Connect with us

    LATEST NEWS

    ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬ*ಲಿ – ಪ್ರಕರಣ ದಾಖಲು

    Published

    on

    ಚಿಕ್ಕಮಗಳೂರು: ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಮೃ*ತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.

    ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್, ಬಾಲಕನ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.

    ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದವು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃ*ತಪಟ್ಟಿದ್ದಾರೆ.

    ಶ*ವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃ*ತದೇಹವನ್ನು ರವಾನೆ ಮಾಡಲಾಗಿದೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.

    FILM

    ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!

    Published

    on

    ಬೆಂಗಳೂರು: ಕಿರುತೆರೆ ನಟಿ ಸುಕೃತಾ ನಾಗ್ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಎನ್ನುವ ಸುದ್ದಿ ಹರದಾಡುತ್ತಿರುವ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಮುದ್ದಾದ ಫೋಟೊಗಳನ್ನು ಶೇರ್ ಮಾಡಿದ್ದಾರೆ ನಟಿ.

    ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಸಿದ್ಧಾರ್ಥನ ತಂಗಿಯಾಗಿ ನಟಿಸಿ ಜನಪ್ರಿಯತೆ ಗಳಿಸಿದ ನಟಿ ಸುಕೃತಾ ನಾಗ್ ಇದೀಗ ಬಿಗ್ ಬಾಸ್ ಸೀಸನ್ 11 ನಲ್ಲಿ ಭಾಗವಹಿಸಲಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಸ್ಪರ್ಧಿಗಳ ಲಿಸ್ಟ್ ನಲ್ಲಿ ಸುಕೃತಾ ಹೆಸರು ಕಂಡು ಬರುತ್ತಿದೆ.

    ಅಷ್ಟಕ್ಕೂ ಸುಕೃತಾ ನಾಗ್ ಬಿಗ್ ಬಾಸ್ ಗೆ ತೆರಳಲಿದ್ದಾರ ಇಲ್ವಾ ಅನ್ನೋದು ಇನ್ನೂ ಕನ್ ಫರ್ಮ್ ಆಗಿಲ್ಲ. ಇವತ್ತು ರಾಜಾ ರಾಣಿ ಶೋ ನಲ್ಲಿ ಹೆಸರುಗಳು ರಿವೀಲ್ ಆಗಲಿದೆ. ಆವಾಗ್ಲೇ ಗೊತ್ತಾಗೋದು ಸುಕೃತಾ ನಿಜವಾಗಿಯೂ ಬಿಗ್ ಬಾಸ್ ಗೆ ಬರ್ತಿದ್ದಾರಾ ಇಲ್ವಾ ಅನ್ನೋದು. ಬಿಗ್ ಬಾಸ್ ಸುದ್ದಿಯ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಸುಕೃತಾ ಮೈಸೂರು ಸಿಲ್ಕ್ ಸೀರೆಯುಟ್ಟು ಮುದ್ದಾಗಿ ಫೋಟೊ ಶೂಟ್ ಮಾಡಿಸಿದ್ದು, ಸಾಂಪ್ರದಾಯಿಕ ಅವತಾರದಲ್ಲಿ ದೇವತೆಯಂತೆ ಕಾಣ್ತಿದ್ದಾರೆ ಅನ್ನೋದು ಸುಳ್ಳಲ್ಲ.

    ಕಳೆದ ಬಾರಿ ಅಂದ್ರೆ ಬಿಗ್ ಬಾಸ್ ಸೀಸನ್ 10ರ ಸಮಯದಲ್ಲೂ ಸುಕೃತಾ ಬಿಗ್ ಬಾಸ್ ಗೆ ಹೋಗೋದಾಗಿ ಸುದ್ದಿಯಾಗಿತ್ತು, ಆದರೆ ಕಳೆದ ವರ್ಷ ನಟಿ ಭಾಗವಹಿಸಿರಲಿಲ್ಲ. ಈ ಬಾರಿಯಾದ್ರೂ ಸುಕೃತಾ ಬಿಗ್ ಬಾಸ್ ಸೀಸನ್ 11 ರಲ್ಲಿ ಭಾಗವಹಿಸಲಿದ್ದಾರೆ ಕಾದು ನೋಡಬೇಕು.

    Continue Reading

    DAKSHINA KANNADA

    ಮಂಗಳೂರು : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

    Published

    on

    ಮಂಗಳೂರು : ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ಬಳಿ ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತ್ತು.

