LATEST NEWS
ಆಫೀಸ್ನಲ್ಲಿ ಯುವತಿ ಜೊತೆ ಸರಸ ಸಲ್ಲಾಪ..! ಪತಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದ ‘ಮಾಜಿ ಸುಂದರಿ ವೈಜಾಗ್’..!!
ವಿಶಾಖಪಟ್ಟಣ/ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮದುವೆ ಆದರೂ ಅಕ್ರಮ ಸಂಬಂಧ ಹೊಂದಿರುವ ಪ್ರಕರಣ ಹೆಚ್ಚಾಗಿದೆ. ಇದೀಗ ಮಾಜಿ ಸುಂದರಿ ವೈಜಾಗ್ ನಕ್ಷತ್ರರರವ ವೈವಾಹಿಕ ಬದುಕಿನಲ್ಲಿ ಇಂತಹದ್ದೇ ಘಟನೆ ಸಂಭವಿಸಿದೆ. ಇವರ ದಾಂಪತ್ಯ ಜೀವನದಲ್ಲಿ ಬಿರುಕು ಕಂಡಿದೆ. ತನ್ನ ಪತ್ನಿ ಬೇರೊಬ್ಬಳ ಜೊತೆ ಇರುವುದನ್ನು ಪತ್ನಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾಳೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪತಿ ಚಲನಚಿತ್ರ ನಿರ್ಮಾಪಕ ತೇಜರವರು ವಿಶಾಖಪಟ್ಟಣದಲ್ಲಿರುವ ಶೂಟಿಂಗ್ ಆಫೀಸ್ನಲ್ಲಿ ಮೇ.31ರಂದು ಯುವತಿ ಜೊತೆ ಇರುವುದನ್ನು ಖಚಿತ ಪಡಿಸಿಕೊಂಡು ಅಲ್ಲಿಗೆ ಧಾವಿಸಿದ್ದಾಳೆ. ಮಾಧ್ಯಮದವರ ಜೊತೆಗೆ ಸ್ಥಳಕ್ಕೆ ಧಾವಿಸಿದ್ದಾಳೆ. ಕಛೇರಿ ಬಾಗಿಲಿನ ಮುಂಭಾಗದಲ್ಲಿ ಹುಡುಗನ ಜೊತೆ ಬಾಗಿಲು ತೆರೆಯುವಂತೆ ಕೇಳಿಕೊಂಡಿದ್ದಾಳೆ. ಹುಡುಗ ತಬ್ಬಿಬ್ಬಾಗಿದ್ದಾನೆ. ತಾನೇ ಬಾಗಿಲನ್ನು ದೂಡಿ ರೂಮ್ನೊಳಗೆ ಪ್ರವೇಶ ಮಾಡುತ್ತಾಳೆ. ಇನ್ನು ಪತಿ ನಕ್ಷತ್ರಾಳನ್ನು ರೂಮ್ನೊಳಗೆ ಬರದ ಹಾಗೆ ತಡೆದಿದ್ದಾನೆ. ಆಫೀಸ್ ಓಳಗಡೆ ನೆಲದ ಮೇಲೆ ಬೆಡ್ ಹಾಕಿ ಯುವತಿ ಮಲಗಿದ್ದಳು. ನಕ್ಷತ್ರ ಕೈಗೆ ಸಿಕ್ಕಸಿಕ್ಕ ವಸ್ತುಗಳಿಂದ ಅವಳಿಗೆ ಎಸೆಯುತ್ತಾಳೆ. ಇನ್ನು ಮಾತಿನ ಮಧ್ಯೆ ನಕ್ಷತ್ರ ಪತಿಯ ಮೇಲೆ ಕೈ ಮಾಡುತ್ತಾಳೆ.
ಇದನ್ನೂ ಓದಿ..; ಜೂ. 2 ರಂದು ಜೈಲು ಅಧಿಕಾರಿಗಳ ಮುಂದೆ ಶರಣಾಗುತ್ತೇನೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ನನಗೆ ವಿಚ್ಛೇದನ ನೀಡದೆ ಬೇರೊಬ್ಬಳನ್ನು ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾಳೆ. ಇನ್ನು ಪತಿ ನಿರ್ಮಾಪಕ ತೇಜ ಪತ್ನಿ ನಕ್ಷತ್ರಾ ಮಾಡಿರುವ ಆರೋಪವನ್ನು ತಳ್ಳಿ ಹಾಕಿದ್ದು, ನನ್ನ ಮೇಲೆ ಈಗಾಗಲೇ ಹಲವು ಆರೋಪ ಮಾಡಿದ್ದು ಪ್ರಕರಣ ದಾಖಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ. ಇನ್ನು ಕೋಣೆಯಲ್ಲಿದ್ದ ಯುವತಿ ಚಲನಚಿತ್ರಕ್ಕಾಗಿ ಆಡಿಷನ್ ಗೆ ಬಂದಿದ್ದಾಳೆ ಎಂದು ಸಮರ್ಥಿಸಿಕೊಂಡಿದ್ದಾರೆ.
