BELTHANGADY
ಬೆಳ್ತಂಗಡಿ: ಬೊಳ್ಮಿನಾರು ಅರಣ್ಯ ಪರಿಸರದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ವ್ಯಕ್ತಿಯ ಶ*ವ ಪತ್ತೆ..!
ಬೆಳ್ತಂಗಡಿ: ಇಲ್ಲಿನ ಪುದುವೆಟ್ಟು ಗ್ರಾಮದ ಬೊಳ್ಮಿನಾರು, ಅರಣ್ಯ ಪರಿಸರದಲ್ಲಿ ಬುಧವಾರ(ಮಾ.20) ಅಸ್ತಿಪಂಜರ ಸ್ಥಿತಿಯಲ್ಲಿ ಓರ್ವ ವ್ಯಕ್ತಿಯ ಶ*ವ ಪತ್ತೆಯಾಗಿದೆ. ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸ್ವತ್ತುಗಳ ಪ್ರಕಾರ ಮೃತ ವ್ಯಕ್ತಿಯನ್ನು ಕಳೆಂಜಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರ ಪ್ರದೇಶದಲ್ಲಿ ಮಲಗಿರುವ ಸ್ಥಿತಿಯಲ್ಲಿದ್ದ ಶವವನ್ನು ಗುರುತಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಸಿಕ್ಕಿದ ದಾಖಲೆಗಳ ಪ್ರಕಾರ ರಾಜು ಅವರ ಮನೆಯವರನ್ನು ಸ್ಥಳಕ್ಕೆ ಕರೆಯಿಸಿದ್ದು ಅಲ್ಲಿದ್ದ ಬ್ಯಾಗ್ ಹಾಗೂ ಆಧಾರ್ ಕಾರ್ಡ್ ಆಧಾರದಲ್ಲಿ ಮೃತಪಟ್ಟ ವ್ಯಕ್ತಿ ರಾಜು ಎಂದು ಮನೆಯವರು ಸ್ಪಷ್ಟಪಡಿಸಿದ್ದಾರೆ.
ರಾಜು ಅವರು ಕೆಲವು ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರು ಎಂದು ಮನೆಯವರು ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
BELTHANGADY
ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.
BELTHANGADY
ಬೆಳ್ತಂಗಡಿ: ವಿದ್ಯುತ್ ತಗುಲಿ ಯುವಕ ಮೃ*ತ್ಯು
ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.
BELTHANGADY
ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ
ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.
ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.
ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