LATEST NEWS
ರಸ್ತೆ ಬದಿ ಕಂತೆ ಕಂತೆ ನೋಟುಗಳ ರಾಶಿ ಪತ್ತೆ…!
ಬೆಂಗಳೂರು: ಬೆಂಗಳೂರು ನಗರದ ಹೊರವಲಯದ ಕನಕಪುರ ರಸ್ತೆಯ ಪಕ್ಕದಲ್ಲಿ ಬಾಕ್ಸ್ಗಳಲ್ಲಿ ಎರಡು ಸಾವಿರ ಮುಖಬೆಲೆಯ ಲಕ್ಷಾಂತರ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ ನೋಟುಗಳು ಪತ್ತೆಯಾಗಿವೆ.
ಕನಕಪುರ ರಸ್ತೆಯೊಂದರ ಪಕ್ಕದಲ್ಲಿ ಖಾಲಿ ಜಾಗದಲ್ಲಿ ಪ್ಯಾಕಿಂಗ್ ಮಾಡಿದ ಸ್ಥಿತಿಯಲ್ಲಿ ಎರಡು ಬಾಕ್ಸ್ ಗಳನ್ನ ಕಂಡ ಸ್ಥಳೀಯರು ಅನುಮಾನಗೊಂಡ ಸಮೀಪದಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ತಲಘಟ್ಟಪುರ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರನ್ನ ಕರೆಯಿಸಿ ಬಾಕ್ಸ್ ಬಿಚ್ಚಿ ಪರಿಶೀಲಿಸಿದಾಗ ಕಂತೆಕಂತೆ ನೋಟುಗಳು ದೊರಕಿದ್ದು ಒಂದು ಕ್ಷಣ ದಂಗಾಗಿದ್ದಾರೆ.
ಸಂಪೂರ್ಣವಾಗಿ ಪರಿಶೀಲಿಸಿದಾಗ ಅವು ನಕಲಿ ನೋಟುಗಳು ಅನ್ನೋದು ಗೊತ್ತಾಗಿದೆ. ಸದ್ಯ ಈ ನಕಲಿ ನೋಟುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್ಗಾರ್ಡ್ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ನ ಎರಡು ಇಂಟರ್ಸೆಪ್ಟರ್ ಬೋಟ್ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್ಗಾರ್ಡ್ ತಿಳಿಸಿದೆ.
LATEST NEWS
Lucknow: ಪುತ್ರಿ ಮದುವೆ ಮಾಡಲು ಎಂದು ಲಾಕರ್ ನಲ್ಲಿಟ್ಟ 18 ಲಕ್ಷ ರೂ. ಗೆದ್ದಲು ಪಾಲು..!
ಲಕ್ನೋ: ಮಗಳ ಮದುವೆಗೆಂದು ತಾಯಿಯೊಬ್ಬರು ರೂಪಾಯಿ-ರೂಪಾಯಿ ಹಣವನ್ನು ಜೋಪಾನವಾಗಿ ಬ್ಯಾಂಕ್ನ ಲಾಕರ್ನಲ್ಲಿ ಕೂಡಿ ಇಟ್ಟ ಸುಮಾರು 18 ಲಕ್ಷ ರೂ. ಹಣವು ಗೆದ್ದಲು ಹಿಡಿದು ನಾಶವಾಗಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್ನಲ್ಲಿ ವರದಿಯಾಗಿದೆ.
ಮೊರಾದಾಬಾದ್ ನಿವಾಸಿ ಅಲ್ಕಾ ಪಠಾಕ್ ಅವರು ಕಳೆದ ವರ್ಷ ಅಕ್ಟೋಬರ್ನಲ್ಲಿ ಅಶಿಯಾನಾದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 18 ಲಕ್ಷ ರೂ.ಗಳನ್ನು ಇಟ್ಟಿದ್ದರು.
ಇತ್ತೀಚಿಗೆ ಬ್ಯಾಂಕ್ ಸಿಬಂದಿ ಲಾಕರ್ ಅಗ್ರಿಮೆಂಟ್ ರಿನೀವಲ್ಗೆ ಎಂದು ಅಲ್ಕಾ ಅವರಿಗೆ ಕರೆ ಮಾಡಿ ಬರಲು ಹೇಳಿದ್ದಾರೆ.
ಈ ವೇಳೆ ಲಾಕರ್ ತೆರೆದರೆ ನೋಟುಗಳಿಗೆ ಗೆದ್ದಲು ಹಿಡಿದಿರುವುದು ಕಂಡು ಬಂದಿದೆ.
ಈ ಬಗ್ಗೆ ಬ್ಯಾಂಕ್ನ ಮುಖ್ಯ ಕಚೇರಿಗೆ ತಿಳಿಸಿರುವುದಾಗಿ ಸಿಬಂದಿ ಹೇಳಿದ್ದಾರೆ.
ತನಗಾದ ನಷ್ಟಕ್ಕೆ ಬ್ಯಾಂಕ್ನವರೇ ಪರಿಹಾರ ನೀಡಬೇಕೆಂದು ಮಹಿಳೆ ಪಟ್ಟು ಹಿಡಿದಿರುವುದು ವರದಿಯಾಗಿದೆ.
FILM
ವಯಸ್ಸಲ್ಲಿ ರಾಘವ್ ಚಡ್ಡಾ ಅವರಿಗಿಂತ ಸೀನಿಯರ್ ಪರಿಣಿತಿ ಚೋಪ್ರಾ…!
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಪ್ ಸಂಸದ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರ ಈಗ ರಿವೀಲ್ ಆಗಿದೆ.
ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಪ್ ಸಂಸದ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರ ಈಗ ರಿವೀಲ್ ಆಗಿದ್ದು, ರಾಘವ್ ಚಡ್ಡಾ ಅವರಿಗಿಂತ ಪರಿಣಿತಿ ಚೋಪ್ರಾ ಸೀನಿಯರ್.
ಸೆಪ್ಟೆಂಬರ್ 24ರಂದು ಈ ಜೋಡಿ ಗ್ರ್ಯಾಂಡ್ ಆಗಿ ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್ನಲ್ಲಿ ಸಪ್ತಪದಿ ತುಳಿದಿದ್ರು.
ರಾಘವ್ ಚಡ್ಡಾ ಅವರು 2022ರಲ್ಲಿ ಪಂಜಾಬ್ನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಆಗಿದ್ದಾರೆ.
33ನೇ ವಯಸ್ಸಿಗೆ ರಾಜ್ಯಸಭೆ ಪ್ರವೇಶಿಸಿದ ಅವರು, ಅತ್ಯಂತ ಕಿರಿಯ ರಾಜ್ಯಸಭಾ ಸದಸ್ಯ ಎಂಬ ಖ್ಯಾತಿಗೆ ಪಾತ್ರವಾಗಿದ್ದಾರೆ.
ಇನ್ನು ನಟಿ ಪರಿಣಿತಿ ಚೋಪ್ರಾ ಅವರು 2011ರಿಂದಲೂ ಬಾಲಿವುಡ್ನಲ್ಲಿ ಸಕ್ರಿಯರಾಗಿದ್ದಾರೆ.
‘ಶುದ್ಧ್ ದೇಸಿ ರೊಮ್ಯಾನ್ಸ್’, ‘ಹಸೀ ತೊ ಫಸೀ’, ‘ದಾವತ್ ಎ ಇಶ್ಕ್’, ‘ನಮಸ್ತೆ ಇಂಗ್ಲೆಂಡ್’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಸದ್ಯ ಅಕ್ಷಯ್ ಕುಮಾರ್ ಜತೆ ಪರಿಣಿತಿ ನಟಿಸಿರುವ ‘ಮಿಷನ್ ರಾಣಿಗಂಜ್’ ಸಿನಿಮಾ ತೆರೆ ಕಾಣಬೇಕಿದೆ.
ಸದ್ಯಕ್ಕೆ ಪರಿಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರದ ಸಾಕಷ್ಟು ಬಗ್ಗೆ ಚರ್ಚೆಯಾಗುತ್ತಿದೆ.
ಇಬ್ಬರಿಗೂ ಈಗ 35 ವರ್ಷ ವಯಸ್ಸಾಗಿದ್ದು, ನಟಿ ಪರಿಣಿತಿ ಚೋಪ್ರಾ ಅವರು 22 ಅಕ್ಟೋಬರ್ 1988ರಲ್ಲಿ ಜನಿಸಿದ್ದಾರೆ. ರಾಘವ್ ಚಡ್ಡಾ ಅವರು 11 ನವೆಂಬರ್ 1988ರಲ್ಲಿ ಜನಿಸಿದ್ದಾರೆ.
ವಿಶೇಷ ಎಂದರೆ ನಟಿ ಪರಿಣಿತಿ ಚೋಪ್ರಾ ಅವರು ರಾಘವ್ ಚಡ್ಡಾ ಅವರಿಗಿಂತ 20 ದಿನ ದೊಡ್ಡವರಾಗಿದ್ದಾರೆ.
ವಯಸ್ಸಿನ ಮಿತಿಯನ್ನು ಲೆಕ್ಕಿಸದೇ ಸ್ಟಾರ್ ನಟ ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುವುದು ಮಾಮೂಲು ಆಗಿದೆ.