BANTWAL
ಬಂಟ್ವಾಳದಲ್ಲಿ ಪ್ರತ್ಯಕ್ಷವಾದ 12 ಅಡಿ ಉದ್ದದ ಕಾಳಿಂಗ ಸರ್ಪ..!
ಬಂಟ್ವಾಳ: ಸಾಮಾನ್ಯವಾಗಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಾತ್ರ ಕಾಣಸಿಗುವ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಬಂಟ್ವಾಳ ತಾಲೂಕಿನ ಪಂಜಿಕಲ್ ನ ಮನೆಯೊಂದರ ಬಳಿ ಪ್ರತ್ಯಕ್ಷವಾಗಿದೆ. ಅಚಾನಕ್ ಆಗಿ ಕಾಳಿಂಗನ ಮೇಲೆ ಕಾಲಿಟ್ಟ ಮನೆಯೊಡತಿ ಅದರ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಸುಮಾರು 12 ಅಡಿ ಉದ್ದದ ಈ ಕಾಳಿಂಗವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಗಿದೆ. ಬಂಟ್ವಾಳ ತಾಲೂಕಿನ ಪಂಜಿಕಲ್ ನ ನಾರಾಯಣ ಬಂಗೇರ ಎಂಬವರ ಮನೆಯಂಗಳದಲ್ಲಿ ಈ ಕಾಳಿಂಗ ಸರ್ಪ ಕಾಣಸಿಕ್ಕಿದೆ.
ಮನೆಯೊಡತಿ ರೋಹಿಣಿ ಅವರು ತೋಟದಿಂದ ಮನೆ ಕಡೆಗೆ ಬರುತ್ತಿದ್ದಾಗ ಕಾಲಿಗೆ ಏನೋ ಸ್ಪರ್ಶಿದಂತಾಗಿದೆ. ನೋಡಿದರೆ ಅವರು ಕಾಳಿಂಗನನ್ನೇ ತುಳಿದಿದ್ದರು. ಬೆದರಿದ ಅವರು ತತ್ಕ್ಷಣ ಅಲ್ಲಿಂದ ದೂರ ಸರಿದಿದ್ದಾರೆ. ಕೂದಲೆಳೆಯ ಅಂತರದಿಂದ ರೋಹಿಣಿ ಅವರು ಅಪಾಯದಿಂದ ಪಾರಾದರು. ಬಳಿಕ ಅವರು ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬಹಳ ಕೋಪದಿಂದಿದ್ದ ಕಾಳಿಂಗ ಸರ್ಪವನ್ನು ಸ್ನೇಕ್ ಕಿರಣ್ ಅವರು ಬಹಳಷ್ಟು ಹೊತ್ತಿನ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಹಿಡಿದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅವರಿಗೆ ಸಿರಿಲ್ ಆಚಾರಿಪಾಲಿಕೆ, ಧೀರಜ್ ನಾವುರು, ಅರಣ್ಯ ಇಲಾಖೆಯ ಸಿಬಂದಿ ಸ್ಮಿತಾ ಹಾಗೂ ಜಯರಾಮ್ ಸಹಕರಿಸಿದ್ದರು.
ಕಾಳಿಂಗವನ್ನು ಬಳಿಕ ಕಾಡಿಗೆ ಬಿಡಲಾಗಿದೆ. ಸ್ನೇಕ್ ಕಿರಣ್ ಅವರ ಪ್ರಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಾತ್ರ ಕಾಳಿಂಗ ಸರ್ಪಗಳು ವಾಸವಿರುತ್ತವೆ. ತಂಪು ವಾತಾವರಣದಲ್ಲಿ ಮಾತ್ರ ಅವುಗಳು ಜೀವಿಸುತ್ತವೆ. ಬಂಟ್ವಾಳದಲ್ಲಿ ಕಾಳಿಂಗ ಕಾಣಸಿಕ್ಕಿದ್ದು ಅಚ್ಚರಿಯೆಂದೇ ಹೇಳಬೇಕು. ಈ ಕಾಳಿಂಗ ಸರ್ಪ ಮರಗಳ ಲಾರಿಯಲ್ಲೋ ಅಥವಾ ಮತ್ತೊಂದು ಕಾಳಿಂಗವನ್ನು ಬೆನ್ನಟ್ಟಿಕೊಂಡು ಬಂದು ದಾರಿತಪ್ಪಿ ಬಂದಿರುವ ಸಾಧ್ಯತೆ ಇದೆ. ಆದರೆ ಅತಿಯಾದ ಉಷ್ಣತೆಯಿರುವ ವಾತಾವರಣದಲ್ಲಿ ಕಾಳಿಂಗ ಕಂಡು ಬರುವುದಿಲ್ಲ ಎಂದು ಹೇಳುತ್ತಾರೆ.
BANTWAL
Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!
ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್ ರಸ್ಮಾ (18) ಮತ್ತು ಮಹಮ್ಮದ್ ಸಿನಾನ್ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BANTWAL
Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!
ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.
ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.
BANTWAL
ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಧನೇಶ್ ಶೆಟ್ಟಿ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಶ್ಯಾದಲ್ಲಿ ನೆಲೆಸಿದ್ದು, ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ನಲ್ಲಿ ಆಸಕ್ತಿ ಹೊಂದಿದ್ದ ಇವರು ಇದೀಗ ಇಂಡೋನೇಸ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- LATEST NEWS7 days ago
36 ಮಂದಿ ಶಬರಿಮಲೆ ಯಾತ್ರಿಕರನ್ನು ಒಯ್ಯುತ್ತಿದ್ದ ಬಸ್ ಪಲ್ಟಿ-7ಮಂದಿಗೆ ಗಾಯ..!
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು