Connect with us

    ದೇರೆಬೈಲ್ ಪಶ್ಚಿಮ ವಾರ್ಡಿನ ಅಭಿವೃದ್ಧಿಗೆ 5 ಕೋಟಿ ಅನುದಾನ: ಶಾಸಕ ಕಾಮತ್

    Published

    on

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ಪಶ್ಚಿಮ ವಾರ್ಡ್ ನ ಸಮಗ್ರ ಅಭಿವೃದ್ಧಿಗೆ 5.15 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಕಳೆದ ಕೆಲ ಸಮಯದ ಹಿಂದೆ ಸಾರ್ವಜನಿಕರು ತಮ್ಮ ಪರಿಸರದಲ್ಲಿ ಆಗಬೇಕಿರುವ ಕಾಮಗಾರಿಗಳ ಕುರಿತು ಮನವಿ ನೀಡಿದ್ದರು. ಹಾಗಾಗಿ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಯೋಜನೆ ಹಾಕಲಾಗಿದೆ ಎಂದವರು ತಿಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಿಂದ 111.50 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಕೊಟ್ಟಾರ ಕಲ್ಬಾವಿ ರಸ್ತೆಯ ಸಾಗರ್ ಕೋರ್ಟಿನ ಮುಖ್ಯ ರಸ್ತೆಯ ಸುಂದರ್ ಗಾರ್ಡನ್ ವರೆಗಿನ ರಸ್ತೆ ಅಭಿವೃದ್ಧಿಗೆ 51 ಲಕ್ಷ, ಕೊಟ್ಟಾರ ಇನ್ಫೋಸಿಸ್ ಹಿಂದುಗಡೆ ರಸ್ತೆ ಕಾಂಕ್ರೀಟೀಕರಣಕ್ಕೆ 1.5 ಕೋಟಿ ಹಾಗೂ ತಂತ್ರಿಲೈನ್ ಬಳಿ ಕಾಲುಸಂಕ ನಿರ್ಮಾಣ ಕಾಮಗಾರಿಗೆ 10:50 ಲಕ್ಷ ಒದಗಿಸಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

    ಮಳೆಹಾನಿ ಪರಿಹಾರ ನಿಧಿಯಿಂದ 25 ಲಕ್ಷ ಅನುದಾನ ಬಿಡುಗೊಳಿಸಿದ್ದು. ಅಬ್ಬಕ್ಕ ಬಡಾವಣೆಯ ಮಣ್ಣಿನ ರಸ್ತೆಗೆ ಡಾಮರೀಕರಣಕ್ಕೆ 5 ಲಕ್ಷ, ಸುಂಕದಕಟ್ಟೆ ಬಳಿ ತಡೆಗೋಡೆ ದುರಸ್ತಿ ಕಾಮಗಾರಿಗೆ 5 ಲಕ್ಷ, ದೇರೆಬೈಲ್ ಸುಂಕದಕಟ್ಟೆಯಲ್ಲಿ ತಡೆಗೋಡೆ ರಚನೆ ಕಾಮಗಾರಿಗೆ 5 ಲಕ್ಷ, ಕಲ್ಲುರ್ಟಿ-ಪಂಜುರ್ಲಿ ದೈವಸ್ಥಾನ ಹೊರ ಭಾಗದ ತಡೆಗೋಡೆ ರಚನೆ ಕಾಮಗಾರಿಗೆ 5 ಲಕ್ಷ, ಅಬ್ಬಕ್ಕನಗರ ಬಳಿ ಚರಂಡಿ ದುರಸ್ತಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ 5 ಲಕ್ಷ ಅನುದಾನ ಒದಗಿಸಲಾಗಿದೆ.

    ಇನ್ನು ಮುಖ್ಯಮಂತ್ರಿ ವಿಶೇಷ ಅನುದಾನದಡಿ 20.44 ಲಕ್ಷ ಮೀಸಲಿಡಲಾಗಿದೆ. ಅಶೋಕನಗರ ಹೊಯಿಗೆ ಬೈಲ್ ಬಳಿ ಚರಂಡಿಯ ಬದಿಗೋಡೆ ನಿರ್ಮಾಣ ಕಾಮಗಾರಿಗೆ 11.35 ಲಕ್ಷ, ಸುಂಕದಕಟ್ಟೆಯ ಬಳಿ ತಡೆಗೋಡೆ ರಚನೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ 9.09 ಲಕ್ಷ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದರು.

    ಮಹಾನಗರ ಪಾಲಿಕೆ ಸಾಮಾನ್ಯ ನಿಧಿ ಅನುದಾನದಲ್ಲಿ 28.55 ಲಕ್ಷ ಅನುದಾನ ಜೋಡಿಸಲಾಗಿದ್ದು, ಅದರಲ್ಲಿ ಸುಂಕದಕಟ್ಟೆಯಲ್ಲಿ 2 ಕಡೆಗಳಲ್ಲಿ ತಡೆಗೋಡೆ ರಚನೆ ಕಾಮಗಾರಿಗಳಿಗೆ 10 ಲಕ್ಷ, ಸುಂಕದಕಟ್ಟೆಯ ಕಲ್ಲುರ್ಟಿ ದೈವಸ್ಥಾನ ರಸ್ತೆಯ ಬಳಿ ಕುಸಿದ ರಸ್ತೆ ಹಾಗೂ ತಡೆಗೋಡೆ ರಚನೆ ಕಾಮಗಾರಿ 4.60 ಲಕ್ಷ, ಕೊಟ್ಟಾರ ಕಲ್ಬಾವಿ ಅಡ್ಡರಸ್ತೆಯ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 6.80 ಲಕ್ಷ, ಕಲ್ಬಾವಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 7.15 ಲಕ್ಷ ಅನುದಾನ ಒದಗಿಸಲಾಗಿದೆ‌ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

    ಜೊತೆಗೆ ಪರಿಶಿಷ್ಟ ಜಾತಿ ಪಂಗಡ ನಿಧಿಯಿಂದ 20.45 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಸುಂಕದಕಟ್ಟೆ ಕಾಲೋನಿ ಅಭಿವೃದ್ಧಿ ಕಾಮಗಾರಿಗೆ 5 ಲಕ್ಷ, ಗೋಕುಲ ಡೈರಿ ಬಳಿಯ ಚರಂಡಿ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ 4 ಲಕ್ಷ, ಉರ್ವಸ್ಟೋರ್ ನ ಸುಂಕದಕಟ್ಟೆಯ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗಳ ಕಾಂಕ್ರೀಟೀಕರಣ ಕಾಮಗಾರಿಗೆ 7.45 ಲಕ್ಷ, ಜಮುನ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ 4 ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ.

    ಕೇಂದ್ರ ಸರಕಾರದ 14ನೇ ಹಣಕಾಸು ವ್ಯವಸ್ಥೆಯ ಅನುದಾನದಲ್ಲಿ 9.17 ಲಕ್ಷ ಬಿಡುಗಡೆಯಾಗಿದ್ದು ಅಶೋಕನಗರ ಹೊಯಿಗೆ ಬೈಲ್ ರಸ್ತೆಯ ಗುರುಂಪೆ ಪರಿಸರದಲ್ಲಿ ರಸ್ತೆ ಅಭಿವೃಧ್ಧಿ ಕಾಮಗಾರಿಗೆ ಅದನ್ನು ವಿನಿಯೋಗಿಸಲಾಗುವುದು ಎಂದಿದ್ದಾರೆ.

    ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಲ್ಲಿ 2 ಕೋಟಿ ಬಿಡುಗಡೆಗೊಳಿಸಲಾಗಿದ್ದು, ಸುಂಕದಕಟ್ಟೆ ಕಾಲೋನಿ ಅಭಿವೃದ್ಧಿಗೆ 1 ಕೋಟಿ ಹಾಗೂ ಅಶೋಕನಗರ ಅಸೋಕ ವಿದ್ಯಾಲಯ ಎದುರಿನಿಂದ ಉರ್ವ ವರೆಗೆ ಮುಖ್ಯರಸ್ತೆ ಅಭಿವೃದ್ಧಿಗೆ 1 ಕೋಟಿ ನೀಡಲಾಗಿದೆ. ದೇರೆಬೈಲ್ ಪಶ್ಚಿಮ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಈ ಎಲ್ಲಾ ಅನುದಾನಗಳನ್ನು ಜೋಡಿಸಲಾಗಿದೆ. ಮುಂದಿನ ಅವಧಿಯ ಒಳಗಾಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ

    Published

    on

    ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.

    ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

    ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.

    ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

    Continue Reading

    LATEST NEWS

    ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ

    Published

    on

    ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.

    ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.

    Continue Reading

    LATEST NEWS

    ಗೌರವಧನ ಸರಿಯಾಗಿ ನೀಡದೇ ಇದ್ದಲ್ಲಿ ಕೆಲಸ ಸ್ಥಗಿತ: ಅಂಗನವಾಡಿ ಕಾರ್ಯಕರ್ತೆಯರಿಂದ ಎಚ್ಚರಿಕೆ

    Published

    on

    ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ.

    ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

    ಪ್ರಮುಖವಾಗಿ ಗೌರವಧನವನ್ನು ಪ್ರತಿ ತಿಂಗಳ ಸರಿಯಾಗಿ ಪಾವತಿ ಮಾಡಬೇಕು ಹಾಗೂ ಮೊಟ್ಟೆ ವಿತರಣೆಗೆ ತಗಲುವ ಖರ್ಚನ್ನು ಮುಂಚಿತವಾಗಿ ನೀಡಬೇಕು ಮತ್ತು ಮಾರುಕಟ್ಟೆ ದರದಲ್ಲಿ ಏರಿಳಿತಕ್ಕೆ ತಕ್ಕಂತೆ ಮೊಟ್ಟದರವನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

    ನಮ್ಮನ್ನು ದುಡಿಸಿಕೊಳ್ಳೂತ್ತಿರುವ ಸರ್ಕಾರ ನಮಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡದೆ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸರ್ಕಾರ ಸೂಕ್ತವಾಗಿ ಸ್ಪಂಧಿಸದೇ ಇದ್ದಲ್ಲಿ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.

    Continue Reading

    LATEST NEWS

    Trending