hasana
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ; ಚಾಲಕನಿಗೆ ಗಂಭೀರ ಗಾ*ಯ
ಹಾಸನ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಗಂಭೀರ ಗಾ*ಯಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ- ಸಕಲೇಶಪುರ ನಡುವೆ ಇರುವ ಬಾಳುಪೇಟೆಯ ಬಳಿ ಈ ಘಟನೆ ನಡೆದಿದ್ದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಳುಪೇಟೆಯಿಂದ ಕೋಡ್ಲಿ ಹಳ್ಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಈಗಾಗಲೇ ಇದೇ ರೀತಿ ಮರ ಬಿದ್ದು ನಾಲ್ಕು ಜನ ಮೃತಪಟ್ಟಿದ್ದಾರೆ.
ಮರಗಳ ತೆರವಿಗೆ ಆಗ್ರಹ :
ಈ ರಸ್ತೆಯ ಉದ್ದಕ್ಕೂ ಇಕ್ಕೆಲೆಗಳಲ್ಲಿ ಮರಗಳಿದ್ದು ಹಲವು ಹಳೆಯ ಮರಗಳು ಗೆದ್ದಲು ಹಿಡಿದು ನಿಂತಿವೆ. ಸಣ್ಣ ಗಾಳಿ ಬೀಸಿದರೂ ಬೀಳುವ ಸ್ಥಿತಿಯಲ್ಲಿರುವ ಮರಗಳನ್ನು ತೆರವು ಮಾಡಲು ಈ ಹಿಂದೆಯೇ ಸ್ಥಳೀಯರು ಒತ್ತಾಯಿಸಿದ್ದರು. ಆದರೆ, ಮರ ತೆರವು ಮಾಡಲು ಮುಂದಾಗದ ಅಧಿಕಾರಿಗಳ ವರ್ತನೆಯಿಂದಾಗಿ ಈಗಾಗಲೇ ನಾಲ್ಕು ಜೀವ ಹೋಗಿದೆ.
ಇದೀಗ ಮತ್ತೆ ಘಟನೆ ಮರುಕಳಿಸಿದ್ದು, ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಸ್ಥಳಿಯರೇ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.
hasana
ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲು.!
ಹಾಸನ/ಮಂಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ಮಕ್ಕಳು ನೀರುಪಾಲಾದ ದುರ್ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ದುರಗನಹಳ್ಳಿ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು 8 ರಿಂದ 10 ವರ್ಷದ ಐದು ಮಕ್ಕಳು ಕೆರೆಯಲ್ಲಿ ಈಜಲೆಂದು ಹೋಗಿದ್ದರು. ಐವರು ಮಕ್ಕಳಲ್ಲಿ ನಾಲ್ಕು ಮಂದಿ ನೀರುಪಾಲಾಗಿದ್ದಾರೆ. ಎರಡು ಮಕ್ಕಳ ಮೃತದೇಹ ಸಿಕ್ಕಿದ್ದು, ಇನ್ನೂ ಇಬ್ಬರಿಗಾಗಿ ಅಗ್ನಿ ಶಾಮಕದಳದ ಸಿಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ಸಿಬಂಧಿಗಳು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
![students death](https://nammakudlanews.com/wp-content/uploads/2024/05/students-death.jpg)
ವಿಶ್ವಾಸ್, ಪೃಥ್ವಿ, ಜೀವನ್
ದೊರೆ ಹಾಗೂ ಹೇಮವರ ಪುತ್ರ ಜೀವನ್, ಸೋಮಶೇಖರ್ ಹಾಗೂ ಲತಾ ಅವರ ಪುತ್ರ ಪೃಥ್ವಿ, ಚಂದ್ರು ಹಾಗೂ ಪುಷ್ಪ ಅವರ ಪುತ್ರ ವಿಶ್ವಾಸ್, ಮದಘಟ್ಟದಿಂದ ಬಂದಿದ್ದ ಉಮೇಶ್ ಹಾಗೂ (ಗುಣ) ಅವರ ಪುತ್ರ ಸಾತ್ವಿಕ್ ಮೃತಪಟ್ಟ ದುರ್ದೈವಿಗಳು.
