LATEST NEWS
ಉಳ್ಳಾಲ : ಒಂದೇ ಕುಟುಂಬದ ನಾಲ್ವರ ಪ್ರಾ*ಣ ಬ*ಲಿ ಪಡೆಯಿತಾ ಅಡಿಕೆ ಗಿಡ?
ಉಳ್ಳಾಲ : ಮುನ್ನೂರು ಗ್ರಾಮದ ಮದನಿ ನಗರದ ಮನೆಯ ಗೋಡೆ ಕುಸಿದು ಯಾಸೀರ್, ಪತ್ನಿ ಮರಿಯಮ್ಮ, ಮಕ್ಕಳಾದ ರಿಯಾನಾ ಹಾಗೂ ರಿಫಾನಾ ಇಹಲೋಕ ತ್ಯಜಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬೂಬಕ್ಕರ್ ಮನೆಯ ಹಿಂಭಾಗದಲ್ಲೇ ಬೆಳೆದಿದ್ದ ಎರಡು ಅಡಿಕೆ ಗಿಡ ನಾಲ್ವರ ಪ್ರಾ*ಣ ತೆಗೆದಿದೆ ಎಂಬ ಮಾತು ಕೇಳಿ ಬಂದಿದೆ. ಮೇಲ್ಭಾಗದ ಕಂಪೌಂಡ್ ವಾಲ್ ಗೆ ತಾಗಿ ಬೆಳೆದಿದ್ದ ಅಡಿಕೆ ಗಿಡ ಭಾರೀ ಗಾಳಿ ಮಳೆಗೆ ಅಲುಗಾಡಿದ ಪರಿಣಾಮ ಮಣ್ಣು ಸಡಿಲಗೊಂಡು ಜೊತೆಗೆ ಮಳೆ ನೀರು ಶೇಖರಣೆಗೊಂಡ ಪರಿಣಾಮ ಮತ್ತಷ್ಟು ಮೃದುವಾಗಿ ಕಂಪೌಂಡ್ ವಾಲ್ ಕುಸಿದು ಮನೆಯ ಮೇಲೆ ಉರುಳಿ ಬಿದ್ದ ಪರಿಣಾಮ ನಾಲ್ವರ ಜೀ*ವ ಹೋಗಿದೆ.
ಮಳೆ ನೀರು ಹೋಗಲು ವ್ಯವಸ್ಥೆ ಇಲ್ಲದೇ ಭಾರೀ ಪ್ರಮಾಣದಲ್ಲಿ ನೀರು ಶೇಖರಣೆಯಾಗಿ ಜೊತೆಗೆ ಅಡಿಕೆ ಮರ ಗಾಳಿಗೆ ಅಲುಗಾಡಿದ ಪರಿಣಾಮ ಕಂಪೌಂಡ್ ಕುಸಿತ ಗೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಒಬ್ಬಳು ಬಾಲಕಿಯ ಕೈ ಅಲುಗಾಡ್ತಿತ್ತು, ಆದರೆ ಪ್ರಾಣ ಉಳಿಸಲು ಆಗಲಿಲ್ಲ :
ಅಗ್ನಿಶಾಮಕ, ಪೊಲೀಸರು ಬರೋ ಮೊದಲೇ ಮೃತದೇಹವನ್ನು ಪೊಲೀಸರು ಹೊರ ತೆಗೆದಿದ್ದಾರೆ ಸ್ಥಳೀಯ ಯುವಕರ ತಂಡ.
“ಬೆಳಗ್ಗೆ ಆರು ಗಂಟೆಗೆ ಭಾರೀ ಶಬ್ದ ಕೇಳಿ ಹೊರಗೆ ಬಂದು ನೋಡಿದೆವು. ಆಗ ಮನೆಯ ಮೇಲೆ ಗೋಡೆ ಕುಸಿದು ಬಿದ್ದಿರೋದು ಗೊತ್ತಾಯ್ತು. ತಕ್ಷಣ ಸ್ಥಳೀಯರೆಲ್ಲ ಸೇರಿ ಮನೆಯ ಬಾಗಿಲು ಒಡೆದವು. ಆ ಬಳಿಕ ಒಳಗೆ ಹೋದಾಗ ನಮಗೆ ಕರೆಂಟ್ ಶಾಕ್ ಹೊಡೀತು. ಮಳೆ ನೀರು ನುಗ್ಗಿ ವಯರಿಂಗ್ ನಲ್ಲಿ ಕರೆಂಟ್ ಹೊಡೀತಾ ಇತ್ತು. ಬಳಿಕ ನಮ್ಮಲ್ಲೇ ಇದ್ದ ಎಲೆಕ್ಟ್ರಿಷನ್ ಒಬ್ಬರು ಲೈನ್ ಆಫ್ ಮಾಡಿದ್ರು.
ಆ ಬಳಿಕ ನಾವು ಕಾರ್ಯಾಚರಣೆ ನಡೆಸಲು ಶುರು ಮಾಡಿದೆವು.
ಮೂವರು ಹಾಲ್ ನಲ್ಲಿದ್ದರು, ಒಬ್ಬಳು ಕೋಣೆಯಲ್ಲಿ ಇದ್ದಳು. ನಾವು ಮೊದಲು ಮೂವರನ್ನ ತೆಗೆದಾಗ ಅದರಲ್ಲಿ ಬಾಲಕಿ ಕೈ ಅಲುಗಾಡ್ತಿತ್ತು. ಆದರೆ, ರಸ್ತೆ ಕಿರಿದಾಗಿ ಆ್ಯಂ*ಬುಲೆನ್ಸ್ ಬರಲಾಗದೇ ಆಸ್ಪತ್ರೆ ದಾರಿ ಮಧ್ಯೆ ಮೃ*ತಪಟ್ಟಿದ್ದಾಳೆ. ನಾವು ಮೂರು ಮೃ*ತದೇಹ ಹೊರ ತೆಗೆದ ಬಳಿಕ ಅಗ್ನಿಶಾಮಕ, ಪೊಲೀಸರು ಬಂದಿದ್ದಾರೆ.ನಾಲ್ಕನೇ ಮೃತದೇಗ ಸ್ವಲ್ಪ ತಡವಾಗಿ ತೆಗೆದೆವು. ಕಳೆದ ಬಾರಿಯೂ ಇದೇ ಗೋಡೆ ಬಿದ್ದು, ಈ ಮನೆಗೆ ಹಾನಿ ಆಗಿತ್ತು .ಆದರೆ ಆಗ ಅವರು ಇರಲಿಲ್ಲ, ಮಂಗಳೂರಿನಲ್ಲಿ ವಾಸ ಇದ್ರು ಎಂದು ಕಾರ್ಯಾಚರಣೆ ನಡೆಸಿದ ವ್ಯಕ್ತಿ ತಿಳಿಸಿದ್ದಾರೆ.
ಇದನ್ನೂ ಓದಿ : ULLALA : ಕಂಪೌಂಡ್ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರ ದು*ರ್ಮರಣ
ಪ್ರಾಣಾ*ಪಾಯದಿಂದ ಪಾರಾದ ರಶೀನಾ!
ಮೃತ ಯಾಸೀರ್ ಅವರ ದೊಡ್ಡ ಮಗಳು ರಶೀನಾಳನ್ನ ಕೇರಳ ಭಾಗಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಬಕ್ರೀದ್ ಹಿನ್ನೆಲೆಯಲ್ಲಿ ತಂದೆಯ ಮನೆಗೆ ರಶೀನಾ ಬಂದಿದ್ದರು. ನಿನ್ನೆ ಸಂಜೆ ವೇಳೆ ಪತಿಯ ಜೊತೆಗೆ ವಾಪಸ್ಸಾಗಿದ್ದರು. ರಶೀನಾ ತೆರಳಿದ ಬಳಿಕ ಪಕ್ಕದ ಮನೆಯಲ್ಲಿ ಕೂತು ಮಾತನಾಡ್ತಿದ್ದ ಮರಿಯಮ್ಮ ದಂಪತಿ ಬಳಿಕ ಮಕ್ಕಳ ಜೊತೆ ಊಟ ಮುಗಿಸಿ ನಿದ್ದೆಗೆ ಜಾರಿದ್ದರು. ನಂತರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಅಬೂಬಕ್ಕರ್ ಮನೆಯ ಕಂಪೌಂಡ್ ಕುಸಿದು ಬಿದ್ದು ದುರಂತವೇ ಸಂಭವಿಸಿದೆ.
Baindooru
ಬಿಗ್ ಬಾಸ್ ಗೆ ಮೂರನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ಹಿಂದೂ ಫೈರ್ ಬ್ರಾಂಡ್ ಚೈತ್ರಾ
ಮಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರೋ ಈ ಶೋಗೆ ಸ್ಪರ್ಧಿಗಳು ಯಾರಾಗ್ತಾರೆ ಅನ್ನೋದು ಕುತೂಹಲವೇ ಹೆಚ್ಚು. ಈ ಬಾರಿ ಅಂದ್ರೆ ಸೀಸನ್ 11 ರ ಸ್ಪರ್ಧಿಗಳು ಯಾರು ಅನ್ನೋ ‘ರಾಜ ರಾಣಿ’ ರಿಯಾಲಿಟಿ ಶೋ ನ ಗ್ರ್ಯಾಂಡ್ ಫಿನಾಲೇಲಿ ರಿವೀಲ್ ಆಗುತ್ತಿದೆ.
ಎಂಟ್ರಿ ಕೊಟ್ಟ ಚೈತ್ರಾ!
ಮೊದಲ ಸ್ಪರ್ಧಿಯಾಗಿ ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, 2ನೇ ಸ್ಪರ್ಧಿಯಾಗಿ ಲಾಯರ್ ಜಗದೀಶ್ ಬಿಗ್ ಬಾಸ್ ಮನೆ ಸೇರುತ್ತಿದ್ದು, ಇನ್ನೂ 3ನೇ ಸ್ಪರ್ಧಿಯಾಗಿ ‘ಬಿಗ್ ಬಾಸ್’ ಮನೆಯೊಳಗೆ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಎಂಟ್ರಿ ಕೊಟ್ಟಿದ್ದಾರೆ.
ಖಡಕ್ ಮಾತುಗಳಿಂದಲೇ, ಹಿಂದುತ್ವದ ಹೆಸರಿನಲ್ಲಿ ಭಾಷಣ ಮಾಡಿ, ತಮ್ಮದೇ ಆದ ಅಪಾರ ಹಿಂಬಾಲಕರನ್ನು ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಚೈತ್ರಾ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಅಲ್ಲದೇ, ಖಾಸಗಿ ವಾಹಿನಿ, ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ಇದೆ.
ಇದನ್ನು ಓದಿ: ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!
ವಂಚನೆ ಪ್ರಕರಣ:
ಪ್ರಖರ ಭಾಷಣಗಳ ಮೂಲಕ ಗಮನ ಸೆಳೆದಿದ್ದ ಚೈತ್ರಾ ಕಾಂಟ್ರವರ್ಸಿಗಳ ಮೂಲಕವೂ ಸದ್ದು ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಟಿಕೆಟ್ ಕೊಡುವ ವಿಚಾರದಲ್ಲಿ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದಡಿ ಜೈಲು ಪಾಲಾಗಿದ್ದರು.
ಸದ್ಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿರುವ ಚೈತ್ರಾ ಅಲ್ಲಿ ಹೇಗಿರ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.
DAKSHINA KANNADA
ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್
ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.
ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್
ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
LATEST NEWS
ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 3 ಮೃ*ತ್ಯು, 7 ಗಾ*ಯ
ಮಂಗಳೂರು/ಹರಿಯಾಣ: ಹರಿಯಾಣದ ಸೋನಿಪತ್ನಲ್ಲಿ ಇಂದು (ಸೆ.28) ಬೆಳಿಗ್ಗೆ ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋ*ಟವು ಸಂಭವಿಸಿದ್ದು, 3 ಜನರ ಮೃ*ತ್ಯು ಹಾಗೂ 7 ಮಂದಿಗೆ ಗಂ*ಭೀರ ಗಾಯವಾಗಿದೆ.
ವೇದ್ ಎಂಬುವವರ ಮನೆಯಲ್ಲಿ ಪಟಾಕಿಗಳನ್ನು ತಯಾರಿಸುತ್ತಿದ್ದು, ಮನೆಯಲ್ಲಿ ಸಂಗ್ರಹಿಸಿದ ರಾಸಾಯನಿಕಗಳಿಂದ ಬೆಂ*ಕಿ ಅವ*ಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೂವರ ದೇಹವು ಛಿಧ್ರ*ವಾಗಿದ್ದು, ಗಾ*ಯಾಳುಗಳನ್ನು ಆಸ್ಪತ್ರೆಗೆ ಚಿಕಿ*ತ್ಸೆಗಾಗಿ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ವೇದ್ ಪರಾರಿಯಾಗಿದ್ದಾನೆ. ಈ ಕುರಿತು ಸೋನಿಪತ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- LATEST NEWS6 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS5 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS4 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS4 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