HomeBANTWALಬಂಟ್ವಾಳದಲ್ಲಿ ಮನೆಗೆ ನುಗ್ಗಿ 12.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಬಂಟ್ವಾಳದಲ್ಲಿ ಮನೆಗೆ ನುಗ್ಗಿ 12.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಬಂಟ್ವಾಳ: ಮನೆಗೆ ನುಗ್ಗಿದ ಕಳ್ಳರು ಸುಮಾರು ಒಟ್ಟು 12.40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿಶಾಭಾಗ್ ಸಮೀಪದ ಮನೆಯೊಂದರಲ್ಲಿ ನಡೆದಿದೆ.


ನಿಶಾಭಾಗ್ ನಿವಾಸಿಯಾಗಿರುವ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಅಬ್ಬಾಸ್ ಅವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ.

ಡಿಸೆಂಬರ್ 13 ರಂದು ಮಧ್ಯಾಹ್ನ 2.30 ರಿಂದ ರಾತ್ರಿ 8.10 ರೊಳಗೆ ಕಳವು ಕೃತ್ಯ ನಡೆದಿರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಅಂದು ಮಧ್ಯಾಹ್ನ ಮನೆಯವರು 2.30 ಕ್ಕೆ ಸಂಬಂಧಿಕರ ಮನೆಗೆ ಹೋಗಿ ವಾಪಸ್ ರಾತ್ರಿ 8.10 ರ ಸುಮಾರಿಗೆ ವಾಪಸ್ ಬಂದಾಗ ಕಳವು ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.

ನಜೀಬ್ ಅವರ ತಾಯಿ ಮಲಗುವ ಕೋಡೆಯಲ್ಲಿದ್ದ ಕಪಾಟಿನ ಸೇಫ್ ಲಾಕರನ್ನು ಆಯುಧದಿಂದ ಕಟ್ ಮಾಡಿದ ಕಳ್ಳರು ಅವರ ಮಿನಿ ಪರ್ಸ್ ನಲ್ಲಿದ್ದ 1.40 ಲಕ್ಷ ರೂಪಾಯಿ ನಗದು, 3 ಪವನ್ ತೂಕದ 3 ಕೈ ಬಳೆಗಳು, ತಲಾ ಒಂದು ಪವನ್ ತೂಕದ 3 ಉಂಗುರಗಳು, 7 ಪವನ್ ತೂಕದ ಚಿನ್ನದ ಚೈನ್, ನಜೀಬ್ ಅವರ ಕೋಣೆಯ ಕಪಾಟಿನಲ್ಲಿದ್ದ ಸೇಫ್ ಲಾಕರ್ ಮುರಿದು 4 ಪವನ್ ತೂಕದ ಕೊರಳಿನ ಮಾಲೆ, 5 ಪವನ್ ತೂಕದ ಕೈ ಬಳೆ ಸಹಿತ ಇತರ ಚಿನ್ನಾಭರಣ ಸೇರಿ ಒಟ್ಟು 36 ಪವನ್ ತೂಕದ ಚಿನ್ನಾಭರಣ ಕಳವು ನಡೆಸಿದ್ದಾರೆ.


ಕಳ್ಳರು ಮನೆಯ ಮೇಲಿನ ಮಹಡಿಯ ಹಿಂಬದಿಯ ಬಾಗಿಲನ್ನು ಮುರಿದು ಒಳ ನುಗ್ಗಿದ್ದು, ಕಳವಾದ ಚಿನ್ನದ ಮೌಲ್ಯದ 11 ಲಕ್ಷ ರೂಪಾಯಿ, 1.40 ಲಕ್ಷ ರೂಪಾಯಿಯ ನಗದು ಸೇರಿ ಒಟ್ಟು 12.40 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ.

ಈ ಕುರಿತು ಮನೆ ಮಾಲಕರಾದ ಎಸ್.ಅಬ್ಬಾಸ್ ಅವರ ಪುತ್ರ ಮೊಹಮ್ಮದ್ ನಜೀಬ್ ಅವರು ನೀಡಿರುವ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest articles

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...

ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!

ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...