Connect with us

LATEST NEWS

ಭಾರತದಲ್ಲಿ 76.28ಲಕ್ಷ ವ್ಯಾಟ್ಸಾಪ್ ಅಕೌಂಟ್ ಬ್ಯಾನ್ ..!!

Published

on

ಬೆಂಗಳೂರು: ಭಾರತದಲ್ಲಿ ವಾಟ್ಸಾಪ್‌ ಅತೀ ಹೆಚ್ಚು ಜನರು ಬಳಕೆ ಮಾಡುವಂತಹ ಆಪ್ ಆಗಿದೆ.  ದಿನನಿತ್ಯದ ಎಲ್ಲ ಕಾರ್ಯಗಳ ಸಂದರ್ಭದಲ್ಲೂ ವಾಟ್ಸಾಪ್ ಬಳಸುವವರು ಎಷ್ಟೋ ಜನರು ಇದ್ದಾರೆ. ರಾಜಾಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಮಾತ್ರವಲ್ಲದೆ ಕ್ರಿಮಿನಲ್‌ಗಳು ಕೂಡಾ ವಾಟ್ಸಾಪ್ ಅನ್ನೇ ಪ್ರಮುಖ ದಾಳವನ್ನಾಗಿಸಿಕೊಂಡಿದ್ದಾರೆ. ಈ ಹಿಂದೆ ವಾಟ್ಸಾಪ್ ನಲ್ಲಿ ಯಾವುದೇ ಕಾನೂನು ಬಾಹಿರ ಸಂದೇಶಗಳು ರವಾನೆ ಮಾಡುವಂತಿಲ್ಲ, ನಿಯಮ ಉಲ್ಲಂಘಿಸಿದಲ್ಲಿ ಕಠೀಣ ಕ್ರಮ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ನೀಡಿತ್ತು. ಇದೀಗ ಭಾರತದಲ್ಲಿ ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಪ್ ಫೆಬ್ರವರಿ ತಿಂಗಳಲ್ಲಿ ದಾಖಲೆಯ  76.28 ಲಕ್ಷ ಖಾತೆಗಳನ್ನು ವಾಟ್ಸಪ್ ನಿಷೇಧಿಸಿದೆ.

ಖಾತೆ ನಿಷೇಧಕ್ಕೆ ಇದೆ ಕಾರಣ..;

ಭಾರತದಲ್ಲಿ 50ಕೋಟಿಗೂ ಹೆಚ್ಚು ಮಂದಿ ವ್ಯಾಟ್ಸಾಪ್‌ಅನ್ನು ಬಳಕೆ ಮಾಡ್ತಾ ಇದ್ದಾರೆ. ವಾಟ್ಸಾಪ್‌ನಲ್ಲಿ ಯಾವುದೇ  ಅಶ್ಲೀಲ, ದ್ವೇಷಪೂರಿತ, ಕಾನೂನುಬಾಹಿರ, ಮಾನಹಾನಿಕರ, ಬೆದರಿಕೆ, ಕಿರುಕುಳ ಅಥವಾ ಪ್ರಚೋದಿಸುವ ವಿಷಯವನ್ನು ಹಂಚಿಕೊಳ್ಳುವಂತಿಲ್ಲ.  ವಾಟ್ಸಾಪ್ ಈ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಲೇ ಬರುತ್ತಿದೆ. ಮಾಹಿತಿಯ ಪ್ರಕಾರ, ಕಂಪನಿಯ ನೀತಿಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಖಾತೆಗಳನ್ನು ವಾಟ್ಸಪ್ ನಿಷೇಧಿಸುತ್ತದೆ. ಕಳೆದ ಫೆಬ್ರವರಿಯಲ್ಲಿ ದೇಶಾದ್ಯಂತ ಒಟ್ಟು 16,618 ದೂರುಗಳು ಬಂದಿವೆ ಎಂದು ಕಂಪನಿ ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. ವರದಿಯ ಪ್ರಕಾರ, ಕಂಪನಿಯು 2021 ರ ಐಟಿ ಕಾಯ್ದೆಯ ಅಡಿಯಲ್ಲಿ ಭಾರತದಲ್ಲಿ 76 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. ವಾಟ್ಸಾಪ್ ನಿರಂತರವಾಗಿ ಇಂತಹ ಕ್ರಮಗಳನ್ನು ತೆಗೆದುಕೊಳ್ಳುತ್ತಿರುತ್ತದೆ.

 

LATEST NEWS

ಪ್ರಜ್ವಲ್ ರೇವಣ್ಣ ಪ್ರಕರಣ : ಮೌನ ಮುರಿದ ಪ್ರಧಾನಿ ಮೋದಿ; ಹೇಳಿದ್ದೇನು?

Published

on

ನವದೆಹಲಿ : ಸದ್ಯ ದೇಶದಲ್ಲಿ ಹಾಸನ ಜೆಡಿಎಸ್ – ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇದೀಗ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.


ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮಹಿಳೆಯರ ಮಾನ, ಪ್ರಾಣದ ವಿಚಾರದಲ್ಲಿ ಪ್ರಜ್ವಲ್‌ ರೇವಣ್ಣ ಅಂತವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕ್ರಮ ಕೈಗೊಳ್ಳಬೇಕಿದ್ದ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು ಮತ್ತು ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ಇಡಬೇಕಿತ್ತು. ರಾಜಕೀಯ ಲಾಭ ಪಡೆದುಕೊಳ್ಳಲು ಆರೋಪಿ ದೇಶ ಬಿಟ್ಟು ಹೋಗುವವರೆಗೂ ಸುಮ್ಮನಿದ್ದು, ವ್ಯರ್ಥ ಕಾಲಹರಣ ಮಾಡಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅವಧಿಯ ವೀಡಿಯೋ :

ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ. ಸಹಸ್ರಾರು ವಿಡಿಯೋಗಳ ಇವೆ ಎಂದಾದರೆ ಅವು ಜೆಡಿಎಸ್ ಪಕ್ಷ, ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ ಎನ್ನುವುದು ತಿಳಿದುಬಂದಿದೆ. ಅವರು ಅಧಿಕಾರದಲ್ಲಿ ಇದ್ದಾಗ ಆ ವಿಡಿಯೋಗಳನ್ನು ಒಟ್ಟುಗೂಡಿಸಿಕೊಂಡು, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಆ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ವೀಡಿಯೋ ಪ್ರಕರಣದಲ್ಲಿ ಎಲ್ಲವೂ ಸಂಶಯಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಮೋದಿ ಆರೋಪಿಸಿದ್ದಾರೆ.

Continue Reading

DAKSHINA KANNADA

ಆಂಬುಲೆನ್ಸ್ – ಕಾರು ನಡುವೆ ಭೀಕರ ಅಪಘಾತ..! ಮೂವರ ದುರ್ಮರಣ.!

Published

on

ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ.

accident

ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

 ಮುಂದೆ ಓದಿ..; ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

accident

 

Continue Reading

FILM

ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!

Published

on

ಮಂಗಳೂರು/ ಮುಂಬೈ : ಸದ್ಯ ಡೀಪ್ ಫೇಕ್ ಹಾವಳಿ ಮುಗಿಯುವಂತೆ ಕಾಣುತ್ತಿಲ್ಲ. ಅನೇಕ ನಟ – ನಟಿಯರು ಡೀಪ್ ಫೇಕ್ ನಿಂದ ತೊಂದರೆ ಅನುಭವಿಸಿದ್ದಾರೆ. ಕತ್ರೀನಾ ಕೈಫ್, ರಶ್ಮಿಕಾ ಮಂದಣ್ಣ, ಕಾಜಲ್, ಅಲಿಯಾ ಭಟ್ ರ ಡೀಪ್ ಫೆಕ್ ವೀಡಿಯೋ ವೈರಲ್ ಆಗಿತ್ತು. ಕೇವಲ ನಟಿಯರದ್ದು ಮಾತ್ರವಲ್ಲ, ನಟರಾದ ಅಮೀರ್ ಖಾನ್, ಅಲ್ಲು ಅರ್ಜುನ್ ಚುನಾವಣಾ ಪ್ರಚಾರದ ಫೇಕ್ ವೀಡಿಯೋಗಳು ಸೃಷ್ಟಿಯಾಗಿದ್ದವು. ಈ ಬಗ್ಗೆ ಚಿತ್ರರಂಗದ ಅನೇಕರು ಧ್ವನಿ ಎತ್ತಿದ್ದರೂ ಕೂಡ. ಆದ್ರೆ, ಇಲ್ಲಿಗೆ ಮುಕ್ತಾಯವಾಗಿಲ್ಲ. ಇದೀಗ ಮತ್ತೆ ಡೀಪ್ ಫೇಕ್ ಹಾವಳಿ ಮುಂದುವರೆದಿದೆ.

