ಮಾನವೀಯತೆಗೆ ಇನ್ನೊಂದು ಹೆಸರು ಪಣಂಬೂರು ಎಸ್ಐ ಉಮೇಶ್ ಕುಮಾರ್..!
ಮಾನವೀಯತೆಗೆ ಇನ್ನೊಂದು ಹೆಸರು ಪಣಂಬೂರು ಎಸ್ಐ ಉಮೇಶ್ ಕುಮಾರ್..!
ಮಂಗಳೂರು :ಮಾನವೀಯತೆಗೆ ಇನ್ನೊಂದು ಹೆಸರು ಮಂಗಳೂರು ಪೊಲೀಸ್ ಕಮೀಷನರೇಟ್ ನ ಪಣಂಬೂರು ಎಸ್ಐ ಉಮೇಶ್ ಕುಮಾರ್ ಆಗಿದ್ದಾರೆ.
ವೃತ್ತಿಯಲ್ಲಿ ಉಪನ್ಯಾಸಕಿ ಯಾಗಿದ್ದ ವಿಜಯಲಕ್ಷ್ಮಿ 59 ವಯಸ್ಸಿನ ವೃದ್ಧ ಮಹಿಳೆ ಉತ್ತರಭಾರತದಲ್ಲಿ ಯಾವುದೋ ಒಂದು ಶಾಲೆಯಲ್ಲಿ ಉಪನ್ಯಾಸಕಿಯಾಗಿ ಇದ್ದವರನ್ನು ಕೋರೋಣ ಕಾಯಿಲೆಯ ಕಾರಣದಿಂದಾಗಿ ಅಲ್ಲಿದ್ದ ನೌಕರರನ್ನು ತಮ್ಮ ತಮ್ಮ ಊರಿಗೆ ಕಳಿಸಿದ ಪರಿಣಾಮ ತಮ್ಮ ಊರಾದ ಚಿಕ್ಕಮಂಗಳೂರಿನಲ್ಲಿ ಯಾರು ಇಲ್ಲದ ಕಾರಣ ದೇವರ ಮೊರೆ ಹೋಗಿ ಧರ್ಮಸ್ಥಳಕ್ಕೆ ಬಂದು ಎರಡು ದಿನ ಇದ್ದಿದ್ದರು.
ಅಲ್ಲಿಂದ ಮಂಗಳೂರಿಗೆ ಬಂದು ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ಸ್ಟಾಂಡಿನಲ್ಲಿ ಸಾರ್ವಜನಿಕರಿಂದ ಮಾಹಿತಿ ಪಡೆದು ನನಗೆ ಕೆಲಸ ಬೇಕೆಂದು ಕೇಳಿದಾಗ ಅವರು ಬೈಕಂಪಾಡಿಗೆ ಹೋಗಲು ತಿಳಿಸಿದಂತೆ ಬಸ್ಸಿನಲ್ಲಿ ಬೈಕಂಪಾಡಿಗೆ ಬಂದು ಬೈಕಂಪಾಡಿಯಲ್ಲಿ ಹಲವಾರು ಕಾರ್ಖಾನೆಗಳಿಗೆ ಕೆಲಸ ಕೇಳಿದಾಗ ಯಾರು ಕೆಲಸ ಕೊಡದಿದ್ದಾಗ ಅಸಹಾಯಕತೆಯಿಂದ ಸ್ಥಳೀಯರನ್ನು ಸಂಪರ್ಕಿಸಿದಾಗ ಸ್ಥಳೀಯರು ಪೋಲೀಸ್ ಕಂಟ್ರೋಲ್ ರೂಮಿಗೆ ತಿಳಿಸಿದರು.
ಕಂಟ್ರೋಲ್ ರೂಂ ನಿಂದ ಬಂದ ಮಾಹಿತಿಯಂತೆ ಉಮೇಶ್ ಕುಮಾರ್ ಅವರು ಮತ್ತು ಸಿಬ್ಬಂದಿಯವರು ಕೂಡಲೇ ಸ್ಥಳಕ್ಕೆ ಧಾವಿಸಿ ವಿಚಾರಿಸಿದಾಗ ನನಗೆ ಯಾರೂ ಕೆಲಸ ಕೊಡುವುದಿಲ್ಲ ನನ್ನನ್ನು ಧರ್ಮಸ್ಥಳ ಧರ್ಮಸ್ಥಳಕ್ಕೆ ಕಳುಹಿಸಿ ಕೊಡಿ ಎಂದು ಬೇಡಿಕೊಂಡಾಗ ಪಿಎಸ್ಐ ಅವರು ತಮ್ಮ ಇಲಾಖಾ ಜೀಪಿನಲ್ಲಿ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡಿಗೆ ಕರೆದುಕೊಂಡು ಹೋಗಿ ಬಿಟ್ಟಾಗ ನನಗೆ ಬಸ್ಸಿಗೆ ಹಣವಿಲ್ಲ ಅಂತ ಹೇಳಿ ಹೇಳಿದ್ದಾರೆ ಪಿಎಸ್ಐ ಅವರು ಸ್ವತಹ ನಗದು ಕೊಟ್ಟು ಕಳುಹಿಸಿ ಕೊಟ್ಟರು.
LATEST NEWS
ದಸರಾ ಆನೆಗಳ ಮುಂದೆ ಸೆಲ್ಫೀ, ರೀಲ್ಸ್, ಫೋಟೋಶೂಟ್’ಗೆ ಇಲ್ಲ ಅವಕಾಶ
ಬೆಂಗಳೂರು : ಈಗೀಗ ಮೊಬೈಲ್ ಕ್ರೇಝ್ ಹೆಚ್ಚಾಗಿದೆ. ಹಾಗಾಗಿ ಸಿಕ್ಕ ಸಿಕ್ಕಲ್ಲಿ ರೀಲ್ಸ್, ಸೆಲ್ಫಿಗಳದೇ ಕಾರುಬಾರು. ಅಲ್ಲದೇ, ಕ್ಯಾಮೆರಾ ಹಿಡಿದು ಫೋಟೋಕ್ಕೆ ಫೋಸು ಕೊಡುವವರೇ ಹೆಚ್ಚು. ಆದರೆ, ಈ ಬಾರಿ ನೀವು ಮೈಸೂರು ದಸರಾ ಉತ್ಸವದ ಮೆರವಣಿಗೆಗೆ ಹೋಗಿ ಫೋಟೋ ತೆಗೆಯೋಣ, ಸೆಲ್ಫಿ ತೆಗೆಯೋಣ ಅಂದ್ಕೊಂಡ್ರೆ ಅವಕಾಶವಿಲ್ಲ.
ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್ಗಳಿಗೆ ಅವಕಾಶ ನೀಡಬಾರದು ಎಂದಿದ್ದಾರೆ.
ಶುಕ್ರವಾರ(ಸೆ.20) ಮೈಸೂರಿನಲ್ಲಿ ದಸರಾ ಆನೆಗಳ ನಡುವಿನ ಕಾದಾಟ ನಡೆದಿತ್ತು. ಆ ಬಳಿಕ ಸಚಿವ ಈಶ್ವರ್ ಖಂಡ್ರೆ ಈ ಆದೇಶ ಹೊರಡಿದ್ದಾರೆ. ಯಾವುದೇ ಕಾರಣಕ್ಕೂ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ಫೋಟೋ ಶೂಟ್ ಮಾಡಿಸುವುದು, ವೀಡಿಯೋ ಮಾಡುವುದು, ಸೆಲ್ಫೀ ಕ್ಲಿಕ್ಕಿಸುವುದು ಹಾಗೂ ರೀಲ್ಸ್ಗೆ ಮುಂದಾಗುವಂತಹ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ಘೋಷಣೆ- ಯಾರದು?
ಮೈಸೂರು ದಸರಾ ಮಹೋತ್ಸವದ ಪ್ರಮುಖ ಸಾಕಾನೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು ಅಧಿಕಾರಿಗಳೇ ಅವಕಾಶ ನೀಡಿದ್ದು, ಇದರಿಂದ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ನಡೆದಿತ್ತು.
LATEST NEWS
ಫರಂಗಿಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರಿಗೆ ಗಾಯ
ವಿಟ್ಲದಿಂದ ಮಂಗಳೂರು ವಿಮಾನ ನಿಲ್ದಾಣದ ಕಡೆಗೆ ಸಾಗುತ್ತಿದ್ದ ಕಾರೊಂದು ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಸಂಭವಿಸಿದೆ.
ಬೆಳಗ್ಗೆ 6.15 ರ ವೇಳೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಮೂವರು ಪ್ರಯಾಣಿರಿಗೆ ತುರ್ತಾಗಿ ವಿಮಾನ ನಿಲ್ದಾಣಕ್ಕೆ ಹೋಗಬೇಕಾಗಿದ್ದರಿಂದ ಅವರನ್ನು ಆಟೋ ರಿಕ್ಷಾದಲ್ಲಿ ವಿಮಾನ ನಿಲ್ದಾಣಕ್ಕೆ ಕಳುಹಿಸಿ ಕೊಡಲಾಯಿತು.
ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ಮನೆಯೊಂದರ ಅಂಗಳದಲ್ಲಿ ಮಗುಚಿ ಬಿದ್ದಿದೆ. ಬೆಳಗ್ಗಿನ ವೇಳೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿರ ಬೇಕೆಂದು ಶಂಕಿಸಲಾಗಿದೆ.
LATEST NEWS
ಮೆಟ್ರೋ ನಿಲ್ದಾಣದಲ್ಲಿಅನಾಹುತ; ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
ದೆಹಲಿ/ಮಂಗಳೂರು: ದೆಹಲಿಯ ಲೋಕ ಕಲ್ಯಾಣ್ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಡೆದಿದೆ. 28 ವರ್ಷದ ದೇವೇಂದ್ರಕುಮಾರ್ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ರಾಜಸ್ಥಾನ್ ಅಲ್ವಾರ್ ನಿವಾಸಿಯಾಗಿರುವ ದೇವೆಂದ್ರ ಕುಮಾರ್ ಲೋಕಕಲ್ಯಾಣ್ ಮಾರ್ಗ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರ್ಮ್ ಸಂಖ್ಯೆ 2ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಶವವನ್ನು ಆರ್ಎಂಎಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.