    ಏಕಾಏಕಿ ಕಾರಿಗೆ ಬೆಂ*ಕಿ ಹೊತ್ತಿಕೊಂಡಿದ್ದು ಸ್ಥಳೀಯರು ಬೆಂ*ಕಿಯನ್ನು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿತ್ತು. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Continue Reading

    LATEST NEWS

    ಮಗಳಿಂದಲೇ ತಾಯಿಯ ಕೊ*ಲೆ; ಕುಪ್ಪಾಣಿಯಿಂದ ಹೊ*ಡೆದು ಕೊಂ*ದ ಅಪ್ರಾಪ್ತೆ

    Published

    on

    ಮಂಗಳೂರು/ಅಸ್ಸಾಂ: ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲಿ ಒಂದೋ, ಎರಡೋ ಮಕ್ಕಳಿರುತ್ತಾರೆ. ಮಕ್ಕಳಿಗೆ ಸ್ವಲ್ಪವೂ ಕಷ್ಟ ತೋರದಂತೆ ಪೋಷಕರು ಸಾಕಿರುತ್ತಾರೆ. ಆದರೆ, ವಿಪರ್ಯಾಸ ಅಂದ್ರೆ ಇಲ್ಲಿ ಮುದ್ದಾಗಿ ಸಾಕಿದ ಮಗಳ ಕೈಯಲ್ಲೇ ತಾಯಿ ಹತ್ಯೆ*ಯಾಗಿದ್ದಾಳೆ.
    ಅಪ್ರಾಪ್ತ ಮಗಳೊಬ್ಬಳು ಅಮ್ಮನಿಗೆ ಕುಟ್ಟಾಣಿಯಿಂದ ಹೊಡೆದು ಕೊಂ*ದ ಆ*ಘಾತಕಾರಿ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಅವಳು ಉದಯೋನ್ಮುಖ ಟೆನ್ನಿಸ್ ಪ್ಲೇಯರ್ ಆಗಿದ್ದಳು ಎಂದು ತಿಳಿದು ಬಂದಿದೆ. ಮಂಜುದೇವಿ(40) ಮಗಳಿಂದಲೇ ಹತ್ಯೆ*ಯಾದ ತಾಯಿ.
    ಯುವತಿಯ ತಂದೆ ಚಂದ್ ಪ್ರಸಾದ್ ಟೆನ್ನಿಸ್ ಕೋಚ್ ಆಗಿದ್ದು, ಅವರು ಕೋಚಿಂಗ್ ನೀಡುವುದಕ್ಕಾಗಿ ಡ್ಯೂಟಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
    ಮಾತಿನ ಚಕಮಕಿ – ಕೊಲೆಯಲ್ಲಿ ಅಂತ್ಯ :
    ಗುವಾಹಟಿಯ ಚಚಲ್ ಪ್ರದೇಶದ ಪೂರ್ಣಿಮಾ ಮೆನ್ಸನ್ನಲ್ಲಿ ಬ್ಲಾಕ್ ಎನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಘಟನೆ ನಡೆದಿದೆ. ತಾಯಿ ಮಗಳ ನಡುವೆ ಮಾತಿಗೆ ಮಾತು ಬೆಳೆದು ಕೊಲೆ*ಯಲ್ಲಿ ಅಂತ್ಯವಾಗಿದೆ.
    ನಿನ್ನೆ (ಸೆ.27) ಸಂಜೆ 7.30ರ ಸಮಯಕ್ಕೆ ಅಮ್ಮ ಮಗಳ ಮಧ್ಯೆ ವಾಗ್ವಾದ ಶುರುವಾಗಿದೆ. ಈ ವೇಳೆ ಕೋಪಗೊಂಡ ಬಾಲಕಿ ತನ್ನ ಹೆತ್ತಮ್ಮ ಎಂಬುದನ್ನು ಕೂಡ ಯೋಚಿಸದೇ ಕುಟ್ಟಾಣಿಯಿಂದ ಮಂಜುದೇವಿಯನ್ನು ಸಾ*ಯುವವರೆಗೂ ಹೊ*ಡೆದು ಕೊಂ*ದೇ ಬಿಟ್ಟಿದ್ದಾಳೆ.
    ಘಟನೆಯ ಬಳಿಕ ನೆರೆಮನೆಯವರು ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಅಪ್ರಾಪ್ತ ಮಗಳನ್ನು ಬಂಧಿಸಿದ್ದಾರೆ.

    Continue Reading

    LATEST NEWS

    Trending