Connect with us

LATEST NEWS

ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿ 19 ದಿನ: ಮುಂದೇನು?

Published

on

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ನಾಪತ್ತೆಯಾಗಿ ಇಂದಿಗೆ 19 ದಿನಗಳು ಕಳೆದಿದೆ. ಇದಕ್ಕಾಗಿ ಮಂಗಳೂರು ನಗರ ಪೊಲೀಸ್‌ ಆಯುಕ್ತರು 4 ತಂಡಗಳನ್ನು ರಚಿಸಿದ್ದು, ಆದರೂ ಪ್ರಮುಖ ಆರೋಪಿ ಪತ್ತೆಯಾಗಿಲ್ಲ.

ಈ ಘಟನೆ ನಡೆದ ನಂತರದಲ್ಲಿ ಪೊಲೀಸರ ಪ್ರತಿಯೊಂದು ನಡೆ ಅನುಮಾನಾಸ್ಪದವಾಗಿದೆ ಎಂದು ಇಲಾಖೆಯ ಸಿಬ್ಬಂದಿಯೇ ದೂರುತ್ತಿದ್ದು, ಬಡವನಿಗೊಂದು ನ್ಯಾಯ ದುಡ್ಡಿದ್ದವರಿಗೊಂದು ನ್ಯಾಯ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಪ್ರಮುಖ ಆರೋಪಿಯನ್ನು ಬಿಟ್ಟು ಉಳಿದವರನ್ನು ವಶಕ್ಕೆ ಪಡೆದು, ಅಮಾನತು ಮಾಡಿ ಪೊಲೀಸ್‌ ಇಲಾಖೆ ಕೈತೊಳೆದುಕೊಂಡಿದೆ ಎನ್ನುವುದು ಸಾರ್ವಜನಿಕರ ಆರೋಪ. ಪ್ರಕರಣ ಸುದ್ದಿಯಾದಾಗಿನಿಂದ ಏನೆಲ್ಲಾ ಘಟನಾವಳಿ ನಡೆದಿದೆ ಎಂಬ ಪಿನ್‌ ಟು ಪಿನ್‌ ವರದಿ ಇಲ್ಲಿದೆ.
ಘಟನಾವಳಿ ವಿವರ
ನಗರದ ಕಾನೂನು ಕಾಲೇಜಿನಲ್ಲಿ ಕಲಿಯುತ್ತಿರುವ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿ ಆ.8ರಂದು ನ್ಯಾಯವಾದಿ ಕೆ.ಎಸ್‌.ಎನ್‌ ರಾಜೇಶ್‌ ಅವರ ಕರಂಗಲ್ಪಾಡಿ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು.
ಸೆ.25ರಂದು ರಾಜೇಶ್‌ ಭಟ್‌ ಆತನ ಚೇಂಬರ್‌ ಒಳಗೆ ಈ ಯುವತಿಯನ್ನು ಕರೆದು ಅಸಭ್ಯವಾಗಿ ವರ್ತಿಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಈ ಮೊದಲು ಸಹ ಆಕೆ ಕೆಲಸ ಮಾಡುತ್ತಿರುವ ವೇಳೆ ಸಿಸಿಟಿವಿಯ ಮೂಲಕ ಪೋಟೋ ತೆಗೆದು ಆ ಫೋಟೋವನ್ನು ಆಕೆಗೆ ವಾಟ್ಸಪ್‌ ಮೂಲಕ ಕಳುಹಿಸಿ ಅಸಭ್ಯ ಮೇಸೆಜ್‌ ಮಾಡುತ್ತಿದ್ದನು.
ಅ.18ರಂದು ಈ ಬಗ್ಗೆ ಮಂಗಳೂರು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ.

ಘಟನೆ ನಡೆದ ಎರಡು ದಿನದೊಳಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಆರೋಪಿಯ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿ ಬರುತ್ತಾರೆ.
ಅ.22ರಂದು ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್​​ ಹಾಗೂ ಬಾರ್ ಅಸೋಸಿಯೇಷನ್​​ನಿಂದ ರಾಜೇಶ್ ಭಟ್ ಅಮಾನತು ಆಗುತ್ತಾನೆ.
ಅ.27ರಂದು ರಾಜೇಶ್‌ ಭಟ್‌ಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ಬೋಂದೆಲ್‌ ನಿವಾಸಿ ಅನಂತ ಭಟ್‌ ಎಂಬುವವನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆ. ಈತ ರಾಜೇಶ್‌ ಭಟ್‌ ಅನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಬಿಟ್ಟಿದ್ದಾನೆ ಎಂಬ ಆರೋಪದಲ್ಲಿ ಈತನ ಬಂಧನವಾಗುತ್ತದೆ.
ಅ.29ರಂದು ಜಿಲ್ಲಾ 6ನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳ್ಳುತ್ತದೆ.


ಅದಾದ ಮರುದಿನ ಅಂದರೆ ಅ.30ರಂದು ನಗರದ ಕ್ಲಾಕ್‌ ಟವರ್‌ ಮುಂದೆ ಸರ್ವಕಾಲೇಜು ವಿದ್ಯಾರ್ಥಿ ಸಂಘ ಜೊತೆ ಹಲವು ಸಾಮಾಜಿಕ ಹೋರಾಟಗಾರರು ಸೇರಿ ಪ್ರಮುಖ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸುತ್ತಾರೆ. ಅದರಲ್ಲೂ ಸಂತ್ರಸ್ತೆಯೇ ಪ್ರತಿಭಟನೆಯಲ್ಲಿ ಭಾಗಿಯಾಗಿ ಆರೋಪಿ ಬಂಧನಕ್ಕೆ ಆಗ್ರಹಿಸುತ್ತಾಳೆ.
ನ.2ರಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಪೊಲೀಸ್‌ ಕಮೀಷನರ್‌, ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಆರೋಪದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಮಂಗಳೂರು ದಕ್ಷಿಣ ವಿಭಾಗ ಸಹಾಯಕ ಪೊಲೀಸ್‌ ಆಯುಕ್ತ ರಂಜಿತ್‌ ಬಂಡಾರು ನೇತೃತ್ವದಲ್ಲಿ 4 ಪೊಲೀಸ್‌ ತಂಡ ರಚಿಸಲಾಗಿದೆ.

ಆರೋಪಿ ಪದೇ ಪದೇ ವಾಸ್ತವ್ಯ ಬದಲಾಯಿಸುತ್ತಿದ್ದಾನೆ ಎಂದು ಹೇಳಿಕೆ ನೀಡುತ್ತಾರೆ. ಈ ಪ್ರಕರಣದಲ್ಲಿ ಪವಿತ್ರಾ ಆಚಾರ್ಯ, ಸಂತ್ರಸ್ತೆಯ ಬಾಯ್ ಫ್ರೆಂಡ್ ಧ್ರುವ ಮತ್ತು ಆತನ ತಾಯಿ ಮಹಾಲಕ್ಷ್ಮೀ ಹಾಗೂ ಅನಂತ ಭಟ್‌ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರುತ್ತಾರೆ.
ಈ ಪ್ರಕರಣದಲ್ಲಿ ಕರ್ತವ್ಯ ಲೋಪದಡಿ ಉರ್ವ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಲಾ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಇಷ್ಟೆಲ್ಲಾ ಬೆಳವಣಿಗೆಗಳು ಆಗಿ 19 ದಿನಗಳು ಕಳೆದಿವೆ. ಪ್ರಕರಣ ದಾಖಲಾದ ದಿನದಿಂದ ಆರೋಪಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವ ತನಕ ಬಂಧಿಸದೇ ಆತ ಪರಾರಿಯಾಗಲು ಪೊಲೀಸರೇ ಸಹಕರಿಸಿದ್ದಾರೆ ಎಂಬ ಆರೋಪವನ್ನು ಪ್ರತಿಭಟನಾ ನಿರತರೇ ಮಾಡಿದ್ದಾರೆ.

ಅದಾಗಿ ಜಾಮೀನು ಅರ್ಜಿ ವಜಾ ಆಗಿ 8 ದಿನಗಳು ಕಳೆದರೂ ಪೊಲೀಸರು 4 ತಂಡ ಮಾಡಿ ಯಾರನ್ನು ಹುಡುಕುತ್ತಿದ್ದಾರೆ ಎಂಬುವುದೇ ಇದುವರೆಗೂ ಸ್ಪಷ್ಟವಾಗಿಲ್ಲ ಎಂದು ಪ್ರತಿಭಟನೆಯಲ್ಲಿ ಆರೋಪಿಸಿದ್ದಾರೆ.
ಅ.30ರಂದು ಪ್ರತಿಭಟನೆ ನಡೆಸಲು ಅನುಮತಿಗಾಗಿ ಪೊಲೀಸರ ಬಳಿ ಹೋದಾಗ ಗಂಟೆಗಟ್ಟಲೆ ಅಲೆದಾಡಿಸಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ವಿದ್ಯಾರ್ಥಿ ಆರೋಪಿಸಿದ್ದಾರೆ.
ಮಂಗಳೂರು ನಗರಕ್ಕೆ ಎನ್‌.ಶಶಿಕುಮಾರ್‌ ಪೊಲೀಸ್‌ ಆಯುಕ್ತರಾಗಿ ಬಂದಾಗಿನಿಂದ ಸಣ್ಣಪುಟ್ಟ ಪ್ರಕರಣಗಳನ್ನು ಬೇಧಿಸಿ ಸಾಮಾಜಿಕ ಜಾಲತಾಣದ ಹೀರೋ, ಮಂಗಳೂರಿನ ಸೂಪರ್‌ ಕಾಪ್‌ ಅನಿಸಿಕೊಂಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಪೊಲೀಸ್‌ ಕಮೀಷನರದ್ದು ಜಾಣ ನಡೆ ಅನ್ನುತ್ತಿದ್ದಾರೆ ಸ್ವತಃ ಪೊಲೀಸ್‌ ಮೂಲಗಳು.
ಸದ್ಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಅದಾದ ಬಳಿಕ ಸಮಾನ ಮನಸ್ಕ ಸಂಘಟನೆ ಜೊತೆಗೂಡಿ ಶೀಘ್ರದಲ್ಲಿಯೇ ಉಪವಾಸ ಸತ್ಯಾಗ್ರಹದೊಂದಿಗೆ ಹೈಕೋರ್ಟ್‌ ಕದ ತಟ್ಟಲು ಸಿದ್ದತೆ ನಡೆಸಲಾಗಿದೆ.
ಉಪವಾಸ ಸತ್ಯಾಗ್ರಹಕ್ಕೆ ಪೊಲೀಸರು ಇದಕ್ಕೆ ಅನುಮತಿ ನೀಡುವುದಿಲ್ಲ ಎಂಬುವುದು ನಮಗೆ ಗೊತ್ತಿದೆ. ಆದರೆ ಅನುಮತಿ ನೀಡದಿದ್ದರೂ ನಾವು ಉಪವಾಸ ನಡೆಸಿಯೇ ತೀರುತ್ತೇವೆ ಎಂದು ವಿದ್ಯಾರ್ಥಿ ಮುಖಂಡರೊಬ್ಬರು ಹೇಳಿದ್ದಾರೆ.
‘ಪ್ರತಿಯೊಂದು ವಿಷಯದಲ್ಲಿ ಜವಾಬ್ದಾರಿ ತೆಗೆದುಕೊಳ್ಳುವ ಕಮೀಷನರ್‌ ಇಂತಹ ಸೂಕ್ಷ್ಮ ಪ್ರಕರಣದಲ್ಲಿ ಜವಾಬ್ದಾರಿ ತೆಗೆದುಕೊಳ್ಳದೆ ತಂಡ ಮಾಡಿದ್ದೇವೆ ಎನ್ನುತ್ತಾರೆ. ಆದರೆ ಆ ತಂಡ ಈ ತನಕ ಏನು ಮಾಡಿದೆ? ಸಾಮಾಜಿಕ ಕಾರ್ಯಕರ್ತೆ, ಪ್ರಸನ್ನ ರವಿ ಪ್ರಶ್ನಿಸಿದ್ದಾರೆ.

FILM

ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ಕರೀನಾ ಕಪೂರ್; ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ನಟಿ, ಏನಂದ್ರು?

Published

on

ಮಂಗಳೂರು / ಬೆಂಗಳೂರು : ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. ಈ ಬಗ್ಗೆ ಕರೀನಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ಭಾವನಾತ್ಮಕ ಪೋಸ್ಟ್ :

ಕರೀನಾ ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ, ನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯಿಲ್ಲದೆ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಟಾಕ್ಸಿಕ್ ನಿಂದ ಔಟ್ :

ಕರೀನಾ ಕಪೂರ್ ಇತ್ತೀಚೆಗೆ ‘ಕ್ರೂ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಮಹಿಳಾ ಪ್ರಧಾನ ಚಿತ್ರವಾದ ಈ ಚಿತ್ರ ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಸದ್ಯ ರೋಹಿತ್ ಶೆಟ್ಟಿ ಅವರ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಅವರು ಬಿಝಿಯಾಗಿದ್ದಾರೆ. ಇನ್ನು ಸ್ಯಾಂಡಲ್ ವುಡ್ ನಲ್ಲಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತಾದರೂ, ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಜೊತೆಯಾಗಿ ಕಾಣಿಸಿಕೊಂಡ ಸೂಪರ್ ಸ್ಟಾರ್ – ಬಿಗ್ ಬಿ; ಸ್ಟೈಲಿಶ್ ಫೋಟೋ ವೈರಲ್ 

ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಡೇಟ್‌ ಹೊಂದಾಣಿಕೆ ಸಮಸ್ಯೆ ಬಂದ ಕಾರಣ ಕರೀನಾ ಅವರು ಈ ಸಿನಿಮಾದಿಂದ ಹೊರ ಬಂದಿದ್ದಾರೆ ಎಂದು ವರದಿಯಾಗಿದೆ.

Continue Reading

DAKSHINA KANNADA

‘ಅಡ್ಡಣ ಪೆಟ್ಟು’ ದೈವಾರಾಧನೆಯ ವಿಶೇಷ ಆಚರಣೆ…! ಇದು ಸೌಹಾರ್ದತೆ ಬಯಸೋ ದೈವ..!

Published

on

ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ ದೈವಾರಾಧನೆ ಕೂಡಾ ಅದೇ ರೀತಿಯಾದ ವಿಶೇಷ ಆಚರಣೆಯೊಂದಕ್ಕೆ ಹೆಸರಾಗಿದೆ. ಇಲ್ಲಿನ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೆಯ ಬಳಿಕ ನಡೆಯುವ ದೈವದ ನೇಮದಲ್ಲಿ ‘ಅಡ್ಡಣ ಪೆಟ್ಟು’ ಅನ್ನೋ ಸಂಪ್ರದಾಯವಿದೆ. ಗ್ರಾಮದ ಜಾತ್ರೆಯ ಪ್ರಮುಖ ಆಕರ್ಷಣೆ ಕೂಡಾ ಇದೇ ಆಗಿದ್ದು, ಇದನ್ನು ನೋಡಲೆಂದೆ ಸಾವಿರಾರು ಜನ ಬರ್ತಾರೆ.


ನಾಲ್ಕು ಮನೆತನಗಳ ನಡುವೆ ಹೊಡೆದಾಟ…!

‘ಅಡ್ಡಣ ಪೆಟ್ಟು’ ಇದು ಮಂಡೆಕೋಲು ಗ್ರಾಮದ ಜಾತ್ರೆ ಮುಗಿದ ಬಳಿಕ ನಡೆಯುವ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮದಲ್ಲಿ ಕಾಣುವ ದೃಶ್ಯ. ನಾಲ್ಕು ಗೌಡ ಮನೆತನದವರು ಬೆತ್ತದ ಗುರಾಣಿ ಹಿಡಿದು ಕೋಲಿನಿಂದ ಹೊಡೆದಾಡುವುದೇ ಈ ‘ಅಡ್ಡಣ ಪೆಟ್ಟು’ ಅನ್ನೋ ವಿಶಿಷ್ಠ ಆಚರಣೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಕೇನಾಜೆ- ಮಾವಜಿ, ಮುರೂರು- ಬೊಳುಗಲ್ಲು ಎಂಬ ನಾಲ್ಕು ಗೌಡ ಮನೆತನಗಳು ಈ ರೀತಿ ಹೊಡೆದಾಟ ನಡೆಸ್ತಾರೆ. ಈ ವೇಳೆ ಉಳ್ಳಾಕುಲು ದೈವ ಮದ್ಯಪ್ರವೇಶ ಮಾಡಿ ಜಗಳ ಬಿಡಿಸುತ್ತದೆ. ಇದು ನೋಡಲು ಕೂಡಾ ಸಾಕಷ್ಟು ಕುತೂಹಲವಾಗಿದ್ದು, ಇದರ ಜೊತೆ ದೈವದ ಸಂದೇಶ ಕೂಡಾ ಇದೆ.


‘ಅಡ್ಡಣ ಪೆಟ್ಟು’ವಿನ ಹಿಂದೆ ಇದೆ ದೈವದ ಸಂದೇಶ..!

ಮಂಡೆಕೋಲು ನೇಮದಲ್ಲಿ ಅಡ್ಡಣ ಪೆಟ್ಟು ಸಂಪ್ರದಾಯಕ್ಕೆ ಬೇರೆ ಬೇರೆ ಐಹಿತ್ಯವಿದೆ. ಅಡ್ಡಣಪೆಟ್ಟು ನಡೆದರೆ ಊರಲ್ಲಿ ಮುಂದೆ ಗಲಾಟೆ, ಹೊಡೆದಾಟಗಳು ಸಂಭವಿಸುವುದಿಲ್ಲ ಎಂಬ ನಂಬಿಕೆಯೂ ಊರಿನ ಭಕ್ತ ಜನರಲ್ಲಿದೆ. ನಾಲ್ಕೂರಿನ ಜಗಳವನ್ನು ದೈವ ಬಿಡಿಸುವುದು, ಗಲಾಟೆ ಮಾಡದೆ ಸೌಹಾರ್ದದಿಂದ ಬಾಳಿ ಎನ್ನುವ ಸಂದೇಶವೂ ಈ ಆಚರಣೆಯಲ್ಲಿದೆ. ಪುರಾತನ ಕಾಲದಲ್ಲಿ ಯಾವುದೋ ಗಲಾಟೆ ನಡೆದ ಸಂದರ್ಭ ಉಳ್ಳಾಕುಲು ದೈವ ಬಂದು ಗಲಾಟೆ ಬಿಡಿಸಿ ಪರಸ್ಪರ ಸಂದಾನ ನಡೆಸಿತ್ತು ಎಂಬ ಪ್ರತೀತಿಯೂ ಇದೆ. ಇದೇ ಕಾರಣದಿಂದ ಪ್ರತಿ ವರ್ಷ ಉಳ್ಳಾಕುಲು ನೇಮದ ಸಂದರ್ಭ “ಅಡ್ಡಣ ಪೆಟ್ಟು” ಒಂದು ಸಂಪ್ರದಾಯವಾಗಿ ನಡೆದು ಬರುತ್ತಿದೆ.

‘ಅಡ್ಡಣ ಪೆಟ್ಟು’ವಿನ ಆಚರಣೆ ಹೇಗೆ ?

ನೇಮೋತ್ಸವ ದಿನದಂದು ಉಳ್ಳಾಕುಲು ದೈವದ ಭಂಡಾರ ತೆಗೆದ ಬಳಿಕ ದೈವ ಸಹಿತ ನಾಲ್ಕೂರಿನ ಪ್ರತಿನಿಧಿಗಳು, ದೈವರ ಪರಿಚಾರಕರು ದೇವಸ್ಥಾನದ ಸಮೀಪದ ಗದ್ದೆಯಲ್ಲಿರುವ ಕಟ್ಟೆಗೆ ತೆರಳುತ್ತಾರೆ. ಕೇನಾಜೆ- ಮಾವಜಿ, ಮುರೂರು-ಬೊಳುಗಲ್ಲು ಮನೆತನಕ್ಕೆ ಸೇರಿದ ನಾಲ್ವರು ಪ್ರತಿನಿಧಿಗಳು ಸಮವಸ್ತ್ರ ಧರಿಸಿ ದಂಡ ಮತ್ತು ಗುರಾಣಿ (ಅಡ್ಡಣ) ಹಿಡಿದು ದೈವದ ಜತೆಯಲ್ಲಿ ತೆರಳುತ್ತಾರೆ. ಕಟ್ಟೆಯ ಬಳಿ ತೆರಳಿದ ಬಳಿಕ ಕೆಲವೊಂದು ಸಂಪ್ರದಾಯ ಆಚರಣೆಗಳು ನಡೆದು ಅಡ್ಡಣ ಹಿಡಿದ ಯುವಕರು ಅಡ್ಡಣವನ್ನು ನೆಲದಲ್ಲಿ ಎದುರು ಬದುರಾಗಿ ಇಡುತ್ತಾರೆ. ಲಾಠಿ ಮಾದರಿಯ ಹೊಡೆಯುವ ದಂಡವನ್ನು ಕೈಯಲ್ಲಿ ಹಿಡಿದಿರುತ್ತಾರೆ. ಇತ್ತ ಅಡ್ಡಣ ಹೊಡೆತದಲ್ಲಿ ಭಾಗವಹಿಸುವ ನಾಲ್ವರು ಯುವಕರಿಗೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವಕ್ಕೆ ಅಣಿಯನ್ನು ಕೂರಿಸಲಾಗುತ್ತದೆ. ಅಣಿ ಇಟ್ಟ ಬಳಿಕ ತುಳು ನುಡಿಗಟ್ಟೊಂದನ್ನು ಹೇಳಲಾಗುತ್ತದೆ. ಈ ನುಡಿಗಟ್ಟು ಮುಗಿಯುತ್ತಿದ್ದಂತೆ ದೈವದ ಪರಿಚಾರಕರೊಬ್ಬರು ಅಡ್ಡಣ ಹೊಡೆತಕ್ಕೆ ಅಣಿಯಾಗಿ ನಿಂತಿರುವ ಯುವಕರತ್ತ ಕಲಶದ ನೀರಿನಿಂದ ಪ್ರೋಕ್ಷಣೆ ಮಾಡುತ್ತಾರೆ. ಕಲಶ ಪ್ರೋಕ್ಷಣೆ ಆಗುತ್ತಿದ್ದಂತೆ ಎದುರು ಬದುರಾಗಿ ನಿಂತಿರುವ ಯುವಕರು ನೆಲದಲ್ಲಿಟ್ಟ ಅಡ್ಡಣವನ್ನು ಕೈಗೆ ಎತ್ತಿಕೊಂಡು ಅದನ್ನು ಗುರಾಣಿಯಂತೆ ಹಿಡಿದು ಎದುರುಬದುರಾಗಿ ಹೊಡೆದಾಟ ಆರಂಭಿಸುತ್ತಾರೆ. ಪ್ರತಿಯೊಬ್ಬರೂ ಎದುರು ಪ್ರತಿನಿಧಿಯ ಕೈಯಲ್ಲಿ ಹಿಡಿದಿರುವ ಅಡ್ಡಣಕ್ಕೆ ಹೊಡೆಯಬೇಕೆಂಬ ನಿಯಮವೂ ಇದೆ. ಹೊಡೆದಾಟ ಜೋರಾಗುತ್ತಿದ್ದಂತೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವ ಬಂದು ಹೊಡೆದಾಟವನ್ನು ಬಿಡಿಸುತ್ತದೆ.

Continue Reading

FILM

ಜೊತೆಯಾಗಿ ಕಾಣಿಸಿಕೊಂಡ ಸೂಪರ್ ಸ್ಟಾರ್ – ಬಿಗ್ ಬಿ; ಸ್ಟೈಲಿಶ್ ಫೋಟೋ ವೈರಲ್

Published

on

ಬೆಂಗಳೂರು : ಸೂಪರ್ ಸ್ಟಾರ್ ರಜನಿಕಾಂತ್ 170 ನೇ ಸಿನಿಮಾ ‘ವೆಟ್ಟೈಯಾನ್‘ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಟೀಸರ್ ಬಹಳ ಸದ್ದು ಮಾಡಿದೆ. ಅಲ್ಲದೇ ಈ ಚಿತ್ರದಲ್ಲಿ ಸೂಪರ್ ಸ್ಟಾರ್ – ಬಿಗ್ ಬಿ ಜೊತೆಯಾಗ್ತಿರೋದು ವಿಶೇಷ. ಅದೂ 33 ವರ್ಷಗಳ ಬಳಿಕ. ಹಾಗಾಗಿ ಸಹಜವಾಗಿಯೇ ಚಿತ್ರದ ಕುರಿತು ನಿರೀಕ್ಷೆ ಹೆಚ್ಚಿದೆ.

ವೈರಲ್ ಆಯ್ತು ಫೋಟೋ :


ಇಬ್ಬರು ಸಿನಿ ದಿಗ್ಗಜರು ಜೊತೆಯಾಗೋದು ಅಂದ್ರೆ ಕೇಳ್ಬೇಕಾ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗುತ್ತದೆ. ಈ ಚಿತ್ರದ ಅಪ್ಡೇಟ್ಸ್ ಗಾಗಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಅಭಿಮಾನಿಗಳು ಕಾಯುತ್ತಿರೋದು ಸುಳ್ಳಲ್ಲ. ಇದೀಗಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ.


‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ : ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!

ಈ ಫೋಟೋಗಳಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ನೆಟ್ಟಿಗರು ಈ ಫೋಟೋಗಳನ್ನು ನೆಚ್ಚಿಕೊಂಡಿದ್ದು, ಕಮೆಂಟ್ಸ್ ಹರಿದು ಬರುತ್ತಿದೆ.

Continue Reading

LATEST NEWS

Trending