FILM
ತೆಲುಗಿನ ಖ್ಯಾತ ಹಾಸ್ಯ ನಟನ ಮಗಳು ಹೃದಯಾಘಾತದಿಂದ ನಿಧನ
ಮಂಗಳೂರು: ತೆಲುಗಿನ ಜನಪ್ರಿಯ ಹಾಸ್ಯನಟ ರಾಜೇಂದ್ರ ಪ್ರಸಾದ್ ಮಗಳು ಗಾಯತ್ರಿ (38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ (ಅಕ್ಟೋಬರ್ 4) ಹೃದಯಾಘಾತ ಆಗಿದ್ದು, ಕುಟುಂಬಸ್ಥರು ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯತ್ರಿ ಇಂದು (ಅಕ್ಟೋಬರ್ 5) ಮೃತಪಟ್ಟಿದ್ದಾರೆ.
ಈ ಹಿಂದೆ ರಾಜೇಂದ್ರ ಪ್ರಸಾದ್ ‘ಬೇವಾರ್ಸ್’ ಸಿನಿಮಾದ ಪ್ರೀ ರಿಲೀಸ್ ಸಮಾರಂಭದಲ್ಲಿ ಮಗಳ ಬಗ್ಗೆ ಮಾತನಾಡಿದ್ದರು. ‘ಈ ಸಿನಿಮಾದಲ್ಲಿ ಅಮ್ಮನ ಮೇಲೆ ಒಂದು ಹಾಡು ಇದೆ. ತಾಯಿ ಇಲ್ಲದವನು ತನ್ನ ಮಗಳಲ್ಲಿ ತಾಯಿಯನ್ನು ಕಾಣುತ್ತಾನೆ. ನಾನು ಹತ್ತು ವರ್ಷದವನಿದ್ದಾಗ ನನ್ನ ತಾಯಿಯನ್ನು ಕಳೆದುಕೊಂಡೆ. ನನ್ನ ಮಗಳಲ್ಲಿ ಅಮ್ಮನನ್ನು ಕಂಡೆ. ಈ ಸಿನಿಮಾದ ಬಳಿಕ ಮಗಳನ್ನು ಮನೆಗೆ ಕರೆದು ಅಮ್ಮ ಹಾಡನ್ನು ನಾಲ್ಕು ಬಾರಿ ಕೇಳಿದ್ದೇನೆ’ ಎಂದರು ರಾಜೇಂದ್ರ ಪ್ರಸಾದ್ ಹೇಳಿದ್ದರು.
ಮಗಳಿಗೆ ಹೃದಯಘಾತವಾದಾಗ ರಾಜೇಂದ್ರ ಪ್ರಸಾದ್ ಶೂಟಿಂಗ್ನಲ್ಲಿ ಬ್ಯುಸಿ ಇದ್ದರು. ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಬಂದಿದ್ದಾರೆ. ವೈದ್ಯರು ತಮ್ಮ ಕೈಲಾದ ಪ್ರಯತ್ನ ಮಾಡಿದರೂ ಬದುಕುಳಿಸಲು ಸಾಧ್ಯವಾಗಲೇ ಇಲ್ಲ. ಇಂದು (ಅಕ್ಟೋಬರ್ 5) ಅಂತಿಮ ಸಂಸ್ಕಾರ ನಡೆಯಲಿದೆ.
