LATEST NEWS
ಲಾರಿ ಚಾಲಕನ ಅವಾಂತರಕ್ಕೆ 8 ವರ್ಷದ ಬಾಲಕ ಬಲಿ..!!
ಹೈದರಬಾದ್: ತಾಯಿಯೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ 8 ವರ್ಷದ ಬಾಲಕನ ಮೇಲೆ ಲಾರಿ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ಹೈದರಬಾದ್ ನ ಅಲ್ವಾಲ್ ನಲ್ಲಿ ನಡೆದಿದೆ.
ಲಾರಿ ಚಾಲಕನ ಅವಾಂತರಕ್ಕೆ ತಾಯಿಯ ಕಣ್ಣೇದುರೆ ಬಾಲಕ ಬಲಿಯಾಗಿದ್ದಾನೆ. ಲಾರಿ ಚಾಲಕ ಹ್ಯಾಂಡ್ಬ್ರೇಕ್ ಹಾಕದೇ ಪಾರ್ಕ್ ಮಾಡಿದ್ದಾನೆ. ಹಾಗಾಗಿ ಇಳಿ ಜಾರು ಇದ್ದಿದ್ದರಿಂದ ಲಾರಿ ಮುಂದೆ ಸಾಗಿ ಬಾಲಕನ ಮೇಲೆ ಹರಿದಿದೆ. ಅದೃಷ್ಟವಶಾತ್ ಮಗುವಿನೊಂದಿಗೆ ಬರುತ್ತಿದ್ದ ತಾಯಿ ಕ್ಷಣಮಾತ್ರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ.
Horrific: An 8-yr old boy run over by a DCM lorry, which was parked in negligent manner, without applying the #handbrake & suddenly moved forward and crushed him, who was walking with her mother on road side near IG Statue at Old #Alwal in #Hyderabad .#RoadSafety #RoadAccident pic.twitter.com/uwa2XlRpLX
— Surya Reddy (@jsuryareddy) February 8, 2024
LATEST NEWS
ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು
ಕಾರ್ಕಳ : ಭಾರೀ ಸೆಕೆಯಿಂದಾಗಿ ಮನೆಯೊಳಗಡೆ ಮಲಗಲಾಗದೇ ಮನೆ ಟೆರೇಸ್ ಮೇಲೆ ಮಲಗಲು ಹೋಗಿದ್ದ ಶಿಕ್ಷಕ ಗಾಢ ನಿದ್ದೆಯಲ್ಲಿ ಉರುಳಿ ಬಿದ್ದು ಸಾ*ವನ್ನಪ್ಪಿದ ಘಟನೆ ಅಜೆಕಾರು ಕುಮೇರಿಯಲ್ಲಿ ನಡೆದಿದೆ. ಸುಂದರ ನಾಯ್ಕ(55) ಇಹಲೋಕ ತ್ಯಜಿಸಿದ ಶಿಕ್ಷಕ.
ಸುಂದರ ಅವರು ಆಶ್ರಯ ನಗರದ ನಿವಾಸಿಯಾಗಿದ್ದು, ಕಾರ್ಕಳ ತಾಲೂಕಿನ ಎಣ್ಣೆಹೊಳೆ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದರು. ಸೆಕೆಯ ಹಿನ್ನೆಲೆಯಲ್ಲಿ ಮನೆಯ ಟೆರೇಸ್ ಮೇಲೆ ಮಲಗಿದ್ದರು. ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದ ಇವರನ್ನು ಮನೆ ಮಂದಿ ಬೆಳಿಗ್ಗೆ 6:30ಕ್ಕೆ ಎಬ್ಬಿಸಲೆಂದು ಹೋದಾಗ ಇವರು ಟೆರೇಸ್ನಿಂದ ಕೆಳಕ್ಕೆ ಬಿದ್ದಿರುವುದು ಕಂಡು ಬಂದಿದೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ
ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ. ಮೃತ ಶಿಕ್ಷಕ ಸುಂದರ್ ನಾಯ್ಕ್ ಪತ್ನಿ ಪುತ್ರಿಯರನ್ನು ಅಗಲಿದ್ದಾರೆ.
DAKSHINA KANNADA
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸೇರಿದಂತೆ ಆಸುಪಾಸಿನ ಜನತೆಗೆ ಸರಕಾರಿ ಬಸ್ಸು ಸಿಬ್ಬಂದಿ ಹಗಲು ದರೋಡೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕುಕ್ಕೆ ಕೆಎಸ್ಆರ್ಟಿಸಿ ಡಿಪೋದಿಂದ ಹೊರಡುವ ಸರಕಾರಿ ಬಸ್ ಸಿಬ್ಬಂದಿ ಹಗಲು ದರೋಡೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಏಪ್ರಿಲ್ 28ರಂದು ಹುಬ್ಬಳ್ಳಿ ಕಡೆಯ ದಂಪತಿ ಕುಕ್ಕೆ ಸುಬ್ರಹ್ಮಣ್ಯದಿಂದ ಹುಬ್ಬಳ್ಳಿಗೆ ಹೋಗುವ ಸಲುವಾಗಿ ಬಿಎಂಟಿಸಿಯ KA 57 F 3463 ನಂಬರಿನ ಬಸ್ಸಿಗೆ ಹತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ರೋಡ್ ಅಥವಾ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಬಸ್ ಹೋಗುತ್ತದೆ ಎಂದು ಬಸ್ಸಿನ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ. ಈ ಭಾಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಮತ್ತು ಬಸ್ಸಿನ ಸಿಬ್ಬಂದಿ ಹೇಳಿದ್ದನ್ನೇ ನಂಬಿದ ಹುಬ್ಬಳ್ಳಿ ಈ ದಂಪತಿ ಬೆಂಗಳೂರು ಮಹಾನಗರ ಪಾಲಿಕೆಯ ಡಿಪೋ ನಂಬರ್2ರ ಈ ಸರಕಾರಿ ಬಸ್ ಹತ್ತಿದ್ದಾರೆ. ಬಸ್ಸಿನ ನಿರ್ವಾಹಕ ಮಹಿಳೆಗೆ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯ ಎಂಬುದಾಗಿ ಉಚಿತ ಟಿಕೆಟ್ ನೀಡಿದ್ದೂ, ಜೊತೆಯಲ್ಲಿ ಇದ್ದ ಪತಿ ಮತ್ತು ಮಕ್ಕಳಿಂದ 150 ರೂಪಾಯಿ ಹಣ ಪಡೆದು ಟಿಕೆಟ್ ನೀಡಿಲ್ಲ ಎನ್ನಲಾಗಿದೆ. ಇಷ್ಟು ಹಣ ಪಡೆದು ಇವರನ್ನು ಕುಕ್ಕೆ ಸುಬ್ರಹ್ಮಣ್ಯದಿಂದ ಸುಮಾರು ಮೂರು ಕಿಲೋ ಮೀಟರ್ ದೂರದ ಕೈಕಂಬ ಎಂಬಲ್ಲಿ ಬಸ್ಸಿಂದ ಇಳಿಸಿ ಹೋಗಿದ್ದಾರೆ. ನಂತರದಲ್ಲಿ ಈ ದಂಪತಿಗಳು ತಮ್ಮ ಮಕ್ಕಳೊಂದಿಗೆ ಸುಮಾರು ಆರು ಕಿಲೋ ಮೀಟರ್ ದೂರ ನಡೆದು ಕುಕ್ಕೆ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣ ತಲುಪಿದ್ದಾರೆ. ನಂತರದಲ್ಲಿ ಸ್ಥಳೀಯರಲ್ಲಿ ತಮಗಾದ ಅನ್ಯಾಯದ ಬಗ್ಗೆ ಕಣ್ಣೀರಿಟ್ಟು ಇಂತಹ ಬಸ್ಸ್ಗಳ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇಂತಹ ಘಟನೆಗಳು ಈ ಭಾಗದಲ್ಲಿ ಪದೇಪದೇ ಮರುಕಳಿಸುತ್ತಿದ್ದೂ,ಈ ಬಗ್ಗೆ ಹಲವು ಬಾರಿ ಮೇಲಧಿಕಾರಿಗಳಿಗೆ ತಿಳಿಸಿದರೂ ಸಹಾ ಈ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.
ಮುಂದೆ ಓದಿ..;ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
ಆದುದರಿಂದ ಈ ಭಾಗದಲ್ಲಿ ನಡೆಯುವ ಈ ಹಗಲು ದರೋಡೆಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ. ಆದುದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣ ಸಂಘವು ಆಗ್ರಹಿಸಿದೆ.
LATEST NEWS
ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?
ಮಹಾರಷ್ಟ್ರ: ಅಪ್ರಾಪ್ತ ಬಾಲಕಿಯೊಬ್ಬಳು ಎರಡು ಬಾರಿ ಅಕ್ರಮ ಗರ್ಭ ಧರಿಸಿ ಇದೀಗ ತನ್ನ ಪೋಷಕರ ವಿರುದ್ಧ ಠಾಣೆ ಮೆಟ್ಟಿಲೇರಿರುವ ಘಟನೆ ಮಹಾರಷ್ಟ್ರದಲ್ಲಿ ನಡೆದಿದೆ. ಹೌದು, 17 ವರ್ಷದ ಬಾಲಕಿಯೊಬ್ಬಳು ಬೇರೆ ಬೇರೆ ಯುವಕರಿಂದ ಎರಡು ಬಾರಿ ಗರ್ಭ ಧರಿಸಿದ್ದಾಳೆ.
ಮೊದಲಾಗಿ ಅಕ್ರಮ ಸಂಬಂಧ ಹೊಂದಿದ್ದ ಪುರುಷನಿಂದ ಗರ್ಭ ಧರಿಸಿದ್ದಳು. ಈ ಮಗುವನ್ನು ಪೋಷಕರು ತನಗರಿಯದೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕಿ ಪೋಷಕರು ಸೇರಿದಂತೆ ಶಿಕ್ಷಕರು, ವಕೀಲರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮುಂದೆ ಓದಿ..; 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ಪೋಷಕರು ನನ್ನನ್ನು ಮುಂಬೈಗೆ ಕರೆದುಕೊಂಡು ಹೋಗಿ ವಕೀಲರ ನೇತೃತ್ವದಲ್ಲಿ ಕೆಲವು ದಾಖಲೆ ಪತ್ರಗಳಿಗೆ ಸಹಿ ಹಾಕಿಸಿದ್ದಾರೆ. 7ನೇ ತರಗತಿಯ ಬಳಿಕ ಶಾಲೆಯಿಂದ ಹೊರಗುಳಿದ ಬಾಲಕಿಯ ನಿಯಮಿತ ತಪಾಸಣೆ ಮತ್ತು ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 2021ರ ಸೆಪ್ಟೆಂಬರ್ 24ರಂದು ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮರುದಿನ ಆ ಮಗುವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಹಸ್ತಾಂತರಿಸಿದ್ದು, ಹೆರಿಗೆಯ ಬಗ್ಗೆ ಯಾರಲ್ಲೂ ಮಾತನಾಡದಂತೆ ಆಕೆಗೆ ಪೋಷಕರು ಎಚ್ಚರಿಕೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.
ಇನ್ನು ಹೆರಿಗೆ ಆದ ಆರು ತಿಂಗಳ ಬಳಿಕ ಅಪ್ರಾಪ್ತೆ ಮಗುವಿನ ತಂದೆಯನ್ನು ಸಂಪರ್ಕಿಸಿದ್ದಾಳೆ. ಈ ವೇಳೆ ಆತ ಅವಳನ್ನು ವರಿಸಳು ಸಿದ್ಧನಾಗಿದ್ದೇನೆ ಎಂದು ಹೇಳುತ್ತಾನೆ. ಆದರೆ ಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ತನ್ನ ಪೋಷಕರು ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಈ ಪೈಕಿ ಪೋಷಕರು ಮತ್ತು ಚಿಕ್ಕಪ್ಪ ತಲಾ 1.5 ಲಕ್ಷ ರೂ. , ಸಾಮಾಜಿಕ ಕಾರ್ಯಕರ್ತೆ ಮತ್ತು ಇತರ ಕೆಲವರು ಉಳಿದ 1 ಲಕ್ಷ ರೂ.ಗಳನ್ನು ಹಂಚಿಕೊಂಡಿದ್ದಾರೆ ಎಂದು ಅಪ್ರಾಪ್ತೆ ದೂರಿನಲ್ಲಿ ತಿಳಿಸಿದ್ದಾಳೆ.
ಈ ಕುರಿತಾಗಿ ಪ್ರಶ್ನಿಸಿದಕ್ಕೆ ಅಜ್ಜಿ ಮನೆಗೆ ಕಳುಹಿಸಿದ್ದಾರೆ. ಇನ್ನು ಅಲ್ಲಿ ಈ ಬಾಲಕಿಗೆ 23ವರ್ಷದ ಯುವಕನ ಜೊತೆ ಮದುವೆ ಫಿಕ್ಸ್ ಮಾಡಲಾಗಿತ್ತು. ಈ ವೇಳೆ ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಲೈಂಗಿಕ ಸಂಪರ್ಕ ಹೊಂದುತ್ತಾಳೆ. ಬಳಿಕ ಬಾಲಕಿ ಮತ್ತೊಮ್ಮೆ ಗರ್ಭ ಧರಿಸುತ್ತಾಳೆ. ಅಷ್ಟಾಗಲೇ ವಿವಾಹ ನಿಶ್ಚಯವಾಗಿದ್ದ ಹುಡುಗನಿಗೆ ಇವಳ ಮೊದಲ ಮಗುವಿನ ಕುರಿತಾಗಿ ತಿಳಿದು ಇವಳನ್ನು ಮದುವೆಯಾಗಲು ನಿರಾಕರಿಸುತ್ತಾನೆ. ಬಳಿಕ ಅಜ್ಜಿ ಮನೆಯಿಂದ ಹೊರಟು ಬರ್ತಾಳೆ. ಪರಿಚಯಸ್ಥರ ನೆರವಿನಿಂದ ಗಂಡು ಮಗುವಿಗೆ ಜನ್ಮ ನೀಡಿದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಪೋಷಕರು ಎರಡನೇ ಮಗವನ್ನೂ ಮಾರಾಟ ಮಾಡುವಂತೆ ಒತ್ತಡ ಹೇರುತ್ತಿದ್ದು ಈ ನಿಟ್ಟಿನಲ್ಲಿ ಬಾಲಕಿ ಪೊಲೀಸ್ ಮೆಟ್ಟಿಲೇರಿದ್ದಾಳೆ. ಇನ್ನು ಪೊಲೀಸರು ಮಾರಾಟ ಮಾಡಿದ್ದ ಹೆಣ್ಣು ಮಗುವನ್ನು ಹುಡುಕಲು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.
- FILM7 days ago
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
- FILM7 days ago
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- LATEST NEWS7 days ago
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!