Connect with us

    LATEST NEWS

    ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿದಂತೆ 8 ಮಂದಿ ಸಾ*ವು

    Published

    on

    ಮಂಗಳೂರು/ಛತ್ತೀಸಗಡ : ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿದಂತೆ 8 ಮಂದಿ ಮೃ*ತಪಟ್ಟಿರುವ ಘಟನೆ ಛತ್ತೀಸ್ ಗಡ ರಾಜನಂದಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ವರದಿಯಾಗಿದೆ.

    ಸೋಮ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಜೋರತರಾಯ್ ಗ್ರಾಮದಲ್ಲಿ ಸೋಮವಾರ(ಸೆ.23) 1.30ಕ್ಕೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸಿಡಿಲು ಬಡಿ*ದು ಶಾಲಾ ಮಕಳು ಸೇರಿ 8 ಮಂದಿ ಸಾ*ವಿಗೀಡಾಗಿದ್ದಾರೆ. ಒಬ್ಬ ವ್ಯಕ್ತಿ ಗಾ*ಯಗೊಂಡಿದ್ದಾರೆ.

    ಇದನ್ನೂ ಓದಿ : ಕಾಸರಗೋಡು: ಮೆದುಳು ಜ್ವರಕ್ಕೆ ಯುವಕ ಬಲಿ

    ಗಾ*ಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜನಂದಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗಾರ್ಗ್ ಮಾಹಿತಿ ನೀಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BIG BOSS

    Bigg Boss Kannada 11: ದೊಡ್ಮನೆಯಲ್ಲಿ ಸ್ವರ್ಗ, ನರಕ ಎನ್ನುವ ಎರಡು ಥೀಮ್

    Published

    on

    ‘ಬಿಗ್ ಬಾಸ್ ಕನ್ನಡ 11’ಕ್ಕೆ ಕೌಂಟ್ ಡೌನ್ ಶುರುವಾಗಿದೆ. ದೊಡ್ಮನೆ 2ನೇ ಪ್ರೋಮೋ ರಿಲೀಸ್ ಆಗಿ ಮೆಚ್ಚುಗೆ ಗಳಿಸಿತ್ತು. ಈ ಬಾರಿ ಬಿಗ್ ಬಾಸ್‌ನಲ್ಲಿ ಸ್ವರ್ಗ ಮತ್ತು ನರಕ ಎಂದು ಥೀಮ್ ಇರಲಿದೆ ಎಂದು ಸುದೀಪ್‌ ಇಂಟರೆಸ್ಟಿಂಗ್ ಮಾಹಿತಿ  ತಿಳಿಸಿದ್ದಾರೆ.

    ನಾವು ಮಾಡಿ ಕಳುಹಿಸಲಿಲ್ಲ ಅಂದರೆ ಒಳಗೆ ಹೋಗಿರುವ ಸ್ಪರ್ಧಿಗಳೇ ಟೀಮ್ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡುವಾಗಲೇ 2 ತಂಡ ಮಾಡುವುದೇ ಈ ಸೀಸನ್‌ನ ಸ್ಪೆಷಾಲಿಟಿ ಎಂದು ಸುದೀಪ್ ತಿಳಿಸಿದರು.

    ಕಳೆದ ಬಾರಿ ಬಿಗ್ ಬಾಸ್ ಸೀಸನ್ 10 ಪ್ರಾರಂಭವಾದ ವೇಳೆ, ಸ್ಪರ್ಧಿಗಳಿಗೆ ಸಮರ್ಥರು ಮತ್ತು ಅಸಮರ್ಥರು ಎಂದು ಪರಿಗಣಿಸಿ ತಂಡಗಳಾಗಿ ವಿಂಗಡಿಸಿದ್ದರು. ಅದರಂತೆಯೇ ಈ ಬಾರಿಯು ಕೂಡ ಹೊಸ ರೀತಿಯಲ್ಲಿ ಸ್ವರ್ಗ ಮತ್ತು ನರಕ ಎಂದು ಎರಡು ತಂಡ ಮಾಡಿ ಸ್ಪರ್ಧಿಗಳನ್ನು ಕಳುಹಿಸಲಾಗುತ್ತದೆ.

    ಸುದೀಪ್ ನಿರೂಪಣೆಯಲ್ಲಿ ಇದೇ ಸೆ.29ಕ್ಕೆ ಬಿಗ್ ಬಾಸ್ ಗ್ರ್ಯಾಂಡ್ ಆಗಿ ಲಾಂಚ್ ಆಗುತ್ತಿದೆ. ಪ್ರತಿದಿನ ರಾತ್ರಿ 9:30ಕ್ಕೆ ಶೋ ಪ್ರಸಾರವಾಗಲಿದೆ.

    Continue Reading

    BANTWAL

    ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ

    Published

    on

    ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್‌ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ.

    ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಕೊಪ್ಪಳ ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆಯ ಪಕ್ಕದ ಗುಂಡಿಗೆ ಬಸ್ ಉರುಳಿ ಬಿದ್ದಿದ್ದು ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯ ಯುವಕರು ಸೇರಿ ಬಸ್‌ ಒಳಗಿದ್ದ ಪ್ರಯಾಣಿಕರನ್ನು ಬಸ್‌ ನಿಂದ ಹೊರ ತೆಗೆದಿದ್ದಾರೆ.

    ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಬಸ್ ಬರುತ್ತಿರುವ ವೇಳೆ ಬೈಕ್‌ ಒಂದು ಅಡ್ಡ ಬಂದಿದ್ದು ಈ ವೇಳೆ ಬಸ್ ನಿಯಂತ್ರಿಸುವ ವೇಳೆ ರಸ್ತೆಯಿಂದ ಪಕ್ಕಕ್ಕೆ ಉರುಳಿದೆ ಎಂದು ಬಸ್ ಚಾಲಕ ಮಾಹಿತಿ ನೀಡಿದ್ದಾರೆ . ಆದರೆ ಸ್ಥಳಿಯರು ಇದನ್ನು ನಿರಾಕರಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.

    ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡು ಘಟನೆಗೆ ಕಾರಣ ಏನು ಎಂಬ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ.

    Continue Reading

    LATEST NEWS

    ತಿರುಪತಿ ಲಡ್ಡು ಸೂಪರ್‌.. ಲಡ್ಡು ತಿಂದು ಖುಷಿ ಹಂಚಿಕೊಂಡ ಭಕ್ತರು..!

    Published

    on

    ಆಂಧ್ರಪ್ರದೇಶ/ಮಂಗಳೂರು: ತಿರುಪತಿಯಲ್ಲಿ ಶ್ರೀ ವೆಂಕಟರಮಣನ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಕಲಬೆರಕೆ ವಿಚಾರದ ಬಳಿಕ ಕರ್ನಾಟಕದ ಕೆಎಮ್‌ಎಫ್‌ನಿಂದ ನಂದಿನಿ ತುಪ್ಪವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಇದೀಗ ನಂದಿನಿ ತುಪ್ಪ ಬಳಸಿ ತಯಾರಾಗುತ್ತಿರುವ ಲಡ್ಡು ತಿಂದು ಭಕ್ತಾದಿಗಳು ಖುಷಿಪಟ್ಟಿದ್ದಾರೆ.

    ಪ್ರಸಾದಕ್ಕೆ ಕಲಬೆರಕೆ ಬೆನ್ನಲ್ಲೇ ದೇವಸ್ಥಾನವನ್ನು ಶುದ್ದೀಕರಿಸಲಾಗಿದೆ. ಜೊತೆಗೆ ನಂದಿನಿ ತುಪ್ಪವನ್ನು ಪ್ರಸಾದಕ್ಕೆ ಬಳಸುತ್ತಿರುವ ಬಳಿಕ ಭಕ್ತಾಧಿಗಳು  ತಿರುಪತಿಗೆ ದೇವರ ದರ್ಶನಕ್ಕೆ ತೆರಳುತ್ತಿದ್ದಾರೆ. ಜೊತೆಗೆ ಅಪಾರ ಸಂಖ್ಯೆಯಲ್ಲಿ ಲಡ್ಡು ಪ್ರಸಾದವನ್ನು ಸ್ವೀಕಾರ ಮಾಡುತ್ತಿದ್ದಾರೆ.

     

    ಈ ಬಗ್ಗೆ ಭಕ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು ನಾವು ಲಡ್ಡು ತೆಗೆದುಕೊಂಡು ತಿಂದೆವು. ಟೇಸ್ಟ್‌ ಸೂಪರ್‌ ಆಗಿದೆ. ನಮ್ಮ ಕೆಎಂಎಫ್‌.. ನಮ್ಮ ಬೆಂಗಳೂರು. ನಮಗೂ ಖುಷಿ ತಂದಿದೆ. ತುಂಬಾ ಚೆನ್ನಾಗಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ. ನಮ್ಮ ನಾಡಿನ ನಂದಿನಿ ತುಪ್ಪ ಬಳಸಿ ಲಡ್ಡು ಮಾಡುತ್ತಿರುವುದು ತುಂಬಾ ಖುಷಿ ವಿಚಾರ. ಮಧ್ಯದಲ್ಲಿ ಈ ರೀತಿಯ ವಿವಾದ ಎದ್ದಿದ್ದಕ್ಕೆ ಬೇಜಾರಾಯ್ತು. ನಮ್ಮ ಕರ್ನಾಟಕ ನಮ್ಮ ಹೆಮ್ಮೆ. ನಂದಿನಿ ನಮ್ಮ ಹೆಮ್ಮೆ. ನಂದಿನಿ ಬಳಸಿ ಸ್ವಾಧಿಷ್ಟಕರವಾದ ಲಡ್ಡು ಸವಿಯಿರಿ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.

    Continue Reading

    LATEST NEWS

    Trending