ಐವರು ಮಕ್ಕಳು ಮುತ್ತಿಗೆ ಗ್ರಾಮದ ಮಕ್ಕಳಾಗಿದ್ದು, ಪಕ್ಕದ ಮುತ್ತಿಗೆ ಗ್ರಾಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆರೆಯಲ್ಲಿ ಈಜಲು ಈಜಲು ತಿಮ್ಮನಹಳ್ಳಿ ಗ್ರಾಮಕ್ಕೆ ಹೋಗಿದ್ದು ಅಲ್ಲಿ ಈ ದುರ್ಘಟನೆ ನಡೆದಿದೆ.
ವೀಡಿಯೋ ಕಾಲ್ ತಂದ ಆಪತ್ತು; ಪತ್ನಿಗೆ ಹೆದರಿಸಲು ಹೋಗಿ ಇಹಲೋಕ ತ್ಯಜಿಸಿದ ಜಿಮ್ ಟ್ರೈನರ್
bengaluru
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕ*ರಣಕ್ಕೆ ಟ್ವಿಸ್ಟ್..! ಎಸ್ಐಟಿ ರಚನೆ!!
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.
47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಈ ಹಿಂದೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ನೀಡಿದ ದೂರಿನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ತಂದೆ ಎಚ್ಡಿ ರೇವಣ್ಣ ಅವರನ್ನು ಎ1 ಆರೋಪಿಯಾಗಿ ನಮೂದಿಸಿದ್ದು, ಎ2 ಪ್ರಜ್ವಲ್ ರೇವಣ್ಣ ಆಗಿದ್ದಾರೆ. ದೂರಿನಲ್ಲಿ ಏನಿದೆ ಅಂದರೆ… ನಮ್ಮ ಪತಿಗೆ ಎಚ್ಡಿ ರೇವಣ್ಣ ತಮ್ಮ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ 2015ರಲ್ಲಿ ಹಾಸ್ಟೆಲ್ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ತಮ್ಮ ಮನೆಯಲ್ಲಿ ಅಡುಗೆ ಕೆಲಸಕ್ಕೆ ಬರುವಂತೆ ರೇವಣ್ಣ ಹೇಳಿದ್ದರು. ಅಡುಗೆ ಕೆಲಸಕ್ಕೆ ಸೇರಿಕೊಂಡ ಬಳಿಕ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ವೇಳೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪ್ರಜ್ವಲ್ ರೇವಣ್ಣ ಅಸಭ್ಯವಾಗಿ ವರ್ತಿಸಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪದೇ ಪದೇ ಕಾಲ್ ಮಾಡಿದ್ದಕ್ಕೆ ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್ ಮಾಡಿದ್ದರು. ಲೈಂಗಿಕ ಕಿರುಕುಳ ಹೆಚ್ಚಾದಾಗ ಕೆಲಸಬಿಟ್ಟು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ. ಸದ್ಯ ಪೆನ್ಡ್ರೈವ್ ವಿವಾದದಲ್ಲಿರುವ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿ ಸೇರಿದ್ದಾರೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಹಾಸನದಲ್ಲಿ ಏಪ್ರಿಲ್ 26 ರಂದು ನಡೆದಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದಾರೆ.
ಮುಂದೆ ಓದಿ..; ಲೈಂ*ಗಿಕ ದೌರ್ಜ*ನ್ಯ ಆರೋಪ : ವಿಕಿಪೀಡಿಯಾದಲ್ಲಿ ಸೇವ್ ಆಯ್ತು ಪ್ರಜ್ವಲ್ ರೇವಣ್ಣ ಕೇಸ್!
ಎಸ್ಐಟಿಗೆ ನೀಡುವುದಾಗಿ ಗೃಹಸಚಿವರಿಂದ ಸೂಚನೆ:
ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿರುವಾಗ ಈ ವಿಡಿಯೊ ದೃಶ್ಯಾವಳಿಗಳ ತುಣುಕುಗಳ ಪೆನ್ಡ್ರೈವ್ಗಳು ಹಾಸನದಾದ್ಯಂತ ವೈರಲ್ ಆಗಿತ್ತು. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ನೀಡುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
hasana
ಆರ್ಎಸ್ಎಸ್ ಬಗ್ಗೆ ತಪ್ಪಾಗಿ ಮಾತಾಡಿದ್ರೆ ಕ್ಷಮಿಸಿ ಎಂದ ಪ್ರಜ್ವಲ್ ರೇವಣ್ಣ
ಹಾಸನ: ನನ್ನ ಗಮನಕ್ಕೆ ಬಾರದೆ ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದ್ದೆ. ನಾನೊಬ್ಬ ಯುವಕನಾಗಿ ಹೋರಾಟದ ದೃಷ್ಠಿಯಿಂದ ಮಾತನಾಡಿದ್ದೆ . ಆದರೆ ಈಗ ನಾನು ಆರ್ಎಸ್ಎಸ್ ನ ಬಗ್ಗೆ ಅರಿವಿಲ್ಲದೆ ಮಾತನಾಡಿರುವುದು ತಪ್ಪು. ನನಗೆ ಅರಿವಾಗಿದೆ. ಸಭೆಯಲ್ಲಿ ಆರ್ಎಸ್ ಕಾರ್ಯಕರ್ತರು, ಮುಖಂಡರು ಇದ್ದಲ್ಲಿ ನನ್ನನ್ನು ಕ್ಷಮಿಸಿ ಬಿಡಿ ಎಂದು ಸಭೆಯೊಂದರಲ್ಲಿ ಕೇಳಿಕೊಂಡಿದ್ದಾರೆ.
ಈಗಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೋಡಿ ಎತ್ತುಗಳ ಹಾಗೆ ಲೋಕಸಭಾ ಚುನಾವಣಾ ಆಖಾಡದಲ್ಲಿ ಪ್ರಚಾರ ಆರಂಭಿಸಿದ್ದಾರೆ. ಈ ಹಿನ್ನೆಲೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಜ್ವಲ್ ರೇವಣ್ಣರವರು ಮಾತನಾಡಿದ್ದಾರೆ.
ಇದನ್ನೂ ಓದಿ : ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ನಾನು ಸಂಸದನಾಗಿ ಆಯ್ಕೆಯಾಗಿ 5 ವರ್ಷಗಳಾಗಿದೆ. ಐದು ವರ್ಷದಲ್ಲಿ ಬಹಳಷ್ಟು ಯೋಜನೆಗಳನ್ನು ಕ್ಷೇತ್ರಕ್ಕೆ ತಂದುಕೊಟ್ಟಿದ್ದೇನೆ. ಜನ ನನ್ನ ಅಭಿವೃದ್ಧಿಯ ಬಗ್ಗೆ ಯಾರೂ ಪ್ರಶ್ನೆ ಮಾಡುತ್ತಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಇದು ಕೇವಲ ಕಾಂಟ್ರಾಕ್ಟ್ ಮದುವೆ ಅಲ್ಲ, ಐವತ್ತು ಅರುವತ್ತು ವರ್ಷಗಳ ಕಾಲ ನಾವು ಜಂಟಿಯಾಗಿ ಕೆಲಸ ಮಾಡುತ್ತೇವೆ ಎಂದು ರಾಧಾ ಮೋಹನ್ ದಾಸ್ ಕೂಡಾ ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಕಾರ್ಯಕರ್ತರನ್ನು ಗೌರವಿಸುತ್ತೇನೆ. ನಾನೊಬ್ಬ ಯುವಕ. ಹಾಗಾಗಿ ಗೊತ್ತಿಲ್ಲದೆ ಕೆಲವೊಂದು ತಪ್ಪುಗಳು ಸಂಭವಿಸಬಹುದು. ಆದರೆ ನನ್ನ ತಪ್ಪುಗಳನ್ನು ಅರಿತು ಅದನ್ನು ಸರಿಮಾಡಿಕೊಂಡು ಮುಂದೆ ಹೋಗುತ್ತೇನೆ. ಹಿರಿಯರು ಹೇಳಿದ ಮಾತನ್ನು ಚಾಚುತಪ್ಪದೆ ಪಾಲಿಸುತ್ತೇನೆ. ನನಗೊಂದು ಈ ಬಾರಿ ಅವಕಾಶ ಮಾಡಿಕೊಡಿ ಎಂದು ವಿನಂತಿಸಿಕೊಂಡರು. ಈ ಬಾರಿ 400 ಸೀಟ್ ಗೆಲ್ಲಿಸುವ ಮೂಲಕ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಇದರಲ್ಲಿ ನನಗೂ ಒಂದು ಅವಕಾಶ ಮಾಡಿಕೊಡಿ ಎಂದು ಪ್ರಜ್ವಲ್ ರೇವಣ್ಣ ಮನವಿ ಮಾಡಿದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