DAKSHINA KANNADA
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ : ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ
ಉಪ್ಪಿನಂಗಡಿ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಉಪ್ಪಿನಂಗಡಿ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ), ಜೇಸಿಐ ಉಪ್ಪಿನಂಗಡಿ ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್, ದೇರಳಕಟ್ಟೆ ಇವರ ವೈದರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉಪ್ಪಿನಂಗಡಿ ಎಚ್. ಎಮ್.ಆಡಿಟೋರಿಯಂನಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ನಿ. ಇದರ ಅಧ್ಯಕ್ಷ ಕೆ.ವಿ.ಪ್ರಸಾದ್ರವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ಆಯೋಜಿಸಿ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಮಾತನಾಡಿ, ಹಲಸು ಹಬ್ಬದ ಕಾರ್ಯಕ್ರಮದ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇದರ ಸಹಭಾಗಿತ್ವದೊಂದಿಗೆ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರ ಜನರಿಗೆ ಅನುಕೂಲವಾಗಲಿ. ಇದು ಜೇಸಿಐ ಸಂಸ್ಥೆಗೂ ಕೂಡ ಹೆಮ್ಮೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಇದರ ಅಧ್ಯಕ್ಷ ಲವೀನ ಪಿಂಟೋ ಮಾತನಾಡಿ, ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಗ್ರಾಮೀಣ ಭಾಗದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಸಂಘವು ಇನ್ನು ಹೆಚ್ಚು ಹೆಚ್ಚು ಶಿಬಿರ ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಿ ಹಾಗೂ ಇನ್ನಷ್ಟು ಜನರು ಇದರ ಪ್ರಯೋಜನ ಪಡೆಯುವಂತಗಲಿ ಎಂದು ಶುಭ ಹಾರೈಸಿದರು.
ಅದ್ವಿಕ್ ದಂತ ಕ್ಲಿನಿಕ್ ಇದರ ದಂತ ವೈದ್ಯ ಡಾ|| ಆಶಿತ್ ಎಮ್.ವಿ. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರ ವಲ್ಲದೆ, ಉಚಿತ ವೈದ್ಯಕೀಯ ಶಿಬಿರದ ಜೊತೆಗೆ ಇಂತಹುದೇ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್, ದೇರಳಕಟ್ಟೆ ಇದರ ವೈದ್ಯರಾದ ಡಾ|| ಜೈನುದ್ದೀನ್ ಮಾತನಾಡಿ, ಕಣಚೂರು ಆಯುರ್ವೇದ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ರವರು ಮಾತನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದೆ. ಗ್ರಾಮೀಣ ಭಾಗದಲ್ಲಿ ಕೃಷಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಘವು ಕೃಷಿ ಮೇಳ ಹಾಗೂ ಹಲಸಿನ ಹಬ್ಬದಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಉಪ್ಪಿನಂಗಡಿ ಪರಿಸರದ ಸದಸ್ಯರ ಸಹಕಾರದಿಂದಾಗಿ ಉಪ್ಪಿನಂಗಡಿ ಶಾಖೆಯು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವಿರಲಿ ಹಾಗೆಯೇ ಇಂದಿನ ಈ ಶಿಬಿರವು ಸಾರ್ವಜನಿಕರಿಗೆ ಉಪಯುಕ್ತವಾಗಲಿ ಎಂದು ಹೇಳಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷದಿ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು ೧೫೦೦೦ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಂಘದ ಸ್ವಂತ ಮಾಲಿಕತ್ವದ ನೂತನ ೩೩ನೇ ಶಾಖೆಯು ಜುಲೈ ೧೫ರಂದು ಕೃಷ್ಣಾಪುರದಲ್ಲಿ ಸಾರ್ವಜನಿಕ ಸೇವೆಗಾಗಿ ಶುಭಾರಂಭಗೊಳ್ಳಲಿದೆ.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಗೋಪಾಲ್ ಎಂ, ಚಂದ್ರಾವತಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ, ಉಪ್ಪಿನಂಗಡಿ ಇದರ ಅಧ್ಯಕ್ಷ ಅಜಿತ್ ಪಾಲೇರಿ, ಜೇಸಿಐ ವಲಯ ನಿರ್ದೇಶಕ ಭರತ್ ಶೆಟ್ಟಿ ಮತ್ತಿತರರು ಉಪಸ್ಧಿತರಿದ್ದರು.
ಇದನ್ನೂ ಓದಿ : ಕೇರಳದಲ್ಲಿ ಅಮೀಬಾ ಸೋಂಕಿಗೆ ನಾಲ್ಕು ಮಕ್ಕಳು ಬಲಿ..! ದ.ಕ ಜಿಲ್ಲೆಯಲ್ಲೂ ಹೈ ಅಲರ್ಟ್..!
ಕಾರ್ಯಕ್ರಮದಲ್ಲಿ ಸುಮಾರು ೧೬೦ ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಇವರು ಸ್ವಾಗತಿಸಿ, ಶಾಖಾಧಿಕಾರಿ ಭವ್ಯ ವಂದಿಸಿದರು. ಶಾಖಾಧಿಕಾರಿ ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಕವಿತಾ.ಐ ನಡೆಸಿದರು.
LATEST NEWS
ಗಿನ್ನಿಸ್ ದಾಖಲೆ ಬರೆದ ಬುದ್ಧಿವಂತ ಕೋಳಿ..!!
ಕೆನಡಾ/ಮಂಗಳೂರು: ಇಲ್ಲೊಂದು ಕೋಳಿ ಸಂಖ್ಯೆಗಳು, ಬಣ್ಣಗಳು ಹಾಗೂ ಅಕ್ಷರಗಳನ್ನು ಗುರುತಿಸುವ ಮೂಲಕ ಅಚ್ಚರಿಯನ್ನುಂಟುಮಾಡಿದೆ. ಹೌದು, ಸಾಧಾರಣವಾಗಿ ಕೋಳಿಗಳಿಗೆ ಬುದ್ಧಿವಂತಿಕೆ ಕಮ್ಮಿ ಅನ್ನುವ ಮಾತಿದೆ. ಆದರೆ ಇಲ್ಲೊಂದು ಮಹಿಳೆ ತಾನು ಸಾಕಿರುವ ಕೋಳಿಗೆ ಬುದ್ಧಿ ಕಲಿಸಿ ಆಶ್ಚರ್ಯ ಪಡುವಂತೆ ಮಾಡಿದ್ದಾಳೆ.
ಬ್ರಿಟಿಷ್ ಕೊಲಂಬಿಯಾ(ಕೆನಡಾ)ದ ಕೋಳಿಯೊಂದು ಸಂಖ್ಯೆಗಳು, ಬಣ್ಣಗಳು ಮ್ತತು ಅಕ್ಷರಗಳನ್ನು ಗುರುತಿಸುವ ಮೂಲಕ ಗಿನ್ನಿಸ್ ವಿಶ್ವ ದಾಖಲೆಯನ್ನು ಮಾಡಿದೆ. ಗ್ಯಾಬ್ರಿಯೊಲಾ ದ್ವೀಪದ ಪಶುವೈದ್ಯೆ ಎಮಿಲಿ ಕ್ಯಾರಿಂಗ್ಟನ್ ಅವರು ಮೊಟ್ಟೆಗಳಿಗಾಗಿ ಐದು ಹೈಲೈನ್ ಕೋಳಿಗಳನ್ನು ಖರೀದಿ ಮಾಡಿದ್ದರು. ಬಳಿಕ ಈ ಕೋಳಿಗಳಿಗೆ ಅಕ್ಷರಗಳನ್ನು ಗುರುತಿಸಲು ತರಬೇತಿ ನೀಡಿದ್ದಾರೆ. ಇದೀಗ ಈ ಕೋಳಿಗಳ ಕೆಲಸ ಅಕ್ಷರಗಳು ಹಾಗೂ ಸಂಖ್ಯೆಗಳನ್ನು ಗುರುತಿಸುವುದು ಆಗಿದೆ ಎಂದು ವೈದ್ಯೆ ಹೇಳಿದ್ದಾರೆ.
ಮನೆ ಬಾಲ್ಕನಿಯನ್ನೇ ಬಾಡಿಗೆ ನೀಡಿದ ವ್ಯಕ್ತಿ..! ಬಾಡಿಗೆ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ
ತನ್ನ ಎಲ್ಲಾ ಕೋಳಿಗಳು ಒಂದೇ ನಿಮಿಷದಲ್ಲಿ ಅಕ್ಷರಗಳು, ಸಂಖ್ಯೆಗಳನ್ನು ಗುರುತಿಸಿ ವಿಶ್ವ ದಾಖಲೆ ಮಾಡಬೇಕು ಎಂದು ವೈದ್ಯೆ ನಿರ್ಧರಿಸಿದ್ದರು. ಆದರೆ ಲೇಸಿ ಎಂಬ ಹೆಸರಿನಿ ಕೋಳಿ ಒಂದು ನಿಮಿಷದಲ್ಲಿ ಆರು ಅಕ್ಷರಗಳು, ಸಂಖ್ಯೆಗಳನ್ನು ಮತ್ತು ಬಣ್ಣಗಳನ್ನು ಗುರುತಿಸಿ ಗಿನ್ನಿಸ್ ರೆಕಾರ್ಡ್ ಅನ್ನು ಮಾಡಿದೆ.
ಇದೀಗ ಕ್ಯಾರಿಂಗ್ಟನ್ ತನ್ನ ಯೂಟ್ಯೂಬ್ ಚಾನೆಲ್ ದಿ ಥಿಂಕಿಂಗ್ ಚಿಕನ್ ಅನ್ನು ನಡೆಸುತ್ತಾರೆ. ಜನರು ಕೋಳಿಗಳಿಗೆ ಬುದ್ದಿ ಇಲ್ಲಾ ಎಂದು ಹೇಳಬಾರದು. ಕೋಳಿಗಳಿಗೆ ಸಾಕಷ್ಟು ಬುದ್ದಿ ಇದೆ ಎಂದು ಹೇಳಿದ್ದಾರೆ. ಕೋಳಿಗಳಿಗೆ ಬುದ್ಧಿ ಇದೆ ಅನ್ನುವುದಕ್ಕೆ ನನ್ನ ಕೋಳಿ ಮಾಡಿರುವ ವಿಶ್ವ ದಾಖಲೆಯೇ ಸಾಕ್ಷಿಯಾಗಿದೆ ಎಂದು ಕ್ಯಾರಿಂಗ್ಟನ್ ಹೇಳಿದ್ದಾರೆ.
DAKSHINA KANNADA
ಕಡಬ: ಕುಮಾರಧಾರ ನದಿ ಮಧ್ಯೆ ಸಿಲುಕಿದ್ದ ಯುವಕನ ರಕ್ಷಣೆ
ಕಡಬ: ಯುವಕನೋರ್ವ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿ, ಸಹಾಯಕ್ಕಾಗಿ ಬೊಬ್ಬೆ ಹಾಕುತ್ತಿರುವ ದೃಶ್ಯ ಇಲ್ಲಿನ ಪುಳಿಕುಕ್ಕು ಎಂಬಲ್ಲಿ ಸೋಮವಾರ ಬೆಳಗ್ಗೆ ಕಂಡುಬಂದಿತ್ತು. ಬಳಿಕ ಅಗ್ನಿಶಾಮಕ ದಳ ಆತನನ್ನು ರಕ್ಷಿಸಿದೆ.
ಪುಳಿಕುಕ್ಕುವಿನಲ್ಲಿ ಕುಮಾರಧಾರ ನದಿ ಬಹುತೇಕ ತುಂಬಿ ಹರಿಯುತ್ತಿದೆ. ಈ ಮಧ್ಯೆ ಇಂದು ಬೆಳಗ್ಗೆ ಯುವಕನೋರ್ವ ನದಿಯಲ್ಲಿ ಪೊದೆಗಳನ್ನು ಹಿಡಿದು ರಕ್ಷಿಸುವಂತೆ ಬೊಬ್ಬೆ ಹಾಕುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅದರಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವಕನನ್ನು ನದಿಯಿಂದ ಮೇಲೆತ್ತಿ ರಕ್ಷಿಸಿದ್ದಾರೆ. ಬಳಿಕ ಆತನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ನದಿಯಲ್ಲಿ ಸಿಲುಕಿದ್ದ ಯುವಕನನ್ನು ಮೂಲತಃ ಬೆಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಆತನಿಗೆ ಸೇರಿದ್ದೆನ್ನಲಾದ ಬ್ಯಾಗ್ ಪುಳಿಕುಕ್ಕು ಬಸ್ ನಿಲ್ದಾಣದ ಬಳಿ ದೊರೆತಿದೆ.
ಆತ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
- FILM5 days ago
‘ಪೆಂಡ್ರೈವ್’ನಲ್ಲಿ ಬಿಗ್ಬಾಸ್ ತನಿಷಾ ಕುಪ್ಪಂಡ..!
- DAKSHINA KANNADA6 days ago
ಉಳ್ಳಾಲ : ಟಿಪ್ಪರ್ – ಸ್ಕೂಟರ್ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು
- DAKSHINA KANNADA7 days ago
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?
- LATEST NEWS3 days ago
ಉಡುಪಿ : ಪ್ರೇಯಸಿಯೊಂದಿಗೆ ಜಗಳ; ಅರ್ಧ ದಾರಿಯಲ್ಲೇ ಬಸ್ ನಿಲ್ಲಿಸಿ ಹೋದ ಡ್ರೈವರ್!