Connect with us

    BANTWAL

    ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

    Published

    on

    ವಿಶೇಷ ವರದಿ

    ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು ವರ್ಷಗಳು ಸಂದಿವೆ.

    ಆದರೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಓರ್ವ ಇನ್ನೂ ಪೊಲೀಸರ ಕೈಗೆ ಸಿಗದೆ ಭೂಗತನಾಗಿದ್ದಾನೆ. ಇದೇ ಪ್ರಕರಣದ ಮತ್ತೊಂದು ಪ್ರಮುಖ ಅಂಶ ಎಂದರೆ ಮಡಿವಾಳ ಹತ್ಯೆ ಆರೋಪದ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ.

     ಕೊಲೆಯಾದ ಶರತ್‌ ಮಡಿವಾಳ

    18 ಮಂದಿಯ ಬಂಧನ-ರಿಲೀಸ್‌
    ಬಂಟ್ವಾಳದ ಆರ್‌ ಎಸ್‌ ನಾಯಕ ಶರತ್‌ ಮಡಿವಾಳ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಬಂಟ್ವಾಳದ ಸಜಿಪ ಮುನ್ನೂರಿನ ಆಲಾಡಿಯ ಶರೀಫ್‌ ಸಹಿತ ಒಟ್ಟು 18 ಜನರನ್ನು ಪೊಲೀಸರು ಬಂಧಿಸಿದ್ದರು. ಇದರಲ್ಲಿ ಖಲಂದರ್‌ ನಿಸಾರ್‌ ಎಂಬಾತ ಸುಮಾರು ಒಂದೂವರೆ ವರ್ಷಕ್ಕಿಂತಲೂ ಅಧಿಕ ಸಮಯ ತಲೆಮರೆಸಿಕೊಂಡಿದ್ದ.

    ಕೊನೆಗೆ 2019 ಮಾ.1 ರಂದು ಬಂಟ್ವಾಳ ನ್ಯಾಯಲಯಕ್ಕೆಖಲಂದರ್ ಶರಣಾಗಿದ್ದ. ಆದರೆ ಕೃತ್ಯಕ್ಕೆ ಸಹಕರಿಸಿದ್ದ ಆರೋಪಿ ಇಬ್ರಾಹಿಂ ನಂದಾವರ ಇನ್ನು ಕೂಡ ತಲೆಮರೆಸಿಕೊಂಡಿದ್ದು ಆತನನ್ನು ಹುಡುಕಿ ತರುವುದು ಪೊಲೀಸರಿಗೆ ಸವಾಲಾಗಿದೆ. ಸದ್ಯ ಈ ಪ್ರಕರಣದಲ್ಲಿ ಬಂಧಿತರೆಲ್ಲರೂ ಜಾಮೀನಿನ ಮೇಲೆ ಹೊರಗಿದ್ದಾರೆ.

                ಶರತ್‌ ಮಡಿವಾಳ ಶವಯಾತ್ರೆ

    ಎಲ್ಲಿದ್ದಾನೆ ಇಬ್ರಾಹಿಂ ನಂದಾವರ?
    ಶರತ್‌ ಮಡಿವಾಳ ಹತ್ಯೆ ಪ್ರಕರಣದಲ್ಲಿ ಇಬ್ರಾಹಿಂ ನಂದಾವರ ಸಹಕರಿಸಿದ್ದ ಜೊತೆಗೆ ಕೊಲೆ ನಡೆದಾಗ ಬಂಟ್ವಾಳ ಆಸುಪಾಸಿನಲ್ಲಿದ್ದ. ಆದರೆ ತನಿಖೆಯ ಜಾಡು ಹಿಡಿದ ಪೊಲೀಸರ ಕಣ್ಣು ಇಬ್ರಾಹಿಂ ಮೇಲೆ ಬೀಳುತ್ತಿದ್ದಂತೆ ಆತ ಕೊಲ್ಲಿ ರಾಷ್ಟ್ರಕ್ಕೆ ಎಸ್ಕೇಪ್‌ ಆಗಿದ್ದಾನೆ ಎಂದು ಹೇಳಲಾಗುತ್ತಿದೆ.

    ಆದ್ರೆ ಈವರೆಗೆ ಭಾರತಕ್ಕೆ ಹಿಂತಿರುಗಿಲ್ಲ ಅಥವಾ ಆತನನ್ನು ಭಾರತಕ್ಕೆ ಕರೆ ತರಲು ಬೇಕಾದ ಫೈಲ್ ಪುಟಪ್ ಗೃಹ ಇಲಾಖೆ ಮಾಡಿಲ್ಲ ಪೊಲೀಸ್‌ ಇಲಾಖೆ ಮೂಲಗಳು ತಿಳಿಸಿವೆ.

    ಈತನ ವಿರುದ್ಧ ದೇಶಾದ್ಯಂತ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಸಹಿತ ಎಲ್ಲೆಡೆ ಸರ್ಚ್‌ ವಾರೆಂಟ್‌ ಜಾರಿಯಲ್ಲಿದೆ ಅಂತನೂ ಪೊಲೀಸ್ ಇಲಾಖೆ ಹೇಳುತ್ತಿದೆ.

    ಬೆಂಗಳೂರಿನಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ

    ಓರ್ವ ಆರೋಪಿ ಮೇಲೆ ನಡೆದಿತ್ತು ಕೊಲೆಯತ್ನ?
    ಇದೇ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿರುವ ಆರೋಪಿ ಶರೀಫ್ ಎಂಬಾತನ ಮೇಲೆ 2020ರ ಆ.6 ರಂದು ಬಂಟ್ವಾಳದ ಆತನ ಮನೆ ಬಳಿಯೇ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿತ್ತು. ಈ ವೇಳೆ ಆತ ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದ.

    ಎಸ್ಪಿ ಸೇರಿ ಹಲವರಿಗೆ ವರ್ಗಾವಣೆ ಶಿಕ್ಷೆ ವಿಧಿಸಿದ್ದ ಪ್ರಕರಣ
    ಶರತ್‌ ಮಡಿವಾಳ ಕೊಲೆ ಪ್ರಕರಣ ಕರಾವಳಿಯಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ರೆ ರಾಜ್ಯ ರಾಜಕೀಯವನ್ನು ಅಲ್ಲೋಲ ಕಲ್ಲೋಲ ಮಾಡಿತ್ತು. ಆ ಸಮಯದಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವಿತ್ತು.

    ಸುಧೀರ್ ಕುಮಾರ್ ರೆಡ್ಡಿ

    ಬಿ. ರಮಾನಾಥ್‌ ರೈ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಪ್ರಕರಣ ನಡೆದ ಸಂದರ್ಭ ಆಗಿನ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಭೂಷಣ್ ಜಿ. ಬೊರಸೆ, ಬಂಟ್ವಾಳ ಡಿವೈಎಸ್‌ಪಿ ರವೀಶ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಮಂಜಯ್ಯ, ಬಂಟ್ವಾಳ ನಗರ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ರಕ್ಷಿತ್‌ ಅವರು ಸಾಮೂಹಿಕವಾಗಿ ವರ್ಗಾವಣೆಯಾಗಿದ್ದರು.

    ಭೂಷಣ್ ಜಿ. ಬೊರಸೆ ಸ್ಥಳಕ್ಕೆ ಸುಧೀರ್ ಕುಮಾರ್ ರೆಡ್ಡಿ ಎಸ್ಪಿಯಾಗಿ ನೇಮಕವಾಗಿದ್ದರು. ಅದಾದ ನಂತರದಲ್ಲಿ ಇಬ್ರಾಹಿಂ ನಂದಾವರ ಬಿಟ್ಟು ಉಳಿದೆಲ್ಲಾ ಆರೋಪಿಗಳ ಬಂಧನವಾಗಿತ್ತು.

    2 ತಿಂಗಳು ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ
    2017 ಜು.4 ರಂದು ರಾತ್ರಿ 9.30ಕ್ಕೆ ಬಿ.ಸಿ.ರೋಡಿನಲ್ಲಿ ದುಷ್ಕರ್ಮಿಗಳಿಂದ ಶರತ್ ಮಡಿವಾಳನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು.

    ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶರತ್ ಮಡಿವಾಳ ಜು. 7ರಂದು ಮಧ್ಯರಾತ್ರಿ 12.30ಕ್ಕೆ ಚಿಕಿತ್ಸೆಫಲಕಾರಿಯಾಗದೇ ಮೃತಪಟ್ಟಿದ್ದರು.

      ಶರತ್‌ಗೆ ನಿರ್ಮಿಸಿದ ಸ್ಮಾರದ ಮುಂದೆ ಆತನ ತಂದೆ 

    ಇದಾದ ಮರುದಿನ ಮಂಗಳೂರಿನ ಆಸ್ಪತ್ರೆಯಿಂದ ಆರಂಭವಾಗಿದ್ದ ಶವಯಾತ್ರೆ ಬಿ.ಸಿ.ರೋಡ್ ತಲುಪುವ ಹೊತ್ತಿಗೆ ಕಲ್ಲು ತೂರಾಟ, ಗಲಭೆನಡೆದು ಹೋಗಿ ಬಂಟ್ವಾಳ ಪ್ರದೇಶ ಅಕ್ಷರಶ ರಣರಂಗವಾಗಿತ್ತು. ಪೊಲೀಸರು ಹರ ಸಾಹಸ ಪಟ್ಟು ಪರಿಸ್ಥಿತಿಯನ್ನು ನಿಭಾಯಿಸಿ ನಿಷೇಧಾಜ್ಞೆ ಹೇರಲಾಗಿತ್ತು.

    Click to comment

    Leave a Reply

    Your email address will not be published. Required fields are marked *

    BANTWAL

    ಕಾರು-ಲಾರಿ ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದ ವ್ಯಕ್ತಿ ಗಂಭೀ*ರ

    Published

    on

    ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಕ್ರೆಟ್ಟಾ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳು ಅತ್ಯಂತ ವೇಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ನಡೆದ ಈ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಜಿಪ ಎಂಬಲ್ಲಿ ಅಂಗಡಿ ನಡೆಸುತ್ತಿದ್ದ ಬೋಳಂಗಡಿಯ ಮುಸ್ತಾಫ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಕಾರಿನಲ್ಲಿದ್ದ ಮುಸ್ತಾಫ ಅವರಿಗೆ ಗಂಭೀರ ಗಾಯವಾಗಿದೆ.

     

    ಅಪಘಾತ ನಡೆದ ತಕ್ಷಣ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದ ಮುಸ್ತಾಫ ಅವರನ್ನು ಕಾರಿನಿಂದ ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.

    ಪ್ರೀತಿಗಾಗಿ ಪೀಡಿಸಿದ ಅನ್ಯಮತೀಯ ಯುವಕ ಪೊಲೀಸ್ ವಶಕ್ಕೆ..!

    ತೀವ್ರ ಸ್ವರೂಪದ ಗಾಯವಾಗಿರುವ ಮುಸ್ತಾಫ ಅವರಿಗೆ ಬಂಟ್ವಾಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ. ಗಾಯಾಳು ಮುಸ್ತಾಫ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

    Continue Reading

    BANTWAL

    ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು : ರಾಜ್ಯದ ಹಲವು ಭಾಗಗಳು ಭಾರಿ ಮಳೆಯಿಂದ ಹೈರಾಣಾಗಿದ್ದವು. ಆ ಬಳಿಕ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಆರ್ಭಟಿಸುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಎಲ್ಲೆಲ್ಲಿ ಮಳೆ ?

    ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

    ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ರಭಸವಾಗಿ ಗಾಳಿ ಬೀಸಲಿದೆ. ಜೊತೆಗೆ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

    ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಿದೆ.

    Continue Reading

    BANTWAL

    ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಪ್ರಯಾಣಿಕರು ಗಂಭೀ*ರ

    Published

    on

    ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಆ.16ರಂದು ಮುಂಜಾನೆ ಸಂಭವಿಸಿದೆ.

    ಬಸ್ಸು ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ, ಆದರೆ ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿನ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.  ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

    Continue Reading

    LATEST NEWS

    Trending