Connect with us

DAKSHINA KANNADA

ಕಮಿಷನ್ ಆರೋಪ ಸಾಬೀತು ಪಡಿಸದಿದ್ದಲ್ಲಿ ಮಾಜಿ ಶಾಸಕ ಬಾವಾ ವಿರುದ್ಧ 3 ಕೋಟಿ ಮಾನನಷ್ಟ ಮೊಕದ್ದಮೆ-ಶಾಸಕ ಭರತ್ ಶೆಟ್ಟಿ

Published

on

ಮಂಗಳೂರು: ಸುರತ್ಕಲ್ ಮಾರುಕಟ್ಟೆ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಶಾಸಕ ಮೊಯಿದಿನ್ ಬಾವಾ ಅವರು ನನ್ನ ವಿರುದ್ಧ 38 ಕೋಟಿ ರೂಪಾಯಿ ಕಮಿಷನ್ ಪಡೆದುಕೊಂಡಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ಅಧಿಕೃತ ದಾಖಲೆಗಳು ಇದ್ದಲ್ಲಿ ಬಹಿರಂಗಪಡಿಸಲಿ. ಇಲ್ಲವಾದರೆ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿರುವ ಮೊಯಿದೀನ್ ಬಾವಾ ವಿರುದ್ಧ 3 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಮಂಗಳೂರು ಉತ್ತರ ಕ್ಷೇತ್ರ ಶಾಸಕ ವೈ. ಭರತ್ ಶೆಟ್ಟಿ ಹೇಳಿದ್ದಾರೆ.


ಸುರತ್ಕಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು “ಮಂಗಳೂರು ಉತ್ತರ ಕ್ಷೇತ್ರ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಈಗಾಗಲೇ ಕ್ಷೇತ್ರದ ವಿವಿಧೆಡೆಗಳಲ್ಲಿ ರಸ್ತೆ, ತಡೆಗೋಡೆ, ಪಾರ್ಕ್ ಇನ್ನಿತರ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಸುರತ್ಕಲ್ ಮಾರುಕಟ್ಟೆ ಅರ್ಧಕ್ಕೇ ನಿಲ್ಲಲು ಮಾಜಿ ಶಾಸಕ ಮೊಯಿದೀನ್ ಬಾವಾ ಕಾರಣ. ಸ್ಥಳವನ್ನು ಗುತ್ತಿಗೆ ವಹಿಸಿಕೊಂಡವರಿಗೆ ಸಂಪೂರ್ಣ ಬಿಟ್ಟುಕೊಡದ ಕಾರಣ ಅವರಿಗೆ ಅರ್ಧದಲ್ಲೇ ಪೇಮೆಂಟ್ ಮಾಡಲಾಗಿದೆ.

ಈಗ ಹೆಚ್ಚುವರಿ ಅನುದಾನ ಸರಕಾರ ನೀಡಿದ್ದು ಕಾಮಗಾರಿ ಮತ್ತೆ ಪ್ರಾರಂಭಗೊಳ್ಳಲಿದೆ.
ನಿರಾಧಾರ ಆರೋಪ ಮಾಡುವ ಬಾವಾರಿಗೆ ಲಾಯರ್ ನೋಟಿಸ್ ಕೊಡಲಾಗುವುದು ಮಾತ್ರವಲ್ಲದೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು” ಎಂದರು.

ಮಂಗಳೂರು ಮೇಯರ್ ಜಯಾನಂದ ಅಂಚನ್, ಕಾರ್ಪೋರೇಟರ್ ಶ್ವೇತಾ ಪೂಜಾರಿ, ನಯನ ಕೋಟ್ಯಾನ್, ಮಂಗಳೂರು ಉತ್ತರ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending