Connect with us

BANTWAL

@85 ಸಂಭ್ರಮದಲ್ಲಿ ಸಾಲಮೇಳದ ಹರಿಕಾರ ಜನಾರ್ದನ ಪೂಜಾರಿ

Published

on

ಮಂಗಳೂರು: ಕರಾವಳಿಯ ಹಿರಿಯ ಮುತ್ಸದ್ದಿ, ಸಾಲ ಮೇಳದ ರೂವಾರಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಗೆ ಇಂದು 85ನೇ ಹುಟ್ಟು ಹಬ್ಬದ ಸಂಭ್ರಮ.


ಸದ್ಯ ತನ್ನ ಇಳಿವಯಸ್ಸಿನಲ್ಲಿ ಗತಕಾಲದ ದಿನಗಳನ್ನು ಮೆಲುಕುಹಾಕುತ್ತಾ ಬಂಟ್ವಾಳದ ಬಸ್ತಿಪಡ್ಪುವಿನ ‘ಚೆನ್ನಮ್ಮ ಕುಟೀರ’ದಲ್ಲಿ ಕುಟುಂಬದೊಂದಿಗೆ ಜೀವನ ಕಳೆಯುತ್ತಿದ್ದಾರೆ. ಅವರು ಕರಾವಳಿಗೆ ನೀಡಿದ ವಿಶೇಷ ಕೊಡುಗೆ, ಹೊಸ ಚಿಂತನೆಯ ಕ್ರಾಂತಿಕಾರಿ ಬದಲಾವಣೆಗಳನ್ನು ತಂದು.

ಹೊಸ ಮುನ್ನುಡಿ ಬರೆದಿದ್ದಾರೆ. ಜೊತೆಗೆ ಸಮಾನ ಸಾಮಾಜಿಕ ಚಿಂತನೆ, ಹತ್ತಾರು ಜನಪರ ಯೋಜನೆ ಜಾರಿಗೆ ತಂದ ಅವರು ರಾಜಕೀಯ ಕ್ಷೇತ್ರದಲ್ಲಿ ಅಜರಾಮರರಾಗಿದ್ದಾರೆ.


ಬಂಟ್ವಾಳದ ಅತೀ ಹಿಂದುಳಿದ ಬಸ್ತಿಪಡ್ಪುವಿನಿಂದ ದೆಹಲಿಯ ಜನಪಥ್‌ವರೆಗೆ ಅತ್ಯಂತ ಪ್ರಭಾವ ಹೊಂದಿದ್ದ ಕರ್ನಾಟಕದ ಏಕೈಕ ರಾಜಕಾರಣಿ ಎಂದರೆ ಬಿ.ಜನಾರ್ದನ ಪೂಜಾರಿ. ಪೂಜಾರಿ ಅವರಿಗೆ ರಾಜಕೀಯವಾಗಿ ಪಕ್ಷದ ಒಳಗೆ ಮತ್ತು ಹೊರಗೆ ರಾಜಕೀಯ ವಿರೋಧಿಗಳಿರಬಹುದು.

ಆದರೆ ಅವರ ಪ್ರಾಮಾಣಿಕತೆ ಬಗ್ಗೆ ಸಾಸಿವೆ ಕಾಳಿನಷ್ಟೂ ದೂರುವಂತಿಲ್ಲ. ಅವರ ನೇರನುಡಿ ಕೆಲವರಿಗೆ ಕಹಿ ಅನಿಸಿರಬಹುದು ಆದರೆ ಅದರಲ್ಲಿ ಸತ್ಯಗಳು ಇತ್ತು ಎನ್ನುವುದನ್ನು ಅವರ ವಿರೋಧಿಗಳು ಒಪ್ಪಿಕೊಳ್ಳುತ್ತಾರೆ.


ಕರಾವಳಿಯ ರಾಜಕಾರಣದಲ್ಲಿ ಎಷ್ಟೋ ರಾಜಕಾರಣಿಗಳು ಬಂದು ಹೋಗಿರಬಹುದು. ಆದರೆ ರಾಜಕೀಯದಲ್ಲಿ ಪೂಜಾರಿ ಅವರ ವ್ಯಕ್ತಿತ್ವವೇ ಬೇರೆ. ಅವರುಡುವ ಶ್ವೇತ ವರ್ಣದ ವಸ್ತ್ರದಂತೆ ನಿಶ್ಕಲ್ಮಶ, ಪ್ರಾಮಾಣಿಕ ರಾಜಕಾರಣಿ ಸಿಗುವುದು ಬಲು ಅಪರೂಪ.

ಆದ್ದರಿಂದ ಅವರು ಕರಾವಳಿ, ರಾಜ್ಯ, ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರಿಗೆ ಪಕ್ಷಾತೀತವಾಗಿ ಗೌರವ ನೀಡಬೇಕು ಎಂಬುವುದು ಎಲ್ಲರ ಆಶಯ. ಆದರೆ ಕಾಲ ಮಿಂಚಿಲ್ಲ.

ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರಿಗೆ ‘ಮಹಾಗೌರವ’ ನಡೆಯಬೇಕು ಎಂಬುವುದು ಅವರ ಅಭಿಮಾನಿಗಳ ಆಶಯ.

ಶಾಂತಿ-ಕ್ರಾಂತಿಯ ಹರಿಕಾರ ಜನಾರ್ದನ ಪೂಜಾರಿ ‘ಮಹಾ ಗೌರವ’ ಕ್ಕೆ ಕಾಲ ಸನ್ನಿಹಿತ

 

1 Comment

1 Comment

  1. Sadhu poojary

    27/04/2022 at 10:51 AM

    ಪಕ್ಷಾತೀವಾದ ಮಹಾಗೌರವ ಅವರಿಗೆ ಸಲ್ಲಬೇಕು

Leave a Reply

Your email address will not be published. Required fields are marked *

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

LATEST NEWS

Trending