LATEST NEWS
ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವು
ಮಂಗಳೂರು: ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರುನಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.
ನವೀನ್ ಬೆಳ್ಳಾಡ(48) ಮೃತ ವ್ಯಕ್ತಿ. ನವೀನ್ ಅವರು ಭಾನುವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃ*ತಪಟ್ಟಿದ್ದಾರೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃ*ತಪಟ್ಟಿದ್ದರು ಎನ್ನಲಾಗಿದೆ. ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
LATEST NEWS
ದೇವರನ್ನು ರಾಜಕೀಯದಿಂದ ದೂರವಿಡಿ ; ಸುಪ್ರೀಂ ಕೋರ್ಟ್ ಸೂಚನೆ..!
ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನೇ ಪ್ರಶ್ನೆ ಮಾಡಿದೆ. ಸಿಎಂ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸುವಂತೆ ಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರ ಪೀಠವು ಸಿಎಂ ಚಂದ್ರಬಾಬು ನಾಯ್ಡು ಅವರು ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.
ಸಾಂವಿಧಾನಕವಾಗಿ ಉನ್ನತ ಹುದ್ದೆಯಲ್ಲಿ ಇರುವ ವ್ಯಕ್ತಿಯಾಗಿ ಈ ರೀತಿ ಕೋಟ್ಯಾಂತರ ಜನರ ಭಾವನೆ ಮೇಲೆ ಪರಿಣಾಮ ಬೀರುವ ಹೇಳಿಕೆ ನೀಡಬಾರದು ಎಂದು ಪೀಠ ಹೇಳಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ವಿಚಾರವಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕೋರಿ ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ದೇವರನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನಿರೀಕ್ಷಿಸುವುದಾಗಿ ಪೀಠ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಲಾಗಿದೆ.
DAKSHINA KANNADA
ಕಾರ್ಕಳದಲ್ಲಿ ಭೀಕರ ಅಪಘಾತ; ತಂದೆ ಸಹಿತ ಮೂರು ಮಕ್ಕಳ ದುರ್ಮರಣ
ಕಾರ್ಕಳ : ಕಾರ್ಕಳ – ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು (ಸೆ.30) ಭೀಕರ ಅಪಘಾತ ಸಂಭವಿಸಿದೆ. ಮಿನಿ ಲಾರಿ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ವೇಣೂರಿನಿಂದ ನಲ್ಲೂರು ಕಡೆಗೆ ಬರುತ್ತಿದ್ದ ಬೈಕ್ಗೆ ಕಾರ್ಕಳದಿಂದ ಗುರುವಾಯನಕೆರೆಯತ್ತ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಬೈಕ್ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದರು. ತಂದೆ ಸುರೇಶ್ ಆಚಾರ್ಯ (36), ಮಕ್ಕಳಾದ ಸಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಮೃತಪಟ್ಟವರು. ತಾಯಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಇನ್ಸ್ಟಾಗ್ರಾಮ್ ಲೈವ್ಗೆ ಹೋದ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಮೀರ್ ಆಚಾರ್ಯ
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ಸಮೀರ್ ಆಚಾರ್ಯ ದಂಪತಿ ಕನ್ನಡ ಕಿರುತೆರೆಯಲ್ಲಷ್ಟೇ ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಫೇಮಸ್. ಟ್ರಾವೆಲ್, ಸಂಗೀತ ಹಾಗೂ ಮಗಳಿಗೆ ಸಂಬಂಧಿಸಿದ ವಿಡಿಯೋ ಮೂಲಕವೇ ಜನಪ್ರಿಯತೆ ಪಡೆದ ಈ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಬಹಳ ಅನ್ಯೋನ್ಯವಾಗಿರುವಂತೆ ನೋಡುಗರೆದುರು ಕಾಣಿಸಿಕೊಳ್ಳುತ್ತಿದ್ದರು.
ಆದರೆ ಇದೀಗ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ಸಮೀರ್ ಆಚಾರ್ಯ ದಂಪತಿ ಜೀವನದಲ್ಲಿ ಅಪಸ್ವರ ಎದ್ದಿದೆ. ಪತ್ನಿ ಶ್ರಾವಣಿ ಸಮೀರ್ ಆಚಾರ್ಯ ಮೇಲೆ ಸಮೀರ್ ಆಚಾರ್ಯ ತಂದೆ-ತಾಯಿಯ ಜೊತೆಗೂಡಿ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶ್ರಾವಣಿ ಸಮೀರ್ ಆಚಾರ್ಯ ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದರಂತೆ. ಈ ವೇಳೆ ಮಗಳು ಜೋರಾಗಿ ಅಳುತ್ತಿದ್ದಳು ಇಂದರಿಂದ ಶ್ರಾವಣಿ ಸಮೀರ್ ಆಚಾರ್ಯ ಮಗಳಿಗೆ ಗದರಿದ್ದಾರೆ. ಇದನ್ನು ಕಂಡ ಸಮೀರ್ ಆಚಾರ್ಯ ತಂದೆ ತನ್ನ ಸೊಸೆ ಶ್ರಾವಣಿಗೆ ಬೈದಿದ್ದಾರೆ ಎನ್ನಲಾಗಿದೆ.
ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಮನೆಯಲ್ಲಿ ಜಗಳ ಪ್ರಾರಂಭವಾಗಿದೆ. ನೋಡ ನೋಡುತ್ತಿದ್ದಂತೆ ಈ ಜಗಳ ತಾರಕಕ್ಕೇರಿದೆ. ಈ ವೇಳೆ ಸಮೀರ್ ಆಚಾರ್ಯ ಸೇರಿದಂತೆ ಅತ್ತೆ, ಮಾವ ಸೇರಿಕೊಂಡು ಮನಬಂದಂತೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದೇ ವೇಳೆ ಶ್ರಾವಣಿ ತಮ್ಮ ಮೊಬೈಲ್ ತೆಗೆದು ಇನ್ಸ್ಟಾಗ್ರಾಂನಲ್ಲಿ ಲೈವ್ ಹೋಗಿದ್ದಾರೆ ಎನ್ನಲಾಗಿದೆ.
ಇದರಿಂದ ಮತ್ತಷ್ಟು ಸಿಟ್ಟಿಗೆದ್ದ ಸಮೀರ್ ಆಚಾರ್ಯ ಶ್ರಾವಣಿಯಿಂದ ಮೊಬೈಲ್ ಕಿತ್ತುಕೊಂಡು ಒಡೆದು ಹಾಕಿದ್ದಾರೆ. ಈ ಗಲಾಟೆಯಲ್ಲಿ ಶ್ರಾವಣಿ ಅವರಿಗೆ ಕೈ, ಮುಖಕ್ಕೆ ಗಾಯಗಳಾಗಿವೆ. ಸದ್ಯ ಶ್ರಾವಣಿ ಸಮೀರ್ ಆಚಾರ್ಯ ತಮ್ಮ ಮೇಲಿನ ಹಲ್ಲೆ ಖಂಡಿಸಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಇನ್ನು ಈ ಗಲಾಟೆಯಲ್ಲಿ ಸಮೀರ್ ಆಚಾರ್ಯ ತಂದೆಯ ತಲೆಗೆ ಗಾಯಗಳಾಗಿವೆ ಎನ್ನಲಾಗಿದೆ.
- LATEST NEWS5 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ
- LATEST NEWS6 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS6 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS6 days ago
ಬಜೆಟ್ ಬೆಲೆಯ ಐಫೋನ್ ಹುಡುಕುತ್ತಿದ್ದೀರಾ? ಸದ್ಯದಲ್ಲೇ ಬರಲಿದೆ iPhone SE4