Friday, June 2, 2023

ಕವಿ ಮುದ್ದಣ ಜನ್ಮದಿನಾಚರಣೆ ಪ್ರಯುಕ್ತ 150 ರೂ. ನಾಣ್ಯ ಬಿಡುಗಡೆಗೊಳಿಸಿದ ಸಂಸದ ನಳಿನ್‌

ಮಂಗಳೂರು: ಹೊಸಗನ್ನಡದ ಮುಂಗೋಳಿ ಎಂದು ಪ್ರಖ್ಯಾತರಾಗಿದ್ದ ಕವಿ ಮುದ್ದಣ ಅವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ 150 ರೂ. ಹೊಸ ನಾಣ್ಯವನ್ನು ಇಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅನಾವರಣ.


ಬಳಿಕ ಮಾತನಾಡಿದ ಅವರು, ದ.ಕ.ಜಿಲ್ಲೆಯ ಕವಿ ಮುದ್ದಣ ಅವರು ಬಹಳ ಶ್ರೇಷ್ಠ ಪರಂಪರೆ ಹುಟ್ಟು ಹಾಕಿದರು. ಕವಿ ಮುದ್ದಣನವರ 150 ನೇ ವರ್ಷಾಚರಣೆಯ ಈ ಸಂದರ್ಭದಲ್ಲಿ ಅವರ ಸಾಹಿತ್ಯ ಪ್ರಚಾರ,

ಪ್ರಸಾರದ ಜೊತೆಗೆ ದೇಶದ ಗೌರವ ಸಲ್ಲಬೇಕೆಂಬ ದೃಷ್ಟಿಯಿಂದ ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುದ್ದಣನ ಹೆಸರಿನಲ್ಲಿ 150 ರೂ‌. ಮೌಲ್ಯದ ನಾಣ್ಯ ಬಿಡುಗಡೆ ಮಾಡಿದ್ದಾರೆ ಎಂದರು.

ಈ ಹಿಂದೆ ಕೇಂದ್ರ ಸರ್ಕಾರ ಮುದ್ದಣ ಅವರ ಹೆಸರಿನಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡಿತ್ತು. ನಂದಳಿಕೆ ಬಾಲಚಂದ್ರ ರಾವ್, ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು, ಜಗದೀಶ್ ಶೇಣವ, ವಿಜಯ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics