Connect with us

BELTHANGADY

ಬಂಗಾರಪಲ್ಕೆ ಜಲಪಾತ ಬಳಿ ಯುವಕ ನಾಪತ್ತೆ ಪ್ರಕರಣ : 22 ದಿನಗಳ ಬಳಿಕ ಸನತ್ ಶೆಟ್ಟಿ ಮೃತದೇಹ ಪತ್ತೆ..!

Published

on

ಬಂಗಾರಪಲ್ಕೆ ಜಲಪಾತ ಬಳಿ ಯುವಕ ನಾಪತ್ತೆ ಪ್ರಕರಣ : 22 ದಿನಗಳ ಬಳಿಕ ಸನತ್ ಶೆಟ್ಟಿ ಮೃತದೇಹ ಪತ್ತೆ..!

ಬೆಳ್ತಂಗಡಿ : ಬಂಗಾರಪಲ್ಕೆ ಜಲಪಾತ ಬಳಿ ಯುವಕ ನಾಪತ್ತೆ ಪ್ರಕರಣ ಕೊನೆಗೂ ಅಂತ್ಯ ಕಂಡಿದ್ದು 22 ದಿನಗಳ ಬಳಿಕ ಸನತ್ ಶೆಟ್ಟಿ ಮೃತದೇಹ ಪತ್ತೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಗುಡ್ಡ ಕುಸಿತದಿಂದ ಮಣ್ಣಿನಡಿ ಕಣ್ಮರೆಯಾದ ವಿದ್ಯಾರ್ಥಿ ದೇಹ ಬರೋಬ್ಬರಿ 22 ದಿನಗಳ ಬಳಿಕ  ಪತ್ತೆಯಾಗಿದೆ.

ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ಬಿದ್ದು ಯುವಕ ಕಣ್ಮರೆಯಾಗಿದ್ದ.  ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ 20 ವರ್ಷದ ಸನತ್ ಶೆಟ್ಟಿ ದೇಹ ಮಣ್ಣು ಕಲ್ಲುಬಂಡೆಯಡಿ ಸಿಲುಕಿದ್ದರಿಂದ ಸತತ 22 ದಿನಗಳ ಕಾರ್ಯಾಚರಣೆ ಬಳಿಕ ಪತ್ತೆಯಾಗಿದೆ.

ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿ 22 ದಿನ ಸುಮಾರು 30 ಅಡಿಗಳಷ್ಟು ಆಳದ ಮಣ್ಣು ತೆರವು ಕಾರ್ಯ ಸತತ ನಡೆದಿತ್ತು.ವಿದ್ಯುತ್ ಸಂಪರ್ಕವಾಗಲಿ, ಯಂತ್ರೋಪಕರಣ ಬಳಸಲು ಸಾಧ್ಯವಿಲ್ಲದ ದುರ್ಗಮ ಸ್ಥಳವಾದ್ದರೂ ಜಿಲ್ಲಾಡಳಿತ, ಶಾಸಕರು, ಸ್ಥಳೀಯರು, ಸಂಘ ಸಂಸ್ಥೆಗಳ ಸಹಕಾರದಿಂದ ದೇಹ ಶೋಧ ಕಾರ್ಯದ ಎಲ್ಲ ಪ್ರಯತ್ನಗಳು ನಡೆದಿದ್ದವು.

ಒಂದೆರಡು ಸಲ ವಾಸನೆ ಬಂದಿತ್ತಾದರೂ ದೇಹ ಪತ್ತೆಯಾಗದೆ ಪ್ರಕರಣ ಕಗ್ಗಂಟಾಗಿತ್ತು. ಇದೀಗ  ಕಡೆಗೂ ಸನತ್ ಶೆಟ್ಟಿ ದೇಹ ಪತ್ತೆಯಾಗಿದೆ.ಸ್ಥಳಕ್ಕೆ ವೈದ್ಯಕೀಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಪೊಲೀಸರು ಮುಂದಿನ ಕಾರ್ಯಕ್ಕಾಗಿ ದೇಹವನ್ನು ಕುಟಂಬಸ್ಥರಿಗೆ ಬಿಟ್ಟುಕೊಟ್ಟಿದ್ದಾರೆ.

 

 

Click to comment

Leave a Reply

Your email address will not be published. Required fields are marked *

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending