LATEST NEWS
ನೇಪಾಳ ಮೂಲದ ಅಪ್ರಾಪ್ತೆ ನೇಣು ಬಿಗಿದು ಆತ್ಮಹ*ತ್ಯೆ..!
ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಜೂ.8ರಂದು ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ನೇಪಾಳ ಮೂಲದ 16ರ ಹರೆಯದ ರಬೀನ ಬಿ.ಕೆ ಎಂದು ಗುರುತಿಸಲಾಗಿದೆ. ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ರೀಟಾ ಡಿ ಸೋಜ ಎಂಬವರ ಮನೆಯಲ್ಲಿ ಬಾಡಿಗೆಗೆ ನೆಲೆಸಿದ್ದರು.
ಮುಂದೆ ಓದಿ..; ಬಿಜೆಪಿ ಗೆಲುವಿಗಾಗಿ ಕಾಳಿ ದೇವಿಗೆ ಕೈ ಬೆರಳನ್ನೇ ಅರ್ಪಣೆ ಮಾಡಿದ ಕಾರ್ಯಕರ್ತ..!!
ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನು ಮಂಗಳೂರಿನಲ್ಲೆ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು.ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದು, ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ನಿನ್ನೆ ಮದ್ಯಾಹ್ನ ರಬೀನಳ ತಾಯಿ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಹೋಗಿದ್ದ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹ*ತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಳ್ಳಾಲ ಠಾಣಾ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಬೀನ ತಂದೆ, ತಾಯಿ, ಇಬ್ಬರು ಸಹೋದರಿಯರು ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.
LATEST NEWS
500 ನೌಕರರನ್ನು ಕೆಲಸದಿಂದ ವಜಾಗೊಳಿಸಿದ Yes ಬ್ಯಾಂಕ್..!
ಮಂಗಳೂರು ( ಮುಂಬೈ ) : ದೇಶದಲ್ಲಿ ಹೆಸರು ಮಾಡಿರುವ ಖಾಸಗಿ ಬ್ಯಾಂಕ್ ಆಗಿರುವ Yes ಬ್ಯಾಂಕ್ ತನ್ನ 500 ನೌಕರರಿಗೆ ಮೂರು ತಿಂಗಳ ಸಮಾನ ವೇತನ ನೀಡಿ ಹೊರ ಹಾಕಿದೆ. ಬ್ಯುಸಿನೆಸ್ ಟುಡೆ ವರದಿ ಪ್ರಕಾರ ಯೆಸ್ ಬ್ಯಾಂಕ್ ಇನ್ನೂ ಅನೇಕ ನೌಕರರ ಲಿಸ್ಟ್ ತಯಾರಿಸಿದ್ದು, ಮುಂದಿನ ದಿನದಲ್ಲಿ ಅವರನ್ನೂ ವಜಾಗೊಳಿಸುವ ಸಾದ್ಯತೆ ಇದೆ ಎಂದು ಹೇಳಿದೆ. ಬಹುತೇಕ ಎಲ್ಲಾ ವಿಭಾಗದ ನೌಕರರು ಈ ಪಟ್ಟಿಯಲ್ಲಿ ಒಳಗೊಂಡಿದ್ದು, ನೌಕರರು ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ.
ಡಿಜಿಟಲೀಕರಣದಿಂದ ಕಾಸ್ಟ್ ಕಟ್ಟಿಂಗ್ ..!
Yes ಬ್ಯಾಂಕ್ ಡಿಜಿಟಲೀಕರಣದೊಂದಿಗೆ ಗ್ರಾಹಕರ ಜೊತೆ ನೇರ ಸಂಪರ್ಕ ಮಾಡುತ್ತಿದ್ದು, ನಡುವಿನಲ್ಲಿ ಅನಗತ್ಯ ನೌಕರರ ಅಗತ್ಯ ಇಲ್ಲ ಎಂದು ಈ ತೀರ್ಮಾನಕ್ಕೆ ಬಂದಿದೆ ಎಂದು ವರದಿ ಹೇಳಿದೆ. ಬ್ಯಾಂಕ್ ತೆಗೆದುಕೊಂಡಿರುವ ಈ ನಿರ್ಧಾರದಿಂದ ಬ್ಯಾಂಕ್ನ ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಸಾಧ್ಯವಾಗಲಿದೆ. ಬ್ಯಾಂಕ್ ವೇಗವಾಗಿ ಡಿಜಿಟಲೀಕರಣವಾಗುತ್ತಿರುವುದರಿಂದ ನೌಕರರ ಅಗತ್ಯವೂ ಕಡಿಮೆಯಾಗುತ್ತಿರುವುದಾಗಿ ಬ್ಯಾಂಕ್ ಮೂಲಗಳು ತಿಳಿಸಿದೆ. 2023 -24 ರಲ್ಲಿ Yes ಬ್ಯಾಂಕ್ ನೌಕರರಿಗೆ ನೀಡಿದ ಸ್ಯಾಲರಿ ಹಾಗೂ ಭತ್ತೆಗಳು ರೂ.3363 ಕೋಟಿಯಿಂದ ರೂ.3774 ಕೋಟಿಗಳಿಗೆ ಏರಿಕೆಯಾಗಿದೆ. ಇದೀಗ ಅನಗತ್ಯ ನೌಕರರ ವಜಾದಿಂದ ಈ ಏರಿಕೆಯನ್ನು ತಡೆಯಲು ಬ್ಯಾಂಕ್ ಮುಂದಾಗಿದೆ.
Yes ಬ್ಯಾಂಕ್ನ ಈ ನಿರ್ಧಾರ ಕೇವಲ ನೌಕರರ ಮೇಲೆ ಮಾತ್ರವಲ್ಲದೆ ಶೇರ್ ಮಾರುಕಟ್ಟೆಯಲ್ಲೂ ಪ್ರಭಾವ ಬೀರಿದ್ದು Yes ಬ್ಯಾಂಕ್ ಶೇರು ಬೆಲೆ ಕುಸಿತವಾಗಿದೆ. ಮಂಗಳವಾರ 24.02 ರೂಗಳಲ್ಲಿ ಅಂತ್ಯವಾಗಿದ್ದ Yes ಬ್ಯಾಂಕ್ ಶೇರ್ ಬುಧವಾರ ನೌಕರರನ್ನು ವಜಾಗೊಳಿಸಿದ ವಿಚಾರ ಬಹಿರಂಗವಾಗುತ್ತಿದ್ದಂತೆ 23.90 ರೂಪಾಯಿಗೆ ಕುಸಿತವಾಗಿದೆ.
LATEST NEWS
ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ಬೆಂಗಳೂರು : ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂ*ಗಿಕ ದೌ*ರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬುಧವಾರ (ಜೂನ್ 26) ಅರ್ಜಿ ವಿಚಾರಣೆ ನಡೆಸಿದ್ದು, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶ ಕಾಯ್ದಿರಿಸಿತ್ತು. ಆದರೆ, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಜಾಮೀನಿಗಾಗಿ ಪ್ರಜ್ವಲ್ ಹೈಕೋರ್ಟ್ ಮೆಟ್ಟಿಲೇರಬೇಕಿದೆ.
ಇದನ್ನೂ ಓದಿ : ಖ್ಯಾತ ನಟ ಜಯಂ ರವಿ – ಆರತಿ ದಾಂಪತ್ಯ ಜೀವನದಲ್ಲಿ ಬಿರುಕು!?
ಲೈಂ*ಗಿಕ ದೌರ್ಜ*ನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 29ರ ವರೆಗೂ ಎಸ್ಐಟಿ ಕಸ್ಟಡಿಗೆ ನೀಡಿದೆ.
DAKSHINA KANNADA
ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ
ಮಂಗಳೂರು ಹೊರವಲಯದ ಜಪ್ಪಿನಮೊಗೆರು ಪ್ರದೇಶದಲ್ಲಿ ಮಳೆಯಿಂದಾಗಿ ಹಲವು ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿದೆ. ಇಲ್ಲಿನ ದೊಂಪದಬಲಿ ಎಂಬಲ್ಲಿನ ರಾಜಾಕಾಲುವೆ ಬ್ಲಾಕ್ ಆಗಿ ನೀರು ನದಿ ಸೇರದೆ ಈ ಕೃತಕ ನೆರೆ ಉಂಟಾಗಿದೆ.
ಹಲವಾರು ವರ್ಷಗಳಿಂದ ಇಲ್ಲಿ ರಸ್ತೆ ಸಮಸ್ಯೆ ಇದ್ದು, ಇತ್ತೀಚೆಗೆ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದ್ರೆ ಕಾಂಕ್ರೀಟ್ ರಸ್ತೆಯ ಇಕ್ಕೆಲೆಗಳಲ್ಲಿ ನಿರ್ಮಿಸಬೇಕಾದ ಚರಂಡಿಯನ್ನು ನಿರ್ಮಾಣ ಮಾಡದೆ ಇರುವುದು ಇದಕ್ಕೆ ಕಾರಣ ಎಂದು ಸ್ಥಳಿಯರು ದೂರಿದ್ದಾರೆ. ಮೊದಲೇ ತಗ್ಗು ಪ್ರದೇಶದಲ್ಲಿ ಇರುವ ದೊಂಪದ ಬಲಿ ಪ್ರದೇಶ ರಸ್ತೆಗಿಂತ ಕೆಳಗೆ ಇರುವ ಕಾರಣ ರಸ್ತೆಯಲ್ಲಿ ಹರಿಯುವ ನೀರು ನೇರ ಜನವಸತಿ ಪ್ರದೇಶಕ್ಕೆ ನುಗ್ಗುತ್ತಿದೆ. ಚರಂಡಿ ನಿರ್ಮಾಣ ಮಾಡಿದ್ದೇ ಆಗಿದ್ದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಕಾರ್ಪೋರೇಟರ್ ವೀಣಾಮಂಗಳ ಸ್ಥಳೀಯ ನಿವಾಸಿಗಳು ತ್ಯಾಜ್ಯ ವಿಲೇವಾರಿಯಲ್ಲಿ ಸಹಕರಿಸದೇ ಇರುವುದು ಈ ಸಮಸ್ಯೆಗೆ ಮೂಲಕ ಕಾರಣ ಎಂದು ಹೇಳಿದ್ದಾರೆ. ಎಲ್ಲಾ ತ್ಯಾಜ್ಯಗಳನ್ನು ಇಲ್ಲಿನ ಚರಂಡಿಗೆ ಎಸೆಯುವ ಕಾರಣ ರಾಜಾಕಾಲುವೆಯಲ್ಲಿ ಶೇಖರಣೆಯಾಗಿ ಈ ರೀತಿ ಅವಾಂತರ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
ಇಷ್ಟೇ ಅಲ್ಲದೆ ನೀರು ಸರಾಗವಾಗಿ ಹರಿದು ರಾಜಕಾಲುವ ಸೇರಲು ಚರಂಡಿ ನಿರ್ಮಾಣದ ವೇಳೆ ಕೆಲವರು ಅನಗತ್ಯವಾಗಿ ಸ್ಟೇ ತಂದು ಕಾಮಾಗಾರಿ ತಡೆ ಹಿಡಿದಿದ್ದಾರೆ ಎಂದು ಸ್ಥಳಿಯರ ಅಸಹಕಾರದಿಂದ ಈ ರೀತಿ ಆಗಿದೆ ಎಂದು ಹೇಳಿದ್ದಾರೆ.
- LATEST NEWS4 days ago
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
- LATEST NEWS5 days ago
ನಟ ದರ್ಶನ್ ಅಭಿಮಾನಿಯ ವಿರುದ್ಧ ಬಿತ್ತು ಕೇಸ್
- LATEST NEWS5 days ago
ನಟ ದರ್ಶನ್ ಪರ ವಾದ ಮಂಡಿಸಲಿರುವ ಹಿರಿಯ ವಕೀಲ ಸಿವಿ ನಾಗೇಶ್; ಯಾರಿವರು ಗೊತ್ತಾ!?
- DAKSHINA KANNADA6 days ago
ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