Connect with us

31 ಲಕ್ಷ ಅನುದಾನದಲ್ಲಿ ಪಡುಪೆರಾರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಶಾಸಕ ಡಾ.ಭರತ್ ಚಾಲನೆ

Published

on

31 ಲಕ್ಷ ಅನುದಾನದಲ್ಲಿ ಪಡುಪೆರಾರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಶಾಸಕ ಡಾ.ಭರತ್ ಚಾಲನೆ

ಮಂಗಳೂರು,ಜನವರಿ18: ಪಡುಪೆರಾರದಲ್ಲಿ 31 ಲಕ್ಷ ಅನುದಾನದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು.

ಮಂಗಳೂರು ತಾಲೂಕು ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಪೆರಾರ ಮುಂಡೇವು ರಸ್ತೆಗೆ ಲೋಕೋಪಯೋಗಿ ಇಲಾಖೆಯಿಂದ 15 ಲಕ್ಷ ರೂಪಾಯಿ ಅನುದಾನ, ಮಲೆನಾಡು ಅಭಿವೃದ್ಧಿ ಮಂಡಳಿಯಿಂದ 10 ಲಕ್ಷ, ಒಳಚರಂಡಿ ಯೋಜನೆಗೆ 3 ಲಕ್ಷ ಹಾಗೂ ಕುಡಿಯುವ ನೀರಿನ ಯೋಜನೆಗೆ 3 ಲಕ್ಷ ಒಟ್ಟು 31 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು.

ಶಾಸಕರೊಂದಿಗೆ ಜಿ.ಪ. ಸದಸ್ಯ ಜನಾರ್ದನ ಗೌಡ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಕೋಟ್ಯಾನ್, ಗ್ರಾ.ಪಂ.ಸದಸ್ಯರಾದ ಯಶವಂತ ಪೂಜಾರಿ, ಚೈತ್ರಾ ಹರೀಶ್, ಕಾರ್ಯಕರ್ತರಾದ ಗ್ರಾಮ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಅನುರಾಜ್ ಪಡುಪೆರಾರ, ಮುಖಂಡರಾದ ಸೈಯದ್ ಅಜ್ಗರ್, ಭಜರಂಗದಳ ಕಾರ್ಯಕರ್ತರಾದ ರಾಜೇಶ್, ಸುರೇಶ್ ಅಳಿಕೆ, ಮೋಹನ ಅಳಿಕೆ, ದಿನೇಶ್, ಅನಿಲ್ ಕೆ, ಪ್ರಮೋದ್, ಶಿವರಾಜ್, ವಿನೋದ್ ಸಹಿತ ಸ್ಥಳೀಯರು, ನಾಗರಿಕರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

FILM

ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ ಐಶ್ವರ್ಯ ರೈ

Published

on

ಐಶ್ವರ್ಯ ರೈ ಬಚ್ಚನ್ ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಮತ್ತೆ ಮಿಂಚಿದ್ದಾರೆ. ಅವರು ಪ್ರತಿ ಬಾರಿ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ಬಾರಿಯೂ ವಿಭಿನ್ನವಾಗಿ ಅವರು ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಆದರೆ, ಈ ವೇಳೆ ಎಲ್ಲರ ನೋಟ ಐಶ್ವರ್ಯಾ ರೈ ಕೈ ಮೇಲೆ ಬಿದ್ದಿದೆ. ಹೌದು, ಐಶ್ವರ್ಯ ರೈ ಅವರ ಕೈಗೆ ಏಟಾಗಿದೆ ಅನ್ನೋ ವಿಚಾರ ವೈರಲ್ ಆಗಿತ್ತು. ಇದೀಗ ಅವರು ಕೈನಲ್ಲಿ ಬ್ಯಾಂಡೇಜ್ ಇರುವಂತೆಯೇ ಕೇನ್ಸ್ ಫಿಲ್ಮ್ಸ್ ಫೆಸ್ಟಿವಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.


