Connect with us

BANTWAL

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತಗಟ್ಟೆಗಳ ಬದಲಾವಣೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 202-ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 6 ಮತಗಟ್ಟೆಗಳು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2 ಮತಗಟ್ಟೆಗಳ ಬದಲಾವಣೆಯಾಗಿದ್ದು ಕೇಂದ್ರ ಚುನಾವಣಾ ಆಯೋಗ ಇದನ್ನು ಅನುಮೋದನೆ ನೀಡಿದೆ.


ವಿವರ ಇಂತಿದೆ

202 ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕದ್ರಿಯಲ್ಲಿದ್ದ ಕಿರಿಯ ತಾಂತ್ರಿಕ ಶಾಲೆಯಲ್ಲಿದ್ದ ಮತಗಟ್ಟೆ ಸಂಖ್ಯೆ 131, ಆ ಕಟ್ಟಡ ಶಿಥಿಲಗೊಂಡ ಕಾರಣ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇರುವ ಕಾರಣ ಅದನ್ನು ಕದ್ರಿಯಲ್ಲಿರುವ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿಗೆ (ಮುಖ್ಯ ಕಟ್ಟಡದ ಪಶ್ಚಿಮ ಭಾಗ) ಬದಲಾವಣೆ ಮಾಡಲಾಗಿದೆ.
ಕದ್ರಿಯ ಕಿರಿಯ ತಾಂತ್ರಿಕ ಶಾಲೆಯಲ್ಲಿದ್ದ ಮತಗಟ್ಟೆ ಸಂಖ್ಯೆ 132 ಅನ್ನು ಆ ಕಟ್ಟಡವು ಶಿಥಿಲಗೊಂಡ ಕಾರಣ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇರುವ ಕಾರಣ ಕದ್ರಿಯಲ್ಲಿರುವ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜ್ (ಮುಖ್ಯ ಕಟ್ಟಡದ ಮಧ್ಯಭಾಗದ ಎಡಬದಿ) ಗೆ ಬದಲಾವಣೆ ಮಾಡಲಾಗಿದೆ.
ಕದ್ರಿಯಲ್ಲಿದ್ದ ಕಿರಿಯ ತಾಂತ್ರಿಕ ಶಾಲೆಯಲ್ಲಿದ್ದ ಮತಗಟ್ಟೆ ಸಂಖ್ಯೆ 133 ಅನ್ನು ಆ ಕಟ್ಟಡವು ಶಿಥಿಲಗೊಂಡ ಕಾರಣ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇರುವ ಕಾರಣ ಕದ್ರಿಯಲ್ಲಿರುವ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜ್ (ಮುಖ್ಯ ಕಟ್ಟಡದ ಮಧ್ಯಭಾಗದ ಬಲಬದಿ) ಗೆ ಬದಲಾವಣೆ ಮಾಡಲಾಗಿದೆ.
ಕದ್ರಿಯ ಕಿರಿಯ ತಾಂತ್ರಿಕ ಶಾಲೆಯಲ್ಲಿದ್ದ ಮತಗಟ್ಟೆ ಸಂಖ್ಯೆ 134, ಆ ಕಟ್ಟಡವು ಶಿಥಿಲಗೊಂಡ ಕಾರಣ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇರುವ ಕಾರಣ ಕದ್ರಿಯಲ್ಲಿರುವ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜ್ (ಮುಖ್ಯ ಕಟ್ಟಡದ ಪೂರ್ವ ಭಾಗ) ಗೆ ಬದಲಾವಣೆ ಮಾಡಲಾಗಿದೆ.
ಸೊರಲ್ಪಾಡಿಯ ಅಸುರುದ್ದೀನ್ ಕಂಬ್ಳ ಉರ್ದು ಪ್ರೌಢಶಾಲೆಯಲ್ಲಿದ್ದ ಮತಗಟ್ಟೆ ಸಂಖ್ಯೆ 208ನ್ನು ಆ ಕಟ್ಟಡವು ಶಿಥಿಲ ಗೊಂಡಿರುವುದರಿಂದ ಹಾಗೂ ಅಲ್ಲಿನ ಮತದಾರರು 2ರಿಂದ 3 ಕಿ ಮೀ ವರೆಗೆ ಬಂದು ಮತ ಚಲಾಯಿಸಬೇಕಿರುವ ಕಾರಣ ಬಡಗುಳಿಪಾಡಿಯ ಮಟ್ಟಿ ಅಂಗನವಾಡಿ ಕೇಂದ್ರಕ್ಕೆ ಬದಲಾವಣೆ ಮಾಡಲಾಗಿದೆ.
ಉಳ್ಳಾಯಿ ಬೆಟ್ಟು (ಹಳೆಯ ಕಟ್ಟಡ) ಗ್ರಾಮ ಪಂಚಾಯಿತಿ ಕಚೇರಿಯ ಮತಗಟ್ಟೆ ಸಂಖ್ಯೆ 215 ಅನ್ನು ಆ ಕಟ್ಟಡ ಖಾಸಗಿ ಕಟ್ಟಡ ಹಾಗೂ ಶಿಥಿಲವಾಗಿದ್ದು, ಈ ಹಿಂದೆ ಇಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಕಾರ್ಯನಿರ್ವಹಿಸುತ್ತಿದ್ದು ಈಗ ಬೇರೆ ಕಡೆ ವರ್ಗಾವಣೆಗೊಂಡಿರುತ್ತದೆ ಆದ ಕಾರಣ ಪೆರ್ಮಂಕಿ ಆಚೆಬೈಲು ಅಂಗನವಾಡಿ ಕೇಂದ್ರಕ್ಕೆ ಬದಲಾವಣೆ ಮಾಡಲಾಗಿದೆ.
ತೆಂಕ ಬೆಳ್ಳೂರು ಸೈಂಟ್ ಮೈಕಲ್ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 48, ಆ ಕಟ್ಟಡವು ತೀರಾ ದುರಸ್ತಿ ಆಗದ ಸ್ಥಿತಿ ಹಾಗೂ ಪ್ರಸ್ತುತ ಶಾಲೆ ಮುಚ್ಚಿರುವ ಕಾರಣ ತೆಂಕ ಬೆಳ್ಳೂರು ಧನುಪೂಜೆ ಅಂಗನವಾಡಿ ಕೇಂದ್ರಕ್ಕೆ ಬದಲಾವಣೆ ಮಾಡಲಾಗಿದೆ.
ವಿಟ್ಲ ಪಡ್ನೂರು ಸಮುದಾಯ ಭವನ ಕೊಡಂಗಾಯಿಯ ಮತಗಟ್ಟೆ ಸಂಖ್ಯೆ 214 ಪ್ರಸ್ತುತ ಇರುವ ಮತಗಟ್ಟೆಯ ಮತದಾನ ಪ್ರದೇಶದಲ್ಲಿರದ ಕಾರಣ ವಿಟ್ಲ ಪಡ್ನೂರು ಅಂಗನವಾಡಿ ಕೇಂದ್ರ ಪೆÇೀರ್ಲಪ್ಪಾಡಿಗೆ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending