Connect with us

    LATEST NEWS

    ಹೆಗ್ಗಣ ಕಾಟ ತಾಳಲಾಗದೆ ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ! ಆಮೇಲೇನಾಯ್ತು?

    Published

    on

    ಹುಬ್ಬಳ್ಳಿ : ಇತ್ತೀಚೆಗೆ ಜನರು ಯಾವ ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರೋದನ್ನು ಕಾಣುತ್ತೇವೆ. ಕೆಲವೊಂದು ಕಾರಣಗಳಂತೂ ವಿಚಿತ್ರವಾಗಿರುತ್ತೆ. ಹುಬ್ಬಳ್ಳಿಯಲ್ಲೊಂದು ವಿಚಿತ್ರ ಕೇಸ್ ಪೊಲೀಸ್ ಠಾಣೆಗೆ ಬಂದಿದೆ. ಹೌದು, ಈ ಕೇಸ್ ಹಾಕಿರೋದು ಹೆಗ್ಗಣಗಳ ಮೇಲೆ.
    ಹೌದು, ಇಲ್ಲೊಬ್ಬ ವ್ಯಕ್ತಿ ಹೆಗ್ಗಣಗಳಿಂದ ಮುಕ್ತಿ ಕೊಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಅನಿಲ್ ಮುಂಡರಗಿ ಎಂಬ ವ್ಯಕ್ತಿಯೇ ಈ ದೂರುದಾರ. ಹೆಗ್ಗಣದ ವಿರುದ್ಧ ಅವರು ಹುಬ್ಬಳ್ಳಿಯ ಆನಂದ ನಗರ ಠಾಣೆ ಮೆಟ್ಟಿಲೇರಿದ್ದಾರೆ.


    ಪಕ್ಕದ ಮನೆಯ ಹೆಗ್ಗಣ ಕಾಟ :

    ಅನಿಲ್ ಮುಂಡರಗಿ ಆನಂದ ನಗರ ನಿವಾಸಿ. ತನಗೆ ಪಕ್ಕದ ಮನೆಯ ಹೆಗ್ಗಣಗಳಿಂದ ನೆಮ್ಮದಿ ಹಾಳಾಗಿದೆ ಎಂದು ಅವರು ದೂರಿದ್ದಾರೆ. ಪಕ್ಕದ ಮನೆಯ ಹೆಗ್ಗಣಗಳು ನಮ್ಮ ಮನೆಗೆ ನಿತ್ಯ ನುಗ್ಗಿ ಬರುತ್ತೆ. ಗ್ಯಾಸ್ ಪೈಪ್ ಲೈನ್ ಕಟ್ ಮಾಡುತ್ತೆ. ಅಲ್ಲದೆ ಸಿಂಕ್ ಪೈಪ್ ಲೈನ್ ಕತ್ತರಿಸಿವೆ. ಎಲ್ಲೆಂದರಲ್ಲಿ ನೆಲ ಅಗೆದು ಮಣ್ಣು ಹೊರ ಹಾಕ್ತಿವೆ. ಮನೆಯಲ್ಲಿ ಎಲ್ಲೆಂದರಲ್ಲಿ ರಂಧ್ರಗಳು ಬಿದ್ದಿವೆ. 15 ರಿಂದ 20 ಹೆಗ್ಗಣಗಳು ಕಾಟ ಕೊಡುತ್ತಿವೆ.
    ಪಕ್ಕದ ಮನೆಯವರಿಗೆ ಸಾಕಷ್ಟು ಬಾರಿ ಹೇಳಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ನೀವೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕು ಎಂದು ಅನಿಲ್ ಮನವಿ ಮಾಡಿದ್ದಾನೆ. ಸಿಲಿಂಡರ್ ಸೋರಿಕೆಯಾಗಿ ಅನಾಹುತವಾದ್ರೆ ಯಾರು ಹೊಣೆ ಎಂದು ಕೇಳಿದ್ದಾರೆ.

    ಪಕ್ಕದ ಮನೆಯವರಿಗೆ ವಾರ್ನಿಂಗ್ :

    ಪಕ್ಕದ ಮನೆಯಿಂದ ಬರೋ ಹೆಗ್ಗಣಗಳ ಕಾಟದಿಂದ ಬೇಸತ್ತಿರೋ ಅನಿಲ್ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಹೆಗ್ಗಣಗಳ ಕಾಟದಿಂದ ಮುಕ್ತಿ ಕೊಡಿಸುಂತೆ ಕೇಳಿಕೊಂಡಿದ್ದಾರೆ. ಅವರ ದೂರನ್ನು ನಿರ್ಲಕ್ಷಿಸದೆ, ದೂರನ್ನು ಸ್ವೀಕರಿಸಿರೋ ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು, ದೂರು ಆಧರಿಸಿ ಪಕ್ಕದ ಮನೆಯವರಿಗೆ ಕರೆಯಿಸಿ ಎಚ್ಚರಿಕೆ ನೀಡಿದ್ದಾರೆ.

    ಪಕ್ಕದ ಮನೆಯ ಸಿದ್ಧು ಅಂಗಡಿ ಎಂಬುವರಿಂದ ಪೊಲೀಸರು ಮುಚ್ಚಳಿಕೆ ಬರೆಯಿಸಿಕೊಂಡಿದ್ದಾರೆ. ನಾಲ್ಕೈದು ದಿನಗಳಲ್ಲಿ ಹೆಗ್ಗಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ : ಟೀಂ ಇಂಡಿಯಾ ಕೋಚ್‌ ಹುದ್ದೆಗೆ ಮೋದಿ, ಶಾ, ಶಾರುಖ್, ಧೋನಿ, ಸಚಿನ್ ಅರ್ಜಿ..! ಅಸಲಿಯತ್ತೇನು?

    ಏನಂದ್ರು ಪಕ್ಕದ ಮನೆಯವರು?
    ಹೆಗ್ಗಣ ಕಾಟದ ಬಗ್ಗೆ ಪಕ್ಕದ ಮನೆಯ ಸಿದ್ಧು ಅಂಗಡಿ, ಹೊಸ ಮನೆ ಕಟ್ಟಿಸಬೇಕಾಗಿರೋದ್ರಿಂದ ಆ ಮನೆಯನ್ನು ಹಾಗೆಯೇ ಬಿಡಲಾಗಿದೆ. ಹೆಗ್ಗಣಗಳ ಕಾಟ ಬಹಳ ಇದೆ ಅಂತ ದೂರು ನೀಡಿರೋದ್ರಿಂದ ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹೆಗ್ಗಣಗಳ ನಿಯಂತ್ರಣಕ್ಕೆ ಕಾಲಾವಕಾಶ ಕೇಳಿದ್ದೇವೆ. ಆದಷ್ಟು ಬೇಗ ಹೆಗ್ಗಣ ನಿಯಂತ್ರಣ ಮಾಡ್ತೇವೆ ಎಂದಿದ್ದಾರೆ. ಪಕ್ಕದ ಮನೆಯಲ್ಲಿ ಯಾರೂ ವಾಸವಾಗಿರದೇ ಇರೋದೇ ಈ ರಾದ್ಧಾಂತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಇದ್ದಲ್ಲಿ ಮತ್ತೆ ಪೊಲೀಸರ ಮೊರೆ ಹೋಗುವುದಾಗಿ ಅನಿಲ್ ಮುಂಡರಗಿ ಎಚ್ಚರಿಕೆ ನೀಡಿದ್ದಾರೆ.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending