Connect with us

    LATEST NEWS

    2.5 ಲಕ್ಷಕ್ಕೆ ನವಜಾತ ಶಿಶು ಮಾರಾಟ ಯತ್ನ; 10 ಮಂದಿಯ ಬಂಧನ

    Published

    on

    ಮಂಗಳೂರು/ಹೈದರಾಬಾದ್ : ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದಡಿ  ಪೋಷಕರು ಸೇರಿ 10 ಮಂದಿಯನ್ನು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. 15 ದಿನದ ಶಿಶುವನ್ನು ಮಾರಾಟ ಮಾಡುವ ಯತ್ನ ನಡೆದಿತ್ತು ಎಂಬುದು ತಿಳಿದು ಬಂದಿದೆ.

    ಹೈಕ್ ಇಸ್ಮಾಯಿಲ್, ಸುಲ್ತಾನಾ ಬೇಗಂ, ಮೆಹದಿ ಅಲಿ ಅಲಿಯಾಸ್ ಸಲೀಂ, ಫಾತಿಮಾ ರೆಹಮ್ತ್, ಸೈಯದ್ ಇಮ್ತಿಯಾಜ್ ಪಾಷಾ, ನಜ್ಮಾ ಬೇಗಂ, ಫಿರೋಜ್ ಖಾನ್, ಸಯೀದಾ ಶೇಖ್, ನಫೀಜ್ ಬೇಗಂ ಮತ್ತು ಸಯೀದಾ ಬೇಗಂ ಬಂಧಿತರು

    ಆ್ಯಪ್ ಮೂಲಕ ಮಾರಾಟ ಯತ್ನ :

    ಆ್ಯಪ್ ವೊಂದರ ಮೂಲಕ ಶಿಶುವನ್ನು ಮಾರಾಟ ಮಾಡುವ ಯತ್ನ ನಡೆದಿತ್ತು. ಖಚಿತ ಮಾಹಿತಿ ಮೇರೆಗೆ ದಕ್ಷಿಣ ವಲಯದ ಕಮಿಷನರ್ ಟಾಸ್ಕ್ ಫೋರ್ಸ್ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ನವಜಾತ ಶಿಶುವನ್ನು 2.5 ಲಕ್ಷಕ್ಕೆ ಮಾರಾಟ ಮಾಡಲು ಪೋಷಕರು ಯತ್ನಿಸಿದ್ದರು. ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆ ಪೋಷಕರು ಈ ನಿರ್ಧಾರ ಕೈಗೊಂಡಿದ್ದರು ಎಂದು ತಿಳಿದು ಬಂದಿದೆ.

    ಇದನ್ನೂ ಓದಿ : ನಿವೇದಿತಾ ಗೌಡ ಹೊಸ ರೀಲ್ಸ್‌ ನೋಡಿ ಗರಂ ಆದ ಫಾಲೋವರ್ಸ್..!

    ಸದ್ಯ ಶಿಶುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಹಸ್ತಾಂತರಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಉಡುಪಿ : ಚಲಿಸುತ್ತಿದ್ದ ಕಾರಿನಲ್ಲಿ ಬೆಂ*ಕಿ

    Published

    on

    ಉಡುಪಿ : ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂ*ಕಿ ಕಾಣಿಸಿಕೊಂಡಿರುವ ಘಟನೆ ಉಡುಪಿಯ ಕಿನ್ನಿಮೂಲ್ಕಿ ಸಮೀಪದ ಗೋವಿಂದ ಕಲ್ಯಾಣ ಮಂಟಪ ಮುಂಭಾಗದ ರಸ್ತೆಯಲ್ಲಿ ಸಂಭವಿಸಿದೆ.

    ಹಿರಿಯ ನಾಗರಿಕರೊಬ್ಬರು ತಮ್ಮ ಆಲ್ಟೋ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಇಂಜಿನ್ ನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ. ತಕ್ಷಣವೇ ವೃದ್ಧರು ಕಾರಿನಿಂದ ಇಳಿದಿದ್ದಾರೆ.

    ಸಾರ್ವಜನಿಕರು ಅ*ಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.  ಅ*ಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ  ಬೆಂ*ಕಿ ನಂದಿಸಿದ್ದು, ಇದರಿಂದ ಸಂಭಾವ್ಯ ಅಪಾಯ ತಪ್ಪಿದೆ.

    Continue Reading

    LATEST NEWS

    ದಸರಾ ಹಬ್ಬ: ಮೈಸೂರಿಗೆ ತೆರಳುವ 34 ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

    Published

    on

    ಬೆಂಗಳೂರು: ದಸರಾ ಸಂಬಂಧ ಮೈಸೂರಿಗೆ ಪ್ರಯಾಣಿಸುವರ ಸಂಖ್ಯೆ ಅಧಿಕವಾಗುವುದರಿಂದ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಲಿದೆ. ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈಋತ್ಯ ರೈಲ್ವೆ ವಲಯವು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಣೆ ಮಾಡಲಿದೆ.

    1 ಸ್ಲೀಪರ್‌ ಬೋಗಿ

    ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್‌

    ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್‌ (17302)

    ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್‌ (06233/06234)

    ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್‌ಪ್ರೆಸ್‌ (17307)

    ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್‌ಪ್ರೆಸ್‌ (17308)

    ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್‌ಪ್ರೆಸ್‌ (16591)

    ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌ (16592)

    ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16535)

    ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16536)

    (ಈ ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ)

    2 ಸ್ಲೀಪರ್‌ ಬೋಗಿ

    ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್‌

    ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ (16228)

    (ಈ ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ)

    1 ಜನರಲ್‌ ಬೋಗಿ

    ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್

    ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ (16221)

    ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌

    ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274)

    ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582)

    ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213)

    ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214)

    ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್‌ (16225)

    ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್‌ಪ್ರೆಸ್‌ (16226)

    ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365)

    ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366)

    ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್‌ (16239/16240)

    ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267)

    ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268)

    ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269)

    ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270)

    ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್‌ಪ್ರೆಸ್‌ (16529)

    ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

    Continue Reading

    LATEST NEWS

    ಮುಡಾ ಪ್ರಕರಣ : ಸಿಎಂ ಸಿದ್ಧರಾಮಯ್ಯ ಅರ್ಜಿ ವಜಾ..!

    Published

    on

    ಮಂಗಳೂರು/ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಈ ಆದೇಶ ನೀಡಲಾಗಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.

    ಸಿ.ಎಂ.ಸಿದ್ಧರಾಮಯ್ಯ ಪರ ವಕೀಲ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದು, ಇದನ್ನು ಕೋರ್ಟ್‌ ತಿರಸ್ಕರಿಸಿದೆ. ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಧಾರದಲ್ಲಿ ಯಾವುದೇ ಲೋಪ ಇಲ್ಲ ಮತ್ತು ಅವರ ವಿವೇಚನಾಧಿಕಾರ ಸರಿಯಾಗಿದೆ. 17ಎ ಅನುಮತಿಯನ್ನು ದೂರುದಾರರು ತೆಗೆದುಕೊಳ್ಳುವುದು ಕಡ್ಡಾಯವಾಗಿದ್ದು, ದೂರುದಾರರು ಅದನ್ನು ಪಾಲಿಸಿದ್ದಾರೆ ಎಂದು ಹೈಕೋರ್ಟ್‌ ಹೇಳಿದೆ.

    ಇದನ್ನೂ ಓದಿ : 2.5 ಲಕ್ಷಕ್ಕೆ ನವಜಾತ ಶಿಶು ಮಾರಾಟ ಯತ್ನ; 10 ಮಂದಿಯ ಬಂಧನ

    ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ  ವಾದ ಮಂಡಿಸಿದ್ದರು. ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.

    Continue Reading

    LATEST NEWS

    Trending