MANGALORE
ಮಂಗಳೂರು: ಯಶಸ್ವಿ 20 ವರ್ಷ ಪೂರೈಸಿದ ಎ.ಜೆ ಆಸ್ಪತ್ರೆ
ಮಂಗಳೂರು: ನಗರದಲ್ಲಿ ರೋಗಿಗಳಿಗೆ ಉತ್ತಮ ಸೇವೆ ಒದಗಿಸುತ್ತಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಯಶಸ್ವಿ 20 ವರ್ಷಗಳನ್ನು ಪೂರೈಸಿದೆ.
2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಆರೋಗ್ಯ ಸೇವೆ ನೀಡಲು ಅಂತರಾಷ್ಟ್ರೀಯ ಮಾನದಂಡಗಳ ಪ್ರಕಾರ ವಿನ್ಯಾಸಗೊಳಿಸಲಾಗಿದೆ.
ಇದು ಮಂಗಳೂರಿನಲ್ಲಿ NABH ಮಾನ್ಯತೆ ಪಡೆದ ಮೊದಲ ಆಸ್ಪತ್ರೆ, ಇದು 30ಕ್ಕೂ ಹೆಚ್ಚು ಪ್ರಮುಖ ವೈದ್ಯಕೀಯ ವಿಭಾಗಗಳನ್ನು ಹೊಂದಿದ್ದು, ಉನ್ನತ ಮಟ್ಟದ ಆರೋಗ್ಯ ಸೇವೆಯನ್ನು ನೀಡಲು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ.
ಅತ್ಯಾಧುನಿಕ ಸೌಕರ್ಯಗಳು ಮತ್ತು ಸಲಕರಣೆಗಳನ್ನು ಹೊಂದಿರುವ ಎ.ಜೆ. ಆಸ್ಪತ್ರೆಯು, ಅನುಭವಿ ವೈದ್ಯರ ತಂಡದ ನೇತೃತ್ವದಲ್ಲಿದೆ ಹಾಗೂ ನುರಿತ ಪ್ರೊಫೆಶನಲ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಸಿಬ್ಬಂದಿಯಿಂದ ಬೆಂಬಲಿತವಾಗಿದೆ.
ಆಸ್ಪತ್ರೆಯು ಅತ್ಯಾಧುನಿಕ ಉಪಕರಣಗಳನ್ನು ಹೊಂದಿದೆ. ಪ್ರಶಾಂತ ವಾತವರಣದಲ್ಲಿರುವ ಈ ಆಸ್ಪತ್ರೆಯು ರೋಗಿಯ ಅಗತ್ಯತೆಗಳು ಮತ್ತು ವೈದ್ಯಕೀಯ ಸೌಲಭ್ಯಗಳ ನಡುವೆ ಉತ್ತಮ ಹೊಂದಾಣಿಕೆಯನ್ನು ಒದಗಿಸುತ್ತದೆ.
ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವ ಬೆಲೆಯಲ್ಲಿ ನೀಡುತ್ತಿದೆ. ಆಸ್ಪತ್ರೆಯು ಹ್ರದ್ರೋಗ, ಯುರೋಲಜಿ, ಕಾಸ್ಮೆಟಿಕ್, ಪುನರ್ನಿರ್ಮಾಣ ಮತ್ತು ಮೈಕ್ರೋವ್ಯಾಸ್ಕ್ಯುಲರ್ ಸರ್ಜರಿಗಳಲ್ಲಿ ಪ್ರಭಾವಶಾಲಿ ದಾಖಲೆಗಳನ್ನು ಸ್ಥಾಪಿಸಿದೆ.
ಎ.ಜೆ. ಕ್ಯಾನ್ಸರ್ ಸಂಸ್ಥೆಯು ಕೀಮೋಥೆರಪಿ, ರೇಡಿಯೆಶನ್ (ವಿಕಿರಣ), ಶಸ್ತ್ರಚಿಕಿತ್ಸೆ, ಹೆಮಾಟೊ-ಆಂಕೋಲಾಜಿ ಮತ್ತು ನೋವು ಶಮನಕಾರಿ ಚಿಕಿತ್ಸೆಯೊಂದಿಗೆ ಸಮಗ್ರ ಕ್ಯಾನ್ಸರ್ ಅರೈಕೆಯನ್ನು ಒದಗಿಸುತ್ತದೆ. ಕ್ಯಾನ್ಸರ್ ವಿಭಾಗವು ಪೆಟ್-ಸಿಟಿ ಮತ್ತು ಅಯೋಡಿನ್ ಥೆರಪಿ ವಾರ್ಡ್ ನೊಂದಿಗೆ ಪರಿಪೂರ್ಣವಾಗಿದೆ.
ರೋಬೊಟಿಕ್ ಸಿಸ್ಟಮ್: ನೇ ತಲೆಮಾರಿನ ಡ ವಿನ್ಸಿ ಸಿಸ್ಟಮ್ಸ್ (USA) ಸಂಸ್ಥೆಯ ರೋಬೊಟ್ ಅನ್ನು ಎ.ಜೆ. ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು, ದೇಶದಲ್ಲಿಯೇ ಈ ಸೌಲಭ್ಯವನ್ನು ಹೊಂದಿರುವ 4ನೇ ಆಸ್ಪತ್ರೆಯಾಗಿದೆ.
ರೋಬೊಟ್ ಶಸ್ತ್ರಚಿಕಿತ್ಸೆಯು ರೋಗಿ ಮತ್ತು ವೈದ್ಯರಿಬ್ಬರಿಗೂ ಲಾಭದಾಯಕ. ರೋಬೊಟಿಕ್ ಸಿಸ್ಟಮ್ ಯುರೋಲಜಿ, ಗೈನಕಾಲಜಿ (ಸ್ರೀ ರೋಗ ಶಸ್ತ್ರ ಚಿಕಿತ್ಸೆ), ಜಠರ ಮತ್ತು ಕರುಳಿನ ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ, ಬೆರಿಯಾಟ್ರಿಕ್ ಶಸ್ತ್ರಚಿಕಿತ್ಸೆ ಹಾಗೂ ಲ್ಯಾಪರೋಸ್ಕೋಪಿಕ್ ಶಸ್ತ್ರಚಿಕಿತ್ಸೆಗಳಲ್ಲಿ ಉಪಯೋಗವಾಗುತ್ತದೆ. ರೋಗಿಗಳು ಶಸ್ತ್ರಚಿಕಿತ್ಸೆಯಲ್ಲಿ ನಿಖರತೆ ಮತ್ತು ಆಸ್ಪತ್ರೆಯ ಕಡಿಮೆ ವಾಸ್ತವ್ಯದ ಹೆಚ್ಚುವರಿ ಪ್ರಯೋಜನದೊಂದಿಗೆ ಬೇಗ ಚೇತರಿಸಿಕೊಳ್ಳುವುದರಿಂದ ಪ್ರಯೋಜನ ಪಡೆಯುತ್ತಾರೆ.
ಎ. ಜೆ. ಆಸ್ಪತ್ರೆಯು ಈ ಕೆಳಗಿನ ಎಲ್ಲಾ ಸೂಪರ್ ಸ್ಪೆಶಾಲಿಟಿ (ವಿಭಾಗ)ಗಳಾದ ಹೃದಯರೋಗ, ಹೃದಯ ಶಸ್ತ್ರಚಿಕಿತ್ಸೆ, ಎಂಡೊಕ್ರೈನೊಲಜಿ, ಎಮರ್ಜೆನ್ಸಿ ಮೆಡಿಸಿನ್, ಗ್ಯಾಸ್ಟ್ರೋಎಂಟರೋಲಜಿ, ಹೆಮಟೊ ಒಂಕಾಲೊಜಿ, ಇಂಟರ್ವೆನ್ಶನಲ್ ರೆಡಿಯೋಲಜಿ, ಮೆಡಿಕಲ್ ಒಂಕಾಲೊಜಿ, ನೆಪ್ರೋಲಜಿ (ಕಿಡ್ನಿ/ಮೂತ್ರಪಿಂಡ ರೋಗ), ನ್ಯುರೋಲಜಿ (ನರರೋಗ), ನ್ಯುರೋಸರ್ಜರಿ (ನರರೋಗ ಶಸ್ತ್ರಚಿಕಿತ್ಸೆ), ನ್ಯುಕ್ಲಿಯರ್ ಮೆಡಿಸನ್, ಪೆಯಿನ್ ಆ್ಯಂಡ್ ಪಲ್ಲಿಯೆಟಿವ್ ಮೆಡಿಸನ್ (ನೋವು ಶಮನಕಾರಿ ಚಿಕಿತ್ಸೆ), ಮಕ್ಕಳ ಹೃದಯರೋಗ, ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ, ಪ್ಲಾಸ್ಟಿಕ್ ಆ್ಯಂಡ್ ಮೈಕ್ರೋವ್ಯಾಸ್ಕ್ಯುಲರ್ ಶಸ್ತ್ರಚಿಕಿತ್ಸೆ, ರೇಡಿಯೇಶನ್ ಒಂಕೋಲಜಿ, ಸರ್ಜಿಕಲ್ ಒಂಕೋಲಜಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರೊಲಜಿ (ಬೆರಿಯಟ್ರಿಕ್ ಸರ್ಜರಿ ಆ್ಯಂಡ್ ಲಿವರ್ ಟ್ರಾನ್ಸ್ ಪ್ಲಾಂಟ್), ಯುರೋಲಜಿ (ಮೂತ್ರರೋಗ), ಕಿಡ್ನಿ ಕಸಿ ಮತ್ತು ಸಾಮಾನ್ಯ ಸ್ಪೆಶಾಲಿಟಿಗಳಲ್ಲಿ (ಸಾಮಾನ್ಯ ವಿಭಾಗಗಳ) ಚಿಕಿತ್ಸೆಯನ್ನು ಪೂರೈಸುತ್ತದೆ.
‘ಎ.ಜೆ. ಆಸ್ಪತ್ರೆಯು ತನ್ನ ವಿಶಾಲವಾದ ಕ್ಯಾಂಪಸ್ ನಲ್ಲಿರುವ ವಿಶ್ವದರ್ಜೆಯ ಸೌಲಭ್ಯಗಳು ಮತ್ತು ಸಮರ್ಪಿತ ಸಿಬ್ಬಂದಿಯೊಂದಿಗೆ, ರೋಗಿಗಳ ಸೇವೆಗೆ ಆದ್ಯತೆಯನ್ನು ನೀಡುವ ಮೂಲಕ ಅತ್ಯುತ್ತಮ ಚಿಕಿತ್ಸೆಯನ್ನು ಒದಗಿಸುತ್ತಿದೆ’.
ಡಾ. ಪ್ರಶಾಂತ್ ಮಾರ್ಲ ಕೆಎಂಎಸ್, (ಯುರೋಲಜಿ) ವೈದ್ಯಕೀಯ ನಿರ್ದೇಶಕರು, ಎ.ಜೆ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
DAKSHINA KANNADA
ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜನರು ರಾತ್ರಿಯ ಹೊತ್ತನ್ನು ಮೊಬೈಲ್, ಆನ್ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಳೆಯುತ್ತಾರೆ. ಇದು ಅವರಿಗೆ ನಿದ್ರಾಹೀನತೆ ಸಮಸ್ಯೆಗೂ ಕಾರಣವಾಗುತ್ತದೆ. ರಾತ್ರಿ ಬೇಗ ಮಲಗದೇ ಇರುವುದು ಮತ್ತು ಮಧ್ಯಾಹ್ನ ನಿದ್ದೆ ಮಾಡುವುದು ಹೀಗೆ ಮಾಡಿದರೆ ಆರೋಗ್ಯ ಹಾಳಾಗುತ್ತದೆ. ರಾತ್ರಿಯ ಹೊತ್ತು ಚಿಕ್ಕ ಮಕ್ಕಳು ಅಪ್ಪ ಅಮ್ಮನ ಒಟ್ಟಿಗೆ ಮಲಗುತ್ತಾರೆ. ಅದೇ ರೀತಿ ಗಂಡ ಹೆಂಡತಿಯರು ಒಟ್ಟಿಗೆ ಮಲಗುವುದು ಸರ್ವೇ ಸಾಮಾನ್ಯ.
ಮದುವೆಯ ನಂತರ ಸಾಮಾನ್ಯವಾಗಿ ಗಂಡ ಹೆಂಡತಿ ಒಟ್ಟಿಗೆ ಮಲಗುತ್ತಾರೆ. ಇದು ಸಮಾಜದ ಸಾಮಾನ್ಯ ನಿಯಮ ಸಹ ಹೌದು ಎನ್ನಬಹುದು. ಮದುವೆಯ ನಂತರ ಪತಿ-ಪತ್ನಿಯರ ನಡುವಿನ ಚರ್ಚೆಗಳು, ಮಾತುಗಳು ಸಾಮಾನ್ಯವಾಗಿ ಮಲಗುವ ಸಮಯದಲ್ಲೇ ಆಗುತ್ತದೆ. ಇನ್ನು ಪತಿ-ಪತ್ನಿಯರು ಪ್ರತ್ಯೇಕವಾಗಿ ಮಲಗುವುದರಿಂದಲೂ ಹಲವಾರು ರೀತಿಯ ಪ್ರಯೋಜನಗಳಿವೆ ಎಂದು ವರದಿ ಮೂಲಕ ತಿಳಿದುಬಂದಿದೆ.
ಮೊದಲಿಗೆ, ಈ ವಿಷಯದ ಬಗ್ಗೆ ಮಾಡಿದ ಎಲ್ಲಾ ಸಂಶೋಧನೆಗಳು ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ಮಲಗುವುದು ತಪ್ಪಲ್ಲ ಎಂದು ತೋರಿಸುತ್ತದೆ ಮತ್ತು ಪ್ರತಿ ದಂಪತಿಗಳು ತಮ್ಮದೇ ಆದ ನಿಯಮಗಳನ್ನು ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ತಿಳಿಸಿದೆ. ಆದರೆ ಅನೇಕ ಬಾರಿ ಜನರು ಇಂತಹ ಮಾತುಗಳನ್ನು ಕೇಳಲು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಾರೆ ಮತ್ತು ಈ ದಂಪತಿಗಳ ಜೀವನದಲ್ಲಿ ಏನೋ ಸರಿಯಾಗಿಲ್ಲ ಎಂದು ಭಾವಿಸುತ್ತಾರೆ.
ಆದರೆ ಅಷ್ಟೇ ಅಲ್ಲ, ಕೆಲವೊಮ್ಮೆ ಬೇರೆ ಬೇರೆ ಕೋಣೆಗಳಲ್ಲಿ ದಂಪತಿಗಳಿಗೆ ಮಲಗುವುದರಿಂದ ದಂಪತಿಗಳಿಗೆನೇ ಹೆಚ್ಚು ಅನುಕೂಲಕರವಾಗಿರುತ್ತದೆ. ಸಂಶೋಧನೆಯ ಪ್ರಕಾರ ನೀವು ಪ್ರತ್ಯೇಕವಾಗಿ ಏಕೆ ಮಲಗುವುದರಿಂದ ಯಾವುದೇ ನಿದ್ರಾ ಭಂಗವನ್ನು ಉಂಟುಮಾಡುವುದಿಲ್ಲ. ಇದರಿಂದ ಸುಖಕರವಾಗಿ ನಿದ್ರೆ ಮಾಡಬಹುದು.
ರಾತ್ರಿಯಲ್ಲಿ ಗೊರಕೆ ಹೊಡೆಯುವುದು, ಒದೆಯುವುದು, ದೇಹದ ಉಷ್ಣತೆಯ ಬದಲಾವಣೆ ವಿಭಿನ್ನವಾಗಿರುತ್ತದೆ. ನೀವು ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗಲು ಪ್ರಯತ್ನಿಸಿದರೆ ನಿಮ್ಮ ದೇಹವು ಅರಾಮವಾಗಲು ಸಹಾಯಕವಾಗುತ್ತದೆ. ಸ್ವಲ್ಪ ಸಮಯದ ಅಂತರವು ನಿಮ್ಮ ಸಂಬಂಧವನ್ನು ಹೆಚ್ಚು ಉತ್ತಮಗೊಳಿಸುತ್ತದೆ. ನಿಮಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತದೆ.
ಜೊತೆಗೆ ಕೆಲವೊಮ್ಮೆ ದಂಪತಿಗಳ ನಡುವೆ ಮನಸ್ಥಾಪವಾದಾಗ ಈ ರೀತಿ ಕೆಲ ದಿನ ದೂರ ಮಲಗಿದರೆ ಆ ವಿರಹ ವೇದನೆಯಿಂದ ಕೋಪವೂ ತಣ್ಣಗಾಗುತ್ತದೆ. ದೈಹಿಕ ಅನ್ಯೋನ್ಯತೆ ಮತ್ತು ಭಾವನಾತ್ಮಕ ಪ್ರೀತಿಯ ಅವಶ್ಯಕತೆ ಯಾವಾಗಲೂ ಇರುತ್ತದೆ ಮತ್ತು ಆದ್ದರಿಂದ ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗುವುದು ಉತ್ತಮ. ಜೊತೆಗೆ ಕೆಲವೊಮ್ಮೆ ಜ್ವರ ರೀತಿಯ ಅನಾರೋಗ್ಯವಿದ್ದಾಗ ದೂರ ಮಲಗಿದರೆ ಒಬ್ಬರಿಂದ ಒಬ್ಬರಿಗೆ ಅದು ಹರಡುವುದಿಲ್ಲ.
ಇದನ್ನೂ ಓದಿ ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ
ಕೆಲವೊಮ್ಮೆ ದಂಪತಿಗಳಿಗೆ ಸ್ವಲ್ಪ ಅಂತರ ಕಾಯ್ದುಕೊಳ್ಳುವುದು ಅವರ ಲೈಂಗಿಕ ಜೀವನಕ್ಕೆ ಒಳ್ಳೆಯದು ಎಂದು ಸಂಶೋಧನೆ ಸೂಚಿಸುತ್ತದೆ. ಇದರಿಂದ ದಣಿವು ಆಗುವುದು ಕಡಿಮೆ ಆಗುತ್ತದೆ. ಪರಿಣಾಮವಾಗಿ, ಲೈಂಗಿಕ ಜೀವನವನ್ನು ಸುಧಾರಿಸಬಹುದು.
DAKSHINA KANNADA
ಮೊಬೈಲ್ ನೋಡುತ್ತಿದ್ದಾಗ 16 ವರ್ಷದ ಬಾಲಕ ದಿಢೀರ್ ಸಾ*ವು; ವೈದ್ಯರಿಂದ ಶಾಕಿಂಗ್ ರಿಪೋರ್ಟ್; ಆಗಿದ್ದೇನು?
ಸಾ*ವು ಹೇಗೆ, ಎಲ್ಲಿ ಬೇಕಾದರೂ ಬರಬಹುದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. 16 ವರ್ಷದ ಬಾಲಕ ಮೊಬೈಲ್ ಫೋನ್ ನೋಡುತ್ತಿದ್ದಾಗಲೇ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಈ ದುರಂತ ನಡೆದಿದೆ.
16 ವರ್ಷದ ಅಮನ್ ಖುರೇಷಿ ಮೃ*ತ ದುರ್ದೈವಿ. ಖುರೇಷಿ ಮೊಬೈಲ್ ಫೋನ್ ನೋಡುತ್ತಿದ್ದಾಗ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಮನ್ ಖುರೇಷಿ ಆಸ್ಪತ್ರೆ ತಲುಪುವಷ್ಟರಲ್ಲೇ ಪ್ರಾ*ಣ ಕಳೆದುಕೊಂಡಿದ್ದಾರೆ.
ಅಮನ್ ಖುರೇಷಿ ಸಾ*ವನ್ನಪ್ಪಿದ್ದನ್ನು ವೈದ್ಯರು ಖಚಿತ ಪಡಿಸಿದ್ದು, ಹಾರ್ಟ್ ಅಟ್ಯಾಕ್ನಿಂದ ಪ್ರಾ*ಣ ಬಿಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮೃ*ತಪಟ್ಟ ಬಾಲಕ ಮೊಬೈಲ್ ಫೋನ್ನಲ್ಲಿ ವಿಡಿಯೋ ನೋಡುತ್ತಿದ್ದಾಗ ಈ ದುರಂತ ನಡೆದಿದೆ.
ಇತ್ತೀಚೆಗೆ ದೇಶಾದ್ಯಾಂತ ಹೃದಯಾಘಾತಕ್ಕೆ ಸಾ*ವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹದಿ ಹರಿಯದ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರೋದು ನಿಜಕ್ಕೂ ಶಾಕಿಂಗ್ ಘಟನೆಯಾಗಿದೆ.
ಹೃದಯಾಘಾತವು ವ್ಯಕ್ತಿಯ ಮಾನಸಿಕ ಒತ್ತಡ ಮತ್ತು ದೈಹಿಕ ಪರಿಶ್ರಮದಿಂದ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ದೈನಂದಿನ ಕೆಲಸಗಳಲ್ಲಿ ಒತ್ತಡ ಹೆಚ್ಚಾಗುವುದರಿಂದ ಹೃದಯದ ಮೇಲೆ ಒತ್ತಡವೂ ಹೆಚ್ಚಾಗುತ್ತದೆ.
ಪ್ರಮುಖವಾಗಿ ನಮ್ಮ ದಿನನಿತ್ಯದ ಜೀವನಶೈಲಿ ಹಾಗೂ ಆಹಾರ ಕ್ರಮಗಳು ಸಣ್ಣ ವಯಸ್ಸಿನವರಿಂದ ವಯಸ್ಸಾದವರಿಗೂ ಹೃದಯಾಘಾತ ಆಗಲು ಕಾರಣವಾಗಿದೆ. ನ್ಯುಮೋನಿಯದಂತಹ ತೀವ್ರ ಸೋಂಕು ಹೃದಯ ಸ್ನಾಯುವಿನ ಊತಕವೂ ಸಾ*ವನ್ನು ಉಂಟು ಮಾಡಬಹುದು. ರಕ್ತನಾಳದಲ್ಲಿ ಬೇಗ ರಕ್ತು ಹೆಪ್ಪುಗಟ್ಟುವುದನ್ನು ತಡೆದರೆ ಹೃದಯಾಘಾತದಿಂದ ಪಾರಾಗಬಹುದು.
- DAKSHINA KANNADA7 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA7 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA6 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- FILM7 days ago
ದೀಪಿಕಾ ಪಡುಕೋಣೆ ಜೊತೆ ಒಪ್ಪಂದ ಮಾಡಿಕೊಂಡ ನಿಶಾ ಅಂಬಾನಿ..! ಏನು ಗೊತ್ತಾ?