DAKSHINA KANNADA
ಪುತ್ತೂರು: 56ನೇ ವರ್ಷದ ಗಣೇಶನ ವೈಭವದ ಶೋಭಾಯಾತ್ರೆ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಾಲ್ಕು ದಿನಗಳ ಕಾಲ ಪೂಜಿಸಲ್ಪಟ್ಟ 56ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶ್ರೀ ಗಣೇಶ ವಿಗ್ರಹದ ವೈಭವದ ಶೋಭಾಯಾತ್ರೆಯು ಸಂಜೆ ಚಾಲನೆ ನೀಡಲಾಯಿತು.
ಶೋಭಾಯಾತ್ರೆಯ ಮುನ್ನ ಕುಂಟಾರು ಗುರು ತಂತ್ರಿಯವರು ಶ್ರೀ ಗಣೇಶನಿಗೆ ಮಂಗಳಾರತಿ ಮಾಡಿದರು.
ಸಭಾ ವೇದಿಕೆ ಬಳಿ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್, ಅಧ್ಯಕ್ಷ ಶಶಾಂಕ ಕೊಟೇಚಾ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ತೆಂಗಿನ ಕಾಯಿ ಒಡೆಯುವ ಮೂಲಕ ಶ್ರೀ ಗಣೇಶನ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ಸುರೇಶ್ ಪುತ್ತೂರಾಯ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಮೆರವಣಿಗೆಯಲ್ಲಿ ಶಾಸಕ ಸಂಜೀವ ಮಠಂದೂರು ಜೊತೆಯಾಗಿ ಸಾಗಿದರು. ಶ್ರೀ ಗಣೇಶನ ವಿಗ್ರಹವನ್ನು ಹೊತ್ತಿರುವ ಮೂಷಿಕವಾಹನ ರಥವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಿಂದ ಹೊರಟು,
ನೆಲ್ಲಿಕಟ್ಟೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮೂಲಕ ಕೋರ್ಟುರಸ್ತೆಯಾಗಿ ಬೊಳುವಾರಿಗೆ ತೆರಳಿ ಅಲ್ಲಿಂದ ವೈವಿಧ್ಯಮಯ ಸ್ತಬ್ದಚಿತ್ರಗಳೊಂದಿಗೆ ಅದ್ಧೂರಿಯ ಶೋಭಾಯಾತ್ರೆ ಪ್ರಾರಂಭಗೊಂಡು ಮುಖ್ಯರಸ್ತೆಯಾಗಿ ದರ್ಬೆಗೆ ತೆರಳಿ ಅಲ್ಲಿಂದ ಶ್ರೀಧರ್ ಭಟ್ ಎಂ.ಟಿ.ರಸ್ತೆಯಾಗಿ ಆಗಮಿಸಿ ಶ್ರೀ ಮಹಾಲಿಂಗೇಶ್ವರ ದೇವಳದ ರಥಬೀದಿ ಬಳಿಯ ಕೆರೆಯಲ್ಲಿ ಜಲಸ್ಥಂಭನ ನಡೆಯಿತು.
ಕಣ್ಮನ ಸೆಳೆಯುವ ವೈವಿಧ್ಯಮಯ ಸ್ತಬ್ಥ ಚಿತ್ರಗಳು, ಕೇರಳದ ಪ್ರಸಿದ್ದ ಕಲಾವಿದರಿಂದ ಚೆಂಡೆ ಕುಣಿತ, ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದವರ ನೃತ್ಯ, ಯುವಕರ ನೃತ್ಯ ಶೋಭಾಯಾತ್ರೆಗೆ ಹೆಚ್ಚಿನ ಮೆರುಗು ನೀಡಿತ್ತು. ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ದಾರಿಯುದ್ದಕ್ಕೂ ಅಲ್ಲಲ್ಲಿ ಜನ ಸಾಲು ಸಾಲಾಗಿ ನಿಂತು ಶೋಭಾಯಾತ್ರೆಯ ದೃಷ್ಯಗಳನ್ನು ವೀಕ್ಷಣೆ ಮಾಡುತ್ತಿದ್ದರು. ಅಲ್ಲಲ್ಲಿ ವಿಶೇಷ ಸುಡುಮದ್ದು ಪ್ರದರ್ಶನವೂ ನಡೆಯಿತು.
ಕಣ್ಮನ ಸೆಳೆದ 13 ಟ್ಯಾಬ್ಲೋಗಳು ಇದೆ ಸಂದರ್ಭದಲ್ಲಿ ರೋಮಾಂಚಗೋಳಿಸಿತು.
ಹಿಂದೂ ಜಾಗರಣಾ ವೇದಿಕೆಯಿಂದ ವೀರ ಸಾವರ್ಕರ್ ಮತ್ತು ಭಾರತ ಮಾತೆಯ ಭಾವ ಚಿತ್ರದೊಂದಿಗೆ ಕೊಲ್ಲುರು ಶ್ರೀ ಮೂಕಾಂಬಿಕೆ ದರ್ಶನ ಮತ್ತು ಯುವಕರು, ಯುವತಿಯರಿಂದ ನಾಸಿಕ್ ಬ್ಯಾಂಡ್, ಹಿಂಜಾವೇ ಕಾರ್ಯಕರ್ತರು ಕೇಸರಿ ಪೇಟ ತೊಟ್ಟು ಎಲ್ಲರ ಗಮನ ಸೆಳೆದರು.
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಿಂದ ಸಾವರ್ಕರ್ ಮತ್ತು ಬಾಲಗಂಗಾಧರ್ ತಿಲಕ್ ಅವರ ಭಾವ ಚಿತ್ರದ ಸ್ತಬ್ದ ಚಿತ್ರ, ತ್ರಿಶೂಲ್ ಫ್ರಂಡ್ಸ್ ನಿಂದ ಚೆಂಡೆ ಕುಣಿತ, ಪಂಚಮುಖಿ ಕೋರ್ಟು ರಸ್ತೆಯವರಿಂದ ಶಿವಾಜಿ, ಸಾಲ್ಮರ ಸತ್ಯನಾರಾಯಣ ಪೂಜಾ ಸಮಿತಿಯಿಂದ ನಂದೀಶ್ವರ, ಆಂಜನೇಯ ಮಿತ್ರ ವೃಂದ ಬೊಳುವಾರು ಮತ್ತು ತೀಯಾ ಸಮಾಜ,
ಭಾವನ ಕಲಾ ಆರ್ಟ್ ನಿಂದ ತ್ರೀನೇತ್ರ ದರ್ಶನ, ಕಬಕ ಮಹಾದೇವಿ ಯುವಕ ಮಂಡಲದ ವತಿಯಿಂದ ಭಾರತ ಮಾತೆ ಮತ್ತು ಸಾವರ್ಕರ್ ಚಿತ್ರ, ಅಭಿರಾಮ್ ಫ್ರೆಂಡ್ಸ್ ಪುತ್ತೂರು ಇವರಿಂದ ಸಂಗೀತ ನೃತ್ಯಗಳು,
ಆದರ್ಶ ಆಸ್ಪತ್ರೆಯ ವೈದ್ಯರುಗಳು ಮತ್ತು ಸಿಬ್ಬಂದಿ ವತಿಯಿಂದ ಕಮಾಲಿನಿ ಸಂಹಾರ, ನಡುಮುಂದಿಲು ಶ್ರೀ ದುರ್ಗಾ ಮಾರಿಯಮ್ಮ ಸೇವಾ ಸಮಿತಿ ಬ್ರಹ್ಮನಗರದ ಡಾ. ಪ್ರಸಾದ್ ಭಂಡಾರಿ ಅಭಿಮಾನಿ ಬಳಗದವರಿಂದ ಶಿವ ಆರಾಧನೆ,
ಕ್ಯಾಂಪ್ಕೋ ಚಾಕಲೇಟು ನೌಕರರ ಸಂಘದಿಂದ ಶಿವನ ಮಹಿಮೆ, ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಪುತ್ತೂರು ಇವರಿಂದ ಮೂಶಿಕಾಸುರ ವದೆ, ಪಡ್ನೂರು ಜನಾರ್ದನ ಯುವಕ ಮಂಡಲ, ಅನ್ನಪೂರ್ಣೇಶ್ವರಿ ಭಜನಾ ಮಂದಿರ ಪಡ್ಡಾಯೂರು,
ಸರಸ್ವತಿ ಯುವತಿ ಮಂಡಲದಿಂದ ದುರ್ಗೆ, ಜೈ ಹನುಮಾನ್ ತಂಡದಿಂದ ಸಾವರ್ಕರ್ ಹೋರಾಟದ ಮಾಹಿತಿ, ಶಿವಾಜಿ ಯುವಕ ಮಂಡಲ ಕಲ್ಲೇಗ ಸಂಗೀತ ನೃತ್ಯ ನೋಡುಗರ ಮನಸ್ಸನ್ನು ಸೂರೆಗೊಳಿಸಿತ್ತು.
ಶೋಭಾಯಾತ್ರೆಯ ಕೊನೆಯಲ್ಲಿ ಕ್ಯಾಂಪ್ಕೋ ಚಾಕಲೇಟು ನೌಕರರ ವೃಂದದಿಂದ ಬೀದಿಯನ್ನು ಶುಚಿಗೊಳಿಸುವ ಕಾರ್ಯ ಎಲ್ಲರ ಮನಸ್ಸಿಗೆ ಮೆಚ್ಚುಗೆಯಾಗಿದೆ.
bangalore
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!
ಬೆಂಗಳೂರು: ತುಳುನಾಡಿನ ದೈವರಾಧನೆಯನ್ನು ಇದೀಗ ಬೆಂಗಳೂರಿನ ಟೂರ್ ಪ್ಯಾಕೇಜ್ ಸಂಸ್ಥೆಯೊಂದು ವ್ಯವಹಾರ ಮಾಡಲು ಹೊರಟಿದೆ. ತುಳುನಡಿನ ಜನರ ನಂಬಿಕೆಯಿಂದ ದೈವರಾಧನೆ, ಭೂತಕೋಲಗಳನ್ನು ಉಳಿಸಿ ಬೆಳೆಸಿಕೊಂಡು ಬಂದರೆ ಇತ್ತ ಇದರ ಬ್ಯುಸಿನೆಸ್ ಶುರುವಾಗಿದೆ. ಇದರ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತ್ತಿದ್ದು, ತುಳುನಾಡ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭೂತಕೋಲ ಎಂಬ ಪೋಸ್ಟರ್ ರೆಡಿ ಮಾಡಿ ಅದನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡಿದ್ದಾರೆ. ಟ್ರಾವೆಲ್ ಸಂಸ್ಥೆಯೊಂದು 2024ರ ಫೆ. 10 ಹಾಗೂ 11ರಂದು ಎರಡು ದಿನದ ಟೂರ್ ಪ್ಯಾಕೇಜ್ ಅನ್ನು ಹಮ್ಮಿಕೊಂಡಿದೆ. ಅದರಲ್ಲಿ ನದಿ ಬೋಟಿಂಗ್, ಉಪ್ಪಿನಂಗಡಿ ಕಂಬಳ, ಬೊಳ್ಳಾಡಿ ಫಾರ್ಮ್ ಪಾರ್ಟಿ, ಬೊಳ್ಳಾಡಿ ಮನೆಯಲ್ಲಲಿ ಭೂತಕೋಲ, ಬೀರಮಲೆ ಬೆಟ್ಟ ಟ್ರಕ್ಕಿಂಗ್ ಇರಲಿದೆ ಎಂದು ಬರೆದುಕೊಂಡಿದ್ದಾರೆ. ಟೂರ್ ಪ್ಯಾಕೇಜ್ ನ ಮೊತ್ತ ಒಬ್ಬನಿಗೆ 2899 ರೂ. ಆಗಿರುತ್ತದೆ. ಅಲ್ಲದೆ ಆ ಪೋಸ್ಟರ್ ನಲ್ಲಿ ಬುಕ್ ಶೋ ನಲ್ಲಿ ಬುಕ್ ಮಾಡಿ ಎಂದು ಹಾಕಲಾಗಿದೆ. ಈಗಾಗಲೇ ಹಲವರು ಬುಕ್ ಮಾಡಿದರೆನ್ನಲಾಗಿದೆ. ಈ ಪೋಸ್ಟರ್ ನೋಡಿದ ಹಲವು ನೆಟ್ಟಿಗರು ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ತುಳುನಾಡಿನ ಭೂತರಾಧನೆ ಟೂರ್ ಪ್ಯಾಕೇಜ್ ಆಗಬಾರದು, ದೈವದ ಮೇಲೆ ಇರುವ ನಂಬಿಕೆಗೆ ಬೆಲೆ ಇಲ್ಲದಂತಾಗುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.
BANTWAL
Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ
ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.
ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.
124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