್ಕುಮಾರ್ ನಟನೆಯ ‘ಎರಡು ಕನಸು’ ಸಿನೆಮಾದ ‘ಎಂದೆಂದೂ ನಿನ್ನನು ಮರೆತು ನಾನಿರಲಾರೆ..’ ಎಂಬ ಹಾಡನ್ನು ಹಾಡಲು ಪ್ರಯತ್ನಿಸಿದ್ದಾರೆ. ಇನ್ನು ಡಾ. ರಾಜ್ಕುಮಾರ್ ಅವರಿಗೆ ಟಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲಾ ಕಡೆ ಅಭಿಮಾನಿಗಳು ಇರುವುದು ವಿಶೇಷ.
Read More..; ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ; ಡ್ರ*ಗ್ಸ್ ಪತ್ತೆ! ಪಾರ್ಟಿಯಲ್ಲಿದ್ದರು ನಟ – ನಟಿಯರು,.!
ಇನ್ನು ಮೋಹನ್ಲಾಲ್ ಕನ್ನಡ ಸಿನೆಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಹಲವಾರು ಅಭಿಮಾನಿಗಳನ್ನು ಹೊಂದಿದ್ದಾರೆ. ಲಾಲೇಟ ಎಂದೇ ಎಲ್ಲರಿಗೂ ಪ್ರೀತಿಪಾತ್ರರಾಗಿರುವ ಮೋಹನ್ಲಾಲ್ರವರ ಮೇ.21ರಂದು ಹುಟ್ಟುಹಬ್ಬ.
FILM
ಮತ್ತೆ ಕಿರುತೆರೆಗೆ ಲಗ್ಗೆ ಇಟ್ಟ ನಟ ರೂಪೇಶ್ ಶೆಟ್ಟಿ; ‘Huu ಅಂತೀಯಾ…Uhuu ಅಂತೀಯಾ’ ಅಂದ್ರು ರಾಕ್ ಸ್ಟಾರ್!
ಮಂಗಳೂರು : ರೂಪೇಶ್ ಶೆಟ್ಟಿ ಕೋಸ್ಟಲ್ ವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಕಲಾವಿದ. ಕನ್ನಡ ಸಿನಿಮಾಗಳಲ್ಲೂ ಮಿಂಚಿದ್ದಾರೆ. ಈಗಾಗಲೇ ಕಿರುತೆರೆಗೆ ಲಗ್ಗೆ ಇಟ್ಟಿರುವ ಅವರು ಬಿಗ್ ಬಾಸ್ ಸೀಸನ್ 9 ರ ವಿಜೇತರಾಗಿ ಹೊರಹೊಮ್ಮಿದ್ದರು. ಇದೀಗ ಮತ್ತೆ ಕಿರುತೆರೆಗೆ ಲಗ್ಗೆ ಇಡುತ್ತಿದ್ದಾರೆ.
ನಿರೂಪಕನಾಗಿ ಎಂಟ್ರಿ:
ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿರುವ ರೂಪೇಶ್ ಶೆಟ್ಟಿ ಕಿರುತೆರೆಗೆ ಮತ್ತೆ ಲಗ್ಗೆ ಇಡುತ್ತಿದ್ದಾರೆ. ಅದು ಹೊಸ ರಿಯಾಲಿಟಿ ಶೋನಲ್ಲಿ. ಹಾಗಂತ ಅವರು ಸ್ಪರ್ಧಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ನಿರೂಪಕರಾಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅದುವೇ ‘Huu ಅಂತೀಯಾ…Uhuu ಅಂತೀಯಾ’. ಇದೊಂದು ವಿಭಿನ್ನ ಬಗೆಯ ವಿನೂತನ ಗೇಮ್ ಶೋ ಆಗಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ವೀಕೆಂಡ್ ನಲ್ಲಿ ಈ ಶೋ ಪ್ರಸಾರವಾಗಲಿದೆ.
ರೂಪೇಶ್ ಶೆಟ್ಟಿ ಹಾಗೂ ಅರುಣ್ ಇಬ್ಬರು ಜೊತೆಯಾಗಿ ಈ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.
ಹೇಗಿರಲಿದೆ ಶೋ:
ಈ ಶೋನಲ್ಲಿ ಒಟ್ಟು ಮೂರು ಸುತ್ತುಗಳು ಇರುತ್ತವೆ. ಈ ಶೋನಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳಿಗೆ ಬರೋಬ್ಬರಿ 6 ಲಕ್ಷ ರೂಪಾಯಿ ಗೆಲ್ಲುವ ಅವಕಾಶ ಇರುತ್ತದೆ.
ಮೊದಲ ಸುತ್ತಿನಲ್ಲಿ ಸ್ಪರ್ಧಿಗಳು ಒಬ್ಬರ ನಂತರ ಒಬ್ಬರು ಆಟ ಆಡುತ್ತಾರೆ. ನಿರೂಪಕರು ನೀಡಿದ ಸತ್ಯ ಮತ್ತು ಸುಳ್ಳು ಸಂಗತಿಗಳನ್ನು ಸ್ಪರ್ಧಿಗಳು ಸರಿಯಾಗಿ ಆರಿಸಿದರೆ 1 ಲಕ್ಷ ರೂಪಾಯಿ ಗೆಲ್ಲಬಹುದು. ಎರಡನೇ ಸುತ್ತಿನಲ್ಲಿ ಸ್ಪರ್ಧಿಗಳಿಗೆ ಊಟದ ಸವಾಲು ಎದುರಾಗುತ್ತೆ. ಇದರಲ್ಲಿ ಗೆದ್ದವರಿಗೆ 2 ಲಕ್ಷ ರೂಪಾಯಿ ಸಿಗಲಿದೆ. ಹಾಗೇ ಕೊನೆಯ ಸುತ್ತಿನಲ್ಲಿ ಕೇವಲ ಇಬ್ಬರು ಸ್ಪರ್ಧಿಗಳು ಆಟ ಆಡುತ್ತಾರೆ. ಇಲ್ಲಿ ಗೆದ್ದವರಿಗೆ 3 ಲಕ್ಷ ರೂಪಾಯಿ ಸಿಗುತ್ತೆ.
ಇದನ್ನೂ ಓದಿ : ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!
ಪ್ರಾರಂಭ ಯಾವಾಗ ?
‘Huu ಅಂತೀಯಾ…Uhuu ಅಂತೀಯಾ’ ಮೇ 19 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿದೆ. ಮೊದಲ ಸಂಚಿಕೆಯಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಅಮೃತಾ ಅಯ್ಯಂಗಾರ್ ಮೂವರು ಸೆಲೆಬ್ರೆಟಿಗಳು ಭಾಗವಹಿಸುತ್ತಿದ್ದಾರೆ.
- DAKSHINA KANNADA1 day ago
ವೈರಲ್ ಆಯ್ತು ಮೆಟರ್ನಿಟಿ ಶೂಟ್..! ಮೆಚ್ಚುಗೆ ಪಡೆದ ಫೋಟೋಗ್ರಾಫರ್..!
- LATEST NEWS3 days ago
ಕೊನೆಗೂ ಮೌನ ಮುರಿದ ಎಚ್ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?
- LATEST NEWS5 days ago
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ
- LATEST NEWS7 hours ago
ಮಲತಾಯಿಯ ಕ್ರೌರ್ಯಕ್ಕೆ ಮೂರು ವರ್ಷದ ಮಗು ಬ*ಲಿ