 

ಮತ್ತೆ ಅಲಿಯಾ ಭಟ್ ಡೀಪ್ ಫೇಕ್ :

ಡೀಪ್ ಫೆಕ್ ಗೆ ಮತ್ತೆ ಅಲಿಯಾ ಭಟ್ ಬಲಿಯಾಗಿದ್ದಾರೆ. ಅಲಿಯಾ ಭಟ್ ಹೊಸ ಲುಕ್ ಕಂಡು ಅಭಿಮಾನಿಗಳು ಬೆರಗಾಗಿದ್ದಾರೆ. ಇದುವರೆಗೆ ಬೇರೆ ಯಾರು ಯಾರದೋ ವೀಡಿಯೋ ಗಳಿಗೆ ನಟಿಯರ ಮುಖವನ್ನು ಕೂರಿಸಿ ವೀಡಿಯೋ ಮಾಡಲಾಗುತ್ತಿತ್ತು. ಇದೀಗ ನಟಿಯೊಬ್ಬಳ ವೀಡಿಯೋಗೆ ನಟಿ ಮುಖವನ್ನು ಬಳಸಲಾಗಿದೆ. ಹೌದು, ನಟಿಯೊಬ್ಬಳ ಮುಖ ಎಡಿಟ್ ಮಾಡಿ ಅಲ್ಲಿ ಅಲಿಯಾ ಭಟ್ ಮುಖವನ್ನು ಬಳಸಲಾಗಿದೆ.

ಆ ನಟಿಯರು ಯಾರು?


ಇಷ್ಟರ ವರೆಗೆ ಡೀಪ್ ಫೇಕ್ ತಂತ್ರಜ್ಞಾನದಲ್ಲಿ ಬೇರೆಯವರ ದೇಹಕ್ಕೆ ಸೆಲೆಬ್ರಿಟಿಗಳ ಮುಖ ಜೋಡಿಸುವ ಕೆಲಸವನ್ನು ಮಾಡಲಾಗುತ್ತಿತ್ತು. ಈಗ ಬೇರೊಬ್ಬ ನಟಿಯ ವೀಡಿಯೋ ಬಳಸಿಕೊಂಡಿದ್ದಾರೆ. ಈ ಡೀಪ್ ಫೇಕ್ ವೀಡಿಯೋದ ಅಸಲಿ ವೀಡಿಯೋ ನಟಿ ವಾಮಿಕಾ ಅವರದ್ದು. ವಾಮಿಕ ಬಾಲಿವುಡ್ ನಟಿ. 2007 ರಿಂದ ಅವರು ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹಲವಾರು ಚಿತ್ರಗಳಲ್ಲಿ ನಟಿಸಿದ್ದರೂ, ಯಾವುದೂ ಆಕೆಗೆ ಹೆಸರು ಕೊಟ್ಟಿಲ್ಲ. ಈಗ ಡೀಪ್ ಫೇಕ್ ಪ್ರಕರಣದಿಂದ ಅವರು ಮುನ್ನೆಲೆಗೆ ಬಂದಿದ್ದಾರೆ.

ಇದನ್ನೂ ಓದಿ : ಮಲಯಾಳಂ ನಟಿ ‘ಕನಕಲತಾ’ ಇನ್ನಿಲ್ಲ

ನಟಿ ವಾಮಿಕಾ ವೀಡಿಯೋಗೆ ಅಲಿಯಾ ಭಟ್ ಫೇಸ್ :

ನಟಿ ವಾಮಿಕ ಕೆಲವು ದಿನಗಳ ಹಿಂದೆಯಷ್ಟೇ ವೀಡಿಯೋವೊಂದನ್ನು ಹಂಚಿಕೊಂಡಿದ್ದರು. ಈ ವೀಡಿಯೋದಲ್ಲಿ ಅವರು, ಕೆಂಪು ಸೀರೆಯುಟ್ಟು ಮಿಂಚಿದ್ದರು. ನೆಟ್ ಫ್ಲಿಕ್ಸ್ ಸರಣಿ ‘ಹೀರಾಮಂಡಿ’ ಸ್ಕ್ರೀನಿಂಗ್ ಗಾಗಿ ವಾಮಿಕಾ ಕೆಂಪು ಸೀರೆಯುಟ್ಟಿದ್ದರು.
ಇದೀಗ ಈ ವೀಡಿಯೋಗೆ ಅಲಿಯಾ ಭಟ್ ಮುಖ ಬಳಸಿ ವೈರಲ್ ಮಾಡಲಾಗಿದೆ.

ಆಲಿಯಾ ಅಭಿಮಾನಿಗಳು ಕಿಡಿ ಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹೇಗೆ ಸಾಧ್ಯ? ಆಲಿಯಾ ಮುಖ ನೀವು ಬಳಸಿರುವುದು ಕಾನೂನುಬದ್ಧವೇ? ಎಂದು ಪ್ರಶ್ನಿಸಿದ್ದಾರೆ. ಕೆಲವರು ಕಮೆಂಟ್ಸ್ ಬಾಕ್ಸ್ ನಲ್ಲಿ ಆಲಿಯಾ ಭಟ್ ಅವರನ್ನು ಟ್ಯಾಗ್ ಮಾಡಿದ್ದಾರೆ.

 

Continue Reading

LATEST NEWS

Trending