DAKSHINA KANNADA
ಮಂಗಳೂರು ನಗರಕ್ಕೆ 32 ಕೋ.ರೂ. ವೆಚ್ಚದ ಕಮಾಂಡ್ ಕಂಟ್ರೋಲ್ ಸೆಂಟರ್ ಫೇಸ್-2 : ಚೈನಾ ಮಾಲ್..! ಬ್ಲ್ಯಾಕ್ ಲಿಸ್ಟ್ ಕಂಪೆನಿಗೆ ಟೆಂಡರ್..!?
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರಂಭಿಸಲಾಗಿರುವ ಸರಿಸುಮಾರು 32 ಕೋಟಿ ರೂಪಾಯಿ ವೆಚ್ಚದ ಕಮಾಂಡ್ ಕಂಟ್ರೋಲ್ ಸೆಂಟರ್ ಫೇಸ್-2ವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಗುತ್ತಿಗೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಸದನದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಮಾತಿನ ಜಟಾಪಟಿ ನಡೆದು ಕೊನೆಗೆ ಪಾಲಿಕೆ ಆಯುಕ್ತರು ಮಧ್ಯೆ ಪ್ರವೇಶಿಸಿ ವಿಪಕ್ಷ ನಾಯಕರನ್ನು ಸುಮ್ಮನಿರಿ ಎಂದು ಗದರಿಸಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಯಿತು.
ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಪಾಲಿಕೆ ಸಭೆಯಲ್ಲಿ ಈ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರವಾಗಿದೆ ಎಂಬ ಆರೋಪ ವಿಪಕ್ಷವಾದ ಕಾಂಗ್ರೆಸ್ ಸದಸ್ಯರು ಮಾಡಿದ್ದು ಈ ಸಂದರ್ಭ ಕಮಾಂಡ್ ಕಂಟ್ರೋಲ್ ಸೆಂಟರ್ ಫೇಸ್ -2 ಯೋಜನೆ ಬಗ್ಗೆ ವಿಪಕ್ಷ ಸದಸ್ಯರು ಮೇಯರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಸದ್ಯ ಈ ಕಮಾಂಡ್ ಸೆಂಟರ್ ಗುತ್ತಿಗೆಯನ್ನು ಟೆಕ್ನಾಸಿಸಿ ಸೆಕ್ಯೂರಿಟೀಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಗೆ ನೀಡಲಾಗಿದೆ.
ಚೀನಾ ನಿರ್ಮಿತ ಯಾವುದೇ ಪರಿಕರಗಳನ್ನು ಭದ್ರತಾ ದೃಷ್ಟಿಯಿಂದ ಅಳವಡಿಸಬಾರದು ಎನ್ನುವ ಕಾನೂನು ಇದ್ದರೂ ಕೂಡಾ ಅದನ್ನು ಇಲ್ಲಿ ಅಳವಡಿಸಿರುವುದು ಏಕೆಂದು ಕಾಂಗ್ರೆಸ್ಸಿನ ಎ ಸಿ ವಿನಯರಾಜ್ ಪ್ರಶ್ನಿಸಿದರು.
ವಿಶೇಷವಾಗಿ ಭದ್ರತಾ ದೃಷ್ಟಿಯಿಂದ ಅಳವಡಿಸಲಾಗುವ ಇದರ ಎಲ್ಲಾ ಪರಿಕರಗಳೂ ಸೂಕ್ತವಾಗಿಲ್ಲ ಎಂದು ಕಂಪೆನಿಯನ್ನು ಈಗಾಗಲೇ ಬ್ಲ್ಯಾಕ್ ಲಿಸ್ಟಿಗೆ ಸೇರಿಸಲಾಗಿದೆ.
ಹೀಗಿರುವಾಗ ಈ ಕಂಪೆನಿಗೆ ಕಮಾಂಡ್ ಕಂಟ್ರೋಲ್ ಸಿಸ್ಟಂನ ಗುತ್ತಿಗೆ ನೀಡಿರುವುದು ಸರಿಯಲ್ಲ ಎಂದು ವಾದಿಸಿದರು.
ಇದಕ್ಕೆ ಎಲ್ಲಾ ಸದಸ್ಯರೂ ಬೆಂಬಲಿಸಿದರು. ಈಗಾಗಲೇ ಕಪ್ಪುಪಟ್ಟಿಗೆ ಸೇರಿಸಲಾಗಿರುವ ಕಂಪೆನಿಯೊಂದಕ್ಕೆ ಈ ಕಮಾಂಡ್ ಸೆಂಟರನ್ನು ಕಂಟ್ರೋಲ್ ಮಾಡಲು ನೀಡಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮಧ್ಯ ಪ್ರವೇಶಿಸಿ ಕಾಂಗ್ರೆಸ್ ಸದಸ್ಯರನ್ನು ಸುಮ್ಮನಿರಿ ಎಂದು ಗದರಿಸಿದ್ದು ಆಕ್ರೋಶಕ್ಕೆ ಕಾರಣವಾಯಿತು. ಅವರ ಹೇಳಿಕೆ ಖಂಡಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿದರು.
ಸ್ಮಾರ್ಟ್ ಸಿಟಿ- ಕಮಾಂಡ್ ಕಂಟ್ರೋಲ್ ಸೆಂಟರ್ ಫೇಸ್-1 & 2
ಕಮಾಂಡ್ ಕಂಟ್ರೋಲ್ ಸೆಂಟರ್ ಫೇಸ್-1- ಟೆಂಡರ್ ಮೊತ್ತ- ರೂ.23.4 ಕೋಟಿ, ಇದರಲ್ಲಿ ಇಂಟೆಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಂ, ಸಾಲಿಡ್ ವೇಸ್ಟ್ – ಮ್ಯಾನೇಜ್ಮೆಂಟ್, ಇನ್ಸಿಡೆಂಟ್ ಲಿಪೋರ್ಟಿಂಗ್, ಪ್ರಾಪರ್ಟಿ ಟ್ಯಾಕ್ಸ್, ಟ್ರೇಡ್ ಲೈಸೆನ್ಸ್, ಬರ್ತ್ ಅಂಡ್ ಡೆತ್ ಸರ್ಟಿಪಿಕೇಟ್, ಆ್ಯಡ್ ಹೋಡಿಂಗ್ಸ್, ಇ-ಮಾರ್ಕೆಟ್ ವ್ಯವಸ್ಥೆಗಳನ್ನು ಒಳಗೊಂಡಂತಹ ಯೋಜನೆ, ಕೆಲವೊಂದು ವಿಭಾಗಗಳು ಈಗಾಗಲೇ ಕಾರ್ಯರೂಪಕ್ಕೆ ಬಂದಿರುತ್ತದೆ.
ಕಮಾಂಡ್ ಕಂಟ್ರೋಲ್ ಸೆಂಟರ್ ಫೇಸ್-2, ಒಟ್ಟು ಮೊತ್ತ 32 ಕೋಟಿ ಯೋಜನೆ ಆಗಿರುತ್ತದೆ.
ಈ ಯೋಜನೆಯಲ್ಲಿ ಸುಮಾರು 6 ಕಂಪೆನಿಗಳು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿರುತ್ತದೆ. ಅದು ಕೇರಳ ಸ್ಟೇಟ್ ಇಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೋರೇಷನ್ ಲಿಮಿಟೆಡ್ (ಕೆಲ್ಟಾನ್ ಅಮಿಟೆಡ್. ಮೆಡ್ರಾಸ್_ಸೆಕ್ಯುರಿಟೀಸ್ ಪ್ರಿಂಟರ್ ಪ್ರೈವೆಟ್ ಲಿಮಿಟೆಡ್, ಸಿ.ಎಂ.ಎಸ್ ಕಂಪ್ಯೂಟರ್, ಅಮಿಟೆಡ್, ಮ್ಯಾಟ್ರಿಕ್ಸ್ ಸೆಕ್ಯುಲಿಟಿ ಆ್ಯಂಡ್ ಸರ್ವಲೆನ್ಸ್ ಪ್ರೈವೆಟ್ ಲಿಮಿಟೆಡ್, ಐ.ಟಿ.ಐ ಲಿಮಿಟೆಡ್, ಟೆಕ್ನಾಸಿಸ್ ಸೆಲ್ಯುಲಿಟೀಸ್ ಸಿಸ್ಟಂ ಪ್ರೈವೆಟ್ ಲಿಮಿಟೆಡ್.
ಟೆಂಡರ್ ಪ್ರಕ್ರಿಯೆಯಲ್ಲಿ ಮೆಡ್ರಾಸ್ ಸೆಲ್ಯುಲಿಟಿ ಕಂಪೆನಿ ಮತ್ತು ಸಿ.ಎಂ.ಎಸ್ ಕಂಪೆನಿಗಳು ಟೆಕ್ನಿಕಲ್ ಅಡ್ಡಿನಲ್ಲಿ ಅನರ್ಹ ಎಂದು ಆದೇಶವಾಗಿರುತ್ತದೆ.
ಇದರಲ್ಲಿ ಸಿ.ಎಂ.ಎಸ್ ಎಂಬ ಕಂಪೆನಿಯು ಭಾರತ ದೇಶದಲ್ಲಿಯೇ ಕಮಾಂಡ್ ಕಂಟ್ರೋಲ್ ಸೆಂಟರ್ ಅನುಷ್ಠಾನ ಮಾಡುವುದರಲ್ಲಿ ದಿಗ್ಗಜನಾಗಿದ್ದು, ಇವರು ಸೀಮನ್ ఎంబ ವಿದೇಶಿ ಕಂಪೆನಿಯಿಂದ ತಾಂತ್ರಿಕತೆಯನ್ನು ಪಡೆಯುವ ಕಂಪೆನಿಯಾಗಿರುತ್ತದೆ.
ಈಗಾಗಲೇ ಮುಂಬೈ ನಗರ, ಗುಜರಾತಿನ ಅಹ್ಮದಾಬಾದ್ ಹಾಗೂ ಬರೋಡ ಮುಂತಾದ ಬೃಹತ್ ನಗರಗಳಲ್ಲಿ ಕಮಾಂಡ್ ಕಂಟ್ರೋಲ್ ವ್ಯವಸ್ಥೆಯನ್ನು ಅಳವಡಿಸಿರುವ ಕಂಪೆನಿಯಾಗಿರುತ್ತದೆ.
• ಐ.ಟಿ.ಐ ಲಿಮಿಟೆಡ್ (ಸರಕಾರಿ ಸ್ವಾಮ್ಮ) ಹೆಚ್ಚಿನ ಮೊತ್ತವನ್ನು ಸಲ್ಲಿಸಿದ ಕಾರಣ ಹೊರಬಿದ್ದಿದ್ದು ಮತ್ತು ಮ್ಯಾಟ್ರಿಕ್ಸ್ ಎಂಬ ಕಂಪೆನಿ ಟೆಕ್ನಿಕಲ್ ಬಿನಲ್ಲಿ ಪ್ರಥಮ ಅಂಕವನ್ನು ಪಡೆದ ಕಂಪೆನಿ ಆಗಿದ್ದು ಅದು ಕೂಡಾ ಹೆಚ್ಚಿನ ಮೊತ್ತವನ್ನು ಅಡ್ಡಿಂಗ್ ಮಾಡಿ ಹೊರಬಿದ್ದಿರುತ್ತದೆ.|
ಕಮಾಂಡ್ ಅಂಟ್ರೋಲ್ ಸೆಂಟರ್ ಫೇಸ್-2 ಟೆಂಡರ್ ನಲ್ಲಿ ಟೆಕ್ನಸಿಸಿ ಸೆಕ್ಯೂರಿಟಿಸ್ ಪ್ರೈವೆಟ್ ಅಮಿಟೆಡ್ ಎಂಬ ಕಂಪೆನಿಯು ಅರ್ಹ ಕಂಪೆನಿ ಮತ್ತು ಸಕ್ಸಸ್ ಪುಲ್ ಬಿಡ್ಡರ್ ಎಂದು ಘೋಷಣೆಯಾಗಿರುತ್ತದೆ.
• ಆದರೆ ಈ ಕಂಪೆನಿಯು ಭೋಪಾಲ್ ಮತ್ತು ಘಾಜಿಯಾಬಾದ್ ನಲ್ಲಿ ಇಂತದ್ದೇ ಯೋಜನೆ ಅನಷ್ಠಾನ ಮಾಡುವಲ್ಲಿ ವೈಫಲ್ಯವನ್ನು ಅಂಡು ಕಪ್ಪು ಪಟ್ಟಿಗೆ ಸೇರ್ಪಡೆಯಾಗಿರುತ್ತದೆ. ಈ ಕಂಪೆನಿಗೆ ಈ ಯೋಜನೆ ಸಿಗುವಂತೆ ಮಾಡಲು ಈ ಯೋಜನೆಯ ಕನ್ಸಲೆಂಟ್ ಇರುವಂತಹ ನೈಸ್ ಎನ್ ಸೋನ್ ಕಂಪೆನಿಯ ಕೈಯಾಡಿಸಿರುತ್ತದೆ. ಆಗಿರುವಂತಹ ಸ್ಟೆಪ್-ಎನ್-ಸ್ಟೋನ್ ಕಂಪೆನಿಯು ಕೈಯಾಡಿಸಿರುತ್ತದೆ, ಕಾರಣ ಕಂಪೆನಿಯು ಕಂಪೆನಿಯ ಅಧಿಕಾರಿಗಳ ಪ್ರೀತಿಯ ಕಂಪೆನಿಯಾಗಿರುತ್ತದೆ. ಉಳಿದ ಅಂಪನಿಗಳನ್ನು ಹೊರ ಹಾಕುವಲ್ಲಿ ಟೆಂಡರ್ ಇವಲ್ಯುವೇಷನ್ ಸಮಿತಿಯ ಮೇಲೆ ಒತ್ತಡ ಎಂದು ಯಶಸ್ಸನ್ನು ಕಂಡಿದೆ. ಯಾಕೆಂದರೆ ಈ ಕನ್ಸಲ್ಟೆಂಟ್ ಕಂಪೆನಿ ಕೂಡ ಇವ್ಯಾಲ್ಯುವೇಷನ್ ಸಮಿತಿಯ ಸದಸ್ಯನೇ ಆಗಿರುತ್ತದೆ.
ಈ ಕನ್ಸಲ್ಟೆಂಟ್ ಕಂಪೆನಿಯು ಸ್ವತಃ ರಡಾರ್ ಹಾರ್ಡವೇರ್ ಡಿಸ್ಟಿಬ್ಯೂಟರ್ ಆಗಿದ್ದು ಅವರ ಅ ಹಾರ್ಡ್ವೇರ್ ನ್ನು ಈ ಟೆಕ್ನಾಸಿಸ್ ಕಂಪೆನಿಯು ಖರೀದಿ ಮಾಡಲು ಸಂಚು ಮಾಡಿದ್ದು, ಹಾಗೂ ಈ ಯೋಜನೆಗೆ ಬೇಕಾದಂತಹ ಇತರ ಎಲ್ಲಾ ಇಲೆಕ್ಟ್ರಾನಿಕ್ ಡಿವೈಸ್ ಗಳನ್ನು ಇವರು ಹೇಳಿದ ಕಂಪೆನಿಯಿಂದ ಖರೀದಿ ಮಾಡಲು ಸಂಚು ನಡೆಸಿದ್ದು, ಇದರಿಂದ ಕನ್ಸಲೆಂಟ್ ಕಂಪೆನಿಯು ಮಂಗಳೂರು ಸ್ಮಾರ್ಟ್ ಸಿಟಿ ಕಂಪೆನಿಯಿಂದ ಸರ್ವಿಸ್ ಚಾರ್ಜ್ ಮಾತ್ರವಲ್ಲದೇ ಡಿವೈಸ್ ಗಳನ್ನು ಖರೀದಿ ಮಾಡುವಲ್ಲಿ ಕೋಟಿಗಟ್ಟಲೆ ಕಮಿಷನ್ ಪಡೆಯಲು ಸಂಚು ನಡೆಸಿರುತ್ತದೆ.
ಇದು ಮಾತ್ರವಲ್ಲದೇ ಇದೇ ಆನ್ಸಲೆಂಟ್ ಕಂಪೆನಿಯು ಈ ಯೋಜನೆಗೆ ಬೇಕಾದಂತಹ ರಿಕ್ವೆಸ್ಟ್ ಫಾರ್ ಪ್ರೋಪೋಸಲ್ ತಯಾರಿ ಮಾಡಿರುತ್ತದೆ. ಈ ಯೋಜನೆಯ ತಾಂತ್ರಿಕ ಮತ್ತು ಡಿವೈಸ್ಗಳನ್ನು ಡಿಪಿಆರ್ ಗಳಲ್ಲಿ ಹಾಕುವಂತಹ ಸಂಧರ್ಭದಲ್ಲಿ ಈ ಕಂಪೆನಿಗೆ ಸಂಭಂಧ ಇರುವಂತಹ ಅಂಪೆನಿಗಳು ತಯಾರಿಸುವ ಡಿವೈಸ್ಗಳ ಸ್ಪೆಸಿಫಿಕೇಷನ್ಗಳನ್ನು ಇಳವಡಿಸಿರುತ್ತದೆ. ಯಾಕೆಂದರೆ ಈ ಸ್ಪೆಸಿಫಿಕೇಷನ್ ಇರುವ ಹಾರ್ಡ್ವೇರ್ಗಳು, ಕೆಲವೇ ಅಂಪೆನಿಗಳಿಂದ ಖರೀದಿ ಮಾಡುವಂತೆ ಇದ್ದು, ಇದು ಈ ಕನ್ಸಲ್ಲೆಂಟ್ ಕಂಪೆನಿಗೆ ಹತ್ತಿರವಿರುವ ಕಂಪೆನಿಗಳಾಗಿರುತ್ತವೆ. ಈ ಆನ್ಸಸ್ಟೆಂಟ್ ಕಂಪೆನಿಗೆ ಕೇವಲ 3 ವರ್ಷದ ಪರಿಣತಿ ಇದ್ದು, ಸ್ಕಾರ್ಟ್ ಸಿಟಿ ಕಂಪೆನಿಯ ಮೇಲಾಧಿಕಾರಿಗಳ ಕೃಪಾಕಟಾಕ್ಷದಿಂದ ಕಮಾಂಡ್ ಕಂಟ್ರೋಲ್ ಸೆಂಟರ್ ಗೆ ಕನ್ಸಲೆಂಟ್ ಆಗಿ ಆಯ್ಕೆಯಾಗಿರುತ್ತದೆ.
ಈ ಮೊದಲು ವಾಡಿಯ ಟಿನ್ನೋ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಇವರು ಕಮಾಂಡ್ ಕಂಟ್ರೋಲ್ ಸೆಂಟರಿಗೆ ಸಿ-ಡ್ಯಾಕ್ ಎಂಬ ಪಬ್ಲಿಕ್ ಸೆಕ್ಟರ್ ಪಿ.ಎಸ್.ಯು ಕಂಪೆನಿಯನ್ನು ಕನ್ಸಲೆಂಟ್ ಆಗಿ ಪಡೆದುಕೊಂಡಿತ್ತು. ಸುಮಾರು 6 ತಿಂಗಳಿಂದ ಈ ಯೋಜನೆ ಅನುಷ್ಠಾನ ಮಾಡುವ ಬಗ್ಗೆ ಯಾವುದೇ ಪ್ರಗತಿ ಇಗಿರುವುದಿಲ್ಲ. ಇದಕ್ಕೆ ಕಾರಣ ಏನು?..
DAKSHINA KANNADA
ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.
Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
DAKSHINA KANNADA
ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!
ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.
ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.
ಪೊಲೀಸ್ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.
ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.
ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.
ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
DAKSHINA KANNADA
ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!
ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್ನಲ್ಲಿರುವ ಕ್ಯಾಂಟೀನ್ನಲ್ಲಿ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.
ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫಯಾಜ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.