Thursday, March 23, 2023

ಬೆಳ್ತಂಗಡಿ: ಚಿನ್ನಾಭರಣಕ್ಕಾಗಿ ವೃದ್ಧೆಯನ್ನೇ ಮುಗಿಸಿದ ದುರುಳರು

ಬೆಳ್ತಂಗಡಿ: ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೈಮೇಲಿದ್ದ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಇಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದೆ.


ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಗಂಭೀರ ಹಲ್ಲೆಗೊಳಗಾಗಿ ಸ್ಥಳದಲ್ಲೇ ಮೃತಪಟ್ಟವರು.


ಘಟನೆ ವಿವರ
ಅಕ್ಕು ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದರು. ಮಗ ಮತ್ತು ಸೊಸೆ ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದರು.

ಇಂದು ಶನಿವಾರವಾದ ಕಾರಣ ಮಧ್ಯಾಹ್ನ ಮೊಮ್ಮಗಳು ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕರೆದಾಗ, ಅಜ್ಜಿ ಮನೆಯಲ್ಲಿ ಇರಲಿಲ್ಲ. ಈ ವೇಳೆ ಹುಡುಕಾಡಿದಾಗ ಮನೆಯ ಹಿಂಭಾಗ ಅಜ್ಜಿ ಗಂಭೀರ ಗಾಯಗೊಂಡು ಬಿದ್ದಿದ್ದರು.

ತಕ್ಷಣ ಮೊಮ್ಮಗಳು ಪೋಷಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾಳೆ. ಅವರು ಬಂದು ನೋಡಿದಾಗ ಅಕ್ಕು ಅವರು ಮೃತಪಟ್ಟಿದ್ದು, ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಮನೆಯಲ್ಲಿದ್ದ ನಗದನ್ನು ದರೋಡೆಗೈದಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಧರ್ಮಸ್ಥಳ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...