Connect with us

    BANTWAL

    ಭಿಕ್ಷೆ ಬೇಡಿದ ಹಣದಲ್ಲಿ ಪೊಳಲಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂ. ನೀಡಿದ ಅಶ್ವತ್ತಮ್ಮ

    Published

    on

    ಪೊಳಲಿ: ಭಿಕ್ಷೆ ಬೇಡಿದ ಹಣದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ನಡೆಯುವ ಅನ್ನದಾನಕ್ಕೆ ರೂ.1ಲಕ್ಷ ದೇಣಿಗೆ ನೀಡಿ ಹೃದಯವೈಶ್ಯಾಲ್ಯತೆ ಮೆರೆದು ವೃದ್ಧೆ ಮಹಿಳೆಯೊಬ್ಬರು ಸುದ್ದಿಯಾಗಿದ್ದಾರೆ.


    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಕಂಚಿಗೂಡು ನಿವಾಸಿ ಅಶ್ವತ್ತಮ್ಮ ಎಂಬ 80 ವರ್ಷದ ಮಹಿಳೆಯೊಬ್ಬರು ‘ಭವತೀ ಭಿಕ್ಷಾಂದೇಹಿ’ ಎಂಬ ಧ್ಯೇಯವನ್ನು ಇಟ್ಟುಕೊಂಡು ಪೊಳಲಿ ದೇವಸ್ಥಾನದ ವಠಾರದಲ್ಲಿ ಭಿಕ್ಷಾಟನೆ ಮಾಡಿ ಪೊಳ ಲಿ ದೇವಳದ ಅನ್ನದಾನಕ್ಕೆ 1ಲಕ್ಷ ರೂಪಾಯಿಯನ್ನು ನಿನ್ನೆ ನೀಡಿದರು.


    ವರ್ಷದ ಬಹುತೇಕ ಸಮಯ ಮಾಲಾಧಾರಿ ಯಾಗಿದ್ದುಕೊಂಡೆ ಅಯ್ಯಪ್ಪ ಸೇವೆ ಮಾಡುತ್ತಿರುವ ಇವರ ಕುಟುಂಬದಲ್ಲಿ ಬಡತನವಿದ್ದರೂ ಇವರಲ್ಲಿ ಧಾರ್ಮಿಕ ಪ್ರಜ್ಞೆ, ಹೃದಯ ಶ್ರೀಮಂತಿಕೆಗೆ ಬರವಿಲ್ಲ.

    ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಜಾತ್ರಾ ಸಂದರ್ಭ ಸೇರಿದಂತೆ ಇತರ ಕ್ಷೇತ್ರದಲ್ಲಿ ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ಕೂಡಿಟ್ಟು ಶುಕ್ರವಾರ ಪೊಳಲಿ ದೇವಸ್ಥಾನದ ಅನ್ನದಾನ ನಿಧಿಗೆ ಸಮರ್ಪಿಸಿದ್ದಾರೆ.


    ಪೊಳಲಿ ದೇವಳದ ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ, ದೇವಳದ ಪ್ರಧಾನ ಅರ್ಚಕರಾದ ಮಾಧವ ಭಟ್ ದೇವರಲ್ಲಿ ಪ್ರಾರ್ಥಿಸಿದರು. ನಾಗೇಶ್ ರಾವ್, ಪೊಳಲಿ ವೆಂಕಟೇಶ್ ನಾವಡ, ನಾಗೇಶ್ ಪೊಳಲಿ, ನವೀನ್ ಪೊಳಲಿ ಮತ್ತಿತರರು ಇದ್ದರು

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending