Connect with us

    ಕೊರೊನಾ ಸಂಕಷ್ಟದಲ್ಲೂ ಮೂಕಪ್ರಾಣಿಗಳ ಹೊಟ್ಟೆ ಹೊರೆಯುತ್ತಿರುವ ಸಹೃದಯಿ ಕುಟುಂಬ..!

    Published

    on

    ಕೊರೊನಾ ಸಂಕಷ್ಟದಲ್ಲೂ ಮೂಕಪ್ರಾಣಿಗಳ ಹೊಟ್ಟೆ ಹೊರೆಯುತ್ತಿರುವ ಸಹೃದಯಿ ಕುಟುಂಬ..!

    ಮಂಗಳೂರು: ಮಾತು ಬರುವ ಮಾನವ ಹಸಿವಾದಾಗ ತಾನೇ ಏನಾದರೂ ಹುಡುಕಿಕೊಂಡು ಹೋಗಿ ಆಹಾರವನ್ನು ತಿನ್ನುತ್ತಾನೆ.

    ಆದರೆ ಮಾತು ಬಾರದ ಮೂಕ ಪ್ರಾಣಿಗಳಿಗೆ ಹಸಿವಾದಾಗ ಏನು ಮಾಡಬೇಕು..? ಅದಕ್ಕೆ ಪ್ರಾಣಿಪ್ರಿಯರ ಸಹೃದಯ ಹೃದಯವಂತಿಕೆ ಬೇಕು.

    ಅಂತಹ ಹೃದಯವಂತಿಕೆ ಇರೋರು ಬಹಳ ಕಡಿಮೆ. ಆದ್ರೆ ವಿಶೇಷ ಎಂಬಂತೆ ಅಂತಹ ಮಾನವೀಯ ಮನಸ್ಸಿರುವವರು ಇಲ್ಲಿದ್ದಾರೆ.

    ಹೌದು.. ದೇಶವೇ ಲಾಕ್ ಡೌನ್ ಆಗಿದೆ. ಜನ ಈಗಾಗಲೇ ಒಂದು ಹೊತ್ತಿನ ಊಟಕ್ಕೂ ಪರಿತಪಿಸುವ ಸನ್ನಿವೇಶ ಸೃಷ್ಟಿಯಾಗಿದೆ ಅಂದ್ಮೇಲೆ ಇನ್ನು ಮೂಕ ಪ್ರಾಣಿ ಪಕ್ಷಿಗಳ ಅವಸ್ಥೆ ಹೇಗಿರಬೇಡ ಹೇಳಿ..

    ಇಂತಹ ಪ್ರಾಣಿಗಳಿಗೆ ನೆರವಾಗುತ್ತಿದೆ ಇಲ್ಲಿನ ಕುಟುಂಬ. ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಕಾಪಿಕಾಡಿನ ನಿವಾಸಿ ಕಿರಣ್ ರಾಜ್ ತಮ್ಮ ಸ್ನೇಹಿತರ ಜೊತೆಗೆ ಬೀದಿ ನಾಯಿಗಳಿಗೂ ಬಿಸಿ ಬಿಸಿಯಾದ ಅನ್ನಾಹಾರ ತಯಾರಿಸಿ ಬಡಿಸುತ್ತಿದ್ದಾರೆ.

    ಇವರಿಗೆ ತಾಯಿ ದಮಯಂತಿ ಪುರುಷೋತ್ತಮ, ವಿನ್ಯಾಸ್, ನಿಶಾಲ್, ಮೋಹನ್ ದಾಸ್ ಹಾಗೂ ಪವನ್ ಸಹಕರಿಸುತ್ತಿದ್ದಾರೆ.

    ಕಿರಣ್ ರಾಜ್ ತಮ್ಮ ಮನೆಯಲ್ಲಿ ಬ್ರಹಸ್ಮತಿ ಅಕ್ಕಿಯ ಅನ್ನ ಮಾಡಿ ಕೋಳಿಯ ಕಾಲು ಹಾಗು ಕುತ್ತಿಗೆ ತುಂಡಿನ ಪದಾರ್ಥ ಮಾಡುತ್ತಿದ್ದಾರೆ.

    ಬೇರೆ ಬೇರೆ ದಿನ ಮೀನು ಇನ್ನಿತರ ಪದಾರ್ಥ ಕರಿ ಮಾಡಿ ದಿನವೊಂದಕ್ಕೆ ಸುಮಾರು 350 ನಾಯಿ ಹಾಗೂ ಬೆಕ್ಕುಗಳಿಗೆ ಊಟ ಹಾಕುತ್ತಿದ್ದಾರೆ.

    ಹಾಗು ಇಪ್ಪತ್ತರಷ್ಟು ದನಕರುಗಳಿಗೆ ಗಂಜಿ ಹಾಕಿ ಅವುಗಳ ಹಸಿವು ನೀಗಿಸುತ್ತಿದ್ದಾರೆ. ನೇತ್ರಾವತಿ ನದಿಯಿಂದ ತಲಪಾಡಿ, ಚೆಕ್ ಪೋಸ್ಟ್ , ದೇರಳಕಟ್ಟೆ ಸುತ್ತಮುತ್ತಲಿನ ಪ್ರಾಣಿಗಳಿಗೆ ಊಟ ಹಾಕುತ್ತಾರೆ.

    ಇಡೀ ದೇಶವೇ ಲಾಕ್ ಡೌನ್ ಆಗಿದೆ. ಮನುಷ್ಯ ಕಂಗಾಲಾಗಿದ್ದಾನೆ. ಆದರೆ ಪ್ರಾಣಿಗಳ ಹಸಿವು ನೀಗಿಸುವವರು ಯಾರು.. ?

    ಲಾಕ್ ಡೌನ್ ಪ್ರಾರಂಭ ಆದ ಬಳಿಕ ನಾವು ಆ ಕಾರ್ಯ ಮಾಡುತ್ತಿದ್ದೇವೆ. ನಾಯಿಗಳಿಗೆ ವಿಶೇಷ ರೀತಿಯ ಆಹಾರ ಬೇಕು.

    ದನಗಳಿಗೆ ಹಿಂಡಿ, ಗಂಜಿ ಬೇಕಾಗಿದೆ. ಹೀಗಾಗಿ ಎಲ್ಲರೂ ಕೂಡಾ ತಮ್ಮ ತಮ್ಮ ಪರಿಸರದಲ್ಲಿ ಪ್ರಾಣಿ, ಪಕ್ಷಿ ಪ್ರೀತಿ ಬೆಳೆಸಿ ಎನ್ನುತ್ತಾರೆ ಕಿರಣ್ ಕಾಪಿಕಾಡ್

    ಒಟ್ಟಿನಲ್ಲಿ ಇವರ ಪ್ರಾಣಿ ಪ್ರೀತಿಗೆ ನಾವು ಹ್ಯಾಟ್ಸಾಪ್ ಅನ್ನಲೇಬೇಕು.

    ಒಂದು ಹೊತ್ತಿನ ಊಟವನ್ನೂ ಕಿತ್ತುಕೊಂಡು ತಿನ್ನುವ ಸ್ವಾರ್ಥಿ ಮನುಷ್ಯರಿರುವ ಈ ಕಾಲದಲ್ಲೂ ತಮ್ಮ ಮನೆಯಲ್ಲೇ ಅನ್ನಾಹಾರ ತಯಾರಿಸಿ ಪ್ರಾಣಿಗಳಿಗೆ ನೀಡುವ ಇವರ ಹೃದಯವಂತಿಕೆ ಎಲ್ಲರಲ್ಲೂ ಇರಲಿ ಅನ್ನೋದೇ ನಮ್ಮ ಆಶಯ..

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending