Connect with us

LATEST NEWS

ಒಂದೇ ದಿನ ದಾಖಲೆಯ 81 ಮಂದಿಗೆ ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ

Published

on

ರಿಯಾದ್: ಭಯೋತ್ಪಾದನೆಗೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ಒಂದೇ ದಿನ ದಾಖಲೆಯ 81 ಮಂದಿಯನ್ನು ಸೌದಿ ಅರೇಬಿಯಾ ಮರಣದಂಡನೆಗೆ ಒಳಪಡಿಸಿದೆ ಎಂದು ಸೌದಿ ಅರೇಬಿಯಾ ಶನಿವಾರ ತಿಳಿಸಿದೆ. ಕಳೆದ ವರ್ಷ ನಡೆದಿದ್ದ ದಾಖಲೆಯ ಮರಣದಂಡನೆ ಶಿಕ್ಷೆಯ ಸಂಖ್ಯೆಯನ್ನು ಇದು ಮೀರಿಸಿದೆ.


ಈ ಎಲ್ಲ ಅಪರಾಧಿಗಳೂ ವಿವಿಧ ಹೀನ ಅಪರಾಧ ಕೃತ್ಯಗಳಲ್ಲಿ ತಪ್ಪಿತಸ್ಥರು ಎಂಬುದು ಸಾಬೀತಾಗಿತ್ತು. ಶಿಕ್ಷೆಗೆ ಗುರಿಯಾದವರಲ್ಲಿ ಇಸ್ಲಾಮಿಕ್ ಸ್ಟೇಟ್ ಗುಂಪು ಅಥವಾ ಅಲ್ ಕೈದಾ,

ಯೆಮೆನ್‌ನ ಹುತಿ ಬಂಡುಕೋರ ಪಡೆಗಳು ಅಥವಾ ಇತರೆ ಭಯೋತ್ಪಾದನಾ ಸಂಘಟನೆಗಳಗೆ ಸಂಬಂಧಿಸಿದವರು ಸೇರಿದ್ದಾರೆ ಎಂದು ಹೇಳಿದೆ.
“ಸರ್ಕಾರಿ ಸಿಬ್ಬಂದಿಯನ್ನು ಹಾಗೂ ಪ್ರಮುಖ ಆರ್ಥಿಕ ಸ್ಥಳಗಳನ್ನು ಗುರಿ ಮಾಡಿಸಿದವರು, ಕಾನೂನು ಜಾರಿ ಅಧಿಕಾರಿಗಳನ್ನು ಕೊಲೆ ಮಾಡಿ ಅವರ ದೇಹಗಳನ್ನು ಛಿದ್ರಗೊಳಿಸಿದ

ಮತ್ತು ಪೊಲೀಸ್ ವಾಹನಗಳನ್ನು ಗುರಿಯಾಗಿಸಿ ನೆಲ ಬಾಂಬುಗಳನ್ನು ಅಳವಡಿಸಿದ ಪ್ರಕರಣಗಳ ಅಪರಾಧಿಗಳನ್ನು ಇದು ಒಳಗೊಂಡಿದೆ” ಎಂದು ಎಸ್‌ಪಿಎ ತಿಳಿಸಿದೆ.

ಜತೆಗೆ ಅಪಹರಣ, ಚಿತ್ರಹಿಂಸೆ, ಅತ್ಯಾಚಾರ, ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮತ್ತು ಅರಮನೆಗೆ ಬಾಂಬ್‌ಗಳನ್ನು ಎಸೆದಂತಹ ಅಪರಾಧ ಪ್ರಕರಣಗಳ ತಪ್ಪಿತಸ್ಥರನ್ನು ಕೂಡ ಮರಣದಂಡನೆಗೆ ಒಳಪಡಿಸಲಾಗಿದೆ ಎಂದು ಹೇಳಿದೆ.

ಒಂದೇ ದಿನ 81 ಮಂದಿಯನ್ನು ಮರದಂಡನೆಗೆ ಒಳಪಡಿಸಿದ್ದು ಸೌದಿ ಅರೇಬಿಯಾದಲ್ಲಿ ದಾಖಲೆಯಾಗಿದೆ. ಶಿಕ್ಷೆಗೆ ಒಳಗಾದವರಲ್ಲಿ 73 ಸೌದಿ ಪ್ರಜೆಗಳು, ಏಳು ಮಂದಿ ಯೆಮನ್ ಪ್ರಜೆಗಳು ಹಾಗೂ ಒಬ್ಬ ಸಿರಿಯಾ ಪ್ರಜೆ ಸೇರಿದ್ದಾರೆ.

ಶಿಕ್ಷೆಗೆ ಒಳಗಾದ ಎಲ್ಲ ಅಪರಾಧಿಗಳನ್ನೂ ಸೌದಿಯ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಪ್ರತಿ ಆರೋಪಿಗಳಿಗೂ ಮೂರು ಪ್ರತ್ಯೇಕ ಹಂತಗಳಲ್ಲಿ ವಿಚಾರಣೆ ನಡೆದಿದ್ದು, 13 ನ್ಯಾಯಾಧೀಶರು ವಿಚಾರಣೆಯನ್ನು ನಡೆಸಿದ್ದಾರೆ.

2021ರಲ್ಲಿ ಸೌದಿ ಅರೇಬಿಯಾ 69 ಮಂದಿಯನ್ನು ಮರಣದಂಡನೆಗೆ ಒಳಪಡಿಸಿತ್ತು. ಜಗತ್ತಿನಾದ್ಯಂತ 50 ದೇಶಗಳಲ್ಲಿ ಮರಣದಂಡನೆ ಮುಂದುವರಿಸಲಾಗಿದೆ. 2020ರಲ್ಲಿ 483 ಮರಣದಂಡನೆಗಳಲ್ಲಿ ಶೇ 88ರಷ್ಟು ನಾಲ್ಕು ದೇಶಗಳಲ್ಲಿ ವರದಿಯಾಗಿತ್ತು.

ಇರಾನ್‌ನಲ್ಲಿ 246, ಈಜಿಪ್ಟ್‌ನಲ್ಲಿ 107, ಇರಾಕ್‌ನಲ್ಲಿ 45 ಮತ್ತು ಸೌದಿ ಅರೇಬಿಯಾದಲ್ಲಿ 27 ಮರಣದಂಡನೆಗಳು ಜಾರಿಯಾಗಿದ್ದವು.

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

Trending