Connect with us

    DAKSHINA KANNADA

    ಉಳ್ಳಾಲದ ಕೋಡಿಯಲ್ಲಿ ಮೀನುಗಾರಿಕಾ ಬೋಟ್ ಅವಘಢ: 10 ಮಂದಿ ಮೀನುಗಾರರ ರಕ್ಷಣೆ:ಬೋಟ್‌ ನೀರುಪಾಲು- ಕೋಟಿಗೂ ಅಧಿಕ ರೂಪಾಯಿ ನಷ್ಟ..!

    Published

    on

    ಮಂಗಳೂರು: ಮಂಗಳೂರು ಹೊರ ವಲಯದ ಉಳ್ಳಾಲದ ಕೋಡಿಯಲ್ಲಿ ಮಂಗಳೂರು ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ  ಮೀನುಗಾರಿಕಾ ಬೋಟೊಂದು ದಡಕ್ಕೆ ಬಂದು ಅಪ್ಪಳಿಸಿದ ಪರಿಣಾಮ ದುರಂತಕ್ಕೀಡಾಗಿ ಒಂದು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ.ನಿನ್ನೆ ಬೆಳಗ್ಗಿನ ಜಾವ ದುರಂತ ಸಂಭವಿಸಿದ್ದು, ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಬೋಟು ಸಂಪೂರ್ಣ ನೀರು ಪಾಲಾಗಿದ್ದು ಬೋಟಿನ ಮಾಲಕರಿಗೆ ಒಂದು ಕೋಟಿ ರೂಪಾಯಿಗೂ ಅಧಿಕ ನಷ್ಠ ಸಂಭವಿಸಿದೆ.  ಬೋಟು ದುರಂತಕ್ಕೆ ಒಳಗಾಗಿದ್ದ ಸಂದರ್ಭದಲ್ಲಿ  ತಮಿಳುನಾಡು ಮೂಲದ ಅನೀಸ್, ಸೂಸರಾಜ್, ಸಲೀಂ, ಮೊಯ್ದೀನ್, ರಾಜ್, ಜಾಜ್೯ ,ರಾಜೀವ್ ಗಾಂಧಿ, ತಂಗಾರ್, ಬನ್ನಾನ್ ಎಂಬವರನ್ನು ರಕ್ಷಿಸಲಾಗಿತ್ತು. ಬೋಳಾರದ ಫಾರುಕ್ ಮತ್ತು ಉಳ್ಳಾಲ ಮುಕ್ಕಚ್ಚೇರಿಯ ಅಶ್ರಫ್ ಹೆಚ್. ಎಂಬವರಿಗೆ ಸೇರಿದ ‘ಅಝ್ನಾನ್’ ಹೆಸರಿನ ಮೀನುಗಾರಿಕಾ ಬೋಟ್ ದಡಕ್ಕೆ ಅಪ್ಪಳಿಸಿತ್ತು.ಶನಿವಾರ ರಾತ್ರಿ 10 ಗಂಟೆ ವೇಳೆಗೆ 10 ಜನ ಮೀನುಗಾರರಿದ್ದ ಬೋಟ್ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಸಮುದ್ರದ ಮಧ್ಯೆ  ಬೋಟನ್ನು ಕೊಳಾಯಿ ಹಾಕಿ ನಿಲ್ಲಿಸಲಾಗಿತ್ತು.

    ಈ ವೇಳೆ ಜೋರಾಗಿ ಬೀಸಿದ ಗಾಳಿಗೆ ಹಗ್ಗ ತುಂಡಾಗಿ ಉಳ್ಳಾಲ ಕೋಡಿ ಸಮುದ್ರ ತೀರದತ್ತ ಧಾವಿಸಿದ ಬೋಟ್ ದಡಕ್ಕೆ ಅಪ್ಪಳಿಸಿದೆ. ಸ್ಥಳೀಯ ಮನೆಮಂದಿಗೆ ಸಿಡಿಲು ಬಡಿದಂತಹ ಸದ್ದು ಕೇಳಿ ಹೊರನೋಡಿದಾಗ ಮೀನುಗಾರಿಕಾ ಬೋಟ್  ಕಡಲ್ಕೊರೆತ ತಡೆಗೆ ಹಾಕಲಾದ  ಬಂಡೆಗಳಿಗೆ ಅಪ್ಪಳಿಸಿ ನಿಂತಿತ್ತು.

    ಬೋಟಿನಲ್ಲಿದ್ದ 10 ಮಂದಿ ಕಾರ್ಮಿಕರು ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಪೈಕಿ ಓರ್ವ ತೀವ್ರ ಅಸ್ವಸ್ಥನಾಗಿದ್ದರಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೋಟಿನ ಮಾಲಕರು ಭಾನುವಾರ ದಿನವಿಡೀ ಬೋಟನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದರೂ ಬೋಟನ್ನು ದಡಕ್ಕೆ ತರಲು ಸಾಧ್ಯವಾಗಿರಲಿಲ್ಲ.

    ಇದೀಗ ಬೋಟು ಸಂಪೂರ್ಣ ಕಡಲ ಪಾಲಾಗಿದೆ.  ಹಲವು ಬಾರಿ ರೋಪ್ ಹಾಕಿ ಬೋಟನ್ನು ಎಳೆಯುವ ಪ್ರಯತ್ನ ಮಾಡಿದರೂ ರೋಪ್ ತುಂಡಾಗಿ ಕಾರ್ಯಾಚರಣೆ ವಿಫಲವಾಗಿದೆ.  ಬೋಟಿನೊಳಗಡೆ ಹಲವು ಲೀಟರ್ ಡಿಸೀಲ್ ಇದ್ದು, ಮೀನಿನ ಟ್ರೇಗಳು ಮತ್ತು ಬಲೆ ಸಮುದ್ರಪಾಲಾಗಿವೆ.

    ದಡದಲ್ಲಿರುವ ಕಲ್ಲುಗಳಿಗೆ ಬೋಟ್ ಅಪ್ಪಳಿಸುತ್ತಿರುವುದರಿಂದ ಬೋಟಿಗೆ ಹಾನಿಯೂ ಆಗಿತ್ತು. ರೂ. 1.20 ಕೋಟಿ ರೂ ವೆಚ್ಚದ ಬೋಟ್ ಇದಾಗಿದೆ.

    ವಾರದ ಹಿಂದಷ್ಟೇ ಮೀನುಗಾರಿಕೆಗೆಂದು ತೆರಳಿದ್ದ ಬೋಟಿಗೆ ಹೆಚ್ಚಿನ ಪ್ರಮಾಣದಲ್ಲಿ ಮೀನು ದೊರೆಯದೆ ರು.1.5 ಲಕ್ಷ  ರೂಪಾಯಿ ನಷ್ಟ ಉಂಟಾಗಿತ್ತು.  ಈ ಬಾರಿ ‘ ಅಂಜಲ್ ಮೀನು’ ಹೆಚ್ಚಾಗಿ ಬಲೆಗೆ ಬೀಳುತ್ತಿದೆ ಎಂದು ಮೀನುಗಾರರು  ಹೇಳಿದ  ಹಿನ್ನೆಲೆಯಲ್ಲಿ ಮತ್ತೆ ಬಂಡವಾಳ ಹಾಕಿ ಬೋಟನ್ನು ಆಳಸಮುದ್ರ ಮೀನುಗಾರಿಕೆಗೆ ಕಳುಹಿಸಲಾಗಿತ್ತು.

    ಬೋಟ್ ದುರಂತ ನಡೆದ ಸ್ಥಳಕ್ಕೆಸ್ಥಳೀಯ  ಶಾಸಕ ಯು ಟಿ ಖಾದರ್ ಭೇಟಿ ನೀಡಿ ಬೋಟು ತೆಗೆಯಲು ಎಲ್ಲಾ ಸಹಕಾರ ನೀಡಿದ್ದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending