HomeDAKSHINA KANNADAಕಿನ್ನಿಗೋಳಿಯಲ್ಲಿ ವಿಷಮ ಜ್ವರಕ್ಕೆ ಬಾಲಕ ಬಲಿ..!

ಕಿನ್ನಿಗೋಳಿಯಲ್ಲಿ ವಿಷಮ ಜ್ವರಕ್ಕೆ ಬಾಲಕ ಬಲಿ..!

ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪಕ್ಷಿಕೆರೆಯಲ್ಲಿ ನಡೆದಿದೆ.

ಕಿನ್ನಿಗೋಳಿ:  ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪಕ್ಷಿಕೆರೆಯಲ್ಲಿ ನಡೆದಿದೆ.

ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ ಹಿಲಾಲ್(16 )ಮೃತ ಬಾಲಕನಾಗಿದ್ದಾನೆ.

ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು.

ಹಾಗಾಗಿ ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹಿಲಾಲ್ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.

ಹಿಲಾಲ್ ಸುರತ್ಕಲ್ ನ ಗೈಡ್ ಲೈನ್ ಟುಟೋರಿಯಲ್ಸ್  10ನೇ ತರಗತಿ ವಿದ್ಯಾರ್ಥಿಯಾಗಿದ್ದು,

 ಪಕ್ಷಿಕೆರೆ ಅಲ್ ಬದ್ರಿಯಾ ಮದರಸದ ವಿದ್ಯಾರ್ಥಿ. ಇವರು ಎಸ್ಎಸ್ಎಫ್ ಪಕ್ಷಿಕೆರೆ ಘಟಕದ ಸದಸ್ಯ ಎಂದು ತಿಳಿದು ಬಂದಿದೆ. ಮೃತ ಹಿಲಾಲ್ ತಂದೆ ಇಸ್ಮಾಯೀಲ್, ತಾಯಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Latest articles

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...

ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!

ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...

ಊರಿಗೆ ಹೋಗಲು ನಿಲ್ದಾಣದಲ್ಲಿ ಕಾದು ಸುಸ್ತಾಗಿ ತಾನೇ ಸರ್ಕಾರಿ ಬಸ್ ಚಲಾಯಿಸಿದ ಭೂಪನ ಮೇಲೆ ಪೊಲೀಸ್ ಕೋಪ..!

ವ್ಯಕ್ತಿಯೊಬ್ಬ ತನ್ನ ಊರಿಗೆ ಬಸ್ ಇಲ್ಲವೆಂದು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನೇ ಚಲಾಯಿಸಿ ನಿಲ್ದಾಣದಿಂದ ಹೊರಗಿರುವ ಡಿವೈಡರ್...