Connect with us

    LATEST NEWS

    ಮದುವೆಯಾಗುವಂತೆ ಒತ್ತಾಯಿಸಿದ ಗರ್ಭಿಣಿ ಪ್ರೇಯಸಿಯನ್ನೇ ಹ*ತ್ಯೆಗೈದು ಹೂ*ತು ಹಾ*ಕಿದ ಗೆಳೆಯ

    Published

    on

    ಮಂಗಳೂರು/ನವದೆಹಲಿ: ಪ್ರೀತಿಸಿ, ಪ್ರೇಯಸಿಯನ್ನು ಗರ್ಭಿಣಿಯಾಗುವಂತೆ ಮಾಡಿ, ಅವಳು ಮದುವೆಯಾಗುವಂತೆ ಒತ್ತಾಯಿಸಿದಾಗ ಪ್ರೇಯಸಿಯನ್ನೇ ಹ*ತ್ಯೆಗೈದು ನಿರ್ಜನ ಪ್ರದೇಶದಲ್ಲಿ ಹೂತು ಹಾಕಿರುವ ಭಯಾನಕ ಘಟನೆಯೊಂದು ಹರಿಯಾಣದ ರೋಹ್ಟಕರ್ ನಲ್ಲಿ ನಡೆದಿರುವುದು ಶುಕ್ರವಾರ(ಅ.25) ಬೆಳಕಿಗೆ ಬಂದಿದೆ.

    ಮೃತ ಯುವತಿಯನ್ನು ಪಶ್ಚಿಮ ದೆಹಲಿಯ ನಾಂಗ್ಲೋಯ್‌ ನಿವಾಸಿಯಾಗಿರುವ ಸೋನಿ (20 ವರ್ಷ) ಎನ್ನಲಾಗಿದೆ, ಸಂಜು ಅಲಿಯಾಸ್ ಸಲೀಂ ಸೋನಿಯನ್ನು ಹ*ತ್ಯೆಗೈದ ಆರೋಪಿ.

    ಏನಿದು ಪ್ರಕರಣ:

    ಸೋನಿ ಇನ್ಸ್ಟಾ ಗ್ರಾಮ್ ನಲ್ಲಿ ರೀಲ್ಸ್ ಗಳನ್ನು ಮಾಡಿ ಅಪ್ ಲೋಡ್ ಮಾಡುತ್ತಿದ್ದಳು ಅಲ್ಲದೆ ಇನ್ಸ್ಟಾಗ್ರಾಮ್ ನಲ್ಲಿ 6 ಸಾವಿರಕ್ಕೂ ಅಧಿಕ ಫಾಲೋವರ್ಸ್ ಗಳಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಸಲೀಂ ಹೇಗಾದರೂ ಸೋನಿಯ ಸ್ನೇಹ ಬೆಳೆಸಿಕೊಳ್ಳಬೇಕು ಎಂದುಕೊಂಡಿದ್ದ ಅದರಂತೆ ಆಕೆಗೆ ನಿರಂತರ ಸಂದೇಶಗಳನ್ನು ಕಳುಹಿಸುತ್ತಿದ್ದ ಇದರಿಂದ ಪರಿಚಯವಾದ ಸಲೀಂ ತನ್ನ ಹೆಸರನ್ನು ಸೋನಿ ಬಳಿ ಸಂಜು ಎಂದು ಹೇಳಿಕೊಂಡಿದ್ದ, ಹೀಗೆ ದಿನಕಳೆದಂತೆ ಪರಿಚಯ ಪ್ರೀತಿಗೆ ತಿರುಗಿ ಇದೀಗ ಆಕೆ ಏಳು ತಿಂಗಳ ಗರ್ಭಿಣಿ ಈ ವಿಚಾರ ಮನೆಯಲ್ಲಿ ಗೊತ್ತಾದರೆ ಎಂದು ಹೆದರಿದ ಸೋನಿ ಸಂಜು ಬಳಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು. ಅದಕ್ಕೆ ಆತ ಮೊದಲು ಮಗುವನ್ನು ತೆಗಿಸು ಆಮೇಲೆ ಮದುವೆ ನೋಡೋಣ ಎಂದು ಹೇಳಿದ್ದನಂತೆ ಇದರಿಂದ ಗಾಬರಿಗೊಂಡ ಸೋನಿ ಮನೆಯವರಲ್ಲಿ ಸಂಜು ನನ್ನು ಪ್ರೀತಿಸುತ್ತಿದ್ದು ಆತನನ್ನೇ ಮದುವೆಯಾಗುತ್ತೇನೆ ಎಂದು ಹೇಳಿಕೊಂಡಿದ್ದಾಳೆ ಇದಕ್ಕೆ ಪೋಷಕರು ಒಪ್ಪಲಿಲ್ಲ.

    ಇತ್ತ ಪೋಷಕರ ಮಾತಿನಿಂದ ಭಯಗೊಂಡ ಸೋನಿ ಮತ್ತೆ ಸಂಜು ಬಳಿ ಹೋಗಿ ಮದುವೆಯ ಪ್ರಸ್ತಾಪ ಮಾಡಿದ್ದಾಳೆ ಆಗಲೂ ಸಂಜು(ಸಲೀಂ) ಗರ್ಭಪಾತ ಮಾಡಿಸುವಂತೆ ಹೇಳಿಕೊಂಡಿದ್ದಾನೆ. ಆದರೆ ಸೋನಿ ಇದಕ್ಕೆ ಒಪ್ಪದೇ ಇದ್ದಾಗ ಒಂದಿಷ್ಟು ಬಟ್ಟೆಗಳನ್ನು ಹಿಡಿದುಕೊಂಡು ಅವನ ಮನೆಗೆ ಹೋಗಿದ್ದಳು. ಆಗಲೂ ಮದುವೆ ವಿಚಾರ ಪ್ರಸ್ತಾಪ ಮಾಡಿದ್ದಾಳೆ. ಅದಕ್ಕೆ ಸಂಜು ತನ್ನ ಇಬ್ಬರು ಸ್ನೇಹಿತರನ್ನು ಕರೆಸಿ ಹರಿಯಾಣಕ್ಕೆ ತೆರಳುವ ನಿರ್ಧಾರಕ್ಕೆ ಬಂದಿದ್ದಾನೆ ಅದರಂತೆ ಕಾರಿನಲ್ಲಿ ಹೋಗುವಾಗ ದಾರಿ ಮಧ್ಯೆ ಸಂಜು (ಸಲೀಂ) ಸೋನಿಯ ಕ*ತ್ತು ಹಿ*ಸುಕಿ ಹ*ತ್ಯೆಗೈದಿದ್ದಾನೆ. ಬಳಿಕ ಹರಿಯಾಣದ ರೋಹ್ಟಕ್‌ ನ ನಿರ್ಜನ ಪ್ರದೇಶದಲ್ಲಿ ಹೂತು ಹಾಕಿದ್ದಾನೆ.

    ಸೋನಿ ಪೋಷಕರು ಮಗಳು ಮನೆಗೆ ಬಂದಿಲ್ಲ ಎಂದು ಸಂಜು (ಸಲೀಂ)ಗೆ ಕರೆ ಮಾಡಿದಾಗ ಆತ ಸಿಟ್ಟಿನಲ್ಲಿ ಸೋನಿ ಪೋಷಕರಿಗೆ ಗದರಿದ್ದಾನೆ, ಇದರಿಂದ ಅನುಮಾನಗೊಂಡ ಪೋಷಕರು ಪೊಲೀಸ್ ಠಾಣೆಯಲ್ಲಿ ಸೋನಿ ನಾಪತ್ತೆಯಾಗಿರುವ ಕುರಿತು ದೂರು ನೀಡಿದ್ದಾರೆ. ಇತ್ತ ತನಿಖೆ ಕೈಗೆತ್ತಿಕೊಂಡ ಪೊಲೀಸರು ಪೋಷಕರ ಬಳಿ ಯಾರ ಮೇಲಾದರೂ ಅನುಮಾನ ಇದೆಯೇ ಎಂದು ಕೇಳಿದಾಗ ಸಂಜು ವಿಚಾರ ಹೇಳಿದ್ದಾರೆ ಅದರಂತೆ ಸಂಜು ನನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿದ ವೇಳೆ ಪೊಲೀಸರ ಬಳಿ ತನ್ನ ತಪ್ಪು ಒಪ್ಪಿಕೊಂಡಿದ್ದಾನೆ ಅಷ್ಟು ಮಾತ್ರವಲ್ಲದೆ ತನ್ನ ಹೆಸರು ಸಂಜು ಅಲ್ಲ ಬದಲಿಗೆ ಸಲೀಂ ಎಂದು ಹೇಳಿಕೊಂಡಿದ್ದಾನೆ.

    ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಸಂಜು ಅಲಿಯಾಸ್ ಸಲೀಂ ಮತ್ತು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದು ಮೂರನೇ ಆರೋಪಿಗಾಗಿ ಬಲೆ ಬೀಸಿದ್ದಾರೆ.

    LATEST NEWS

    1.87 ಲಕ್ಷ ಮೌಲ್ಯದ ಗಾಂಜಾ ಮಾರಾಟ ; ಆರೋಪಿ ವಶಕ್ಕೆ

    Published

    on

    ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್‌ ಬಳಿ ನಡೆದಿದೆ.

    ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್‌ ಜಬ್ಬಾರ್‌ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

    ಸುಮಾರು 1,87,500 ಮೌಲ್ಯದ 2 ಕೆಜಿ 344 ಗ್ರಾಂ ತೂಕದ ಗಾಂಜಾ, ಒಂದು ಲಕ್ಷ ಮೌಲ್ಯದ APRILIA ಕಂಪೆನಿಯ ಸ್ಕೂಟರ್, 5.810 ನಗದು, 10 ಸಾವಿರ ಮೌಲ್ಯದ ಮೊಬೈಲ್, ಒಂದು ಚೂರಿ ಸಹಿತ ಒಟ್ಟು 3,04,610 ಲಕ್ಷ ಮೌಲ್ಯದ ಸೊತ್ತುಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ರವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಪವನ್‌ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾರ್‌, ಪ್ರವೀಣ್‌, ವೆಂಕಟೇಶ್‌, ರಾಜೇಶ್‌, ಯತೀನ್‌ ಕುಮಾರ್‌, ಪ್ರಶಾಂತ್ ಮತ್ತು ಚರಣ್‌ರಾಜ್‌ ರವರನ್ನೊಳಗೊಂಡ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

    ಇದನ್ನು ಓದಿ:ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು ; ವಾರ್ನ್ ಮಾಡಿದ್ದಕ್ಕೆ ಬರ್ಬರ ಹ*ತ್ಯೆ

    Continue Reading

    LATEST NEWS

    ಅನಾರೋಗ್ಯದ ಸಂದರ್ಭದಲ್ಲಿ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಂಡ ಸಂಗಾತಿ; ಮುತ್ತಿನಂಥ ಪತ್ನಿಗೆ ಡಿವೋರ್ಸ್‌ ನೀಡಿದ ಪತಿ

    Published

    on

    ಮಂಗಳೂರು: ವ್ಯಕ್ತಿಯೊಬ್ಬ ತನ್ನ ಕಷ್ಟ ಕಾಲದಲ್ಲಿ ಜೊತೆಯಾಗಿ ನಿಂತಿದ್ದ ಹೆಂಡ್ತಿಗೆ ಕೈಕೊಟ್ಟು ಇನ್ನೊಬ್ಬಳನ್ನು ಮದುವೆಯಾಗಿದ್ದಾನೆ. ಹೌದು ಆ ವ್ಯಕ್ತಿ ತಾನು ಪಾರ್ಶ್ವವಾಯುಗೆ ತುತ್ತಾಗಿ 6 ವರ್ಷಗಳ ಕಾಲ ಹಾಸಿಗೆ ಹಿಡಿದಾಗ, ಆತನನ್ನು ಯಾವುದೇ ಕಾರಣಕ್ಕೂ ಬಿಟ್ಟು ಹೋಗದೆ ಕಣ್ಣಲ್ಲಿ ಕಣ್ಣಿಟ್ಟು ಆರೈಕೆ ಮಾಡಿದಂತಹ ಮುತ್ತಿನಂಥ ಪತ್ನಿಗೆ ಡಿವೋರ್ಸ್‌ ಕೊಟ್ಟು ಇನ್ನೊಬ್ಬಳನ್ನು ಮದುವೆಯಾದ ಘಟನೆ ನಡೆದಿದೆ.

    ಪತಿ ಪಾರ್ಶ್ವವಾಯುಗೆ ತುತ್ತಾಗಿ ಹಾಸಿಗೆ ಹಿಡಿದ ಸಂದರ್ಭದಲ್ಲಿ ತನ್ನನ್ನು ಮಗುವಿನಂತೆ ಆರೈಕೆ ಮಾಡಿದ ಪತ್ನಿಗೆ ಡಿವೋರ್ಸ್‌ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಿದ್ದಾನೆ.

    ಮಲೇಷ್ಯಾದ ನಿವಾಸಿಯಾಗಿರುವ ಈತ 2016 ರಲ್ಲಿ ನೂರುಲ್‌ ಸಯಾಜ್ ಸೈಜ್ವಾನಿ ಎಂಬ ಮಹಿಳೆಯನ್ನು ಮದುವೆಯಾಗುತ್ತಾನೆ. ಮದುವೆಯಾದ ಎರಡೇ ವರ್ಷಕ್ಕೆ ಆತ ಭೀಕರ ಕಾರು ಅಪಘಾತದಲ್ಲಿ ಪಾರ್ಶ್ವವಾಯುಗೆ ತುತ್ತಾಗಿ ಹಾಸಿಗೆ ಹಿಡಿಯುತ್ತಾನೆ. ಈ ಸಂದರ್ಭದಲ್ಲಿ ಸೈಜ್ವಾನಿ ಆತನನ್ನು ಬಿಟ್ಟು ಹೋಗದೆ ಸತತ ಆರು ವರ್ಷಗಳ ಕಾಲ ಅಂದರೆ ಅತ ಸಂಪೂರ್ಣವಾಗಿ ಗುಣಮುಖವಾಗುವವರೆಗೂ ನಾಸೊಗ್ಯಾಸ್ಟ್ರಿಕ್‌ ಟ್ಯೂಬ್‌ ಮೂಲಕ ಊಟ ಮಾಡಿಸುವುದರಿಂದ ಹಿಡಿದು ಡೈಪರ್‌ ಚೇಂಜ್‌ ಮಾಡುವವರೆಗೂ ಪತಿರಾಯನನ್ನು ಮಗುವಿನಂತೆ ಆರೈಕೆ ಮಾಡಿ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಂಡಿದ್ದಾಳೆ.

    ಹೆಂಡತಿಯ ಆರೈಕೆಯಿಂದ ಸಂಪೂರ್ಣವಾಗಿ ಗುಣಮುಖನಾದ ಕೆಲವೇ ಸಮಯಗಳ ಬಳಿಕ ತನ್ನನ್ನು ಆರೈಕೆ ಮಾಡಿದ ಮುತ್ತಿನಂಥ ಪತ್ನಿಗೆ ಡಿವೋರ್ಸ್‌ ಕೊಟ್ಟು, ವಿಚ್ಛೇದನದ ಒಂದು ವಾರದ ಬಳಿಕ ಇನ್ನೊಬ್ಬ ಮಹಿಳೆಯನ್ನು ಮದುವೆಯಾಗಿದ್ದಾನೆ. ಸೈಜ್ವಾನಿ ಸೋಷಿಯಲ್‌ ಮೀಡಿಯಾದಲ್ಲಿ ಪತಿಯ ಎರಡನೇ ಮದುವೆಗೆ ಶುಭ ಕೋರಿದ್ದು, ಚಿನ್ನದಂತ ಹೆಂಡತಿಯನ್ನು ಬಿಟ್ಟು ಹೋದ ಆತನಿಗೆ ನೆಟ್ಟಿಗರು ಹಿಗ್ಗಾಮುಗ್ಗಾ ಬೈದಿದ್ದಾರೆ.

    Continue Reading

    BELTHANGADY

    ಬೆಳ್ತಂಗಡಿ ಮಲಂತಬೆಟ್ಟುವಿನಲ್ಲಿ ಹೆಜ್ಜೇನು ದಾಳಿ …!!

    Published

    on

    ಬೆಳ್ತಂಗಡಿ : ಸಂತ ತೆರೆಸಾ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ಮೇಲಂತಬೆಟ್ಟು ಶಾಲೆಯಿಂದ ಮನೆ ಕಡೆ ಬರುತ್ತಿದ್ದರು. ಇವರ ಮೇಲೆ ತೀವ್ರವಾಗಿ ಹೆಜ್ಜೇನು ದಾಳಿ ನಡೆಸಿತ್ತು. ಮಗು ದಾರಿ ತೋರದೆ ಕೆಲ ಮನೆಗಳಿಗೆ ಓಡಿತ್ತು. ಭಯಭೀತಿಯಿಂದಾಗಿ ಮನೆ ಬಾಗಿಲು ಮುಚ್ಚಿತ್ತು.


    ಮೇಲಂತಬೆಟ್ಟು ಗ್ರಾಮದ ಬಳಿ ಹೆಜ್ಜೇನು ಜನರ ಮೇಲೆ ದಾಳಿ ಮಾಡಿದ್ದು, ಜನ ಭಯದಿಂದ ಓಡಿ ಹೋದರು. ಸುತ್ತಲಿನ ಮನೆಯವರು ಭೀತಿಯಿಂದ ಮನೆಬಾಗಿಲು ಮುಚ್ಚಿದರು.

    ಹೆಜ್ಜೇನು ದಾಳಿಯಿಂದ ನೋವು ಉರಿ ತಾಳಲಾರದೆ, ಅತ್ತು ಕರೆದರೂ ರಕ್ಷಣೆಗೆ ರಕ್ಷಣೆಗೆ ಯಾರೂ ಇಲ್ಲದಾಗ ಕೊನೆಯ ಉಪಾಯ ಇಲ್ಲದೆ ಪಂಚಾಯತ್ ಬಳಿ ಓಡಿದಾಗ ಪಂಚಾಯತ್ ಲೈಬ್ರರಿಯನ್ ಚಂದ್ರಾವತಿ ಯೊಗೀಶ್ ಪೂಜಾರಿ ಗೇರುಕಟ್ಟೆ ಬಂದು ಮುಚ್ಚಿದ ಬಾಗಿಲನ್ನು ತೆರೆದು ಮಗುವನ್ನು ಪಂಚಾಯತ್ ಒಳಗೆ ಕರೆಸಿಕೊಂಡು ಹೊದರು. ಆದರೂ ಬೆನ್ನು ಬಿಡದ ಹೆಜ್ಜೇನು ಆಗಲೂ ದಾಳಿ ನಡೆಸಿತು.

    ಮುಂದಕ್ಕೆ ಅಧ್ಯಕ್ಷರ ಕೊಠಡಿಯ ಒಳಗೆ ಹೋಗಿ ಬಾಗಿಲು ಮುಚ್ಚಿ ನೋಡಿದಾಗ ಅಲ್ಲಿಯೂ ಹೆಜ್ಜೇನು ಬಂದಿತ್ತು. ಆವಾಗ ಚಂದ್ರಮತಿಯು ಪೊರಕೆ ಸಹಾಯದಿಂದ ಬಹಳಷ್ಟು ಸಂಖ್ಯೆಯಲ್ಲಿದ್ದ ಹೆಜ್ಜೇನನ್ನು ಕೊಂದು ಮಗುವಿನ ಬಟ್ಟೆ ಬಿಚ್ಚಿಸಿ ಹೆಜ್ಜೇನು ಮುಳನ್ನು ತುರ್ತಾಗಿ ತೆಗೆದು ಮನೆಯವರಿಗೆ ಸುದ್ದಿ ಮುಟ್ಟಿಸಿದರು.

    ನಂತರ ಮಗುವನ್ನು ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಮಗು ಈಗ ಆರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾನೆ. ಪಂಚಾಯತ್ ನೌಕರ ಚಂದ್ರಾವತಿಯವರ ಸಮಯ ಪ್ರಜ್ಞೆ, ತಾಯಿ ಮಮತೆ, ಧೈರ್ಯ ಗ್ರಾಮಸ್ಥರ ಪ್ರಿತಿಗೆ ಪಾತ್ರವಾಯಿತು.

    Continue Reading

    LATEST NEWS

    Trending