FILM
ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ಬಾಸ್ ವಿನ್ನರ್ ಮಂಜು ಪಾವಗಡ
ಮಂಜು ಪಾವಗಡ ಯಾರಿಗೇ ತಾನೇ ಗೊತ್ತಿಲ್ಲ ಹೇಳಿ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮಂಜು ಪಾವಗಡ ಚಿರಪರಿಚಿತ. ಮಜಾ ಭಾರತ, ಗಿಚ್ಚಿ ಗಿಲಿಗಿಲಿ, ಬಿಗ್ಬಾಸ್ ಮೂಲಕ ಎಲ್ಲರ ಮನೆಮಾತಾಗಿರೋ ನಟ ಮಂಜು ಪಾವಗಡ ಅವರು ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಹೌದು, ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡ ಹಾಸ್ಯ ನಟ ಮಂಜು ಪಾವಗಡ ಸದ್ಯ ಜಂಟಿಯಾಗಿದ್ದಾರೆ. ಸದ್ಯ ಪಾವಗಡದಲ್ಲಿ ಮಂಜು ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂದಿನ ನವೆಂಬರ್ನಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಸದ್ಯ ಮಂಜು ಪಾವಗಡ ಅವರು ಕೈ ಹಿಡಿದ ಹುಡುಗಿ ಯಾರು ಅಂತ ಮಾಹಿತಿ ಸಿಕ್ಕಿಲ್ಲ. ಮಂಜು ಪಾವಗಡ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋಗಳು ನ್ಯೂಸ್ ಫಸ್ಟ್ಗೆ ಲಭ್ಯವಾಗಿವೆ.
ಇನ್ನು, ಮೊನ್ನೆಯಷ್ಟೇ ಮಂಜು ಪಾವಗಡ ಅವರು ಬೆಂಗಳೂರಿನಲ್ಲಿಯೇ ತಮ್ಮ ಹೊಸ ಮನೆಗೆ ಪ್ರವೇಶ ಮಾಡಿದ್ದರು. ಹೊಸ ಮನೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಇನ್ನು ಮಂಜು ಪಾವಗಡ ಅವರ ಹೊಸ ಮನೆಗೆ ನಟ ರಾಜೀವ್, ಅಂಕಿತಾ ಜಯರಾಮ್ ಸೇರಿದಂತೆ ಮುಂತಾದವರು ಆಗಮಿಸಿ ಶುಭ ಹಾರೈಸಿದ್ದರು.
FILM
ದಳಪತಿ ವಿಜಯ್ ಕೊನೆ ಸಿನಿಮಾಕ್ಕೆ ಮುಹೂರ್ತ ಫಿಕ್ಸ್ … ಯಾವಾಗ ಗೊತ್ತಾ ..?
ದಳಪತಿ ವಿಜಯ್ ಕೊನೆಯದಾಗಿ ಒಂದು ಸಿನಿಮಾದಲ್ಲಿ ಅಭಿನಯಿಸಿ ಸಿನಿಕ್ಷೇತ್ರಕ್ಕೆ ವಿಧಾಯ ಹೇಳಲಿದ್ದಾರೆ. ಕೆವಿಎನ್ ಈ ಸಿನಿಮಾ ನಿರ್ಮಾಣ ಮಾಡಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ. ಅದರ ಚಿತ್ರಗಳು ಸದ್ಯ ಫುಲ್ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿರುವ ಬಾಲಿವುಡ್ನ ಸ್ಟಾರ್ ನಟ ಬಾಬಿ ಡಿಯೋಲ್ಗೆ ಇದು ಎರಡನೇ ತಮಿಳು ಸಿನಿಮಾ ಆಗಿದೆ.
ಕನ್ನಡತಿ ಪ್ರಿಯಾಮಣಿ ಸಹ ಸಿನಿಮಾದಲ್ಲಿ ನಟಿಸಲಿದ್ದಾರೆ. ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭ ಆಗಲಿದೆ.
ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್, ಬಾಬಿ ಡಿಯೋಲ್, ಪೂಜಾ ಹೆಗ್ಡೆ, ನಟಿ ಮಮತಾ ಬೈಜು, ನಿರ್ಮಾಪಕ ಕೆವಿಎನ್ ವೆಂಕಟ್, ನಿರ್ದೇಶಕ ಎಚ್ ವಿನೋದ್ ಇನ್ನಿತರರು ಭಾಗಿಯಾಗಿದ್ದರು.
ಕೆವಿಎನ್ ನಿರ್ಮಿಸಿ, ವಿಜಯ್ ನಟಿಸಲಿರುವ 69ನೇ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಸಿನಿಮಾದ ನಿರ್ಮಾಪಕರು, ನಟ, ನಿರ್ದೇಶಕರು, ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡಿದ್ದು, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ವಿದಾಯ ಹೇಳಿದ್ದಾರೆ.
FILM
ದಕ್ಷಿಣ ಭಾರತದ ಖ್ಯಾತ ವಿಲನ್ ವಿಧಿವಶ; “ಕೀರಿಕ್ಕಡನ್ ಜೋಸ್” ಇನ್ನಿಲ್ಲ
ಮಂಗಳೂರು/ತಿರುವನಂತಪುರಂ: ಮಲಯಾಳಂ ಚಿತ್ರರಂದ ಖ್ಯಾತ ನಟ, ವಿಲನ್ ಆಗಿ ಜನಪ್ರಿಯತೆ ಪಡೆದಿರುವ ಮೋಹನ್ ರಾಜ್ (70) ನಿನ್ನೆ (ಅ.1)ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ.
‘ಕಿರೀಟಂ’ ಸಿನಿಮಾದ ‘ಕೀರಿಕ್ಕಡನ್ ಜೋಸ್’ ಎಂಬ ಪಾತ್ರದಲ್ಲಿ ಮಿಂಚಿದ್ದು, ಬಳಿಕ ಅದೇ ಹೆಸರಿನಿಂದ ಪ್ರಖ್ಯಾತಿಯಾಗಿದ್ದರು. ಮೋಹನ್ ಲಾಲ್ ಹಿರೋ ಆಗಿ ನಟಿಸಿದ್ದ ಈ ಸಿನಿಮಾ, ಮಲಯಾಳಂ ಚಿತ್ರರಂಗದಲ್ಲಿ ಬಿಗ್ ಹಿಟ್ ಸಿನಿಮಾದಲ್ಲಿ ಒಂದಾಗಿದೆ.
ಚಿತ್ರರಂಗಕ್ಕೆ ಕಾಲಿಡುವ ಮುನ್ನ ಕೇಂದ್ರ ಸರ್ಕಾರದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಮೊದಲ ಸಿನಿಮಾ ಹಿಟ್ ಆದ ನಂತರ ಸಾಲು ಸಾಲು ಚಿತ್ರಗಳಲ್ಲಿ ನಟಿಸುವ ಅವಕಾಶ ಪಡೆದಿದ್ದರು. ಸುಮಾರು 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಮಲಯಾಳಂ, ತೆಲುಗು ಸಿನಿಮಾದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಖ್ಯಾತ ವಿಲನ್ ಆಗಿ ಗುರುತಿಸಿಕೊಂಡಿದ್ದರು. ಕೆಲವು ವರ್ಷಗಳ ಹಿಂದೆ ತೆಲುಗು ಸಿನಿಮಾದ ‘ಸ್ಪಂಟ್’ ದೃಶ್ಯವೊಂದರ ಚಿತ್ರೀಕರಣ ವೇಳೆ ಕಾಲಿಗೆ ಗಾಯವಾಗಿದ್ದು, ಚೇತರಿಸಿಕೊಳ್ಳಲು ಆಗಿರಲಿಲ್ಲ.
ಇಂದು (ಅ.4) ತಿರುವನಂತಪುರಂನಲ್ಲಿ ಪ್ರಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲದವರು ತಿಳಿಸಿದ್ದಾರೆ.
- BIG BOSS5 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS5 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- LATEST NEWS4 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
- BIG BOSS5 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್
Pingback: ಪಿಜಿಯ 5ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹ*ತ್ಯೆ; ಡೆ*ತ್ ನೋಟ್ ಪತ್ತೆ - NAMMAKUDLA NEWS - ನಮ್ಮಕುಡ್ಲ ನ್ಯೂಸ್