LATEST NEWS
ಪರಲೋಕದ ಆಸೆಗೆ ಇಹಲೋಕ ತ್ಯಜಿಸಿದ ವೈದ್ಯ ದಂಪತಿ…! ಬ್ಲ್ಯಾಕ್ ಮ್ಯಾಜಿಕ್ ಗೆ ಬ*ಲಿ
ವೈದ್ಯ ದಂಪತಿ ಹಾಗೂ ಟೀಚರ್ ಒಬ್ಬರು ಬ್ಲ್ಯಾ*ಕ್ ಮ್ಯಾ*ಜಿಕ್ಗೆ ಬಲಿಯಾಗಿರುವ ಆಘಾತಕಾರಿ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ವೈದ್ಯ ದಂಪತಿ ನವೀನ್ ಥಾಮಸ್ (35) ,ಪತ್ನಿ ದೇವಿ (35) ಹಾಗೂ ತಿರುವನಂತಪುರದ ನಿವಾಸಿಯಾಗಿ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ಆರ್ಯಾ ಬಿ.ನಾಯರ್ ( 29) ಈ ಮೂವರು ಬ್ಲ್ಯಾಕ್ ಮ್ಯಾಜಿಕ್ಗೆ ಬ*ಲಿಯಾಗಿದ್ದಾರೆ ಎನ್ನಲಾಗಿದೆ.
ನಾಪತ್ತೆ…ಶ*ವವಾಗಿ ಪತ್ತೆ!
ಕಳೆದ ನಾಲ್ಕು ದಿನಗಳಿಂದ ಆರ್ಯಾ ನಾಪತ್ತೆಯಾಗಿದ್ದಾಳೆ ಅಂತ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ತನಿಖೆ ಆರಂಭಿಸಿದ ಪೊಲೀಸರಿಗೆ ಆರ್ಯಾ ಕೊಟ್ಟಾಯಂನ ಸ್ನೇಹಿತರ ಜೊತೆ ಹೋಗಿದ್ದಾರೆ ಅನ್ನೋ ಮಾಹಿತಿ ಸಿಕ್ಕಿತ್ತು. ವಿಚಾರಿಸಿದಾಗ ಕೊಟ್ಟಾಯಂ ನ ವೈದ್ಯ ದಂಪತಿ ಜೊತೆ ಅರುಣಾಚಲು ಪ್ರದೇಶಕ್ಕೆ ತೆರಳಿದ್ದು ಗೊತ್ತಾಗಿದೆ. ಆದ್ರೆ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಅರುಣಾಚಲ ಪೊಲೀಸರು ಕರೆ ಮಾಡಿ ಮೂವರ ಸಾ*ವಿನ ಮಾಹಿತಿ ನೀಡಿದ್ದಾರೆ.
ವೈದ್ಯ ದಂಪತಿ ಹಾಗೂ ಶಿಕ್ಷಕಿ ಅರುಣಾಚಲ ಪ್ರದೇಶದಲ್ಲಿ ಸಾ*ವಿಗೀಡಾಗಿದ್ದಾರೆ ಎಂಬ ಮಾಹಿತಿ ಸಿಕ್ಕ ತಕ್ಷಣ ಕೇರಳದ ಮಾಧ್ಯಮಗಳು ಆರ್ಯಾ ಹಾಗೂ ನವೀನ್ ಮತ್ತು ದೇವಿಯ ಮನೆಯವರನ್ನು ಸಂಪರ್ಕಿಸಿದ್ದಾರೆ. ಆರ್ಯಾ ಮನೆಯವರು ಇದೊಂದು ಮಾ*ಟಮಂತ್ರದ ವಿಚಾರವಾಗಿ ನಡೆದ ಹ*ತ್ಯೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಈ ವಿಚಾರ ಸದ್ಯ ಕೇರಳ ರಾಜ್ಯದಲ್ಲೇ ಸಂಚಲನ ಮೂಡಿಸಿದೆ. ಕೇರಳ ಪೊಲೀಸರು ಅರುಣಚಾಲ ಪ್ರದೇಶಕ್ಕೆ ತೆರಳಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಕೈ ನರ ಕತ್ತ*ರಿಸಿಕೊಂಡು ಆತ್ಮಹ*ತ್ಯೆ…!
ಮಾರ್ಚ್ 28 ರಂದು ಅರುಣಾಚಲ ಪ್ರದೇಶದ ಇಟಾ ನಗರದ ಜಿರೋ ಪ್ರದೇಶ ತಲುಪಿದ್ದ ವೈದ್ಯ ದಂಪತಿ ಹಾಗೂ ಟೀಚರ್ ಆರ್ಯ ಒಂದೇ ಮನೆಯವರು ಎಂದು ರೂಮ್ ಪಡೆದುಕೊಂಡಿದ್ದಾರೆ. ಮಾರ್ಚ್ 31 ರವರೆಗೆ ರೂಮ್ ಬುಕ್ ಮಾಡಿದ್ದು, ಎರಡು ದಿನ ಅರುಣಾಚಲ ಪ್ರದೇಶದಲ್ಲಿ ಸೈಟ್ ಸೀಯಿಂಗ್ಗೆ ಹೊರಗೆ ಹೋಗಿ ಬಂದಿದ್ದಾರೆ. ಆದ್ರೆ, ಮಾರ್ಚ್ 31 ರ ಬಳಿಕ ಅವರನ್ನು ಯಾರೂ ಕೂಡಾ ಕಂಡಿರಲಿಲ್ಲ. ಹೀಗಾಗಿ ಎಪ್ರಿಲ್ 2 ರಂದು ಹೊಟೇಲ್ ಸಿಬ್ಬಂದಿ ಮೂವರಿಗೆ ನೀಡಲಾಗಿದ್ದ ರೂಮ್ ಓಪನ್ ಮಾಡಲು ಮುಂದಾಗಿದ್ದಾರೆ. ಆದ್ರೆ ಒಳಗಡೆಯಿಂದ ರೂಮ್ ಲಾಕ್ ಮಾಡದೆ ಇದ್ದು ಬಾಗಿಲು ತೆರೆದುಕೊಂಡಿದೆ. ಬಾಗಿಲಿನ ಕೆಳಗೆ ಸೌಂಡ್ ಹೊರಬಾರದಂತೆ ಬಟ್ಟೆಯನ್ನು ಅಡ್ಡ ಇಡಲಾಗಿತ್ತು.
ರೂಮ್ನ ಬೆಡ್ ಮೇಲೆ ಆರ್ಯಾ ಹಾಗೂ ದೇವಿಯ ಮೃ*ತದೇಹ ಕಂಡು ಬಂದಿದ್ದು, ನವೀನ್ ದೇಹ ಪತ್ತೆಯಾಗಿರಲಿಲ್ಲ. ಹೀಗಾಗಿ ಹೊಟೇಲ್ ಸಿಬ್ಬಂದಿ ನವೀನ್ ಕೊ*ಲೆ ಮಾಡಿ ಪರಾರಿ ಆಗಿರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದರು. ಆದರೆ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ನವೀನ್ ಥಾಮಸ್ ಮೃ*ತ ದೇಹ ಬಾತ್ರೂಮ್ನಲ್ಲಿ ಪತ್ತೆಯಾಗಿದೆ.
ಮೂವರೂ ಕೈ ಕತ್ತರಿಸಿಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಕ್ತ ಹೆಪ್ಪುಗಟ್ಟದೇ ಇರಲು ಮಾತ್ರೆಗಳನ್ನು ಸೇವಿಸಿದ್ದಕ್ಕೆ ಸಾಕ್ಷಿಯಾಗಿ ಕೆಲವೊಂದು ಮಾತ್ರೆಗಳು ಅಲ್ಲಿ ಪತ್ತೆಯಾಗಿದೆ. ದೇವಿ ಮತ್ತು ಆರ್ಯಾ ಅವರ ಎಡಗೈನಲ್ಲಿ ನರ ಕತ್ತ*ರಿಸಿದ ಗಾ*ಯಗಳಿದ್ದರೆ, ನವೀನ್ ಥಾಮಸ್ ಅವರ ಬಲಗೈನಲ್ಲಿ ಈ ಗಾ*ಯ ಕಂಡು ಬಂದಿದೆ.
ವಿದ್ಯಾವಂತ…ಆದ್ರೆ ವಿಚಿತ್ರ ವ್ಯಕ್ತಿ!
ವೈದ್ಯನಾಗಿರುವ ನವೀನ್ ಥಾಮಸ್ ವಿದ್ಯಾವಂತನಾಗಿದ್ದರೂ, ವಿಚಿತ್ರವಾಗಿ ವರ್ತಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಈ ಲೋಕವಲ್ಲದೆ ಬೇರೊಂದು ಲೋಕವಿದೆ. ಅಲ್ಲಿ ಜನರು ಸಾವಿಲ್ಲದೆ ಬದುಕುತ್ತಾರೆ ಅನ್ನೋ ಕಲ್ಪನೆಗೂ ನಿಲುಕದ ವಿಚಾರಗಳನ್ನು ಪ್ರತಿಪಾದಿಸುತ್ತಿದ್ದ ಎನ್ನಲಾಗಿದೆ.
ಈ ಲೋಕದಲ್ಲಿ ಸಾಮಾನ್ಯರಂತೆ ಸಾ*ವನ್ನಪ್ಪಿದ್ದರೆ ಆ ಲೋಕಕ್ಕೆ ಹೋಗಲು ಅಸಾಧ್ಯವಾಗಿದ್ದು, ಅದಕ್ಕೆ ಈ ರೀತಿಯಾಗಿ ಸಾ*ವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣ ಕೇರಳ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
DAKSHINA KANNADA
ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ
ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಜುಲೈ 19 ರಂದು ಗುಜರಾತ್ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