ಕೇನ್ಸ್‌ ರೆಡ್ ಕಾರ್ಪೆಟ್ ಮೇಲೆ ಐಶ್ ಹೆಜ್ಜೆ ಹಾಕಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಗಾಯ ಲೆಕ್ಕಿಸದೆ ಹೆಜ್ಜೆ:


2002ರಲ್ಲಿ ಮೊದಲ ಬಾರಿ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಐಶ್ವರ್ಯಾ ರೈ ಕಾಣಿಸಿಕೊಂಡಿದ್ದರು. ಅಂದಿನಿಂದ ಪ್ರತಿ ವರ್ಷ ಅವರು ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುತ್ತಿದ್ದಾರೆ. ಪ್ರತಿ ಬಾರಿಯೂ ವಿಭಿನ್ನ ಲುಕ್‌ಗಳಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಕೆಲವೊಮ್ಮೆ ತಮ್ಮ ಲುಕ್ ಕಾರಣಕ್ಕೆ ಟ್ರೋಲ್ ಕೂಡ ಆಗಿದ್ದಿದೆ. ಟೀಕೆಗಳಿಗೆ ಅಂಜದೆ, ಐಶ್ವರ್ಯಾ ರೈ 21 ಬಾರಿ ಕೇನ್ಸ್ ಫಿಲ್ಮ್ ಫೆಸ್ಟಿವಲ್ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಈ ಬಾರಿ ಗಾಯವನ್ನು ಲೆಕ್ಕಿಸದೇ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿರೋದು ವಿಶೇಷ. ನಗುನಗುತ್ತಲೇ ಪೋಸ್ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.

ಏರ್ ಪೋರ್ಟ್ ಫೋಟೋ ವೈರಲ್ :

ಬುಧವಾರ (ಮೇ 15) ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಐಶ್ವರ್ಯಾ ರೈ ಕಾಣಿಸಿಕೊಂಡಿದ್ದರು. ಈ ಸಂದರ್ಭ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದ ಅವರ ಕೈಗೆ ಏಟಾಗಿರುವುದು ಗಮನಕ್ಕೆ ಬಂದಿತ್ತು. ಮಗಳು ಆರಾಧ್ಯ ಜೊತೆ ಮುಂಬೈ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದ ಐಶ್ವರ್ಯಾ ರೈ ಅವರು ಬಲ ತೋಳಿಗೆ ಚೀಲವನ್ನು ಧರಿಸಿದ್ದು ಕಂಡು ಬಂದಿತ್ತು.

ಇದನ್ನೂ ಓದಿ : ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ

ವಿಮಾನ ನಿಲ್ದಾಣದಲ್ಲಿ ಫೋಟೋ ಚಿತ್ರಿಕರಿಸುತ್ತಿದ್ದವರ ಕಣ್ಣಿಗೆ ಐಶ್ವರ್ಯಾ ರೈ ಹಾಗೂ ಆರಾಧ್ಯ ಕಾಣಿಸಿಕೊಂಡಿದ್ದರು. ಹೀಗಾಗಿ ತಕ್ಷಣ ಅವರ ಫೋಟೋ ವಿಡಿಯೋ ಶೂಟ್ ಮಾಡುತ್ತಿದ್ದ ಫೋಟೋಗ್ರಾಫರ್ಸ್‌ ಕಣ್ಣಿಗೆ ಐಶ್ವರ್ಯಾ ರೈ ಧರಿಸಿದ್ದ ತೋಳಿನ ಚೀಲ ಕಾಣಿಸಿದೆ. ಆದ್ರೆ ಈ ಬಗ್ಗೆ ಯಾವುದೇ ಉತ್ತರ ನೀಡದೆ ಐಶ್ವರ್ಯಾ ರೈ ಬೈ ಎಂದು ಅಲ್ಲಿಂದ ಮುಂದೆ ಸಾಗಿದ್ದರು.

Continue Reading

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

LATEST NEWS

ಒಂದೇ ಒಂದು ಸೊಳ್ಳೆಗಳಿಲ್ಲದ ವಿಚಿತ್ರ ದೇಶವಿದು..!

