Baindooru
ಬೈಂದೂರು- ಬಿಜೂರು ರೈಲ್ವೇ ಸೇತುವೆಯಲ್ಲಿ ಸಿಲುಕಿದ ಹಸುವಿನ ರಕ್ಷಣೆ
ಉಡುಪಿ: ಆಹಾರವನ್ನು ಹುಡುಕಿಕೊಂಡು ಹೋಗಿ ರೈಲ್ವೆ ಸೇತುವೆ ಮೇಲ್ಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿಕೊಂಡಿದ್ದ ಹಸುವನ್ನು ಕಾರ್ಯಾಚರಣೆ ಮಾಡಿ ರಕ್ಷಿಸಲಾಗಿದೆ.
ಬೈಂದೂರು-ಬೀಜೂರು ಮಧ್ಯದಲ್ಲಿ ಸಿಗುವ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ. ಹುಲ್ಲು ಮೇಯುತ್ತಾ ರೈಲ್ವೆ ಬ್ರಿಜ್ ಮೇಲೆ ಸಿಲುಕಿ ಕೊಂಡ ಹಸುವನ್ನು ಮಧ್ಯಾಹ್ನದ ವೇಳೆಗೆ ಕಂಡ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳೀಯ ಸಮಾಜ ಸೇವಕ ಸುಬ್ರಹ್ಮಣ್ಯ ಬೀಜೂರು ನೇತೃತ್ವದಲ್ಲಿ ರಕ್ಷಣೆಗೆ ಯತ್ನ ಮಾಡಲಾಗಿದೆ.
ಇದೇ ವೇಳೆ ಸ್ಥಳಕ್ಕೆ ಬಂದ ಬೈಂದೂರು ಅಗ್ನಿಶಾಮಕ ದಳದವರಿಂದ ಹಸುವಿನ ರಕ್ಷಣಾ ಕಾರ್ಯಾಚರಣೆ ಮಾಡಲಾಗಿದೆ. ಸುಮಾರು ಅರ್ಧ ಗಂಟೆಗಳ ಕಾರ್ಯಾಚರಣೆ ಬಳಿಕ ಹಸುವನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿ ಕೆಳಕ್ಕೆ ಇಳಿಸಿದ್ದಾರೆ.
Ancient Mangaluru
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM4 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA7 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!