DAKSHINA KANNADA
ಮಹಾಮಾರಿ ಮುಕ್ತಿಗಾಗಿ ಪೇಜಾವರ ಶ್ರೀಗಳ ಪೂರ್ವಾಶ್ರಮದ ತಂದೆಯಿಂದ ಚತುಃ ಸಂಹಿತಾಯಾಗ..!
ಮಂಗಳೂರು: ಕಂಡು ಕೇಳರಿಯದ ವಿಪತ್ತು ನಷ್ಟವನ್ನು ತಂದಿಟ್ಟು ಜಗತ್ತನ್ನೇ ಬೆಚ್ಚಿಬೀಳಿಸಿದ ಕೊರೊನಾ ಮಹಾವ್ಯಾಧಿಯ ಮುಕ್ತಿಗಾಗಿ ಪ್ರಪಂಚಾದ್ಯಂತ ಅಸಂಖ್ಯ ಜನ ಹಗಲಿರುಳೆನ್ನದೆ ಭಗೀರಥ ಯತ್ನ ನಡೆಸುತ್ತಿದ್ದಾರೆ .
ಇದೇ ನಿಟ್ಟಿನಲ್ಲಿ ಪರಮಸಾತ್ವಿಕ ಶತಾಯುಷಿ 102 ರ ಹರೆಯದ ಚತುರ್ವೇದ ಪಾರಂಗತರೂ ಆಗಿರುವ ವೈದಿಕ ಅಂಗಡಿಮಾರು ಕೃಷ್ಣ ಭಟ್ಟರು ಹಳೆಯಂಗಡಿ ಸಮೀಪದ ಪಕ್ಷಕೆರೆಯ ತಮ್ಮ ನಿವಾಸದಲ್ಲಿ ಚತುಃ ಸಂಹಿತಾಯಾಗವನ್ನು ನೆರವೇರಿಸಿದ್ದಾರೆ.
ಕೊರೊನಾ ಮುಕ್ತಿ ಮತ್ತು ಜಗತ್ತಿನ ಕ್ಷೇಮಕ್ಕಾಗಿ ಅತ್ಯಂತ, ಶ್ರದ್ಧೆ ಪರಿಶ್ರಮಗಳಿಂದ ಕಳೆದ ಅನೇಕ ದಿನಗಳಿಂದ ಈ ಯಾಗವನ್ನು ನೆರವೇರಿಸಿಕೊಂಡು ಬಂದಿದ್ದಾರೆ.
ಇನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ತಂದೆಯವರಾಗಿರುವ ಭಟ್ಟರು ತಮ್ಮ ಅಪಾರವಾದ ಜೀವನಶ್ರದ್ಧೆಯಿಂದ ಮಾದರಿ ಬದುಕು ನಡೆಸುತ್ತಿರುವವರು .
ಸ್ವಂತಕ್ಕಾಗಿ ಅಲ್ಪ ಪರಾರ್ಥಕ್ಕಾಗಿ ಅಪಾರ ಎಂಬ ನೈಜ ನೆಲೆಯಲ್ಲಿ ವೈದಿಕ ಜೀವನವನ್ನು ನಡೆಸಿಕೊಂಡು ಬರುತ್ತಿರುವವರು . ತಾನು ಮಾತ್ರವಲ್ಲದೇ ತಮ್ಮ ತುಂಬು ಸಂಸಾರಕ್ಕೂ ಇದೇ ಸಾತ್ವಿಕ ತತ್ವದ ಜೀವನ ಪಾಠವನ್ನು ಬೋಧಿಸಿ ಅವರೂ ಅದೇ ದಾರಿಯಲ್ಲಿ ನಡೆಯಲು ಪ್ರೇರೇಪಿಸಿದವರು .
ತಮ್ಮ ಜೀವಮಾನದಲ್ಲಿ ಕೊರೊನಾದಂಥಹ ಮಹಾವ್ಯಾಧಿ ಜಗತ್ತನ್ನು ಕಂಡು ಕೇಳರಿಯದ ರೀತಿಯಲ್ಲಿ ಬಾಧಿಸುತ್ತಿರುವುದನ್ನು ಕಂಡು ಮರುಗಿದ ಈ ಹಿರಿಜೀವ ತನ್ನ ಅರಿವಿನ ನೆಲೆಯಲ್ಲಿ ಋಕ್ ಯಜು ಸಾಮ ಹಾಗೂ ಅಥರ್ವವೇದಗಳೆಂಬ ನಾಲ್ಕೂ ವೇದಗಳ ಯಾಗವನ್ನು ಸಂಕಲ್ಪಿಸಿ ತಾನೇ ಸ್ವತಃ ಯಾಜ್ಞಿಕರಾಗಿ ಯಾಗ ನೆರೆವೇರಿಸುತ್ತಾ ಲೋಕಕ್ಷೇಮಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತಿದ್ದಾರೆ .
ಕಳೆದ ಅನೇಕ ದಿನಗಳಿಂದ ತನ್ನ ಸ್ವಗೃಹದಲ್ಲೇ ವಿದ್ವಾಂಸರೂ ಆಗಿರುವ ಪುತ್ರರು ಹಾಗೂ ಇತರೆ ಕೆಲವು ವಿದ್ವಾಂಸರ ಸಹಕಾರದೊಂದಿಗೆ ಈ ಚತುಃ ಸಂಹಿತಾಯಾಗ ಪ್ರಾರಂಭಿಸಿದ ಭಟ್ಟರು ಈಗಾಗಲೇ ಋಕ್ ಮತ್ತು ಯಜುಃಸಂಹಿತಾ ಯಾಗಗಳನ್ನು ಸಂಪನ್ನಗೊಳಿಸಿದ್ದಾರೆ .
ಮುಖ್ಯವಾಗಿ ಲಾಕ್ ಡೌನ್ ಇರುವ ಕಾರಣ ಯಾವ ಆಡಂಬರವೂ ಇಲ್ಲದೇ ಕೊರೊನಾ ನಿರ್ಬಂಧಗಳನ್ನು ಪಾಲಿಸಿಕೊಂಡು ಕೇವಲ ಬೆರಳೆಣಿಕೆಯ ವಿದ್ವಾಂಸರನ್ನು ಮಾತ್ರ ಸೇರಿಸಿಕೊಂಡು ಅನುಷ್ಠಾನಕ್ಕೆ ಹೆಚ್ಚು ಒತ್ತುಕೊಡು ಈ ಕರ್ತವ್ಯವನ್ನು ನೆರವೇರಿಸಲಾಗುತ್ತಿದೆ .
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.