Published

on

ಐಸ್‌ಲ್ಯಾಂಡ್: ಬಿಸಿಲು, ಮಳೆ ಎರಡೂ ಕಾಣಿಸಿಕೊಂಡಾಗ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸೊಳ್ಳೆ ಕಚ್ಚುವುದರಿಂದ ಮಲೇರಿಯಾ, ಡೆಂಗ್ಯೂನಂತಹ ಮಾರಣಾಂತಿಕ ಕಾಯಿಲೆಗಳು ಬರಬಹುದು. ಸೊಳ್ಳೆಗಳಿಂದ ಹರಡುವ ರೋಗದಿಂದ ಪ್ರತಿವರ್ಷ ಲಕ್ಷಾಂತರ ಮಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಪ್ರಪಂಚದಾದ್ಯಂತ ಒಟ್ಟು 3 ಸಾವಿರ ಜಾತಿಯ ಸೊಳ್ಳೆಗಳಿವೆ. ಆದರೆ ಒಂದೇ ಒಂದು ಸೊಳ್ಳೆಗಳೂ ಇಲ್ಲದ ವಿಶಿಷ್ಟ ದೇಶವೊಂದಿದೆ. ಹೌದು ಅದುವೇ ಉತ್ತರ ಅಟ್ಲಾಂಟಿಕ್ ಸಾಗರದಲ್ಲಿರುವ ಐಸ್‌ಲ್ಯಾಂಡ್ ದೇಶ. ಇದು ಹಾವು ಮುಕ್ತ ಮಾತ್ರವಲ್ಲ, ಸೊಳ್ಳೆ ಮುಕ್ತ ದೇಶವೂ ಆಗಿದೆ.

ಐಸ್‌ಲ್ಯಾಂಡ್ ವಿಪರೀತ ಚಳಿ ಇರುವ ಪ್ರದೇಶವಾಗಿದೆ. ಅಲ್ಲಿನ ಶೀತ ವಾತಾವರಣದಲ್ಲಿ ಸೊಳ್ಳೆಗಳು ಬದುಕಲು ಸಾಧ್ಯವಿಲ್ಲ. ಐಸ್‌ಲ್ಯಾಂಡ್ ಹವಾಮಾನವು ಬಹಳ ವೇಗವಾಗಿ ಬದಲಾಗುತ್ತದೆ. ಹವಾಮಾನದಲ್ಲಿನ ತ್ವರಿತ ಬದಲಾವಣೆಯ ಕಾರಣ ಸೊಳ್ಳೆಗಳು ತಮ್ಮ ಜೀವನಚಕ್ರ ಸಾಗಿಸಲು ಸಾಧ್ಯವಿಲ್ಲ.

ಐಸ್‌ಲ್ಯಾಂಡ್ ತಾಪಮಾನ ಇಳಿಕೆ ಆರಂಭವಾದಾಗ ನೀರು ಮಂಜುಗಡ್ಡೆ ರೂಪ ತಾಳುತ್ತದೆ. ನೀರು ಸಂಪೂರ್ಣವಾಗಿ ಹೆಪ್ಪುಗಟ್ಟುವ ಕಾರಣ ಪ್ಯೂಪಾ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಐಸ್‌ಲ್ಯಾಂಡ್‌ನಲ್ಲಿ ತಾಪಮಾನವು ಮೈನಸ್ 38 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುತ್ತದೆ. ಅಂತಹ ಕಡಿಮೆ ತಾಪಮಾನದಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುವುದು ಅಸಾಧ್ಯ.

ಐಸ್‌ಲ್ಯಾಂಡ್‌ನಲ್ಲಿ ಸೊಳ್ಳೆಗಳಿಗೆ ಸಂಬಂಧಿಸಿದ ಒಂದು ಸಿದ್ಧಾಂತವೆಂದರೆ ಈ ದೇಶದ ನೀರು, ಮಣ್ಣು ಮತ್ತು ಸಾಮಾನ್ಯ ಪರಿಸರ ವ್ಯವಸ್ಥೆಯು ರಾಸಾಯನಿಕ ಸಂಯೋಜನೆಯ ಸೊಳ್ಳೆ ಜೀವನವನ್ನು ಬೆಂಬಲಿಸುವುದಿಲ್ಲ. ಆದರೆ ಐಸ್‌ಲ್ಯಾಂಡ್‌ನ ನೆರೆಯ ದೇಶಗಳಾದ ನಾರ್ವೆ, ಡೆನ್ಮಾರ್ಕ್‌, ಸ್ಕಾಟ್ಲೆಂಡ್ ದೇಶಗಳಲ್ಲಿ ಸೊಳ್ಳೆಗಳಿವೆ.

Continue Reading

LATEST NEWS

Trending