LATEST NEWS
ಅಹ್ಮದಾಬಾದ್ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿಅವಘಡ; 8 ರೋಗಿಗಳು ಸಜಿವ ದಹನ..!
ಅಹ್ಮದಾಬಾದ್ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿಅವಘಡ; 8 ರೋಗಿಗಳು ಸಜಿವ ದಹನ..!
ಅಹ್ಮದಾಬಾದ್ : ಗುಜರಾತ್ ಅಹ್ಮದಾಬಾದ್ನ ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ತಡ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ.
ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ.
ತಡರಾತ್ರಿ ಸುಮಾರು 2:30 ಕ್ಕೆ ಇ ದುರ್ಘಟನೆ ಸಂಭವಿಸಿದೆ. ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಅರಣ ಎಂದು ಶಂಕಿಸಲಾಗಿದೆ.
ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ, ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ.
ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
LATEST NEWS
ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು
ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.
ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.
ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
DAKSHINA KANNADA
ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!
ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.
ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.
ಪೊಲೀಸ್ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.
ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.
ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.
ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
DAKSHINA KANNADA
ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!
ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್ನಲ್ಲಿರುವ ಕ್ಯಾಂಟೀನ್ನಲ್ಲಿ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.
ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫಯಾಜ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.