LATEST NEWS
ಅಪಹರಣಗೊಂಡಿದ್ದ ರಾಜಸ್ಥಾನದ 38 ಮಹಿಳೆಯರು, ಮಕ್ಕಳನ್ನು ರಕ್ಷಿಸಿದ ಪೊಲೀಸರು..!
ಅಪಹರಣಗೊಂಡಿದ್ದ ರಾಜಸ್ಥಾನದ 38 ಮಹಿಳೆಯರು, ಮಕ್ಕಳನ್ನು ರಕ್ಷಿಸಿದ ಪೊಲೀಸರು..!
ರಾಜಸ್ಥಾನ:ಝಾಲವರ್ನ ಉನ್ಹೆರ್ ಪೊಲೀಸ್ ಠಾಣೆ ಪ್ರದೇಶದ ಬಾಮನ್ ದೇವರಿಯನ್ ಗ್ರಾಮದಲ್ಲಿ ಸುಮಾರು 100 ಜನರಿಂದ ಅಪಹರಿಸಲ್ಪಟ್ಟ 38 ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ, ಎಸ್ಪಿ ಡಾ. ಕಿರಣ್ ಕಾಂಗ್ ಸಿಂಧು, ರಾಜಸ್ಥಾನದ ಝಾಲವರ್ನಲ್ಲಿರುವ ಉನ್ಹೆರ್ ಪೊಲೀಸ್ ಠಾಣೆ ಪ್ರದೇಶದ ಬಾಮನ್ ದೇವರಿಯನ್ ಗ್ರಾಮಕ್ಕೆ ಸುಮಾರು 100 ಜನ ಶಸ್ತ್ರ ಸಜ್ಜಿತರಾಗಿ ಬಸ್ ಮತ್ತು ಇತರ ವಾಹನಗಳಲ್ಲಿ ಬಂದು ಗ್ರಾಮದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿದ್ದಾರೆ’ ಎಂದು ಸಿಂಧು ಹೇಳಿದ್ದಾರೆ.
ಮಾಹಿತಿ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿ 38 ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರು ಜನರು ಮತ್ತು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
LATEST NEWS
WATCH : ಪತಿ ಬಿಟ್ಟು ಪರಪುರುಷನೊಂದಿಗೆ ಜಾಲಿ ರೈಡ್; ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಾಕೆಗೆ ಪತಿ ಏನು ಮಾಡ್ದ ಗೊತ್ತಾ!?
ಮಂಗಳೂರು/ ಹರಿಯಾಣ : ಇತ್ತೀಚೆಗೆ ದಾಂಪತ್ಯ ಜೀವನದಲ್ಲಿ ಬಿರುಕು ಸಾಮಾನ್ಯವಾಗಿದೆ. ಅನೈತಿಕ ಸಂಬಂಧಗಳೂ ಹೆಚ್ಚಾಗಿವೆ. ಇದೀಗ ಅಂತಹುದೇ ಒಂದು ಘಟನೆ ನಡೆದಿದೆ. ಆದರೆ, ಇಲ್ಲಿ ಪತ್ನಿ ಪರಪುರುಷನೊಂದಿಗೆ ಇದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾಳೆ. ಅಷ್ಟೇ ಅಲ್ಲ, ಧರ್ಮದೇಟೂ ತಿಂದಿದ್ದಾಳೆ.
ಹರಿಯಾಣದ ಪಂಚಕುಲದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವೀಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
ವೀಡಿಯೋದಲ್ಲಿ ಏನಿದೆ?
ಪಂಚಕುಲದ ಸೆಕ್ಟರ್ 26ರ ಉದ್ಯಾನವನದಲ್ಲಿ ಪತ್ನಿ ಬೇರೊಬ್ಬ ಪುರುಷನೊಂದಿಗೆ ಕಾರಿನಲ್ಲಿದ್ದಳು. ಇದನ್ನು ಗಮನಿಸಿದ ಪತಿ ಬ್ಯಾಟಿನಿಂದ ಕಾರಿನ ಕಿಟಕಿ ಗಾಜು ಒಡೆದಿದ್ದಾನೆ. ಅಷ್ಟು ಮಾತ್ರವಲ್ಲ, ಅವಳನ್ನು ಹೊರಗೆಳೆದು ನಡುರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾನೆ.
ಇದನ್ನೂ ಓದಿ : ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಈ ದೃಶ್ಯಾವಳಿಗಳನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದು, ವೀಡಿಯೋ ವೈರಲ್ ಆಗುತ್ತಿದೆ.
ಪತಿ ಬಂಧನ :
ಇನ್ನು ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಘಟನೆಯ ಬೆಂಬತ್ತಿದ್ದಾರೆ. ಪತ್ನಿಯ ದೂರಿನ ಆಧಾರದ ಮೇಲೆ ಪಂಚಕುಲದ ಸೆಕ್ಟರ್ 26ರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಕೆಜಿಎಫ್ ಹೊಗಳಿದ್ದ ಯೂಟ್ಯೂಬರ್!
ಮುಂಬೈ : ಖ್ಯಾತ ಯೂಟ್ಯೂಬರ್ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಪ್ರಖ್ಯಾತರಾಗಿರುವ ಅಬ್ರದೀಪ್ ಸಹಾ ಇಹಲೋಕ ತ್ಯಜಿಸಿದ್ದಾರೆ. ಅಂಗ್ರಿ ರ್ಯಾಂಟ್ಮ್ಯಾನ್ ಎಂದೇ ಖ್ಯಾತರಾಗಿರುವ ಅಬ್ರದೀಪ್ ಸಹಾ ತಮ್ಮ 27 ನೇ ವಯಸ್ಸಿಗೆ ಅಸುನೀಗಿದ್ದಾರೆ. ಅವರು ಏಪ್ರಿಲ್ 16 ರಂದು ವಿ*ಧಿವಶರಾಗಿದ್ದಾರೆ. ಅವರ ನಿ*ಧನದ ಸುದ್ದಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.
ಅಂಗ್ರಿ ರಾಂಟ್ ಮ್ಯಾನ್ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಕಳೆದ ತಿಂಗಳು ಅಪರೇಷನ್ ಗೆ ಒಳಗಾಗಿದ್ದರು. ಅವರ ಸ್ಥಿತಿ ಗಂಭೀರವಾಗಿದೆ. ಐಸಿಯುವಿನಲ್ಲಿದ್ದಾರೆ ಎಂದು ಹೇಳಲಾಗಿತ್ತು. ಕಳೆದೊಂದು ತಿಂಗಳಿಂದ ಅಬ್ರದೀಪ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರಲಿಲ್ಲ. ಹಾಗಾಗಿ, ಈ ಸುದ್ದಿ ಖಚಿತ ಎಂದೇ ಹೇಳಲಾಗಿತ್ತು. 11 ದಿನಗಳ ಹಿಂದೆ ಅವರ ತಂದೆ ಅಭಿಮಾನಿಗಳಿಗೆ, ಐಸಿಯುನಲ್ಲಿ ರ್ಯಾಂಟ್ಮ್ಯಾನ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದರು.
ಇದನ್ನೂ ಓದಿ : ಬೆಂಗಳೂರಿನ ಖ್ಯಾತ ಯೂಟ್ಯೂಬರ್ ಬಂಧನ; ಮುಳುವಾಯ್ತು ಆ ಒಂದು ವೀಡಿಯೋ!
ಖ್ಯಾತಿ ಕೊಟ್ಟ ಕೆಜಿಎಫ್ :
ಕೋಲ್ಕತ್ತಾದವರಾದ ಆ್ಯಂಗ್ರಿ ರ್ಯಾಂಟ್ಮ್ಯಾನ್ ಫೆಬ್ರವರಿ 19, 1996 ರಂದು ಜನಿಸಿದರು. ‘ಆಂಗ್ರಿ ರಾಂಟ್ಮ್ಯಾನ್’ ಎಂಬ ಅವರ ಯೂಟ್ಯೂಬ್ ಚಾನೆಲ್ 481k ಚಂದಾದಾರರನ್ನು ಮತ್ತು Instagram ನಲ್ಲಿ 119k ಫಾಲೋವರ್ಸ್ ಹೊಂದಿದ್ದರು. 2018ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಕೆಜಿಎಫ್ ಸಿನಿಮಾ ವಿಮರ್ಶೆ ಮಾಡುವ ಮೂಲಕ ಅಬ್ರದೀಪ್ ಸಹಾ ಖ್ಯಾತಿ ಗಳಿಸಿದರು.
ಕೆಜಿಎಫ್ ಸಿನಿಮಾವನ್ನು ಹೊಗಳಿದ್ದ ಅವರು, ಬಾಲಿವುಡ್ ಸಿನಿಮಾರಂಗವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾ ಹೇಗೆ ಮಾಡಬೇಕು ಎಂದು ದಕ್ಷಿಣ ಭಾರತೀಯ ಚಿತ್ರರಂಗ ನೋಡಿ ಕಲಿಯಿರಿ ಎಂದು ಹೇಳಿದ್ದರು. ಈ ವಿಚಾರ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
- LATEST NEWS7 days ago
‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
- DAKSHINA KANNADA7 days ago
ಬತ್ತೇರಿ ಹೆಸರು ‘ಗಣಪತಿ ವೆಟ್ಟಂ’… ಟೀಕೆಗೆ ಗುರಿಯಾದ ಸುರೇಂದ್ರನ್ ಹೇಳಿಕೆ.
- LATEST NEWS7 days ago
ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ ಸೂಪರ್ ಹಿಟ್ ಧಾರಾವಾಹಿ ‘ಕೃಷ್ಣ ರುಕ್ಮಿಣಿ’ ನಟಿ
- chikkamagaluru6 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!