Connect with us

LATEST NEWS

ಫ್ರೀ ಬಸ್ ಹತ್ತಿ ಬಂದ ವಿವಾಹಿತೆ ಮಹಿಳೆ ಪ್ರಿಯಕನೊಂದಿಗೆ ಎಸ್ಕೇಪ್..!

Published

on

ಬಸ್ ಫ್ರೀ ಆದ ಬೆನ್ನಲೆಯಲ್ಲೇ ವಿವಾಹಿತ ಮಹಿಳೆಯೊಬ್ಬರು ಫ್ರೀ ಬಸ್ ನಲ್ಲೆ ಪ್ರಿಯಕನನ್ನು ನೋಡಲು ಎಂದು ಹುಬ್ಬಳಿಯಿಂದ ಪುತ್ತೂರಿಗೆ ಬಂದು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಪುತ್ತೂರು: ಬಸ್ ಫ್ರೀ ಆದ ಬೆನ್ನಲೆಯಲ್ಲೇ ವಿವಾಹಿತ ಮಹಿಳೆಯೊಬ್ಬರು ಫ್ರೀ ಬಸ್ ನಲ್ಲೆ ಪ್ರಿಯಕನನ್ನು ನೋಡಲು ಎಂದು ಹುಬ್ಬಳಿಯಿಂದ ಪುತ್ತೂರಿಗೆ ಬಂದು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಮದುವೆಯಾಗಿದ್ದ ಮಹಿಳೆ 11 ತಿಂಗಳ ಮಗು ಹಾಗೂ ಗಂಡನನ್ನು ಬಿಟ್ಟು ಪ್ರಿಯಕನನ್ನು ನೋಡಲು ಫ್ರೀ ಬಸ್ ನಲ್ಲಿ ಹತ್ತಿ ಪುತ್ತೂರಿಗೆ ಬಂದಿದ್ದಾರೆ.

ಈಕೆಗೆ ಮದುವೆ ಆಗುವ ಮೊದಲೇ ಪುತ್ತೂರಿನ ಯುವಕನ ಜೊತೆ ಪ್ರೀತಿ ಶುರುವಾಗಿತ್ತು. ಆದರೆ ಮದುವೆಯಾಗಿದ್ದು ಮಾತ್ರ ಬೇರೆ ಯುವಕನ ಜೊತೆ.

ಮದುವೆಯಾದರೂ ತನ್ನ ಪ್ರಿಯಕನ‌ ಜೊತೆ ಒಡನಾಟದಲ್ಲಿದ್ದಳು ಎನ್ನಲಾಗಿದೆ.

ವಿವಾಹಿತ ಮಹಿಳೆಯ ಪ್ರಿಯಕರ ಕೋಡಿಂಬಾಡಿ ಸಮೀಪದಲ್ಲಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದನಂತೆ.

ಗಂಡನ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಬರುತ್ತೇನೆಂದು ಮನೆಯಿಂದ ಹೇಳಿ ಎಸ್ಕೇಪ್ ಆಗಿದ್ದಾರೆ.

ಆಧಾರ್ ಕಾರ್ಡ್ ಬಳಸಿ ಬಸ್ಸಿನಲ್ಲಿ ಫ್ರೀಯಾಗಿ‌ ಪ್ರಯಾಣಿಸಿದ್ದಾಳೆ.

ಈ ಘಟನೆ ತಿಳಿದ ಎರಡೂ ಮನೆಯವರು ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ ಮಾಡಿದ್ದಾರೆ.

ಈ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಎಂಬವರು, ಇವರಿಬ್ಬರನ್ನು ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ಧೈರ್ಯ ಹೇಳಿ, ನೆರವು ನೀಡಿದ್ದಾರೆ.

ಟವರ್ ಲೊಕೇಶನ್ ಮೂಲಕ ಪತ್ತೆ ಹಚ್ಚಿದಾಗ ಪುತ್ತೂರಿನಿಂದ ಸಿದ್ಧಕಟ್ಟೆಗೆ ಪರಾರಿಯಾದ ಬಗ್ಗೆ ಮಾಹಿತಿ ತಿಳಿದಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

Trending